ಒಟ್ಟು 4 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡುಕೊಳ್ಳಿರೋ ಸುಖ ಸ್ವಾತ್ಮವ ಕಂಡುಕೊಳ್ಳಿರೋ ಧ್ರುವ ಕಣ್ಣಿಟ್ಟರ ತಾಂ ಕಾಣಿಸುತದೆ ಚೆನ್ನಾಗನುಭವಕಿದಿರಿಡುತದೆ 1 ಮನವಿಟ್ಟರಲನುಗೂಡುತಲ್ಯದೆ ನೆನೆದರೆ ನಿಜಘನ ನೀಡುತಲ್ಯದೆ 2 ಲಯವಿಟ್ಟರ ದಯಬೀರುತಲ್ಯದೆ ಶ್ರಯ ಸುಖ ಸುರಮಳೆಗರೆಯತಲ್ಯದೆ 3 ಭಾವಕ ಅತಿಸುಲಭವಾಗ್ಯದೆ ಆವಾಗ ತಾನೆಲೆ ನಿಭವಾಗ್ಯದೆ 4 ಮಹಿಪತಿ ಮನೋಹರ ಮಾಡುತಲ್ಯದೆ ಬಾಹ್ಯಾಂತ್ರವು ತಾನೆವೆ ಆಗ್ಯದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದರೆ ತನ್ನೊಳಗದೆ ಗೂಢವಾಗದೆ ಧ್ರುವ ಸೋಹ್ಯ ತಿಳಿಯಗೊಡದೆ ಮಾಯ ಮರಿ ಆಗ್ಯದೆ ಕಾಯದೊಳಗೆ ತಾನಾದೆ ಗುಹ್ಯವಾಗ್ಯದೆ 1 ಅಡಿ ಮೇಲು ತಿಳಿಯದೆ ಬಿಡದೆ ಸೂಸುತಲ್ಯದೆ ಹಿಡಿದೇನೆಂದರೆ ಬಾರದು ಇಡದು ತುಂಬ್ಯದೆ 2 ತೋರಿಕೆ ತೋರಿಸದೆ ಪರಿಪೂರ್ಣ ತಾನಾಗ್ಯದೆ ಮೂರುಗುಣಕೆ ಮೀರ್ಯದೆ ಬ್ಯಾರೆ ತಾನದೆ 3 ಕರುಣಿಸಿ ನೋಡುತದೆ ಕರೆದರೋ ಎನುತದೆ ಬ್ಯಾರೆ ನಿರಾಶೆವಾಗ್ಹಾದೆ ಹೊರೆಯುತಲ್ಯದೆ 4 ನೀಲವರ್ಣದೊಳದೆ ಥಳಥಳಗುಡುತದೆ ಮ್ಯಾಲೆ ಮಂದಿರದೊಳದೆ ಲೋಲ್ಯಾಡುತದೆ 5 ಗುರುತ ಕಂಡವಗದೆ ಗುರುಸ್ವರೂಪವಾಗ್ಯದೆ ಗುರು ಕೃಪೆ ಆದವಂಗದೆ ಸಾರಿ ಚಲ್ಯದೆ 6 ದಾಸ ಮಹಿಪತಿಯೊಳದೆ ವಾಸವಾಗ್ಯದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು