ಪಾದ ನಾ
ನಂಬಿದ ಭಕುತರ
ಇಂಬಾಗಿ ಪೊರೆದೆನೆಂತೆಂಬ ವಾರುತಿ ಕೇಳಿ ಪ
ದೂರವಾದರೆ ತಾನು ನಾರಿಯ ಮೊರೆ ಕೇಳಿ
ಚೀರಿ ಕರೆದಳೆಂದು ಶೀರಿಗಳನೆ ಇತ್ತು
ಬೀರಿದನರಿಯಾ
ಬಿಂಕವ ಬಿಟ್ಟು ಸೇರಿಕೊ ಹರಿಯ
ದಾರಿ ಕಾಣದೆ ವನ ಸೇರಿದ ಕುವರನ್ನ
ಸಾರೆಗರೆದು ಸೌಖ್ಯ ಪೂರೈಸಿದನೆಂದು 1
ಕಾಡಾನೆ ವ್ರಜದೊಳು ಕೂಡಿದ್ದ ಗಜರಾಜ
ಗಾಡಾಹ ತಾಪದಿಂದ ಬಾಡಿ ನೀರಡಿಸಲು
ಗೂಢ ಸರೋವರ ನೋಡಿ ನೀರನೆ ಪೊಕ್ಕು
ಆಡಾಲು ಮದದಿ ನಕ್ರನು ಬಂದು ಪೀಡಿಸೆ ಭರದಿ
ಮೂಢ ನಾನೆಲೊ ಕೃಷ್ಣ ಮಾಡೊ ರಕ್ಷಣೆಯನ್ನು
ಪರಿ ನೋಡಿ 2
ಕಾಸು ಬಾಳದ ಸ್ತ್ರೀಯಳಿಗೆ ಆತನೆ ವಶವಾಗಿ
ಹೇಸಿಕಿಲ್ಲದೆ ಅಲ್ಲಿ ತಾ ಸೂನುಗಳ ಪಡಿಯೆ ಸಹ
ವಾಸರ ಕಳಿಯೆ ಕಾಲನು ಘೋರ ಪಾಶದಿ ಶಳಿಯೆ
ಆ ಸಮಯದಿ ಕೊನೆ ಕೂಸನ್ನೆ ಕೂಗಲುವಾಸುದೇವವಿಠಲ ತಾ ಸಲಹಿದನೆಂದು 3