ವೆಂದೆನುತ ಬಂದೆನು ನಾ ಪ
ಬಂದಾ ಬಂದಜನಕಾನಂದ ಕೊಡುತಲಿ
ವಂದಿಸಿ ಭಜಿಪರಘಂಗಳ ಕಳೆದು
ಸಲಹುವಿಯೋ ಸದ್ಗುರು ರಾಘವೇಂದ್ರಾ 1
ಭೀತರಾಗುತ ನಿನ್ನಡಿಗಳ ಸೇವಿಸಲು
ಆದರದಿಂದಲವರ ಭವ-ಭಯವ ಪರಿಹರಿಸಿ
ಸಲಹಿ ಉದ್ಧರಿಸುವೆ ಗುರುರಾಘವೇಂದ್ರಾ 2
ದುಷ್ಟ ಜನರು ಕೂಡಿ ಕೆಟ್ಟಯೋಚನೆ ಮಾಡಿ
ಗುಟ್ಟಾಗಿ ನಿಮ್ಮ ಪರೀಕ್ಷಿಸ ಬೇಕೆಂಧು
ಜೀವ ವಿದ್ದವನ ನಿರ್ಜೀವನೆನುತ ತರಲು
ಸತ್ಯದಿ ನಿರ್ಜೀವನನ್ನಾಗಿ ಮಾಡಿದೆ ಪ್ರಭವೆ 3
ಕುಹಕಿ ಜನರು ಎಲ್ಲಿ ವನಕೆತುಂಡನು ತಂದು
ಚಿಗುರಿಸ ಬೇಕೆನುತಲಿ ಕೇಳಲು
ಕಮುಂಡದೊಳಿದ್ದ ದಿವ್ಯೋದಕ ಪ್ರೋಕ್ಷಿಸಿ
ಚಿಗುರಿಸಿ ಫಲ ಮಾಡ್ದೆ ಅದ್ಭುತ ಮಹಿಮಾ 4
ಮಾವಿನರಸದೊಳು ಮುಳುಗಿ ಮೃತನಾದಾ
ಬಾಲಕನಿಗೆ ಪ್ರಾಣಗಳನಿತ್ತೆ ದಯದೀ
ಭುವಿಯೊಳು ನಿಮ್ಮ ಮಹಿಮೆಗೆಣೆಕಾಣೆ
ಮಂತ್ರಾಲಯದೊರೆ ಗುರು ರಾಘವೇಂದ್ರಾ 5
``ಶ್ರೀರಾಘವೇಂದ್ರಾಯ ನಮಃ'' ಎಂಬ ದಿವ್ಯನಾಮವ
ಮನುಜನು ಪ್ರತಿದಿನ ಭಜಿಸುತ್ತಲಿರಲು
ಘೋರ ದುರಿತಗಳೆಲ್ಲ ದೂರವ ಮಾಡಿ
ನಿನ್ನ ಚರಣಸೇವಕರನ್ನು ಸಲಹುವಿಯೋಗುರುವೇ6
ಶ್ರೀ ರಘುರಾಮನ ಪ್ರಿಯಭಕ್ತನಾದ
ಶ್ರೀ ಗುರು ರಾಘವೇಂದ್ರರ ಚರಣ ಭಜಿಸಿರೊ
ನಂಬಿದ ಭಕ್ತರ ಬೆಂಬಿಡದೆ ಸಲಹುವ
ಘನ್ನಕೃಪಾನಿಧಿ ನಮ್ಮ ಗುರು ರಾಘವೇಂದ್ರಾ 7