ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತವಗೊಲಿದು ನೆರೆದೆ ಎಲೆ ಬಾಲೆ ನೀ ಬರಿದೆ ಪ ಕಾಂತೆಯುದರದಲಿ ತಾಳ್ದ ಕಮನಿಯೊಳ್ ಬಾಳ್ದಅ.ಪ ಮೈಮೊಗ ಬೇರಾದವಗೆ ಮಾತೃಘಾತಕನಿಗೆ ಬೈಯಲು ಭಾವನಕೊರಳ ಭಾವಿಸದರಿದವಗೆ ಕೈವಿಡಿದ ಕಾಂತೆಯನು ಕಾಡಿಗಟ್ಟಿದವಗೆ ತಮ್ಮಯ್ಯನರ್ಧಾಂಗಿಯನು ಅಣ್ಣನ ನೆರೆಸಿದವಗೆ1 ಹದ್ದನೇರಿದವಗೆ ಹಾವಿನಮೇಲೊರಗಿದವಗೆ ಶುದ್ಧ ಕರಡಿಯಮಗಳ ಸರಿ ಎಂದು ಆಳ್ದವಗೆ ಮುದ್ದಾಡಿ ಮೊಲೆಯೂಡಿದವಳಸುವನೆ ಕಳೆದವಗೆ ಕದ್ದು ಬೆಣ್ಣೆಯ ಮೆದ್ದ ಕರಿಮೈಯವಗೆ2 ಸುರನಿಶಾಚರ ಮಧ್ಯೆ ಅರಿಯೆ ಪೆಣ್ಣಾದವಗೆ ಸುರಪನಂದನ ಶಕಟನ ನೆರೆ ಹೊಡೆದವಗೆ ಸುರಪುರದರಸು ಶ್ರಿ ಲಕ್ಷ್ಮೀರಮಣಗೆ 3
--------------
ಕವಿ ಲಕ್ಷ್ಮೀಶ
ರಂಗನ ನೋಡಿರೈ ಕರುಣಾಪಾಂಗನ ಪಾಡಿರೈ ಪ ಜಗದಂತರಂಗ ಹೋ ಹೋಅಪ ಶೀಕರೆ ಪುಟ್ಟಿದೆ ಮೇದಿನಿಪಾಲಗೆ ಮೆಚ್ಚಿ-ಬಂದನೊ ಹೆಚ್ಚಿ ಲೀಲಾ ವಿನೋದ ಸುತ್ತಿ ಪರಿಗೊಲಿದ ಭೂತಳದೊಳು ಜಾನಕಿಗೆ ನಾಥನಾಗಿ ಮೆರೆದ- ಕಾಮಿತಗರೆದ ಹೋ ಹೋ 1 ಜಲಜಸಂಭವಭವ ಮಿಕ್ಕಾದವರನು ಗರ್ಭ-ದೊಳಿಟ್ಟ ಸರ್ಬ ಅಂದು ಪಡೆದ-ಮಗನಿಗೆ ನುಡಿದ ಪ್ರಳಯಕಾಲದಿ ವಟ ಪತ್ರದ ಮೇಲ್ ಮಲ-ಗಿದ್ದ ಸುಪ್ರಸಿದ್ಧ ಬಂದ ಪರಮಾ-ನಂದ ಹೋ ಹೋ 2 ಬರುತ ವಿಭೀಷಣ ಕಾವೇರಿ ತೀರಕೆ ಬಂದ, ಉತ್ಸಾಹದಿಂದ ಪರಮ ಪುರುಷ ಲಂಕೆಗೆ ಪೋಗದೆ ನಿಂತ-ಬಲು ಜಯವಂತ ಧರಣಿಪತಿ ಧರ್ಮವರ್ಮನ ಮಾತಿಗೆ ನಕ್ಕ-ಕೇಳಾವಾಕ್ಯ ಪೂಜೆಗೊಂಬ ಸರ್ವರ-ಬಿಂಬ ಹೋ ಹೋ 3 ಕಂಟಕ ದಶಕಂಠನ ವಂಶವ ಕೊಂದ -ಈತ ಮುಕುಂದ ಮಾಡಿಸಿಕೊಂಡ -ಬಲು ಪ್ರಚಂಡ ಜಯವೆನುತಿರಲಯೋಧ್ಯಾ-ಆಳ್ದ ಅನಾದ್ಯ ಕರುಣಾ-ಸಿಂಧು ಹೋ ಹೋ 4 ಮೂಜಗದ್ದಪ್ಪ ನಕ್ಷತ್ರೇಶ ಸರೋವರತಟ ಪುನ್ನಾಗ-ವೃಕ್ಷದಲ್ಲಿಹ ದಕ್ಷ ಅಪ್ರಾಕೃತ ಶರೀರ-ಧೃತ ಮಂದಾರ ವಾಹನ ರಾಜಾಧಿರಾಜ ಹೋ ಹೋ 5
--------------
ವಿಜಯದಾಸ
ಶ್ರೀ ಶ್ರೀ ರಾಘವೇಂದ್ರತೀರ್ಥರು ಆನೆಂತು ತುತಿಪೆ ನಿನ್ನ - ಮಂಚಾಲಿ ರನ್ನ ಪ ಆನೆಂತು ತುತಿಪೆ ನಾ - ಮಾನಮೇಯದಿನಿಪುಣಗಾನ ವಿಶಾರದ - ಶ್ರೀನಿವಾಸನ ದೂತ ಅ.ಪ. ಕೃತಯುಗದಲಿ ನೀನು | ದಿತಿಜ ವಂಶದಿ ಬಂದುವಿತತ ವಿಶ್ವಾಧಾರ | ಕೃತಿಪತಿಯ ತುತಿಸಿ ಮುಕುತಿ ಪಥಕೆ ಸತ್ತರ ತಮ ಪಂಚಭೇದಮತಿಯೆ ಸಾರ್ಥಕವೆಂದು | ಹಿತದಿಂದ ಸಾಧಿಸೆಮತಿಭ್ರಾಂತನಾದಂಥ | ದಿತಿಜ ಗುರುವು ತಾನುಖತಿಯಿಂದ ನೋಡುತ್ತಲೀ || ಬಾಲಕರೆಲ್ಲಹತಭಾಗ್ಯರೆನ್ನುತ್ತಲೀ | ನೃಪಗೆ ಪೇಳೆಖತಿ ನಿನ್ನೋಳ್ ತೋರುತ್ತಲೀ | ದಂಡಿಸೆ ನಿನ್ನಪಿತಗೆ ಬುದ್ಧಿಯ ಪೇಳ್ದ | ಅತುಳ ಪರಾಕ್ರಮೀ 1 ಕಡು ವೇಗದಲಿ ಬಂದ | ಶಂಡ ಮರ್ಕನ ಕಳುಹಿಒಡ ಹುಟ್ಟಿದವನನ | ದಾಡೆದಂತಗಳಿಂದಬಿಡದೆ ಶೀಳಿದ ಹರಿಯ | ದೃಢದಿ ಪೂಜಿಪೆ ನೀನುಬಿಡು ಬಿಡು ಈ ಮತಿ | ಮೃಡನೆ ನಮ್ಮಯ ದೇವಪುಡುಕಿ ಆ ಹರಿಯನ್ನೆ | ಖಡುಗದಿಂದಲಿ ಅವನಕಡಿದು ಹಾಕುವೆನೆನ್ನುತ್ತ || ಕರೆದು ನಿನ್ನಕಡು ಭಾಗ್ಯ ಕೋ ಎನ್ನುತ್ತ | ಪೇಳಲು ನೀನುಮಿಡುಕದೆ ಬೇಡೆನ್ನುತ್ತ | ಬುದ್ದಿಯ ಮಾತದೃಢದಿ ಪಿತಗೆ ಪೇಳ್ದೆ | ಬಿಡೆನು ಹರಿಯ ಎನ್ನುತ್ತ 2 ಸಹೋದರಿ | ವರಲಕ್ಷ್ಮಿ ಮಾತೆಯಸ್ಮರಿಸಿ ಜೀವಿಸೆ ಅವನೂ || ರಕ್ಕಸ ನೋಡಿಭರದಿ ಖಡ್ಗವ ಸೆಳೆದೂ | ತೋರೊ ಕಂಬದಿಹರಿಯ ಎಂದು ಒದೆದೂ | ನಿಲ್ಲಲು ಪಿತಗೆನರಹರಿ ರೂಪವ ತೋರ್ದೆ | ಕ್ರೂರನ ಜರಿದೂ 3 ದಿಟ್ಟ ತರಳನ ಸಲಹೆ | ಗಟ್ಟಿ ಕಂಬದಿ ಬರೆಛಟ ಛಟ ಶಬ್ದಾ | ಜಾಂಡ ಕಟಹ ಬಿಚ್ಚೆಕಠಿಣ ಖಳನ ಪಿಡಿದು | ಜಠರವ ಭೇದಿಸಿಹಠದಿ ಕರುಳಿನ ಮಾಲೆ | ಕಂಠದಿ ಧರಿಸುತ್ತತೃಟಿಯು ಬಿಡದೆ ತನ್ನ | ಹಠದಿ ಭಜಿಪನಿನ್ನಸ್ಫುಟದಿ ಕರದೋಳತ್ತಿದ || ಮುದ್ದಿಸಿ ಬಲುದಿಟ ಭಟ ಎನೆ ಎನಿಸೀದ | ಮಗನ ಮಾತುದಿಟವ ಜಗಕೆ ತೋರಿದ | ವೆಂಕಟನ್ನಪಟುತರ ವ್ಯಾಪ್ತಿಯ | ಮಹಿಮೆ ಸ್ಫುಟದಿ ತೋರ್ದ 4 ದಶಶಿರ | ದೂತ ಹನುಮನ್ನವ್ಯಥೆಯ ಪಡಿಸೆ ಪೋಗಲೂ || ಖತಿಯಲಿ ಲಂಕೆಹುತವಹನಿಗೆ ಈಯಲೂ | ವಾತನ ನೀಪ್ರೀತಿಯಲ್ಲಾಶ್ರಯಿಸಲೂ | ಲಂಕೆಯ ಪುರನೀತಿಯಿಂದಲಿ ಆಳ್ದ | ಖ್ಯಾತ ದೂತನೆನಿಸಲೂ 5 ಪಾದ ಭಜಿಸಿದಿ 6 ಶೇಷಾವೇಶದಿ ಪುಟ್ಟಿ | ವ್ಯಾಸ ತೀರ್ಥರಾಗಿಮೀಸಲಾದ ಮತ | ದಾಶಯಗಳನೆಲ್ಲಸೂಸಿ ಪೇಳುತ್ತಲಿ | ಶೇಷಾಚಲದಿ ಶ್ರೀನಿವಾಸನ ದ್ವಾದಶ | ವರ್ಷ ಸೇವಿಸಿ ನೃಪತೀಶನ ಕುಹುಯೋಗ | ಲೇಸಾಗಿ ಕಳೆಯುತಆಶುಗತಿಯ ತತ್ವ ಮತವ || ಸ್ಥಾಪಿಸಿ ಬಲುಮೀಸಲು ತರ್ಕತಾಂಡವ | ನ್ಯಾಯಾಮೃತಭೂಸುರರ್ಗಿತ್ತು ನಾಯಕರ | ಪುರಂದರದಾಸರಾಯರ ಮಾಡ್ದ | ದಾಸ ಪಂಥೋದ್ಧಾರ 7 ವಿಹಂಗ ವಾಹನ ಶ್ರೇಷ್ಠನೂ || ಎಂದೆನಿಸುತ್ತತುಂಗ ತೀರದಲಿ ನೀನೂ | ರಾಮರ ಪಾದಭೃಂಗನೆಂದೆನಿಸಿ ಇನ್ನೂ | ವ್ಯಾಖ್ಯಾನದಿಶೃಂಗರಿಸಿದೆ ನಿನ್ನ | ಬಿಂಬ ಮೂರುತಿಯನ್ನೂ 8 ಮಾಸ ಭವ ವನಧಿಯತರಣೋಪಾಯವ ತೋರುತ್ತ | ಪವನಾಂತಸ್ಥಗುರುಗೋವಿಂದ ವಿಠಲನೆಂಬಾತ | ಗುಣ ಪೂರ್ಣಸರ್ವೋತ್ತಮನೆನ್ನುತ್ತ | ಕೀರ್ತಿಪೆ ನೀನು ನಿರುತ9
--------------
ಗುರುಗೋವಿಂದವಿಠಲರು
ವಿಠಲ ಎನ್ನನು ಕಾಯೊ ವಿಠಲ ಪಂಢರಿರಾಯವಿಠಲ ಭಕ್ತವತ್ಸಲ ವಿಠಲಹರಿವಿಠಲಪ.ದಿಟ್ಟ ಪುಂಡಲೀಕ ತನ್ನ ಪುಟ್ಟಿಸಿದವರ ಮನಮುಟ್ಟಿ ಪೂಜಿಸಲು ಚಿತ್ತಗೊಟ್ಟು ಬಂದೆಯೊ ವಿಠಲಬಿಟ್ಟು ಬರದಲೆ ಒಡನಿಟ್ಟಿ ನೀಡಲು ಚೆಲುವಇಟ್ಟಂಗಿ ಮ್ಯಾಲಂಘ್ರಿಪದ್ಮವಿಟ್ಟು ನಿಂತ್ಯಯ್ಯ ವಿಠಲ 1ಕೊಟ್ಟ ಭಾಷೆಗೆ ಭಕ್ತರ ಕಟ್ಟಲಿ ಸಿಲುಕಿದೆಯೊ ಕಂಗೆಟ್ಟೆನೊ ಭವದಿ ನಿನ್ನಗುಟ್ಟುತೋರಯ್ಯ ವಿಠಲಪಟ್ಟಗಟ್ಟ್ಟ್ಯಜಭವರ ಕಟ್ಟಿಲೆ ಇದ್ದ ವೈಕುಂಠಪಟ್ಟಣ ಭೀಮಾತೀರದಿ ನಟ್ಟು ನಿಂತ್ಯಯ್ಯ ವಿಠಲ 2ನೆಟ್ಟನೆ ವೇದವ ತಂದು ಬೆಟ್ಟವೆತ್ತಿ ಇಳೆಯ ಪೊತ್ತಿಸಿಟ್ಟು ತಾಳ್ದೆವಟುಖಳರೊಟ್ಟಿಲೊದ್ಯೈಯ್ಯ ವಿಠಲಕಟ್ಟಿದೆ ಕಡಲ ಜಗಜಟ್ಟಿ ಗೋಪ ಬೌದ್ಧ ಕಲಿಯಮೆಟ್ಟಿ ಆಳ್ದೆ ಪ್ರಸನ್ವೆಂಕಟ ಕೃಷ್ಣಯ್ಯ ವಿಠಲ 3
--------------
ಪ್ರಸನ್ನವೆಂಕಟದಾಸರು