ಒಟ್ಟು 11 ಕಡೆಗಳಲ್ಲಿ , 7 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಕ್ಕೆಯಿಲ್ಲ ನಮ್ಮ ಕಡೆಗೆ ಸೊಕ್ಕಿ ಬಂದರಾರೆರು ಚಿಕ್ಕ ಮನುಷ ಕೆಂಚೆಗೌಡ ಠಕ್ಕ ಮುನಿಯ ಭಾವಬಿರಿಯ ಬೆಂಕಿಯಂತೆ ತೋರ್ಪನೊಬ್ಬ ಪರಶುರಾಮನು ಪ ಆನೆಯಲ್ಲಿ ತೇಜಿಯಿಲ್ಲ ಸೇನೆ ಬಹಳವಾಗಿಯಿಲ್ಲ ಹೀನಗೆಟ್ಟು ದಂಡು ಬಂದು ಮಾನಗೊಂಡು ಹೆಣ್ಣುಗಳನು ಭಾನು ಮುಟ್ಟಲೆತ್ತಿ ಆಸಿಯ ದೀನ ಬೇಕು ಬೇಡೆಂದೆಂಬರಿಲ್ಲ 1 ಮನೆಗಳನ್ನು ಹೊಕ್ಕು ಚಾರುವರಿದು ಕೊಟ್ಟ ಕಣ್ಣಿಯ ಸೂರೆಮಾಡಿ ಕಟ್ಟಿಕೊಂಡು ತೆರೆದ ಮನೆಯ ಸುಟ್ಟು ದಾರಿದೆಗೆದು ಹೋಗುವಾಗ ಧೀರರಾಗಿ ನಿಲ್ಲಿರೆಂದು ಎಂಬವರೊಬ್ಬರಿಲ್ಲ ವೋ 2 ಯಾವಜನರ ದಂಡು ಗಂಟು ಹಣದಾಸೆಗಾಗಿ ಮಾಡಿ ದಾವ ಕಡೆಗೆ ಬರುವರೆಂದು ಸೋವ ನೋಡು ತಲ್ಲಿತಮ್ಮ ಜೀವ ದೊಳಗೆ ಜೀವ ವಿಲ್ಲದಾಗಿ ಜನರುಬಾಯಬಿಡಲು ಕೋವಿ ಕತ್ತಿ ಎಂಬುದೊಂದು ಶಬ್ದವಿಲ್ಲ ನಮ್ಮ ಕಡೆಗೆ 3 ಬೀಸಿ ಬೀಸಿ ಕತ್ತಿಯನ್ನು ಸಾಸವನ್ನು ತೋರಿರೋರ ದಾಸೆಗಾಗಿ ಕಂಡ ಜನರ ಮೋಸದಿಂದ ಕಡಿದುಕೊಚ್ಚಿ ಲೇಸುಗಾಣದಾಗಿ ಮತ್ತೆ ಭಾಸೆಯಿಂದ ತಮ್ಮ ತಾವೆ ಮಾರ್ಗವಿಡಿಯೆ4 ಕೆಟ್ಟು ಪ್ರಜೆಯು ನಾಶವಾಗಿ ಸುಟ್ಟು ಮನೆಯು ಮಾರುಬಿದ್ದು ನಿಟ್ಟು ಹಾಳುಸುರಿಯೆ ಪ್ರಜೇಯು ಹೊಟ್ಟೆಗಿಲ್ಲ ದಳಲುತಿಹುದು ಸೃಷ್ಟಿ ಗೊಡೆಯನಾದ ಲಕ್ಷ್ಮೀರಮಣ ಬಲ್ಲನೆಲ್ಲವನ್ನು 5
--------------
ಕವಿ ಪರಮದೇವದಾಸರು
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬದರೀನಾಥ ವಿಠಲ | ಪೊರೆಯ ಬೇಕಿವನಾ ಪ ಸದಯ ಹೃದಯನೆ ಇವಗೆ | ಮುದವನ್ನೆ ಬೀರತಲಿಹದುಳದಲಿ ಕೈಪಿಡಿದು | ಕಾಪಾಡೊ ಹರಿಯೇ ಅ.ಪ. ಮೇಶ ಮಧ್ವೇಶ ಮಹಿ | ದಾಸ ನಿನ್ನಡಿ ದಾಸ್ಯಆಸಿಸುವ ಬಾಲಕನ | ಆಶೆಯನು ಸಲಿಸೀ |ಕ್ಲೇಶಗಳ ಪರಿಹರಿಸಿ | ನೀ ಸಲಹೆ ಭಿನ್ನವಿಪೆಹೇಸದಾಗತಿ ವಂದ್ಯ | ವಾಸವಾನುಜನೇ 1 ಲೌಕಿಕದ ಸಂಪತ್ತು | ಬೇಕಾದ ವರವಿತ್ತುಕಾಕು ಸಂಗವ ಕೊಡದೆ | ನೀಕಾಯ ಬೇಕೋ ||ತೋಕನಿಗೆ ನಿನ್ನಲ್ಲಿ | ಭಕುತಿ ಜ್ಞಾನಗಳಿತ್ತುಲೌಕಿಕವನೆಲ್ಲ ವೈ | ದೀಕ ವೆಂದೆನಿಸೋ 2 ಮೋದ ಕೊಡು ಸತತಾ 3 ಸ್ವಾಪದಲಿ ಮತ್ಸ್ಯಾದಿ | ರೂಪಗಳ ಸ್ತೋತ್ರವೆನೆವ್ಯಾಪಾರ ಮಾಡಿಸುತ | ಕೃಪೆ ತೋರ್ದೆ ಹರಿಯೇವೈಪರೀತ್ಸದ ಮನದ ಚಾಪಲ್ಯ ಕಳೆಯಲ್ಕೆಸ್ವಾಪದಲಿ ಸೂಚಿಸುತ | ನೀಪೇಳ್ದೆ ಧೃಡವಾ 4 ಪತಿ ವಿನುತ | ನಾರಾಯಣಾಖ್ಯ ಹರಿಘೋರಭವ ಕೂಪಾರ | ಪಾರಗಾಣಿಸುವಾಭಾರ ನಿನ್ನದು ಎಂದು | ಪೋರನ್ನ ಒಪ್ಪಿಸಿಹೆಧೀರ ಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಬಲಗೊಳ್ಳಿರೊ ಭಾವ ಭಕ್ತಿಯಿಂದ ನೆಲೆಯಗೊಂಡು ಮೂಲವಿಡಿದು ನಿಜಮೂಲ ಮೂರ್ತಿಯ ಬಲಗೊಳ್ಳಿ 1 ಏರಿ ನೋಡಿ ಅರುಚಕ್ರದಾಟಿ ತೋರುತಿಹ್ಯ ಪೂರ್ಣಾನಂದ ಶ್ರೀ ಗುರುಮೂರ್ತಿಯ ಬಲಗೊಳ್ಳಿ 2 ಸೆರಗವಿಡಿದು ನೋಡಿ ಕರಗಿಮನ ಅರವಿನೊಳು ಬೆರೆದು ಕೂಡಿ ಹರಿ ಪರಬ್ರಹ್ಮನ ಬಲಗೊಳ್ಳಿ 3 ಆಸಿಯನೆ ಜರೆದು ನಿರಾಸಿಯಲ್ಲಿ ಧ್ಯಾಸವಿಡಿದು ಲೇಸಾಗಿ ಕೂಡಿರೊ ವಾಸುದೇವನ ಬಲಗೊಳ್ಳಿ 4 ಮೂರು ಗುಣಕೆ ಮೀರಿ ತೋರಿತಿಹ್ಯ ನಿರ್ಗುಣನ ನೆರೆದು ಕೂಡಿ ನಿಜ ನಿರುಪಮನ ಬಲಗೊಳ್ಳಿ 5 ಸಹಸ್ರದಳಮಂಟಪದೊಳು ಸೋಹ್ಯವರಿತು ಸಾಯಸದಿಂದ ಶ್ರೀಹರಿಯ ಬಲಗೊಳ್ಳಿ 6 ತಾನೆ ತಾನಾಗಿಹ್ಯ ತನುವಿನೊಳು ಆನಂದೋಬ್ರಹ್ಮ- ಙÁ್ಞನದಿಂದ ನೋಡಿ ಙÁ್ಞನಸಾಗರನ ಬಲಗೊಳ್ಳಿ 7 ಮನವಿಡಿದು ಮಾಡಿರೊ ಧ್ಯಾನ ಮೌನ ಅನುದಿನ ಅನುಕೂಲಾಗುವ ಅನಂತ ಗುಣನ ಬಲಗೊಳ್ಳಿ 8 ಕಣ್ದೆರೆದು ನೋಡಿ ತನ್ನೊಳಗೆ ತಾನೆ ತಿಳಿದು ತನುಮನರ್ಪಿಸಿ ಗುರುಮೂರ್ತಿಯ ಬ¯ಗೊಳ್ಳಿ 9 ಗುರು ಕರುಣದೊಲವಿಂದ ಪಡೆದು ಪೂರ್ಣ ಹರಿಯು ಸುಖ ಸೂರ್ಯಾಡಿ ಪರಮ ಅನಂದ ಸುಪಥ 10 ಅರ್ತುಕೂಡಿದ ನೋಡಿ ಅರ್ತಿಯಿಂದ ಮಹಿಪತಿಯ ಬೆರ್ತುಕೂಡಿದ ಮನ ಕರ್ತುಗುರುವಿನ ಬಲಗೊಳ್ಳಿ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡೋ ಬಿಡು ಮನುಜ ಭ್ರಾಂತಿಯ ಪಡಕೊ ನಿನ್ನೊಳು ತಿಳಿಯುವ್ಹಾಂಗ ಸದ್ಗುರು ಭಕ್ತಿಯ ಧ್ರುವ ಬುಡದಲಿ ಫಲವಿರಲಿಕ್ಕೆ ಅಡರುವದ್ಯಾಕೊ ತುದಿಗೆ ಪಡಬ್ಯಾಡೋ ನಾನಾ ಸಾಯಾಸ ತೊಡಕಿ ಬೀಳುವ 1 ಕಾಶಿಗೆ ಹೋಗಬೇಕೆಂದು ಕಾಸಿನ ಚಾಲವರಿಕ್ಯಾಕ ಆಸಿ ಅಳಿದರೊಂದೇ ಸಾಕು ಭಾಸುದು ತನ್ನೊಳಗೆ 2 ದೇವರೆ ತಾ ದೂರಿದ್ದರೆ ಆವದೊ ನಿನ್ನ ಕಾವ ದೈವ ಠಾವಿಕಿ ಮಾಡಿಕೊಳ್ಳೊ ಸಾವಧ ವಾಗಿ 3 ಹೇಳಿಕೊಡುವ ಸ್ವಾಮಿ ಬೆಳಗ ತಾ ಝಾಡಿ 4 ಸಾಯಾಸವಿಲ್ಲದೆ ಮಹಿಪತಿಗೆ ಶ್ರಯದೋರಿತು ಗುರುವಾಕ್ಯದಲಿ ಆಯಿತು ಮಾಡಿದ ಗುರು ತಾಯಿತಂದೆನಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಧ್ರುವಚರಿತ್ರೆ ಪದ ಭಜ ಭಜ ಭಜ ಶ್ರೀ ಗಣರಾಜ ತ್ಯಜ ತ್ಯಜ ತ್ಯಜ ತಾಮಸ ಬೀಜ ಪ ಶಂಕರ ಪುತ್ರ ಶುಭಂಕರ ವರನಿಜ ಪಾದ ಸರೋಜ 1 ಲಂಬೋದರ ಪೀತಾಂಬರಧರ ಕರು ಣಾಂಬುಧಿ ವರ ದೇವ ಮಹೀಜ 2 ಶ್ರೀಶಾನಂತಾಜದ್ರೀಶ ವರಾನ್ವಿತ ದಾಸ ಸುವೃತ ಮಾನಸ ಪೂಜ 3 ಆರ್ಯಾ ರಾಜ ಸುಪೂಜಿತ ರಾಜ ರಾಜ ನೃಪ ರಾಜ್ಯ ಮಾಡುತಾ ಇರುತಿಹನು ದುರ್ಜನ ಪುರುಷರ ತರ್ಜನ ಮಾಡುವ ಸಜ್ಜನ ಆತ್ಮಾರಿಂಗ್ಯತಿ ಪ್ರಿಯನು 1 ದೀನ ಬಂಧು ಬಹುದಾನವಂತ ಉ ಪಾದ ಎಂಬುವ ಹೆಸರು ಮಾನಿತರೊಳಗತಿ ಮಾನಯುಕ್ತರು ಮಾನಿನಿಯರು ಇಬ್ಬರು ಇಹರು2 ಸುರಚಿ ಗಣ್ಯಳು ಪಟ್ಟದರಸಿ ಸುನೀತಿಯು ವಿರಸದಿ ಆರಸಗ ನಿಷ್ಟ್ರಿಯಳು 3 ಮುತ್ತಿನಂಥ ವರಪುತ್ರರಿಬ್ಬರು ಉತ್ತಮನೆಂಬ ಸುರುಚಿಪುತ್ರಾ ಉತ್ತಮ ಗಣ್ಯ ಗುಣೋತ್ತಮ ಧ್ರುವನು ಮತ್ತ ಸುನೀತಿಗೆ ತಾ ಪುತ್ರಾ 4 ಮಂದಿರದೊಳಗೆ ವಸುಂಧರೇಶನು ಛಂದದಿ ತಾ ಸುಖದಿಂದಿರಲು ಒಂದಿನದಲಿ ಬಹುಸುಂದರಸಭಿಯಲ್ಯಾ ನಂದದಿ ಬಂದು ತಾ ಕುಳಿತಿರಲು 5 ಶ್ಲೋಕ ಕೂಡಿಸಿತಾ ತೊಡಿಯಲ್ಲಿ| ಮುದ್ದಿಸಿದಾ ಸಭಿಯಲ್ಲಿ | 1 ಛಂದ ನೋಡಿ ಧ್ರುವನು ತಾ ಹರುಷದಿಂದಲಿ ಓಡಿ ಬಂದನು ರಾಜ ಸಭಿಯಲಿ ಕೂಡಬೇಕು ತಾ ಎಂದು ತೊಡಿಯಲಿ ಇಂದು ಮನದಲಿ 1 ನಾಥ ಭೂಮಿಪಾ ನೋಡಿ ಬಾಲನ ಪ್ರೀತಿಯಿಂದಲ್ಯೊಂದು ಮಾತನಾಡನು ತಾತ ಸುತಗೆ ಬಾಯೆಂದು ಕರೆಯನು ಆತ ಧ್ರುವನು ತಾ ಅನಾಥನಾದನು 2 ಆಗ ಸುರುಚಿ ಬಾಲನ್ನ ನೋಡುತಾ ಬ್ಯಾಗನುದರದಲ್ಲಿ ಬಹಳ ಗರ್ವಿತಾ ಯೋಗ್ಯವಲ್ಲ ಕೂಡಲಿಕ್ಕೆ ತೊಡಿಯಲಿ ಹೀಂಗ ದುಷ್ಟ ಮಾತುಗಳು ಬಾಯಲ್ಲಿ 3 ಪದ ಬಾರದೊ ಧ್ರುವಾ ನಿನಗೆ ಸಿಂಹಾಸನ ಪದವಿ ಬಾರದೊ ಧ್ರುವಾ ನಿನಗೆ ಸಾರಸಿಂಹಾಸನವು ಪ ಏರ ಬೇಕೆಂಬುವಂಥಾ ಘೋರತನವ ಬಿಡು ಅ.ಪ ಅನ್ಯಳ ಮಗನೊ ನೀ ಯನ್ನಲಿ ಜನಿಸಿಲ್ಲಾ ಚೆನ್ನಿಗ ಉತ್ತುಮಾಗಿನ್ನ ನೀ ಸರಿಯೇನೋ 1 ಇಂದಿನಾ ಮನೋರಥಾ ಎಂದಿಗಾವುದಲ್ಲಾ ಕಂದ ಸುನೀತಿಯಾ ಮುಂದ ಕೂಡಾಲಿ ಪೋಗೊ 2 ಇಚ್ಛಿ ಮಾಡಾದಿರೋ ಹೆ ಚಿನ್ನಾ ಶ್ರೀ ವತ್ಸನಾರಾಧನಿ ಮಾಡಿಲ್ಲಾ 3 ವೀರ ಸಿಂಹಾಸನ ಏರಬೇಕಾದರೆ ವಾರಿಜನಾಭ ನಾರಾಧನಿ ಮಾಡೊನೀ 4 ` ಚೆನ್ನಿಗಾನಂತಾದ್ರೀಶ್ನ ' ನೀ ಪೂಜಿಸಿ ಯೆನ್ನಲ್ಲಿ ಪುಟ್ಟಾದೆ ಉನ್ನತ ಪದವಿಯು 5 ಶ್ಲೋಕ ಅತ್ಯಂತ ಘೋರತರ ವಾಕ್ಯಗಳನ್ನು ತಾಳಿ ಸಂತಪ್ತನಾದ ಮನದಲ್ಲಿ ಸುನೀತಿ ಬಾಲಾ ಪುತ್ರನ್ನ ನೋಡಿ ಪಿತ ಸುಮ್ಮನೆ ಕೂತನಾಗಾ ತಾತನ್ನು ಬಿಟ್ಟು ನಡದಾ ಧ್ರುವ ತಾನು ಬ್ಯಾಗಾ 1 ಶ್ವಾಸೋಚ್ಛ್ವಾಸವು ಬಾಯಿಲಿಂದ ಬಿಡುತಾ ಕಣ್ಣಿಂದ ನೀರ ಹೋಗುತಾ ಸೂಸು ಬಾಹುವ ದು:ಖದಿಂದ ಮರಗಿತಾ ರೋದನಾ ಮಾಡುತಾ ಬಂದಾ ತೀವ್ರದಿ ತಾಯಿ ಸನ್ನಿಧಿಯಲ್ಲಿ ಆಳುತಾಗ ತುಟಿ ಬಿರಿಗಿಸಿ ಬಂದಾ ಕಂದನ ಮುಂದ ಕುಳ್ಳಿರಿಸಿ ಸತಿ ಕೇಳ್ಯಾಳು ವಿಚಾರಿಸಿ 2 ಪದ ಕಂದ ನೀ ಬ್ಯಾಗ ಹೇಳೊ ಎಲ್ಲೊ ನಿನಗೆ ಇಂದು ಬಡಿದವರ್ಯಾರು ನಿನಗೆ ಪ ಎಂದು ಪೋಗದಲೆ ತನಯ ನೀನು ಇಂದು ಪೋಗಿದ್ದಿಯೊ ದಾರ ಮನಿಗೆ 1 ಘೋರತರ ದು:ಖವೇನೊ ಈ ಪರಿ ನೀರ ತುಳಕುವ ಕಣ್ಣುಗಳಿಗೆ 2 ಏನಂತ ಪೇಳಲಿ ಸ್ವಲ್ಪ ಇಲ್ಲಾ `ಅನಂತಾದ್ರೀಶನ ' ದಯವು ನಮಗೆ 3 ಪದ ತನಯನ ಕೇಳಲು ಹೀಂಗೆ ಪೌರಜನರು ನುಡದರಲ್ಯಾಗೆ ಅರುಚಿನುಡಿಗಳ ಲ್ಹ್ಯಾಂಗೆ ಆ ಸುರುಚಿ ನುಡಿದಳ್ಹಾಂಗೆ 1 ಕೇಳಿದಳೀ ಪರಿವಾಣಿ ಮನ ಪನ್ನಗ ವೇಣಿ ಸಾಗರ ಬಿದ್ದಳು ತರುಣಿ ತಾ ಕೂಗುತ ಕೋಕಿಲವಾಣಿ 2 ಒಡಲೊಳು ಕಿಚ್ಚುರದಂತೆ ಬಹು ಮಿಡುಕೊಳು ತಾಮನದಂತೆ ನಡುಗುತ ಹಿಮ ಹೊಡದಂತೆ ತಾ ನುಡು(ಡಿ)ವಳು ಕರುಣಾದಂತೆ 3 ಏನು ಮಾಡಲಿ ಇನ್ನಯ್ಯೋ ಬಹು ದೀನಳಾದೆ ನಯ್ಯಯ್ಯೊ ಮಾನದ ಪತಿಯೆನ ಕಾಯೊ ಗುರು ಮಾನಸ ದು:ಖವ ತಿಳಿಯೋ4 ಶರಣು ಕೇಳು ದೇವೇಶಾಯನ್ನೊಳು ಕರುಣಾಬಾರದೆ ಲೇಶಾ ಚರಣಕೆರಗುವೆನು ಶ್ರೀಶಾ ಮರಣ ಕುಡಾ`ನಂತದ್ರೀಶ' 5 ಛಂದ ನಾರಿ ಸುರುಚಿಯಾ ಮಾತು ಮರಿಯದೆ ಘೊರ ದು:ಖದಾಪಾರ ತಿಳಿಯದೆ ನೀರ ಧಾರಿಯ ಕಣ್ಣಲ್ಯುದುರುತಾ ಧೈರ್ಯ ಭಾವ ತಾ ಬಿಟ್ಟಳು ಸರುತಾ 1 ಸುಂದರಾಂಗಿಯು ನೊಂದು ಮನದೊಳು ಕಂದಧ್ರುವನ ತಾ ಮುಂದ ನುಡದಳು ಬಂದ ತಾಪವ ಸಹಿಸಬೇಕಯ್ಯಾ ಇಂದು ಮನಸಿನಾ ಕೋಪ ತಾಳಯ್ಯಾ 2 ಕೇಳು ಬಾಲನೆ ರಾಜಯನ್ನನು ಭಾಳ ತುಚ್ಛವ ಮಾಡುತಿಹನು ಭಾಳ ಲಜ್ಜದಿ ಸುನೀತಿ ಭಾರ್ಯಳೆಂದು ಹೇಳಲಿಕ್ಕೆ ನಾಚುತಿಹನು 3 ಯನಗ ಪುತ್ರ ನೀನಾದ ಕಾರಣಾ ನಿನಗ ಮಾಡುವಾ ಅರಸು ನಿರ್ಘೃಣಾ ಕನಸಿಲಿಲ್ಲವೊ ಯನಗ ಹಿತಕರು ತನಯ ವೈಯಲಿಲ್ಲವೊ ಯನ್ನದೇವರು 4 ಮಿಥ್ಯವಲ್ಲವೊ ಸುರುಚಿ ನುಡಿಗಳು ಸತ್ಯ ವಾದ ಮಾತುಗಳು ನುಡಿದಳು ಪಥ್ಯವೆ ಸರಿ ಪರಮ ನಿನಗಿವೆ ಪೊತ್ತುಗಳಿಯದೆ ಪೋಗರಣ್ಯಕೆ 5 ಗುರ್ವನುಗ್ರಹ ಶಿರಸಿ ಗ್ರಹಿಸೈಯ್ಯಾ ಶರ್ವಸಖಗ ನೀ ಪೂಜಿಮಾಡಯ್ಯಾ ಪೂರ್ವದಲ್ಲಿ ನಿನ್ನ ಮುತ್ಯ ಮಾಡಿದಾ ಸಾರ್ವಭೌಮ ಆಧಿಪತ್ಯ ಏರಿದಾ 6 ಇಂದಿರೇಶನಾ ಬ್ರಹ್ಮ ಪೂಜಿಸಿ ಮುಂದ ಏರಿದಾ ಸತ್ಯಲೋಕ ನೇಮಿಸಿ ಕಂದ ಭಜಿಸು ನೀ ಛಂದದಿ ಧ್ರುವಾ ಮುಂದ ಕೇಶವಾನಂದ ಸುರಿಸುವಾ 7 ಶ್ಲೋಕ ಜನನಿಯಾಡಿದ ವಾಕ್ಯವು ಕೇಳಿ ಆಗಾ ಮನಿ ಆಸಿಯು ಬಿಟ್ಟು ನಡದಾನು ಬ್ಯಾಗಾ ಘನಾರಣ್ಯಕೆ ಪೋಗಲು ಶೋಕಸಿಂಧು ಸಿಂಧು 1 ಆರ್ಯಾ ಇಂದಿರೇಶನಾ ಸುಂದರ ಗುಣಗಳ ಬಂದಾಕ್ಷಣಹೀಗೇಂದು ನುಡದನು ಕಂದಗ ಮುನಿ ಆ ಸಮಯದಲಿ 1 ನಿಲ್ಲೆಲೊ ಬಾಲಕ ಬಲ್ಲಿದರಣ್ಯದಿ ನಿಲ್ಲದೆ ಪೋಗುತಿ ಎಲ್ಲಿಗೆ ನೀ ಯೆಲ್ಲಿಂದ ಬಂದಿ ನೀ ಫುಲ್ಲಲೋಚನ ಯೆಲ್ಲ ಬಳಗ ಬಿಟ್ಟಿಲ್ಲಿಗೆ ನೀ 2 ಕಂದ ಬಿಟ್ಟ ನೀ ಬಂದ ಕಾರಣಾ ಇಂದು ತಾಯಿ ತಂದೆಗಳೆಲ್ಲ ಸುಂದರಾನನಾ ಛಂದದಿ ನುಡಿನೀ ಮಂದಿರ ವೃತ್ತಾಂತಗಳೆಲ್ಲಾ 3 ಶ್ರೇಷ್ಠನಾರದ ನೀ ಅಷ್ಟುಲೋಕವಾ ದೃಷ್ಟಿಲಿ ನೋಡುವಿ ಇಷ್ಟರಿಯಾ ಕೆಟ್ಟ ಮಾತು ಆದುಷ್ಟ ಮಳಾಯಿಯು ಎಷ್ಟು ನುಡದಳೊ ಯನಗÀಯ್ಯಾ4 ಏನು ಪೇಳಲಿ ನಾನು ಮುನೀಶ್ವರ ಮಾನ ಗೇಡಿ ಮಾಡಿದಳೆನ್ನಾ ಮಾನ ಹೋಗಿ ಅಪಮಾನಿತನಾಗಿ ಕಾನನ ಶೇರಿದೆ ನಾ ಮುನ್ನ 5 ಮಾನಪಮಾನಗಳೆನಾದರೂ ಸರಿ ಧ್ಯಾನಕ ತರಬಾರದು ನೀನು ನಾನಾ ಲೀಲಿಯಾ ಮಾಡುವ ಬಾಲಕಗೇನು ಚಿಂತೆ ಕೇಳರೆ(ಳುವೆ?) ನಾನು 6 ಶಾಂತನಾಗು ಗುಣವಂತ ಬಾಲ ನಿ ನ್ನಂತರಂಗ ಚಿಂತಿಯು ಬಲ್ಲೆ ಚಿಂತಿಸಿ ಬಂದ್ಯೋ ನೀ ಸತತ ಸುಖ ಭಗವಂತನನೆ ಬ(ರ?) ಬೇಕಂತಿಲ್ಲೆ 7 ಎಂಥವರಿಗೆ ಭಗವಂತ ದೊರಕ ನಿ ನ್ನಂಥ ಬಾಲನಾ ಗತಿಯೇನು ಕಾಂತನಯನ ಶ್ರೀಕಾಂತ ದೊರಕ ಛೀ ಭ್ರಾಂತಿ ಬಿಟ್ಟು ತ್ವರ ನಡಿ ನೀನು 8 ಪದ ನಡಿನಡಿ ನಡಿ ಧ್ರುವಾನೆ ತಿರುಗಿ ಮನಿಗೆ ನಡಿ ನಡಿ ನಡಿ ದೊಡ್ಡ ಅಡವಿಯು ಸೇರಾದೆ ಹುಡುಗ ಬುದ್ಧಿಯನು ಬಿಡು ತಡಮಾಡದೆ ಪ ಅಂಬಕಗಳಿಗೆ ತಾನು ತೋರಾನು ಪೀ ತಾಂಬರಧರ ದೇವಾನು ಅಂಬುಜನಾಭನ ನಂಬಿ ಭಜಿಸುವಂಥ ಹಂಬಲ ಬಿಟ್ಟು ವಿಳಂಬನ ಮಾಡದೆ 1 ಕಾಲಾವಲ್ಲವೋ ಬ್ಯಾಡಯ್ಯ ವಿಗ(ಹಿ?)ತವಾದ ಕಾಲಕೆ ತಪ ಮಾಡಯ್ಯ ಕಾಲಕಾಲಕೆ ಸ್ತನ ಪಾಲನುಂಬುವ ಸಣ್ಣ ಬಾಲ ಈ ವಚನ ಬಿಟ್ಟು ಕಾಲಗಳಿಯದೆ 2 ದೇಶದೇಶವ ತಿರುಗಿ ಬಹಳ ಕಾಸೋಸಿ ಇಂದಲೆ ಮರುಗಿ ಕ್ಲೇಶಾದಿ `ಅನಂತಾದ್ರೀಶ' ದೊರಕ ಘಾಸಿ ನೀ ಆಗದೆ 3 ಆರ್ಯಾ ಮುನಿಯ ವಚನ ನೃಪತನಯ ಕೇಳಿ ಬಹುವಿನಯದಿಂದಲಿ ಹೀಗೆಂದಾ ಘನದು:ಖದಿ ಯನ್ನ ಮನಿಗೆ ಪೋಗಲಿಕ್ಕೆ ಮನಸುವಲ್ಲದು ವಲ್ಲೆಂದಾ 1 ಪದ ಮನಿಗೊಲ್ಲೆ ವಲ್ಲೆ ಮುನಿರಾಯಾಪ ಬಹುತಲ್ಲಣಗೊಳು ತಿಹ(ಹೆ?)ನೈಯ್ಯಾ ಅ.ಪ ಶೋಣೀತ ವಸ್ತ್ರನೆ ಪಾಣಿವಿನಾದಿತ ವೀಣಾಧರ ಕೇಳಯ್ಯ 1 ದುಷ್ಟಮಳಾಯಿಯ ಕೆಟ್ಟಮಾತು ಒಂದಿಷ್ಟು ಸಹಿಸಲಾರೈಯ್ಯ 2 ದೀನದಯಾಳುವೆ ಮಾನಗಳಿದು ಮು ನ್ನೇನು ಉಳಸಲಿಲ್ಲೈಯ್ಯ 3
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಶೇಷ ಚಂದ್ರಿಕಾರಾಯರ ಸಂಕ್ಷಿಪ್ತ ಚರಿತ್ರೆ (ವಾರ್ಧಿಕ ಷಟ್ಪದಿ) ರಘುನಾಥರಂ ಸೇವಿಸೀ |ರಘುನಾಥ ತೀರ್ಥರಂ ಮಿಗಿಲಾಗಿ ಸೇವಿಸುವಅಘಗಳನು ನೀಗಿ ಶ್ರೀ ರಘುವರನ ಪ್ರೀತಿಯನುಮಿಗೆ ಪೊಂದಿ ಭವದಾಟಿ ನಗಧರನ ಲೋಕದೊಳು ಬಗೆ ಬಗೆಯ ಸುಖದಿ ಬಾಳ್ವ ಪ ಏಕಮೇವನ ಚರಣ | ತೋಕರೆಂದೆನಿಸಿ ಸಾತ್ವೀಕರೆನಿಪ ತಾಯ್ತಂದೆಗಾಕುವರನೆನಿಸುತಏಕಋಷಿ ಶೌನಕ ಸುಗೋತ್ರದೊಳುವೆಂಕಟವರಮೃಗಾಭಿದನು ಎನಿಸೀ ||ನೂಕಿ ಪಂಚಾಬ್ದಗಳನಾ ಕುವರಗಾಗುಪನಯನಕೈಗೊಂಡು ಗುರು ಚರಣನೇಕ ವಿಧ ಸೇವಿಸುತವಾಕಾದಿ ಶಾಸ್ತ್ರಗಳ ಸಾಕಷ್ಟು ಅಭ್ಯಸಿಸಿ ಸ್ವೀಕರಿಸಿ ದ್ವಿತೀಯಾಶ್ರಮಾ 1 ಅನುಜ ಅಂಭ್ರಣಿಯ ರಮಣಪದಅಂಭುಜಗಳಂ ಭಜಿಸಿ ಸಂಭ್ರಮದಿ ಸತಿವೆರಸಿ ಉಂಬುಡುವ ಸರ್ವವೆಲ್ಲ |ಬಿಂಬನಲಿ ಅನ್ವಯಿಸಿ ಇಂಬುಗೊಂಡವರಾಗಿಸಂಭ್ರಮದ ಸಂತಾನದಂಬಲನೆ ತಾ ತೊರೆದುಹಂಬಲಿಸಿ ಹರಿಪಾದ ಗುಂಭದಿಂದಲಿ ಭಜಿಸಿ ಇಂಬಿಟ್ಟ ಸನ್ಯಾಸದೀ 2 ಹತ್ತು ಮೂರ್ಮತ್ತೈದು ವತ್ಸರದಿ ವಿಠಲ ಪದವರ್ತಿ ಲಕುಮಿನರೆಯಣ ತೀರ್ಥರಿಂ ಸನ್ಯಾಸದುತ್ತ ಮಾಶ್ರಮ ಪೊಂದಿ ಭೃತ್ಯರಿಗೆ ಶ್ರೀಮಧ್ವ ಶಾಸ್ತ್ರಗಳ ಬಿತ್ತರಿಸುತಾ |ಮತ್ತೆ ಬದರಿಯ ಸೇತು ಉತ್ತಮ ಕ್ಷೇತ್ರ ತ್ರೈರಾವರ್ತಿ ಸಂಚರಿಸಿ ಬಲು ಮತ್ತ ಮಾಯ್ಗಳನಳಿದುಕೃತ್ತಿ ವಾಸನ ತಾತ ಉತ್ತಮೋತ್ತಮನೆಂದು ವತ್ತಿ ಪೇಳ್ದರು ಸುಜನಕೇ 3 ಶೇಷನಾವೇಷದಿಂ ವ್ಯಾಸಾಭಿದಾನ ಸ ನ್ಯಾಸಿ ಎನಿಸುತಲಿ ದೀನೇಶನಂಶಜರಿಂದವಾಸಿಸುತ ಹಂಪೆಯಲಿ ಲೇಸು ಸುತ್ಸೂತ್ರಗಳ ಭಾಷ್ಯಾವ್ಯಾಖ್ಯಾ ಚಂದ್ರಿಕಾವ್ಯಾಸ ತ್ರಯಗಳು ಎಂದು ಭಾಸುರದ ಕೀರ್ತಿಯಲಿಕಾಶಿ ಗಧದರ ಮಿಶ್ರ ಏಸು ಮಾಯ್ಗಳ ಜಯಕೆಲೇಸು ಕಾರಣವೆನಿಪ ಆಸಿ ಗ್ರಂಥಗಳ್ರಚನೆ ಬೇಸರದೆ ನೆಡೆಯುತಿರಲೂ 4 ವರಶಿಷ್ಯರಿಂವರೆಸಿ ಇರುತಿರಲು ದಿನ ಒಂದುಅರೆವಾಸಿಯಾದಂಥವರ ಚಂದ್ರಿಕಾಗ್ರಂಥಎರಡು ಅಧ್ಯಾಯಗಳು ಪೂರಣವು ಯಾರಿಂದ ಒರೆವುದೆಂದೆನೆ ಪ್ರಾರ್ಥಿಸೀ ||ವರನರರ ಸಲಹುದಕೆ ಹರಿಯಾಜ್ಞೆಯಿಂ ಮತ್ತೆಎರಡು ಮೂರ್ಜನ್ಮಗಳ ಧರಿಸುವೆವು ನಾವು ಎರಡೈ-ದರಿಲ್ಲಿಂದ ನರಜನ್ಮದೊಳು ಗ್ರಂಥ ಪೂರಣವು ಆಹುದೆಂದರು 5 ಉಕ್ತಿಗನು ರಘುನಾಥ ತೀರ್ಥರೆಂದುರೆ ಮರೆದುಗ್ರಂಥ ಶೇಷವ ರಚಿಸಿ ತತ್ತರಭಿಧರು ಎನಿಸಿತತ್ವ ಕಣಿಕಾಖ್ಯವನು ತಂತ್ರಸಾರದ ವ್ಯಾಖ್ಯಮತ್ತಿತರ ಗ್ರಂಥಗಳನು ||ಬಿತ್ತರಿಸಿ ಹರಿಯನ್ನು ತೃಪ್ತಿಸುತ ಪೂರ್ವದಲಿಛಾತ್ರರಂ ಪಡೆದಂತೆ ಮತ್ತೆ ಈ ಜನ್ಮದಲಿಉತ್ತಮರು ಶಿಷ್ಯ ಸಂಪತ್ತಿನಿಂ ಮೆರೆದಿಹರು ತತ್ವಕೋವಿದರು 6 ತೈಜಸ ಪೇಳಿದ 7 ಮಹಿಷಿ ಕ್ಷೇತ್ರದೊಳುಸಿರಿ ಕೃಷ್ಣನಂ ನಿಲಿಸಿ ಹರಿರಥೋತ್ಸವ ಪೂಜೆವರುಷ ವರುಷದಿ ಗೈಯ್ಯೆವರ ಭೂಮಿ ಕಾಣೆ ಭೂಸುರರಿಗಿತ್ತಿಹರು ಅಯ್ಯಾ 8 ಆಷಾಢ ಸಿತ ತೃತಿಯ ಭಾಸಿಸುವ ಮಧ್ಯಾಹ್ನಕಾಶೀಗೇ ಮಿಗಿಲೆನಿಪ ತ್ರಿಮಕೂಟಗಾಗಮಿಸಿಭೂಸುರರಿಗೇ ತಮ್ಮ ಆಶ್ವಾಸ ತಿಳಿಸುತ್ತ ಲೇಸು ಸಂಗಮವೀಯತಾ ||ಶೇಷ ಚಂದ್ರಿಕಾಚಾರ್ಯ ಶ್ರೀಶನರ್ಚಿಸಿ ಕಾಯರಮೇಶ ಚರಣದಲೀಯ ಲೋಸುಗದಿ ಮನಮಾಡಿಆಸುಸತ್ತಿಥಿ ಚೌತಿ ಲೇಸೆನಿಸಿ ಉದಿಸುತಿರಲೀ ಶರೀರವನು ಅರ್ಪಿಸಿದರು 9 ಇವರ ವೃಂದಾವನವು ಅಶ್ವತ್ಥ ನರೆಯಣನಪವಿತರದ ಪದ ಧ್ರುವಕೆ ಬೀಳುವ ಸ್ಥಳದೊಳಗೆ ಸ್ಥಾಯವದು ಮಠಬಿರಿದುಗಳು ಅಶ್ವತ್ಥತರುಛಾಯವೇ ಛತ್ರಿಯೆನಿಸುತಿಹುದೂ ||ಕವೇರ ಕನ್ಯೆಯು ಕಪಿಲ ದಿವ ದೀವಟಿಗೆ ಸಮವುಇವರಿರುವ ಕ್ಷೇತ್ರವೇ ಪ್ರವರ ಗಯಪ್ರಯಾಗವಿಶ್ವೇಶ ಸನ್ನಿಧಿಯು ಇವರ ಗುಣ ಸ್ಥವನವೇಶಶ್ವದಾನಂದ ಸಂದೋಹವು 10 ವತ್ಸರವು ನೂರೆರಡು ಸತ್ಸಿದ್ದಿಗೇ ಪೊತ್ತಸತ್ಸರೀರವ ತ್ಯಜಿಸಿ ಮತ್ಸರಾದ್ವಿರಹಿತರುವತ್ಸಾರಿ ಸಿರಿಕೃಷ್ಣ ವತ್ಸರೆಂದೆನಿಸುತ್ತ ಸತ್ವ್ಸಭಾವದಿ ಮೆರೆಯುತಾ ||ಹೃತ್ಸರೋಜದಿ ಪವನ ಹೃತ್ಸರೂಜದಿ ಶಿರೀವತ್ಸಲಾಂಛನ ಗುರುಗೋವಿಂದ ವಿಠಲಪದಸತ್ಸರೋಜದ ಧ್ಯಾನ ಉತ್ಸುಕದಿ ಗೈದು ತನವತ್ಸರ್ಗ ಬೀಷ್ಟಗಳಗರೆವಾ 11
--------------
ಗುರುಗೋವಿಂದವಿಠಲರು
ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ ||ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು ||ಮೀರಿಧರುಷದಲಿ ಪದಪಾಡಿ | ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು ||ವಸುಧೆಗಾನಂದ ಪಡಿಸಲು |ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|ಯೊಡತಿ ಜಯಮಾಯಾ ಹಸೆಗೇಳು 4ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ ||ಪಾಣಿಯಾಗಿಹಳೆಶ್ರುತಿವೇದ್ಯೆ | ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
--------------
ಪ್ರಾಣೇಶದಾಸರು
ಶ್ರೀ ಪ್ರಸನ್ನ ಶ್ರೀನಿವಾಸ ಕಲ್ಯಾಣ (ಅಣು)34ಮೇರು ಸುತ ಗಿರಿವಾಸ |ಶರಣಾದೆ ನಿನ್ನಲಿ ವಿಶ್ವಜನ್ಮಾದಿಕರ್ತನಿರ್ದೋಷ|||ಶ್ರೀ ಶ್ರೀನಿವಾಸ ||ವಿಷ್ಣು ಸರ್ವೋತ್ತಮ ಸಾಕ್ಷಾತ್ |ರಮಾದೇವಿ ತದಂತರಾ |ತದಧೌವಿಧಿವಾಣ್ಯೌಚ ತತ್ವವನು ಪ್ರತ್ಯಕ್ಷ ಭೃಗುಗೆ |ತಿಳಿಸಿ ಲಕ್ಷ್ಮಿಯ ಇಳೆಯ ಜನರಿಗೆ ಒಲಿಯೆ ಕಳುಹಿಸಿ |ವ್ಯಾಳಗಿರಿವಲ್ಮೀಕಪೊಕ್ಕಿ ಶ್ರೀವತ್ಸಶರಣು |ಶರಣು ಹೇ ಸರ್ವ ಹೃದ್ಗುಹಾಂತಸ್ಥವಿಶ್ವ ಪವೃಷಭಅಂಜನಶೇಷ|ವೇಂಕಟಾದ್ರಿಯ ನೆನೆಯೆ ಪಾಪವಿನಾಶ |ಶ್ರೀಸ್ವಾಮಿತೀರ್ಥದ ದಕ್ಷಪಾಶ್ರ್ವಪರೇಶ ||| ಶ್ರೀ ಶೇಷಾಚಲೇಶ ||ಅರ್ಚಿಪರ ಸಂರಕ್ಷಿಪುದು ನಿನ್ನಪಣವು ಆದುದರಿಂದ ಗೋಪಾನ |ಆಸಿಯತಲೆಯಲಿ ತಡೆದು ಗೋವನು ಕಾಯ್ದ _ಕರುಣಿಯೆ ಭಕ್ತವತ್ಸಲ |ತುಚ್ಛಗೋಪನು ಭಯದಿ ಅಸುಬಿಡೆಚೋಳರಾಯಗೆ ಶಾಪವಿತ್ತು |ಅಚ್ಚುತನೆ ನೀದೇವ ಗುರುವಿನ ಸೇವೆಕೊಂಡು ನಿನ್ನರೂಪ |ಸ್ವಚ್ಛಚಿನ್ಮಯ ಭೂವರಾಹನ ಸಹವಿನೋದ ಲೀಲೆಮಾಡಿ |ಪ್ರೋಚ್ಚನಂದದಿ ಕ್ಷೇತ್ರ ಸಹಬಕುಳಾ ಯಶೋದೆಯ -ಪಾಕಕಾಗಿ ಸ್ವೀಕರಿಸಿ ಹೇ ದಯಾನಿಧೇ ನಿತ್ಯತೃಪ್ತ 1ಅಸಮ ಸತ್ಯವಾಗೀಶ |ಜಗನ್ಮಾತೆಯೆಂದು ಪೇಳಿದಂತೆ ಆಕಾಶ |ಕಂಡಪದ್ಮದಿ ಪದುಮ ಸುಮುಖವಿಲಾಸ |ಶಿಶುವಕೊಂಡಳು ಧರಣಿ ಬಹು ಸಂತೋಷ ||| ದಿಂದ ವಿಹಿತ ಆಶ ||ಧರಣಿದೇವಿ ಆಕಾಶರಾಜನ ಸುತೆಪದ್ಮಾವತಿಯೆಂಬ ನಾಮದಿ |ಪುರಿಯ ಹೊರಗೆ ಪುಷ್ಪವನದಲಿ ಸಖಿಯರೊಡನೆ ಆಡುವಾಗ |ನಾರದನು ಬಹು ವೃದ್ಧರೂಪದಿ ಬಂದು -ಹಸ್ತರೇಖೆ ನೋಡುತ |ಶ್ರೀರಮಾಲಕ್ಷಣವ ಕಾಣುತ ಬ್ರಹ್ಮದೇವನ ತಾಯಿ ಅಂಗಿಯು |ಮಾರಜನಕನೆ ಪತಿಯು ಎಂದು ಪೇಳಿತೆರಳೆ ಶಿರಿಯ ಸ್ಮರಿಸುತ |ಏರಿ ಕುದುರೆಯ ವನದಿ ಪದ್ಮಾವತಿ ಸಂಗಡ -ಆಟವಾಡಿದಿ ಹೇ ದಯಾನಿಧೇ ಶ್ರೀಶಸ್ವರಮಣ 2ಧರಣಿಯೊಡನೆ ಸಂವಾದ |ಮಾಡೆ ಬಕುಳಾ ಪೋಗೆ ನೀನು ಪುಳಿಂದ |ವಿಧಿವತ್ಸರುದ್ರನು ದಂಡ ಗುಲ್ಮಬ್ರಹ್ಮಾಂಡ |ಹಾರ ಗುಂಜಾಕಂಬುವೇಷದಿ ಪೋದಿಯೋ ಮುದದಿಂದ ||| ಕಣಿಪೇಳ್ವ ಚೆಂದ ||ಧರಣಿಪದ್ಮಗೆ ಕಣಿಯಪೇಳಿ ಮದುವೆ ನಿಶ್ಚಯಮಾಡಿ ಬಂದೆಯೋ |ಭರದಿಶುಕಆಕಾಶರಾಜ ಲಗ್ನಪತ್ರವಕೊಡಲು ಬ್ರಹ್ಮ-ಗರುಡಶೇಷಶಿವಾದಿಸುರ ಮುನಿಜನರ ಬಕುಳಾ ಲಕ್ಷ್ಮೀಸಹ ನೀ |ಪೊರಟುಮಾರ್ಗದಿ ಶುಕಮುನಿಯ ನೈವೇದ್ಯ ಉಂಡು ಜನರತೃಪ್ತಿಸಿ |ಸೇರಿಪುರಿಯ ಅಜರ ಮಂದಿರ ಪೋಲ್ವ -ಮನೆಯಲಿ ಪದ್ಮಾವತಿಗೆ ಮಾಂಗಲ್ಯ ಧರಿಸಿದಿ |ಸರಸಿಜಾಸನತಾತಪ್ರಸನ್ನ ಶ್ರೀನಿವಾಸನೆವಿಶ್ವಪಾಲಕ ಹೇ ದಯಾನಿಧೇ ಶರಣು -ಶರಣು ಹೇ ಸೌಭಾಗ್ಯದಾತಾ ಪ. 3||ಶ್ರೀ ಪ್ರಸನ್ನ ಅಣು ಶ್ರೀನಿವಾಸ ಕಲ್ಯಾಣ ಸಂಪೂರ್ಣ||
--------------
ಪ್ರಸನ್ನ ಶ್ರೀನಿವಾಸದಾಸರು