ಒಟ್ಟು 9 ಕಡೆಗಳಲ್ಲಿ , 9 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಒಂದು ಜಯ ವಿಬುಧನುತರ ಚರಣ ಜಯತು ನಾಗಾಭರಣ ಜಯ ಭಕ್ತ ಜನ ಶರಣ ಜಯ ದುಃಖಹರಣ 1 ಜಯತು ಖಳಕೃತಕದನ ಜಯಜಯತು ಜಿತಮದನ ಜಯ ಜಯತು ಸುಖಸದನ ಜಯ ಪಂಚವದನ2 ಜಯತು ಶ್ರೀಶಕೈಲಾಸ ಜಯ ಭಜಕವಿಶ್ವಾಸ ಜಯ ಅನಂತಾದ್ರೀಶ ಪ್ರಿಯಪಾರ್ವತೀಶ 3 ಪದ ಮುಂಚೆ ನುತಿಸುವೆ ಭಕುತಿಯಿಂದಲಿ ಪಂಚವದನನ ಪಾದಪಂಕಜ ಚಂಚಲಾಗದಲಿರಲಿ ಮನ ಮತಿ ಮುಂಚೆ ಕೊಡುಯೆಂದು ಹಿಂಚೆ ಕುಲ ದೇವಾದಿ ಪದಯುಗ ವಂಚನೆಯು ಇಲ್ಲದಲೆ ನುತಿಸುವೆ ಹಂಚಿಕಿಂದಲಿ ಕುಶಲಬುದ್ಧಿ ಪ್ರಪಂಚ ಕೊಡುಯೆಂದು 1 ಮನಸಿಜನ ಗೆದ್ದವರು ಮೇದಿನಿಯ ಹುಡಿಕಿದರಿಲ್ಲಾ ಮತ್ತೀಮನಸು ಗೆದ್ದವರುಂಟೆಯೆಲ್ಲರಿ ಗನುಭವಾಗಿಹುದು ಮನಸಿಜನ ಗೆದ್ದಂಥ ರುದ್ರನು ಮನಕೆ ತಾ ಅಭಿಮಾನಯಾಗಿಹ ನೆನುತ ಮೊದಲಾತನನ ನುತಿಸಿದೆ ಮನಸಿನೊಳಗಿಟ್ಟು 2 ಸಾರಲಿಂಗ ಪುರಾಣದರ್ಥದ ಸಾರಿ ತಿಳುವುತ ಮತ್ತೆ ಗ್ರಂಥ ವಿ ಚಾರ ಮಾಡುತ ಅದರ ಅರ್ಥವ ಪೂರ್ಣ ತಿಳಕೊಂಡು 'ಶ್ರೀರತಾನಂತಾದ್ರಿ' ರಮಣನ ಸಾರ ಕೃಪೆಯಿಂದಲೆಯೆ ಪೇಳುವೆ ಪಾರ್ವತೀಶಗೆ ಪ್ರೀತಿಕರ ಶಿವ ಪಾರಿಜಾತವನು 3 ಪದ ಪೂರ್ವದಲ್ಲಿ ಪಾರ್ವತಿಯು ಪರ್ವತಶ್ರೇಷ್ಠ ಹಿಮ ಪರ್ವತದ ಮಧ್ಯದಲ್ಲಿ ಸರ್ವಗುರು ಕೈಲಾಸ ಪಾರ್ವತೀಶನ ಮನ:ಪೂರ್ವಕದಿ ಬಯಸುತಲ ಪೂರ್ವ ತಪ ಮಾಡುತಿರುವಳಲ್ಲೆ ಪಾರ್ವತಿಯ ಕಷ್ಟ ಹಿಮಪರ್ವತನು ತಾ ನೋಡಿ ಸರ್ವ ಕಾರ್ಯವ ಬಿಟ್ಟು ಇರುವ ಬಲು ಚಿಂತೆಯಲಿ ಸರ್ವಸಂಪನ್ನಳಾಗಿರುವಳೆನ್ನ ಮಗಳು ಈ ಪಾರ್ವತಿಗೆ ತಕ್ಕ ವರನಿರುವನಾರೆಂದು 1 ಬಂದನಾಗಲ್ಲವನ ಮಂದಿರಕೆ ನಾರದನು ಮುಂದೆ ಗಿರಿರಾಜ ಅಲ್ಲಿಂದ ಆತನಕಂಡು ಇಂದು ಇಲ್ಲಿಗೆ ನೀವು ಬಂದು ಕಾರಣವೇನುಯೆಂದು ಕೇಳಿದನು ಅಂದ ಮಾತನ್ನು ಕೇಳಿ ಮುಂದೆ ಮುನಿರಾಜ ತಾ ಮಂದಹಾಸದಿ ನಗುತವೊಂದೊಂದು ಕಥೆ ಪೇಳಿ ಛಂದದಲಿ ಮನಸಿಗಾನಂದ ಬಡಿಸುತ ನುಡಿದ ಬಂದ ಕಾರ್ಯವ ಅವನ ಮುಂದೆ ವಿಸ್ತರದಿ 2 ಪದ ತಿಳಿಯೋ ನೀ ಗಿರಿರಾಜ ನಾ ಬಂದ ಕಾರ್ಯವ ತಿಳಿಯೋ ನೀ ಗಿರಿರಾಜ ಭೋರಾಜರಾಜಾ ತಿಳಿಯೋ ನಿನಗೊಬ್ಬಳಿಯ ಬಂದಿಹ ನಳಿಯನಾಗಿ ಮುಖಕಳೆಯು ಉಳ್ಳವ ಇಳೆಯೊಳಿಂಥಾ ಅಳಿಯನ ಸಮ ಅಳಿಯನಿಲ್ಲ ಕಾಲ್ಗಳೆಯುದಲೆ ಇರು ಪ ಹರಿಯಿರುವ ಪ್ರಖ್ಯಾತಾ ಸರ್ವರಿಗೆ ಆತನೆ ದೊರೆಯೆನಿಸಿಕೊಂಬಾತಾ ಕರಿರಾಜ ಕೂಗುತ ಕರೆಯಲೊದಗಿದನಾತಾ ತನ್ನ ಸ್ಮರಿಸಿದವರನು ಮರೆಯದಲೆ ಪೊರೆವಾತಾ ಅನಾಥಾನಾಥ ಧರೆಯೊಳಗೆ ಶ್ರೀಹರಿಯ ಮೂರ್ತಿಯ ಸರಿಯುಯಿಲ್ಲವು ಮರೆಯದಲೆ ಆ ಸಿರಿಯ ರಮಣನ ಕರೆಯ ಕಳಿಸುತ ಹಿರಿಯ ಮಗಳನು ಹರಿಗೆ ಅರ್ಪಿಸು1 ಬಡವನಲ್ಲವು ಆತಾ ಬಹುಬಡವ ಭಕ್ತರ ದೃಢವ ನೋಡುವನಾತಾ ತಾ ಬಿಡದೆ ಕರವನು ಪಿಡಿವ ಸ್ನೇಹ ಸಮೇತಾ ಬೇಡಿದ್ದು ತ್ವರದಲಿ ಕೊಡುವನವ ಬಹು ದಾತಾ ಲಕ್ಷ್ಮಿಯಸತ್ತಾ ದೃಢವಿರಲಿ ಮನ ಪೊಡವಿರಲಿ ಉಂಬುಡುವ ಮಗಳನು ತಡವು ಮಾಡದೆ2 ಕೊಡುವದುಚಿತವು ಒಡವೆಗಳು ಬಹಳಿಡುವುತಲೆ ಸುಖಪಡುವಳಾಕೆಯು ಎಂಥವನು ಅವ ತಾನು ಎಂಬಂಥ ಮನಸಿನ ಭ್ರಾಂತಿ ಬಿಡು ಎಲೋ ನೀನು ಅತ್ಯಂತವಾಗಿಹ ಶಾಂತ ಮೂರುತಿ ತಾನು ಎಂತೆಂಥವರಿಗವ ನಂತ ತಿಳಿಯದು ಇನ್ನು ಮತ್ಹೇಳಲೇನು ಇಂಥ ಶ್ರೀಮದನಂತಾದ್ರೀಶನು ಕಾಂತಿಯಿಂದಿರುವಂಥ ಮಗಳಿಗೆ ನಿಶ್ಚಿಂತೆಯಿಂದಿರು 3 ಪದ ಮುನಿಯ ಮಾತನು ಕೇಳಿ ಮನಸಿನೊಳು ಹಿಗ್ಗುತಲೆ ಮನದ ಚಿಂತೆಯ ಬಿಟ್ಟು ಮನಸಿಜಪಿತನು ಎನ್ನ ಮನಿ ಅಳಿಯನಾದ ಎನ್ನ ಜನುಮ ಸಾರ್ಥಕವಾಯಿ ತೆನುತ ತಿಳಿದನು ತಾನು ಘನ ಹಿಮಾಚಲನು ಅನುದಿನವು ತನ್ನಲ್ಲಿ ಅನು ಕೂಲವಾಗುತಲೆ ತನಗೆ ಹಿತಮಾಡುತಿಹ ಜನರೊಳಗೆ ಮ- ತ್ತಾಪ್ತ ಜನರನ್ನು ಕೇಳದಲೆ ಅನುಮಾನ ಬಿಟ್ಟು ಹೀಗೆನುತ ಮಾತಾಡಿದನು ಮುನಿಯ ಮುಂದೆ ಪದ ಕೊಡುವೆನು ಆ ವಿಷ್ಣುವಿಗೆ ಮಗಳನ್ನು ಕೊಡುವೆನು ಕೊಡುವೆನು ಸಂತೋಷ ಬಡುವೆನಾತನ ಪಾದಾ ಹಿಡಿವೆನು ಚಿಂತೆಯ ಬಿಡುವೆನು ಮಗಳನ್ನು ಪ ನಾರದ ನಿನಮಾತು ಇನ್ನು ಸರಿ ಬಾರದು ಆರಿಗೆ ಮುನ್ನ ನೀರದ ವರ್ಣನ ತೋರಿದ ಬುದ್ಧಿ ವಿ ಶಾರದ ನಿನ್ನ ಮಾತು ಮೀರದೆ ಮಗಳನ್ನು ಕೊ....1 ನಿನ್ನ ಮಹಿಮೆ ಬಲ್ಲೆ ನಾಲ್ಕುಲೋಕ ಮಾನ್ಯರಿಗತಿಮಾನ್ಯ ನೀನು ನಿನ್ನ ಚಿತ್ತಕೆ ಬಂದರಿನ್ನೇಕೆ ತಡಬಹು ಚೆನ್ನಾತ ಆತಗೆ ಮನ್ನಿಸಿ ಮಗಳನ್ನು ಕೊ....... 2 ಭಾಷೆಯು ಅದು ಸುಳ್ಳಲ್ಲ ಲೇಸಾಗಿ ನಾನಿನ್ನ ಭಾಷೆಗೆ ಮೆಚ್ಚಿ ಉಲ್ಲಾಸದಿ `ಅನಂತಾದ್ರೀಶಗೆ ' ಮಗಳನ್ನು ಕೊಡುವೆನು3 ಪದ ಬ್ರಹ್ಮಪುತ್ರ ಕೇಳಿ ಸಂಭ್ರಮ ಬಡವುತ ನಮ್ಮ ಕಾರ್ಯ ಆಯಿತೆಂದು ಸುಮ್ಮನಿರುವುತ 1 ಒಮ್ಮಿಂದೊಮ್ಮೆಲೆದ್ದು ಮತ್ತೊಮ್ಮೆ ಹೇಳುತ ರಮಿಸದಲೆ ನಡೆದ ತನ್ನ ಜಿವ್ಹೆ ತೋರುತ 2 ಹೋಳು ತಂಬೂರಿ ತಂತಿಗಳನು ಮೀಟುತ ಚೆಲುವ ಮುನಿಯ ನಡೆದ ಬಾಗಿಲವ ದಾಟುತ 3 ಚೆಂದವಾಗಾನಂದ ಭಾರದಿಂದ ಮಣಿವುತ ಮುದೆ ಪಾರ್ವತಿಯ ಬಳಿಗೆ ಬಂದು ಕುಣಿಯುತ 4 ಮುನ್ನ ನುಡಿದ ಮದುವೆಯ ಸುದ್ದಿಯನು ನಗವುತ ಚೆನ್ನಿಗ`ನಂತಾದ್ರೀಶ'ನನ್ನು ಸ್ಮರಿಸುತ 5 ಪದ ಕೇಳಮ್ಮ ಹೊಸಸುದ್ದಿ ಪಾರ್ವತಿ ನಿನಗೆ ಹೇಳಬಂದೆನು ಎನಗಿದು ಪ್ರೀತಿಪ ಪಂಕಜನಾಭ ಬರುವನಂತೆ ನಿನ್ನ ಕಂಕಣಕಯ್ಯ ಪಿಡಿವನಂತೆ ಪಂಕಜಮುಖಿಯೆ ನಿಶ್ಚಯವಂತೆ ನಿ ಶ್ಯಂಕೆಯಿಂದಿರು ಯಾತಕೆ ಚಿಂತೆ 1 ನಕ್ಕು ಆಡುವನಲ್ಲವು ನಾನು ಎ ನ್ನಕ್ಕಯ್ಯ ನಿನಗೆ ಹಿತ ಪೇಳುವೆನು ಮಿಕ್ಕ ಮಾತುಗಳಿಂದ ಫಲವೇನು ನಿನ್ನ ತಕ್ಕ ಪುರುಷ ಅವ ತಿಳಿ ನೀನು 2 ಶ್ರೀಮದನಾಂತಾದ್ರಿವಾಸಗೆ ನಿನ್ನ ನೇಮಿಸಿದ ಹಿಮವಂತನು ಈಗ ಕೋಮಲಾಂಗಿಯೇ ಎನ್ನ ಮನಸಿಗೆ ಬಂತು ಈ ಮಾತು ಸತ್ಯವಾಗಲಿ ಬೇಗ 3 ಪದ ಪರಿ ಸುದ್ದಿಯುಂಟೆಂದು ಪೇಳುತಲೆ ಟಣ್‍ಟಣನೆ ಜಿಗಿವುತು ತ್ಕಂಠzಲ್ಲಿ ಅಲ್ಲಿಂದ ಹೊರಟು ಮುನಿಬಂದು ವೈ ಕುಂಠದಲಿ ತಾ ನುಡಿದ ಉಂಟಾದ ಸುದ್ದಿ ವೈಕುಂಠಪತಿಗೆ ಎಂಟೆಂಟು ಕಳೆಯಿಂದ ಉಂಟಾದ ಪಾರ್ವತಿಯ ಗಂಟು ಹಾಕಿದೆಯೆನಲು ತಂಟಕನೋ ನೀ ಕಲಹಗಂಟಕನೋ ಸರಿಯಿನ್ನು ಭಂಟನಹುದೆಂದು ವೈಕುಂಠಪತಿನಕ್ಕ 1 ನಾರದನ ಮಾತು ಸರಿಬಾರದೆ ಪಾರ್ವತಿಯು ತೀರದಂಥಾ ದು:ಖವಾರಿಧಿಯಲಿ ಮುಳುಗಿ ಸಾರಿದಳು ತನ್ನೊಳಗೆ ಘೋರಾದ ಚಿಂತೆ ಬಂತಾರಿದನು ಬಿಡಿಸುವರು ತೋರದೆನಗೆ ತೋರದಿರಬೇಕು ನಾ ದೂರದಲಿ ಇಲ್ಲೆ ಇರಬಾರದೆಂತೆಂದು ಸುಖ ತೋರದಲೆ ತನ್ನ ಮಾತು ಮೀರದಲೆ ಇರುವ ಸುವಿ ಶಾರದಳು ಸಖಿಯೊಡನೆ ಘೋರಾದರಣ್ಯವನು ಸೇರಿದಳು ತಾನು ಮುಂದೆ ಮತ್ತಾಕೆಯ ಮುಂದೆ ಮಾತಾಡದಲೆ ನೊಂದು ತನ್ನೊಳಗೆ ತಾ ತಂದು ಆ ವನದಲ್ಲಿ ಮುಂದೇನು ಮಾಡಲೆಂತೆಂದು ತಿಳಿಯದೆ ಮರುಗಿ ಮಂದಗಮನೆಯು ಚಿಂತೆಯಿಂದ ಮಲಗಿದಳು ಮುಂದೆ ಆ ಸಖಿ ನೋಡಿ ಸಂದೇಹ ಬಡುತ ತ್ವರ ದಿಂದ ಬದಿಯಲಿ ತಾನು ಬಂದು ಹಾ ಇದುಯೇನು ಇಂದು ಮುಖಿ ಹೀಗೆಯೆಂದೆಂದು ಮಲಗುವಳಲ್ಲ ಇಂದೇನು ಬಂತು ಇಂತೆಂದು ಚಿಂತಿಸುತ ಹೀಗೆಂದಳಾಗ 2 ಪದ ಇಲ್ಲೇಕೆ ಮಲಗಿದೆ ಹೇಳಮ್ಮ ನೀ ಇಲ್ಲೇಕೆ ಎಲ್ಲಾನು ಬಿಟ್ಟು ವನದಲ್ಲಿಯೆ ಪಾರ್ವತಿ ಮಂದಿರ ಪ ಬಿಟ್ಟು ಇಲ್ಲಿ ಮಲಗುವರೆ ನಿನಗೆ ಬಂದಿಹದೇನು ಹೇಳದಿರುವರೆ ನಿನ್ನ ತಂದೆ ತಾಯಿಗಳೆಷ್ಟು ಮರಗುವರೆ ಇಂದು ಮುಖಿಯಳೆ ಯಾರೇನಂದರೇನೆ ಗೆಳತಿ ನಿನಗೆ 1 ನಿನ್ನ ಪ್ರಾಣದ ಸಖಿನಾನಲ್ಲೆ ನಿನ ಗಿನ್ನಾರಿರುವರು ಹಿತವರು ಇಲ್ಲೆ ನಾ ನಿನ್ನ ಕಾರ್ಯವ ಮಾಡುವಳಲ್ಲೆ ಚಿನ್ನದಂಥವಳೆ ನೀ ಘನ್ನಾರಣ್ಯಕೆ ಬಂದು 2 ನಿದ್ರೆ ಬಂದಿಹುದೇನೆ ನಿನಗಿಂದು ಅಥವಾ ಬುದ್ಧಿ ಹೋಯಿತೆ ಮತ್ತೆ ನಿನ್ನದು ಇಂದು ತಿಳಿಯದು ಬುದ್ಧಿವಂತಿಯೆ ಅನಂತಾದ್ರೀಶನಾಣೆ ನಿನಗೆ 3 ಪದ ಇಂದು ಮುಖಿ ಪಾರ್ವ ತಿಯು ಹಿತದಿಂದ ಆಡಿದ ಮಾತು ಒಂದೊಂದು ಸ್ಮರಿಸುತಲೆ ಛಂದಾಗಿ ಮನಸಿಗೆ ತಂದು ನೋಡಿದಳು ಇಂದು ಯೆನ್ನ ಭಾಗ್ಯಕ್ಕೆ ತಂದೆ ತಾಯಿಗಳಿಲ್ಲ ಬಂಧು ಬಾಂಧವರಿನ್ನು ಮುಂದೆಲ್ಲಿ ಬರುವವರು ಸಂದೇಹವೇಕೆ ಸಖಿ ಯಿಂದಧಿಕ ಮತ್ತಿಲ್ಲ ವೆಂದು ದು:ಖವ ಸಖಿಯ ಮುಂದ ಹೇಳಿದಳು 1 ಪದ ಏನು ಹೇಳಲಿಸಖಿ ಇನ್ನೇನು ಹೇಳಲಿ ನಾನು ಖೂನದಿ ತಂದೆಯು ಹರಿಗೆಯೆನ್ನನು ನೇಮಿಸಿದಾ ಪ ಮೃತ್ಯುಂಜಯ ಮೃಡನೆ ಎನ್ನ ಚಿತ್ತಕೊಪ್ಪುವ ಪತಿಯು ಸತ್ಯದಿ ಆಗಲಿಯೆಂದು ಚಿತ್ತದಿ ಬಯಸುತಲೆ ನಿತ್ಯದಿ ಬಹುದಿನ ಬಿಡದಲೆ ಅರ್ಥಿಲೆ ಮಾಡಿರುವಂಥ ಪಾರ್ಥೇಶ್ವರನಾ ಪೂಜೆಯು ವ್ಯರ್ಥಾಯಿತಲ್ಲೆ 1 ನಾರದ ಮುನಿಯಿ ಮಾತು ಸಾರಿದ ನನ್ನಲಿ ಬರಿದು ಬಾರದೆನ್ನ ಮನಸಿಗೆ ಅದು ತಾರದೆ ನಾ ಬಂದೆ ಮೀರಿದ ಕೆಲಸವು ತೀರಲಾರದು ಅದು ಎಂದು ಸೇರಿದೆ ವನವನು ನಾಕಾಲೂರದೆ ಮನೆಯಲ್ಲೆ2 ಹೃದ್ರೋಗದಿ ಬಳಲುವಳಿಗೆ ನಿದ್ರೆಯೆಂಬುವದೆಲ್ಲೆ ಭದ್ರಾಂಗಿಯು ಸತಿ ನಾನು ಉದ್ರೇಕದಿ ಮೈಮರೆತು, ಹಿಮಾದ್ರಿಯು ಎನ್ನನು ಕೈಲಾ ಸಾದ್ರೀಶನ ಬಿಟ್ಟು ಅನಂತಾದ್ರೀಶಗೆ ಕೊಡುವ3 ಪದ ಪರಿ ಮಾತುನು ಕೇಳಿ ಆ ಪ್ರಾಣದ ಸಖಿ ತಾನು ಪರಿ ಮಾತಾಡಿದಳು ಆ ಪಾರ್ವತಿಯ ಮುಂದೆ ಏ ಪಾರ್ವತಿಯೇ ಬಿಡುಸಂತಾಪವ ನಿನಗೊಂದು ಹೇಳುವೆ ಆ ಪಿತಗರಿಯದೆ ನಡೆ ನೀ ತಾಪಸವನದಲ್ಲೆ 1 ಈ ರೀತಿಯ ನುಡಿ ಕೇಳಿ ಹಾರೈಸುತ ಸಖಿಕೂಡಿ ಪಾರ್ವತಿ ತಾ ನಡೆದಳು ಘೋರಾರಣ್ಯದಲಿ ಇರ್ವಳು ಆಳುPದೆÀಲಿಂಗಾಕಾರವು ಪೂಜಿಸುತಲ್ಲೆ ಚಾರ್ವಾಂಗಿಯು ತಾ ನಿದ್ರಾಹಾರವು ಇಲ್ಲದಲೆ2 ದೀನೋದ್ಧಾರಕ ಶಿವನು ತಾನೆ ಅಲ್ಲಿಗೆ ಬಂದು ಏನು ಬೇಡುವೆ ಪಾರ್ವತಿ ನೀನು ಬೇಡೆಂದ ಏನು ಧೇನಿಸುವೇ ಬಿಡು ಮಾನಿನಿಯೆ ಭಕ್ತಾ ಧೀ ನಾನಂತಾದ್ರೀಶನ ಆಣೆ ನಿನಗುಂಟು 3 ಪದ ಹರನ ಮಾತನು ಕೇಳಿ ಹರಿಣಾಕ್ಷಿ ಪಾರ್ವತಿಯು ತ್ವರದಿಂದ ಎದ್ದು ಪರಮ ನಾಚಿಕೆಯಿಂದ
--------------
ಅನಂತಾದ್ರೀಶ - ಕಥನಕಾವ್ಯಗಳು
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಬೋಧ ಅಹ ಅಹ ಗೆಳೆಯನೆ ಮುಕುತಿಪ್ರದಾ ಘನಮೋದ ಬಲು ಆನಂದವೀವ ಪದ ಪ ಪರಮಾನಂದಾ ನೀಡಿ ತೋರಿಕೆ ಪುಸಿಮಾಡಿ ನಿಜತೋರಿ ನಿಜ ಸಾಯುಜ್ಯವೀಯುವದೈ 1 ಮರುಳರ ಮಾತೆಂದು ಮದದಲಿ ಗಳಹದಿರೈ ಇಂತೆಂದು ಮದದಲಿ ಗಳಹದಿರೈ ಗುರುಶಂಕರ ಬೋಧವಿದು 2
--------------
ಶಂಕರಭಟ್ಟ ಅಗ್ನಿಹೋತ್ರಿ
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು
ಶಾಂತಿಯೆಂಬುದು ಸಕಲ ಸದ್ಗುಣಂಗಳ ಮುಕುಟ ಶಾಂತಿಯೊಂದಿರಲು ಕೃತಾಂತನಂಜಿಕೆಯಿಲ್ಲ ಪ ಶಾಂತಿಯೆ ಪ್ರದ್ವೇಷ ಕಾಂತಾರ ಪಾವಕವು | ಶಾಂತಿ ಕಾಂತಿಯು ದುರಿತಧ್ವಾಂತ ಓಡಿಸುವದು ಚಾಪ | ಮೊದಲಾದ ದು | ರಂತ ಶಸ್ತ್ರಾಯುಧಗಳು ಶಾಂತಿ ಖಡ್ಗಕೆ ಶರಣು ಹೊಡೆಯುತಿಹವು 1 ಶಾಂತಿಗೊಪ್ಪದ ಕುರುಪ ಭ್ರಾಂತಿಯಲಿ ತನ್ನ ಸಂತತ ಸಹಿತವಾಗಿ ಸಂಗರದಿ ಹತನಾದ ಶಾಂತಿಯಿಂದಲಿ ಧರ್ಮ ಚಿಂತೆಯನು ನೀಗಿದನು ಶಾಂತಿಯಿಂದಲಿ ಸತ್ಯ ಹರಿಶ್ಚಂದ್ರಗಾಧಿಪ ಜನ ಪೌರುಷÀವೆಲ್ಲ ನಿಸ್ತೇಜಗೊಳಿಸಿದನು 2 ಶಾಂತಿಯಲಿ ಭಕ್ತಿ ಮುಕ್ತಿ ಇಂತೆಂದು ವೇದಗಳು ಅಂತ್ಯದಲಿ ತ್ರೈವಾರ ಘೋಷಿಸುತಲಿಹವು ಶಾಂತಮೂರುತಿಯಾದ ಶ್ರೀ ಶಾಮಸುಂದರನು ಶಾಂತಿಗೆ ಮೆಚ್ಚಿ ಅಚ್ಯುತಪದವೀವಾ 3
--------------
ಶಾಮಸುಂದರ ವಿಠಲ
ಸಖಿ ಕೇಳೇ ಇನ್ನು ಹರುಷದ ಮಾತಾ| ಸಕಲ ಜನರಿಗೆ ಆನಂದ ವೀವಾ| ಪ ಇಂತೆಂದು ಹರಿಯು ನಾನಾಪರಿ ವಿರಹದ| ಸಂತಾಪ ಮಾತವ ನುಡಿಯಲು ಕೇಳಿ| ಅಂತರಂಗದ ಕೋಪವಬಿಟ್ಟು ಎದ್ದು|ಅ| ನಂತನ ಬಿಗಿದಪ್ಪಿದಳು ಅಂಬುಜಾಕ್ಷಿ 1 ಲಲಿತಾಂಗಿ ಆಲಿಂಗನವ ನೀಯೇ ಹರಿಗಾಗಾ| ಒಲಿದು ಉಕ್ಕೇರಿತು ಆನಂದ ಉದಧಿ| ಸತಿ ಮಾತಾಡುವ ದೇವ ಶ್ರೀ| ಲಲನೇಯಾ ಸದ್ಬುವನೆಯಾ ಪೂರಿಸಿದನು 2 ಈ ಪರಿಯಾಡಿದ ಶ್ರೀ ಹರಿ ಚರಿತೆಯಾ| ನಾ ಪೇಳಿದುದು ಭಾವ ಭಕುತಿಯಲಿಂದಾ| ಆ ಪದಿಂದಲಿ ಕೊಂಡಾಡುವ ಮನುಜನ| ತಾ ಪಾಲಿಸುವಾ ಮಹಿಪತಿ ಸುತ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ಪ್ರಾಚೀನ ಕರ್ಮವು ಬಿಡಲರಿಯದುಯೋಚನೆಯ ಮಾಡಿ ನೀ ಬಳಲಬೇಡ ಪ.ಮುನ್ನಮಾಡಿದಕರ್ಮ ಬೆನ್ನಟ್ಟಿ ಬರುತಿರಲುತನ್ನಿಂದ ತಾನೆ ತಿಳಿಯಲರಿಯದೆಇನ್ನು ದೇಹವನು ಆಶ್ರಯಿಸಿ ಫಲವೇನುಉನ್ನತ ಹರುಷದಲಿ ಮನದಿ ಯೋಚಿಸುವ 1ಲೋಕಾದಿ ಲೋಕಗಳ ತಿರುಗುವರವಿ ರಥಕೆಏಕಗಾಲಿಗೆ ಏಳು ಕುದುರೆಕಟ್ಟಿಆಕಾಶ ಮಾರ್ಗದಲಿ ತಿರುಗುವ ಅರುಣನಿಗೆಬೇಕಾದ ಚರಣಗಳ ಕೊಡಲಿಲ್ಲ ಹರಿಯು 2ಸೇತುವೆಯುಕಟ್ಟಿ ಲಂಕೆಗೆ ಹಾರಿ ಹನುಮಂತಖ್ಯಾತಿಯನೆ ಮಾಡಿ ರಾವಣನ ಗೆದ್ದುಸೀತೆಯನು ತಂದು ಶ್ರೀರಾಮನಿಗೆ ಕೊಡಲಾಗಿಪ್ರೀತಿಯಿಂ ಕೌಪೀನವ ಬಿಡಸಲಿಲ್ಲ ಹರಿಯು 3ನಿತ್ಯದಲಿ ಗರುಡ ಸೇವೆಯ ಮಾಡಿ ವಿಷ್ಣುವನುಹೊತ್ತುಕೊಂಡು ಇದ್ದ ಜಗವರಿಯಲುಅತ್ಯಂತ ಸೇವಕನೆಂದು ಮೂಗಿನಡೊಂಕುಎತ್ತಿ ನೆಟ್ಟಗೆ ಮಾಡಲಿಲ್ಲ ಶ್ರೀ ಕೃಷ್ಣ 4ಇಂತೆಂದು ಈಪರಿ ತಮ್ಮೊಳಗೆ ತಾವು ತಿಳಿದುಭ್ರಾಂತನಾಗದೆ ಬಯಕೆಗಳನುಜರಿದುಶಾಂತ ಮೂರುತಿಸಿರಿ ಪುರಂದರವಿಠಲನ
--------------
ಪುರಂದರದಾಸರು