ನೀ ತಂದೆ ನಾಕಂದನಯ್ಯ ರಂಗಯ್ಯ ಪ
ಪಾತಕಿಯು ನಾನೆಂದೆ ಘಾತಕನು ನಾನೆಂದೆ
ನೀತಿಗಳ ಕಲಿಸೆಂದೆನೈ ತಂದೆ ನಿನ್ನ ಹಿಂದೆ ಅ.ಪ
ತಂದೆ ನೀ ಕರೆತಂದೆ ಎಂದು ನಂಬುತೆ ಬಂದೆ
ತಂದೆ ನೀ ಕೈಬಿಟ್ಟು ಹಿಂದೆ ನಿಂದೆ
ನಿಂದೆಯಲಿ ನಾನೊಂದೆ ಬಂದೆ ಭವದಲ್ಲಿ
ಮಂದರೋದ್ಧಾರ ಗೋಪಾಲ ತಾಪವತಂದೆ 1
ಹಿಂದೆ ಜನ್ಮಂಗಳಲಿ ಬೆಂದು ಬಳಲಿದೆನಯ್ಯ
ಇಂದು ನರಜನ್ಮದಲಿ ಬಂದೆನಯ್ಯ
ಬಂಧು ಬಳಗವಕಾಣೆ ಕಂದು ಕುಂದಿದೆನಯ್ಯ
ಇಂದೀವರಾಕ್ಷ ಸಾನಂದ ಭೈರವೀಪ್ರಿಯಾ2
ಮುಂದಿನಾ ಪಥವಾವುದೆಂದರಿಯೆ ಮದನಾಂಗ
ಮಂದಮತಿಯನು ನೀಗಿಸೆಂದೆನುವೆ ರಂಗ
ಬಂದ ಸುಖದು:ಖಗಳನೊಂದೆಣಿಸು ನೀಲಾಂಗ
ಕರವ ಪಿಡಿ ಮೋಹನಾಂಗ 3
ಎಂದು ತವಪಾದಾರವಿಂದವನು ಸೇರಿಸುವೆ
ಅಂದು ಜನ್ಮವು ಸಫಲವೆಂದು ನಂಬಿರುವೆ
ಮುಂದೆ ಜನ್ಮಗಳಿಲ್ಲ ಎಂದು ನಾನಂಬಿರುವೆ
ಸಂದೇಹವೇತಕೆ ನಿನ್ನ ಸೂತ್ರದೋಲ್ ಮೆರೆದೆ 4
ಮಂದಾಕಿನೀಜನಕ ನಂದಗೋಪನ ಕಂದ
ಇಂದೀವರಾಕ್ಷ ಮುಚುಕುಂದವರದಾ
ಎಂದೆಂದು ವಂದನೆಯ ಮಾಳ್ಪುದೆನಗಾನಂದ
ಇಂದದನು ಕರುಣಿಸೈ ಮಾಂಗಿರಿಯ ಗೋವಿಂದ 5