ಒಟ್ಟು 7 ಕಡೆಗಳಲ್ಲಿ , 3 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ | ಓಡಿ ಓಡಿ ಬಂದು ತಲಿಗೆ ನೀ ಡೀ ಡೀ ಡೀ ಎಂದು ಪ ವಜ್ರ | ಹರಳು ತೆತ್ತಿಸಿದ ದ್ಯುಮಣಿ || ಸರಿ ಸರಿ ಸರಿ ಸರಿ ಹಾಯಿದು 1 ಚಂದ್ರಶೇಖರ ಹಂಸವಾಹನ| ಇಂದ್ರಾದ್ಯರಾಕಾಶದಲಿ ಧುಂ ಧುಂ || ಧುಂ ಧುಂ ದುಂದುಭಿ ನುಡಿಸೆ | ಬಂದೆ ಇಕ್ಕೋ ಬಂದೆ ಬಂದೆನುತ 2 ಪಿಂತಿರುಗಿ ಪೋಗಿ ನೀನು | ಅಂತರಿಸಿ ದೂರದಿಂದ || ನಿಂತು ವಿಜಯವಿಠ್ಠಲರೇಯಾ |ಇತ್ತಿಂ ತ್ತಿಂ ತ್ತಿಂ ತ್ತಿಂ ತ್ತಿಂ ತ್ತೆನುತಲಿ 3
--------------
ವಿಜಯದಾಸ
ಪಾಲಿಸೊ ಪತಿತಪಾವನ್ನಾ ನಿನ್ನ ಪಾಲಿಗೆ ಬಂದೆ ಮೋಹನ್ನಾ -ಆಹಾ ಪಾಲಾಬ್ಧಿಶಾಯಿ ಗೋಪಾಲರೊಡೆಯಾ ಲೋಕ ಪಾಲಕ ವಿನುತಾ ಗೋಪಾಲ ಫಾಲಾಕ್ಷನೆ ಪ ಬಂದೆನೊ ನಿನ್ನ ಹಂಬಲಿಸಿ ನಾನು ನೊಂದು ಸಂಸ್ಕøತಿಯಲ್ಲಿ ಸೂಸಿ ಈಸಿ ಮುಂದಣ ನೆಲೆಗಾಣೆ ಗುಣಿಸಿ ಏನೇ ನೆಂದು ಪೇಳಲೊ ವಿಸ್ತರಿಸಿ -ಆಹಾ ಮಂದರಧರ ನಿನ್ನ ಮಂದಿರದ ದಾಸಿ ಕಂದನು ನಾನೆಲೊ ಕಣ್ತೆರೆದು ನೋಡೊ 1 ಪೊಂದಿದೆ ಭಾರವವೊಹಿಸು ಪ್ರತಿ ಬಂಧಕವ ಪರಿಹರಿಸು ನಿನ ಗೊಂದಿಸುವೆ ಕೊಡು ಲೇಸು ಅತ್ಯಾ ನಂದದಲ್ಲಿ ಚಿತ್ತವಿಡಿಸು -ಆಹಾ ಇಂದಿರಾ ಮಂದಿರಾ ಸುಂದರ ಯೋಜನ ಗಂಧಿಯ ಬಸುರಿಲಿ ಬಂದ ಭವದೂರಾ 2 ನಿಂದ್ಯ ಕರ್ಮವು ಮಾಡಿದವನ ದೂತ ರಿಂದ ತರಿಸಿದೆ ತ್ರಿಭುವನಾ ಜಯ ವೆಂದು ಕೊಂಡಾಡಲು ಜವನಾ ಭೀತಿ ಯಿಂದ ಮಾಡಿದ ನಿನ್ನ ಸ್ತವನಾ -ಆಹ ಒಂದಾನಂತವಾಗಿ ದ್ವಂದ್ವಪಾಪಗಳಿಗೆ ನಿಂದಿರಬಲ್ಲವೆ ಸಂದರುಶನವಾಗೆ 3 ಕಂದುಕ ಪುಟಿ ಸೂತ ಬಳುಕಿ ದೈತ್ಯ ವೃಂದ ಮೋಹಕವಾಗಿ ಸಿಲುಕಿ ಸುರ ಸಂದೋಹಕೆ ನೀನೆ ಘಳಿಕಿ ನಿಜ ವೆಂದು ಮಾನವರಿಗೆ ಬಳಿಕಿ -ಆಹಾ ಎಂದೆಂದಿಗೆ ಸಿದ್ಧ್ದಾಗಂಧಮಾತುರ ಕಳೆ ಗುಂದದೆ ಮತಿ ಕೊಡು ನಂದಕಾನಂದ ಹಸ್ತನೆ 4 ಹಂದಿ ನಾಯಿ ನರಿ ರಾಸಾ ಜನ್ಮ ಬಂದರೆ ಎನಗದು ಹರುಷಾ ಬಹು ಮುಂದುಂಟು ರಹಸ್ಯಾ ಮನಸಾಪೇಕ್ಷಾ ಸಂದೇಹ ಮಾಡಿಸೊ ಶ್ರೀಶಾ -ಆಹಾ ಯೋನಿ ಸಂದೀದ ಕಾಲಕ್ಕು ಒಂದು ವಿಂಶತಿ ಮತ ಹೊಂದಿಸದಿರು ಹರಿ5 ಅಂಧಃಕಾರದೊಳೆನ್ನ ತಂದೆ ಇದ ರಿಂದ ನಿನಗೇನೊ ಮುಂದೆ ಲಾಭ ಬಂದಾದರೂ ಇಲ್ಲಾ ಇಂದೆ ಸುಖ ಸಾಂದ್ರ ಕಡಿಮೆನೊ ಮುಂದೆ -ಆಹಾ 6 ಇಂದಿರಾವರ ರಾಮ ಶಾಮಾ ರಾಮ ಚಂದ್ರ ಚತುರ ಸಾರ್ವಭೌಮಾ ದಿವ್ಯ ಸಿರಿ ಉರಪ್ರೇಮಾ ಮುಚ ಕುಂದ ಪಾಲಕ ನಿಸ್ಸೀಮಾ -ಆಹಾ ಇಂದ್ರಿಯಂಗಳು ತನು ಸಂಬಂಧದೆಡೆಗೆ ಪೋಪಾ ತೊಂದರೆ ಬಿಡಿಸೊ ಗೋವಿಂದ ಗೋವಳರಾಯಾ 7 ದುಂದುಭಿ ಭೇರಿಯ ರಭಸಾ ಮಹಾ ಬಂಧುರಾ ನೆರೆದ ವಿಶೇಷಾ ಮಂತ್ರಿ ಮಂದಿ ಪರಿವಾರ ಭೂಷಾ -ಆಹಾ ಬಿಂದು ಮಾತುರ ಇವು ಮುಂದಿನೈಶ್ವರ್ಯ ಸಿದ್ಧಾ ಕುಂದಗೊಡದೆ ಬೊಮ್ಮನಂದದಿ ಪಥತೋರಿ8 ಹಿಂದಣ ಬಲವನ್ನು ಕಾಣೆ ನಾನು ಅಂದು ನುಡಿದದ್ದು ಮಾಣೆ ಅನು ಬಂಧಗಳಿಗೆ ಕಾಮಧೇನೆ ಸತ್ಯ ಪತಿ ನೀನೆ -ಆಹಾ ನಂದನ ಮನೋಹಂಸಾ 9 ಸಂದಣೆ ತೊಲಗದೆಂಬಿಯಾ ಆಹಾ ಬಂದರೆ ಬರಲಿ ಎಂಬಿಯಾ ಇದೇ ಸಂದಲಿ ಅನುಗಾಲ ನ್ಯಾಯಾ ಅನು ಸಂಧಾನ ನಿನ್ನಲಿ ಪ್ರೀಯಾ -ಆಹಾ ಇಂಧನದೊಳು ವಾಯು ವ್ಯಾಪಿಸಿದದ ರಂದದಿ ಸರ್ವಾಂಗಾ ನಿಂದಿಹ ನಿರ್ದೋಷಾ 10 ಕಂದರ್ಪ ಕೋಟಿ ಲಾವಣ್ಯ ಅರ ವಿಂದ ನಯನ ಗುಣ ಗಣ್ಯ ದೀನ ಮಂದಾರ ಸತತ ತಾರುಣ್ಯ ಸರಿ ಬಂದಂತೆ ಮಾಡೊ ಕಾರುಣ್ಯ -ಆಹಾ ವಂದೆದೈವವು ನಾನೆಂದ ಮುರಾರಿಯ ಕೊಂದು ಬಿಸುಟಾಧೀರ ನಂದಕುಮಾರಕ11 ಇಂದ್ರಿಯಂಗಳ ಗಾತ್ರಾ ಪ್ರಾಣಾ ಸರ್ವ ಕುಂದಣ ಪುಟದಂತೆ ವರಣಾ ಕಂಬು ಕಂಧರ ಪೊಳಿಯಲಿ ವಚನಾ -ಆಹಾ ಸಂದರ್ಭವಾಗಿ ಏನೆಂದದೆ ಸಚ್ಛಾಸ್ತ್ರ ವೊಂದಿಬರಲಿ ಮುಕುಂದಾ ಮುದ್ದುರಂಗಾ12 ಅಂದಿಗೆ ಪೊಂಗೆಜ್ಜೆ ಮೆರೆಯೆ ತಂದೆ ಯೆಂದು ಕುಣಿಯೊ ಎನ್ನ ಧೊರಿಯೆ ವಾದ್ಯಾ ಧಿಂ ಧಿಂ ಧಿಮಿಕೆಂದು ಮೊರೆಯೆ ಮೇಲೆ ವೃಂದಾರಕ ಪುಷ್ಪಗರಿಯೆ -ಆಹಾ ಇಂದಿನ ಉತ್ಸಾಹ ಇಂದ್ರಾದ್ಯರು ಪೂತು ರೆಂದು ಪೊಗಳೆ ನಗೆಯಿಂದ ನೋಡುವದೆ 13 ಮಧ್ವರಮಣ ಪಾಪಿ ಭಕ್ತಿ ಜ್ಞಾನ ಸದ್ಧರ್ಮ ವೈರಾಗ್ಯಯುಕ್ತಿ ಕೊಡು ಭುಕ್ತಿ ಇತ್ತು ಮುದ್ರಧಾರನಾ ಮಾಡಿ ಮುಕ್ತಿ -ಆಹಾ ನಿರ್ಧಾರಮಾರ್ಗವ ಬದ್ಧದಿ ತೋರಯ್ಯಾ ಪತಿ 14 ಬಂಧೂರ ಕೀರ್ತಿ ಸಂಪನ್ನಾ ಕರಿ ಬಂಧ ವಿಮೋಚನ್ನ ನಾ ರಂದ ವರದ ಸುಪ್ರಸನ್ನಾ ಶತಾ ನಂದ ಕಾನನವಾಸಾ ಘನ್ನಾ -ಆಹಾ ಸಿಂಧುಜನಕನೆ ಪರಂಧಾಮತ್ರಯ ಸತ್ಯ ಸಂಧ ವಿಜಯವಿಠ್ಠಲೆಂದು ವದನ ಎನ್ನಾ15
--------------
ವಿಜಯದಾಸ
ಬಿಡು ಬಿಡು ಇನ್ನು ಸೋಗಾಚಾರ | ಒಡಿಯ ಬಲ್ಲನು ನಾನು ನಿನ್ನ ವಿಚಾರ ಪ ತುಡಗತನ ಕಲಿತು ನೆರೆಹೊರೆಯವರ ಮನೆಯಲ್ಲಿ | ಗಡಿಗೆ ತುಪ್ಪಾ ಬೆಣ್ಣೆ ಮೊಸರು | ಹಾಲು | ಕುಡಿದು ಛೀ ಹಳಿ ಕದ್ದ ಕಳ್ಳನೆನೆಸಿಕೊಂಡ | ಪಡಚುತನವಲ್ಲದೆ ಭಾರಕನು ನೀನಲ್ಲ 1 ಸೀರಯನು ಕದ್ದಂದು ಕಡವಿನ ಮರವನೇರಿ | ಊರ ನಾರಿಯರ ಮಾನಕ್ಕೆ ಸೋತು || ಜಾರತನದವನಾಗಿ ತಿರಗಿ ಜಗದಾ ಭಂಡ | ಪೋರರಿಗೆ ಪೋರನಲ್ಲದೆ ಹಿರಿಯನಲ್ಲ2 ಮುನಿಗಳೆಜ್ಞದಲ್ಲಿ ತಿರಿತಂದು ಗೊಲ್ಲತೆರ | ತನುಜರ ಸಂಗಡಲಿದ್ದು ಎಂಜಲುಂಡು | ಮನುಜದೇಹವ ತೆತ್ತು ಬಿನಗು ಲೀಲಾಕೃತಿ | ದನಗಾವಿ ಎಲ್ಲದೆ ದೊರೆ ಮಗನು ನೀನಲ್ಲ 3 ಯಾತಕ್ಕೆ ಬಾರದ ಕುನಪೆಣ್ಣಿಗೆ ಮೆಚ್ಚಿ | ಮಾತುಳನ ಕೊಂದು ಮುತ್ತೈಯಗೊಲಿದು | ಭೀತಿಯಲಿ ಪರರಾಯನ ಮಗಳ ಕೊಂಡು ಬಂದ | ಯಾತರ ಪೌರುಷದವನು ಲೋಕದೊಳಗೆಲ್ಲ 4 ತೊತ್ತಿನ ಮಗನಲ್ಲಿ ವುಂಡು ಬಿಗಿಸಿಕೊಂಡು | ಮಿತ್ರಭೇದವನಿಕ್ಕಿ ಬಂಧುಗಳಿಗೆ | ತೆತ್ತಿಗನು ನೀನಾಗಿ ವಾಜಿಗಳ ಪಿಡಿದು | ಹತ್ಯವ ಮಾಡಿಸಿದೆ ಉತ್ತಮನು ನೀನಲ್ಲ 5 ಅಣ್ಣ ತಮ್ಮಂದಿರನು ಅಗಲಿಸಿ ವೈರದಲಿ | ನುಣ್ಣಗೆ ಒಬ್ಬರೊಬ್ಬರ ಕೊಲ್ಲಿಸಿ | ಇನ್ನೇನು ಉಸರುವೆನು ಕಟ್ಟಕಡಿಗೆ ಎಲ್ಲ | ನಿನ್ನ ಕುಲವನು ಕೊಂದೆ ಇದು ಪುಶಿಯಲ್ಲ 6 ತಿಳಿಯಲಾರರು ನಿನ್ನ ಠಕ್ಕು ಠವಳಿಯ ಮಾಯ | ಜಲಜ ಸಂಭವ ಶಿವ ಇಂದ್ರಾದ್ಯರು | ಸುಲಭ ದೇವರದೇವ ವಿಜಯವಿಠ್ಠಲರೇಯ |ವೊಲಿದ ದಾಸರಿಗೆ ಸಂತಾನ ಕುಲದೀಪ7
--------------
ವಿಜಯದಾಸ
ಸತ್ಯವತಿಸೂನು ವೇದವ್ಯಾಸ ಲಕುಮಿಶಾ | ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನ ಬದುಕುವಗೋಸುಗ ಉಪಾಯದಲಿ ನಿಂದರೆ | ವೈರಿ ತಾರಕನ್ನ ಸದೆದು | ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ 1 ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ | ವನ್ನನಾಗುದಕ್ಕೆ ಪ್ರಸನ್ನ ಮೋದದಲಿ | ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ | ವಾಸುದೇವ 2 ಕಲಿಯುಗದೊಳಗೆ ವಿಪ್ರಕುಲದಲಿ ಮಾರುತಿ ಎನಿಸಿ | ಬಲು ಮಾಯಿಗಳ ಮೋಹನ ಶಾಸ್ತ್ರವಳಿದು ಬದರಿಯ | ಬಳಿಗೆ ಬಂದು ಶಿಲಾಪ್ರತಿಮೆಗಳನೆ ಪಡೆದು ತಂದು | ಪೊಳೆವಂದದಲಿ ಇಳೆಯೊಳಗೆನಲು 3 ಅಂದಿನಾರಭ್ಯ ಪಾರ್ವತಿನಂದನ ಕುಕ್ಕೆಪುರದಲ್ಲಿ | ನಿಂದು ಸರ್ವರಿಂದ ಪೂಜೆ ಚಂದದಿ ಕೊಳುತಾ | ಮಂದ ಕುಷ್ಟರೋಗಗಳ ಹಿಂದುಮಾಡಿ ಓಡಿಸಿ | ಗೋ ಪಾದ ಧ್ಯಾನದಿಂದ ಲೋಲಾಡುತಲಿರೆ 4 ಮರುತದೇವ ಸಂಪುಟಾಕಾರವಾದ ನೀನದರೊಳು | ಚಾರು ಸಿಲೆ ರೂಪವಾದ ಪಾರಾಶರ ಋಷಿ | ಧಾರುಣಿಗೆ ರಹಸ್ಯವ ತೋರಿಕೊಳುತಲಿ | ಮಾರ ಗೊಲಿದ ವಿಜಯವಿಠ್ಠಲಾ 5
--------------
ವಿಜಯದಾಸ
ಇಂಥಾತನು ಗುರುವಾದದ್ದು ನಮಗೆ ಇ-ನ್ನೆಂಥಾ ಪುಣ್ಯದ ಫಲವೊ. ಪಚಿಂತೆಯಿಲ್ಲದೆ ಅತಿ ಸುಲಭದಿಂದಲಿ ಶ್ರೀಕಾಂತನ ಕಾಣಲಿಕ್ಕಾಯಿತುಪಾಯ ಅ.ಪತಾನು ಇಲ್ಲದೆ ಈ ಜಗದೊಳು ಹರಿಯಿಪ್ಪಸ್ಥಾನವಿಲ್ಲವೆಂದು ಸಾರಿದಹೀನ ದೈವಗಳ ನಂಬಿದ ಜನರಿಗೆ ತನ್ನಙ್ಞÕನದಿಂದಲಿ ಹರಿಯ ತೋರಿದ ||ನಾನಾ ಜೀವಿಗಳ ಒಳಗೆ ಹೊರಗೆ ಇದ್ದುತಾನೇ ಮುಖ್ಯನಾಗಿ ಮೀರಿದ |ಶ್ರೀನಾರಾಯಣನೆಂದು ಪೇಳುವರಿಗೆ ತನ್ನಧ್ಯಾನದಿಂದಲಿ ಮುಕ್ತಿಮಾರ್ಗವ ತೋರಿದ 1ಪನ್ನಗಪತಿ-ಗರುಡ-ರುದ್ರ-ಇಂದ್ರಾದ್ಯರಿಗೆಉನ್ನತ ಗುರುವಾಗಿ ಮೀರಿದ |ಘನ್ನವಾದ ಶ್ರುತಿತತಿಗಳಿಂದಲಿ ಜೀವಭಿನ್ನನು ಎಂತೆಂದು ತೋರಿದ ||ಹೊನ್ನು ಹೆಣ್ಣು ಮಣ್ಣಿನಾಶೆಯಿಲ್ಲದೆ ಅವಿ-ಚ್ಛಿನ್ನ ಭಕುತಿಯಿಂದ ಮೆರೆದ |ಚೆನ್ನಾಗಿ ಭಕುತಿ ವೈರಾಗ್ಯಗಳಿಂದಲಿ |ತನ್ನ ನಂಬಿದ ಭಕುತರ ಪೊರೆದ 2ಈರೇಳು ಲೋಕಂಗಳಿಗೆ ತಾನೇ ಮುಖ್ಯ ಆ-ಧಾರವೆಂಬುದ ಕಲಿಸಿದ |ಭಾರಣೆಯಿಂದಲೊಪ್ಪುತ ಬಲು ಹರುಷದಿಭಾರತಿಯನು ಒಲಿಸಿದಮೂರೇಳು ದುರ್ಭಾಷ್ಯಗಳ ಕಾನನವ ಕು-ಕಾರದಂತೆ ಕಡಿದಿಳಿಸಿದಸೇರಿ ಶ್ರೀಪುರಂದರ ವಿಠಲನಂಘ್ರಿಗಳಧೀರ ಪೂರ್ಣಪ್ರಙ್ಞÕಚಾರ್ಯರೆಂದೆನಿಸಿದ 3
--------------
ಪುರಂದರದಾಸರು
ಇಂದಿರೇಶ ನಿನ್ನದೊಂದೆ ಕ್ರಿಯಾ ದ್ವಂದ್ವವಾಯಿತೋಜನನ ಕ್ರಿಯವೆ ದೇವಕಿ ಮನೋಜಯವಾಯಿತೊಬಾಲಕ್ರೀಡೆ ಯಮಳಾರ್ಜುನರ ಪಾಲಿಸಿತೊ ಕರುಣದಿಒಂದೆ ವಚನವೆ ಇಂದ್ರಾದ್ಯರಿಗಾನಂದಕರವಾಯಿತೊನರವಿಶ್ವರೂಪ ನೋಡೆ ಹರುಷೋದ್ರೇಕವಾಯಿತೊನಿನ್ನ ಗುಣರೂಪಕ್ರಿಯಾ ಬಲದ ಕೊನೆಯಾವನು ಬಲ್ಲನೊ
--------------
ಗೋಪಾಲದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು