ವೇಂಕಟೇಶನೆ ಎನ್ನಾ ಪಾಲಿಪುದೊ
ಹರಣ ಪ
ಪಂಕಜೋದ್ಭವ ಹರ ವಂದ್ಯ ಪರಾತ್ಪರ
ನಿಖಿಲಾಗಮೈಕವಿಜ್ಞೇಯ ಲೋಕೋದ್ಧಾರ ಅ.ಪ
ವತ್ಸರ ಬ-
ಹುಧಾನ್ಯ ಸಂದ ಶುಕ್ಲ ದ್ವಿತೀಯ
ಸಂಧ್ಯಾಸವನ ಬಂದು ಕೀರ್ತನ ಸೇವಾ-
ನಂತರದಿ ಎನ್ನಾ ಮಂದಿರದೊಳು ಸುಪ್ತಾವಸ್ಥೆ
ಯಿಂದಿರಲಾಗ ಅಂದು ಕಡೆಯ ಯಾ-
ಮದಿ ತೈಜಸನೆ ನೀ ಹಂಸರಿಂದೆನ್ನ ಮನಸಂಶಯ ಹರಿಸಿದೆ1
ಅರುಣೋದಯಲೆದ್ದು ಮುದದಿ
ಕರಣಶುಧ್ದನಾಗಿ ತ್ವರಿತದಿ ಸ್ವಪನದ ವಿ-
ವರಕಾಗಿ ಹರುಷದಿ ಹರಿಪೂಜಾಕಾಲದಿ
ಅರುಹಿದ ಮರುತ ಮೂರುತಿಯಾ
ಉರುತರ ಚರಿತೆಯ ನಿರುತಪೊಗಳಲಾಯತವಿತ್ತ
ತಿರುಪತಿಶೈಲಾಧಿಪ ಮಮಕುಲಸ್ವಾಮಿ2
ಹರಿಗುರುಸೇವೆಯನು ಸರ್ವಸದ್ಯೋಗ್ಯಸಾಧನವನ್ನು
ಪರಮಹಂಸರು ಇತ್ತವೇಂಕಟೇಶಾಂಕಿತ
ಮೂರುತಿಯ ನುತಿಪಾ ನಿಜ ಹರಿಭಕುತರ
ಚರಣಕಮಲಬಂಡುಣಿಯೆನಿಸಿ ಇವನನಿರುತ ರಕ್ಷಿಸೋ ಉರಗಾದ್ರಿವಾಸವಿಠಲಾ 3