ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಜೋರೆ ಹೀಂಗೆ ಅಂಜೋರೆನಮ್ಮ ಕಂಜನಾಭನ ಮುಂದೆ ಕಾದುವ ಭ್ರಮತೆಯರು ಪ. ಅಷ್ಟೂರೊಳಗೆ ಅತಿ ಶ್ರೇಷ್ಠಳೆ ಭಾವೆ ಅಷ್ಟೂರಿಗೆ ಅಭಯ ಕೊಡದಲೆಅಷ್ಟೂರಿಗೆ ಅಭಯ ಕೊಡದಲೆ ಒಳಗೋಗಿಕೃಷ್ಣನ ಮುಸುಕಲಿ ಅಡಗೋರೆ ಜಾಣಿ1 ಚಲುವರೊಳಗೆ ಅತಿ ಚಲುವಳು ಭಾವೆ ಎಲ್ಲರಿಗೆ ಅಭಯವ ಕೊಡದಲೆ ಎಲ್ಲರಿಗೆ ಅಭಯವ ಕೊಡದಲೆ ರಂಗನವಲ್ಲಿ ಮುಸುಕಲಿ ಅಡಗೋರೆ ಜಾಣೆ2 ಕೃಷ್ಣರಾಯನ ಮತ್ತಷ್ಟು ಮಡದಿಯರುಎಷ್ಟು ಅಂಜುತಲೆ ನಮಗಿನ್ನುಎಷ್ಟು ಅಂಜುತಲೆ ನಮಗಿನ್ನು ಕೈಕಾಲುಮುಟಿಗ್ಯಾಗಿ ಕುಳಿತಾರೆ ಜಾಣಿ 3 ಬಲರಾಮನ ಮಡದಿಯ ಛಲವನೆ ನೋಡಿರೆಲಲನೆಯರು ಕರೆಯೆ ಬರಲಿಲ್ಲಲಲನೆಯರು ಕರೆಯೆ ಬರಲಿಲ್ಲ ನಮಗಂಜಿನೆಲವ ಗೀಚುತಲೆ ಕುಳಿತಾರೆ ಜಾಣಿ 4 ಕಂಜಾಕ್ಷಿ ರುಕ್ಮಿಣಿ ಕರೆಯ ಬರಲಿಲ್ಲ ಸಂಜೀಲೆ ನಾವು ಬಂದೇವಸಂಜೀಲೆ ನಾವು ಬಂದೇವ ರಾಮೇಶನ ಅಂಜಿಕೆ ಇಲ್ಲೇನ ಮಡದಿಯರ ಜಾಣಿ 5
--------------
ಗಲಗಲಿಅವ್ವನವರು
ಎಲ್ಯಾದರು ಮಾಡಬೇಕು ಕೆಲಸ ಪ ಅಲ್ಲೇನು ಇಲ್ಲೇನು ಬಲ್ಲಂಥಾವನಾದರೆ ತಾನು ಅ.ಪ ಶರೀರ ಸಂಬಂಧಿಗಳಿಗಾಗಿ | ಮೂರು ಕರಣದಿಂದಲಿ ಅನುವಾಗಿ ಕರೆಕರೆಪಡುತಲಿ ಅರೆನಿಮಿಷವಾದರೆ ಬಿಡದೆ 1 ತ್ತರವಾದ ಕಟ್ಟಾಜ್ಞೆ ಅಲ್ಲಿ ನ- ರರ ಕಾಟವು ಇಲ್ಲಿ ಸುರರ ನಿಬಂಧನೆಯಲ್ಲಿ 2 ಬಾಲ್ಯ ಯೌವನ ಕೌಮಾರ | ಮುಪ್ಪು ಲೀಲೆಯಿಂದಲಿ ಕೆಲವರು ಗೋಳಾಡುತಲಿ ಕೆಲವರು3 ಸ್ವಲ್ಪಾದರು ಸತ್ಕರ್ಮ ಮಾಡೆ | ಫಣಿ- ಅಲ್ಪರಿವುದು ಯಾಕೆ 4 ಇಪ್ಪತ್ತು ನಾಲ್ಕು ತತ್ವಗಳಿಂದ | ನ- ಕ್ಲುಪ್ತಗೈದಿರುವನು ಆಪ್ತ ಎಂದಿಗೂ ನಮಗವನು 5
--------------
ಗುರುರಾಮವಿಠಲ
ನಿನ್ನ ದರುಶನಕೆ ಬಂದವನಲ್ಲವೊ ಪುಣ್ಯವಂತರ ದಿವ್ಯ ಚರಣ ನೋಡಲಿ ಬಂದೆ ಪ ಎಲ್ಲೆಲ್ಲಿ ನಿನ್ನ ವ್ಯಾಪ್ತತನವಿರಲಿಕ್ಕೆ ಇಲ್ಲಿಗೆ ಬರುವ ಕಾರಣವಾವುದೊ ಸೊಲ್ಲಿಗೆ ಕಂಭದಲಿ ತೋರಿದ ಮಹಾಮಹಿಮ ಅಲ್ಲಿ ಇಲ್ಲೇನಯ್ಯ ಬಲ್ಲ ಭಜಕರಿಗೆ1 ಕರೆದಾಗಲೆ ಓಡಿ ಬಂದೊದಗುವ ಸ್ವಾಮಿ ಮರಳಿ ಗಾವುದ ಎಣಿಸಿ ಬರಲ್ಯಾತಕೊ ನೆರೆ ನಂಬಿದವರಿಗೆ ಆವಲ್ಲಾದರೇನು ಅರಿದವರ ಮನದೊಳಗೆ ನಿಂದಾಡುವ ಚಂದವಾ 2 ಕಠಿನವೊ ನಿನ್ನ ಭಕುತರನ ನೋಡುವ ಲಾಭ ಸಟೆಯಲ್ಲಾ ವೇದಗಳು ಸಾರುತಿವಕೊ ವಟು ಮೊದಲಾದ ವೈಷ್ಣವಾಗ್ರೇಸರಂಘ್ರಿ ತ್ರಿಟಿಯಾದರೂ ಎನಗೆ ಸೋಕಲು ಗತಿಗೆ ದಾರಿ3 ಧ್ಯಾನಕ್ಕೆ ಸಿಲುಕುವನೆ ನಿನ್ನ ಕಾಣಲಿಬಹುದು ಜ್ಞಾನಿಗಳು ಎಂತು ಬರುವರೊ ಅಲ್ಲಿಗೆ ಅನಂತ ಜನುಮದಲ್ಲಿ ಜಪ ತಪ ಹೋಮ ವ್ರತ ಏನೇನು ಮಾಡಿದರು ಇಷ್ಟು ಜನ ಕೂಡುವದೇ4 ನೀನಿದ್ದ ಸ್ಥಾನದಲಿ ಸಕಲ ಪುಣ್ಯಕ್ಷೇತ್ರ ನೀನಿದ್ದ ಸ್ಥಾನದಲಿ ಸರ್ವತೀರ್ಥ ನೀನಿದ್ದ ಸ್ಥಾನದಲಿ ಸಮಸ್ತ ತಾತ್ವಿಕರು ನಾನಿತ್ತ ಬರುವುದು ನಿನಗೆ ತಿಳಿಯದೆ ಸ್ವಾಮಿ5 ಇದನೆ ಲಾಲಿಸು ಜೀಯಾ ನಿನ್ನದೊಂದೇ ಮೂರ್ತಿ ನಿದರುಶನವಲ್ಲದೆ ಮಿಗಿಲಾವುದೊ ಪದೋಪದಿಗೆ ಮಧ್ವಮತ ಹೊಂದಿದ ಸುಜನರ ಹೃದಯದೊಳಗಾನಂತಪರಿ ನಿನ್ನ ರೂಪಗಳು 6 ಭಳಿರೆ ತಿರುಮಲರಾಯ ನಿನ್ನ ಕರುಣಾ ರಸಕೆ ವೊಲಿದು ಭಕುತರಿಗಾಗಿ ಮದುವೆ ಹಮ್ಮಿಕೊಂಡೆ ಸುಲಭ ದೇವರದೇವ ವಿಜಯವಿಠ್ಠಲ ವೆಂಕಟಾ7
--------------
ವಿಜಯದಾಸ
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನೆನೆಯುತ್ತ ತಿರಗುವೆನಯ್ಯ ಜೀಯ ನಿನಗ್ಯಾಕೆ ದಯಬಾರದಯ್ಯ ಪ ಮನುಮುನಿನುತ ನಿಮ್ಮ ವನÀರುಹಂಘ್ರಿಯಧ್ಯಾನ ಅನುದಿನ ಬಿಡದೆ ಅ.ಪ ಪೋಷಿಸಲೊಲ್ಲ್ಯಾಕೋ ನೀನು ನಿಮ್ಮಯ ದಾಸನು ನಾನಲ್ಲವೇನು ದೇಶದೇಶಂಗಳನ್ನು ನಾನು ಬಿಡದೆ ಘಾಸ್ಯಾದೆ ತಿರುತಿರುಗಿನ್ನು ಈಸು ದಿವಸ ವ್ಯರ್ಥ ಮೋಸವಾದೆನು ನಿಮ್ಮ ಧ್ಯಾಸ ಮರೆದು ಭವಪಾಶವಿದೂರನೆ 1 ಪರುಷವ ಶಿರದೊಳು ಪೊತ್ತು ಎ ನ್ನಿರವ್ಹಸಿದು ಬಳಲುವಂತಿತ್ತು ಕರದಲ್ಲೆ ಮುಕುರುವಿತ್ತು ಅರಿಯದೆ ಹಂಚಿನೋಳ್ಹಲ್ಕಿಸಿದಂತಿತ್ತು ಪರಮಪುರುಷ ನಿಮ್ಮ ನೆರೆನಂಬಿ ಬದುಕದೆ ದುರಿತದಿಂ ಬಳಲಿದೆ ಪರಿಪರಿ ಹರಿಹರಿ2 ವರಭಕ್ತರಭಿಮಾನ ನಿನಗೆ ಇಲ್ಲೇನು ಸ್ಥಿರ ಮುಕ್ತಿ ಪದದಾಯಕನೆ ಸ್ಥಿರವಾಗಿ ಅರಿದು ನಾ ನಿಮಗೆ ಮರೆಹೋದೆ ಕರುಣದಿ ಕೊಡು ವರಸುತಗೆ ಅರಘಳಿಗ್ಯಗಲದೆ ಸ್ಮರಿಪೆ ನಿಮ್ಮಯ ಪಾದ ಶರಣಾಗತರ ಪಾಲ ಸಿರಿವಂತ ಶ್ರೀರಾಮ 3
--------------
ರಾಮದಾಸರು