ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹ್ಯಾಗೆ ಸದ್ಗತಿ ಆಗುವುದೆನಗೆ ಯೋಗಿಗಳ ಒಡೆಯ ಹರಿಯೆ ಈಗಾಗಲೆ ತಿಳಿಸಿ ಸಾಗುವಂತೆ ಸಾಧನ ಬ್ಯಾಗ ಮಾಡಿಕೊ ನಾಗತಲ್ಪನೆ ಪ ಮೇಲಧಿಕಾರಿಯು ಕೊಂಡಾಡಲು ಕುಲ ಉದ್ಧಾರವೆಂದು ಹಿಗ್ಗುವೆ ಕಲುಷ ಕಂಡಾಗÀಲು ಅಳುತ ಧರೆಗೆ ಇಳಿವೆನೊ ನಾನು 1 ಶಿಕ್ಷ ರಕ್ಷ ಸಧ್ಯಕ್ಷ ಲಕ್ಷ್ಮೀಪತಿಯೆಂದರಿಯದೆ ಕುಕ್ಷಿ ಭರಣಕೆ ಯೋಚಿಸುವೆ ಪಕ್ಷಿವಾಹನನಲ್ಲಿ ಲಕ್ಷ್ಯವಿಲ್ಲದೆ ಬಕ ಪಕ್ಷಿಯಂತೆ ಧೇನಿಸುವೆ ನಾ 2 ನಷ್ಟ ದೇಹ ಪುಷ್ಟಿಗಾಗಿ ದುಷ್ಟರಿಗೆ ಎನ್ನ ಕಷ್ಟ ಪೇಳಲು ದೃಷ್ಟಿಸಿ ನೋಡಿದರೆ ಬೆಟ್ಟ ಮೇಲಿದ್ದಂತೆ ಕಂ ಗೆಟ್ಟು ಮೊರೆಯಿಸುವೆ 3 ಒಂದು ಲಾಭವಿಲ್ಲದೆ ಮಂದಿ ನೆರಹಿ ಸಂದಿಗೊಂದ್ಹರಿದ್ಯಾಡಿ ಸಂದು ಹೋಯಿತÀು ಹೊತ್ತಯೆಂದು ಆಸ್ಥಾನಕೆ ಮಿಂದು ಬ್ಯಾಗನ್ನ ತಿಂದೋಡುವೆನೊ 4 ಮಾನನೀರ ಚೆಲ್ವಿಕೆಗೆ ಮನಸೋತು ನೆನೆನೆನೆದು ಬೆಂಡಾಗುವೆ ಹೀನರಾ ಕೂಡಿಕೊಂಡು ದೀನರಾ ಬಾಯಿಬಡಿದು ಧನ ಸಾಧಿಸಿದ್ದು ಕೊನೆಗೆ ಸಾಯುವ ನರಗೆ 5 ಉದಯದಲೆದ್ದು ನದಿಗೆ ಪೋಗಿ ನಾ ಮುದದಿಂದ ಮಿಂದು ಉದಯಾರ್ಕಗಘ್ಯ ಒದಗೀಸಿ ಕೊಡದ ಮದಡನಾಗಿದ್ದವಗೆ 6 ವರ ಸುದರ್ಶನ ಗ್ರಂಥಗಳ ಗುರುಗಳಲ್ಲಿ ನಿರುತ ಪಠಿಸಲಿಲ್ಲ ಭಾಗವತ ಪುರಾಣಗಳು ಪರಮ ಭಕ್ತೀಲಿ ಕೇಳಲಿಲ್ಲ 7 ಭಾವ ಶುದ್ಧಿಯಿಂದ ದೇವತಾರ್ಚನೆ ಆವ ಕಾಲಕು ಮಾಡಲಿಲ್ಲ ಪವನಸಖ ಮಖದೊಳಾಹುತಿನಿತ್ತು ಕವಿಗಳಿಗನ್ನ ಕೊಟ್ಟವನಲ್ಲ 8 ಧ್ಯಾನ ಮಾಡುವುದನ್ನು ಮೌನಿಗಳ ಕೇಳಿ ಮನನ ಮಾಡಲಿಲ್ಲ ಪಾದ ಕನಸಿನಲಾದರೂ ಒಮ್ಮೆ ನೋಡಲಿಲ್ಲ 9
--------------
ವಿಜಯ ರಾಮಚಂದ್ರವಿಠಲ
ಎಂದೆಂದಿಗೂ ಎರಡು ಒಂದಾಗವು | ಒಂದೆ ಕುಲದಲಿ ಜನಿಸಿದ ಪಕ್ಷಿಗಳು ಪ ಒಂದೇ ರೂಪಪಕ್ಷಿ ಒಂದರಲಿ ತಿರಗೋವು | ಒಂದೀಗ ಪಂಚವರ್ಣದ ಕೋವಿದಾ || ಒಂದೆಲ್ಲ ಸಮನೆಂದು ಪೇಳುತ ಬದುಕುವುದು | ಒಂದಕ್ಕೆ ಗುರುತು ಮತ್ತೊಂದಕ್ಕೆ ಯಿಲ್ಲ 1 ಒಂದೇ ಕೊಂಬಿನಲಿ ಎರಡು ಸೇರಿಕೊಂಡು | ಒಂದು ಸಾರವನುಂಬದೊಂದರಿಯದು || ಒಂದು ಬುದ್ಧಿಯಲ್ಲಿಪ್ಪದೊಂದು ಇರಲೊಲ್ಲದು | ಒಂದು ನಾನೆಂಬೋದು ಮತ್ತೊಂದು ಪೇಳದು 2 ಒಂದೀಗ ತನ್ನ ಫಲ ಪರರಿಗೆ ಕೊಡುವದು | ಒಂದು ತನ್ನ ಫಲ ತಾ ತಿಂಬೋದು || ಒಂದು ಏರು ಇಳಿವ ಮೆಟ್ಟಗಳು ಬಲ್ಲದು | ಒಂದೀಗ ಕಾಣದೆ ಕಮರಿ ಬೀಳುವದು 3 ಒಂದು ಸುಡಗಾಡು ಸಿದ್ಧ ಎಂದು ಕೂಗುವದು | ಒಂದು ಕೂಗುವದು ಪ್ರಸಿದ್ಧನೆಂದು || ಒಂದು ಬೆಳೆದಿಂಗಳೊಳು ಹರುಷದಲಿ ಆಡುವದು | ಒಂದು ಕತ್ತಲೆಯೊಳು ಆಡುವುದು ನಿತ್ಯಾ 4 ಒಂದಕೆ ಒಂದು ಸಂವಾದವನು ಮಾಡುವವು | ಹಾರುವುದು | ಪುರಂದರ ವಿಜಯವಿಠ್ಠಲನ್ನ | ಒಂದು ಪೊಂದಿತು | ಒಂದು ಪೊಂದದಲೆ ಹೋಯಿತು 5
--------------
ವಿಜಯದಾಸ
ತಲ್ಲಣಗೊಳ್ಳಬೇಡಾ ಶ್ರೀಹರಿ ಎಲ್ಲಿಹನೆನಬೇಡಾ ಪಕಲ್ಲ ಕಂಬದಿ ಮೈದೋರಲು ನರಹರಿಪ್ರಹ್ಲಾದನು ತಾಪತ್ರಯ ಬರೆದನೇ ಅ.ಪತರಳಧ್ರುವನು ವನದೀ ಸ್ವಾಮಿಗೆಚರರನು ಕಳುಹಿದನೇಕರಿರಾಜನು ತಾನ್ ಕರೆಯಲು ಪೋದನೆಹರಿಗೆ ರುಕ್ಮಾಂಗದ ವೀಳ್ಯವಿತ್ತಿಹನೇ 1ಅಂಬರೀಷನು ಹರಿಗೆ ದ್ರವ್ಯವತುಂಬಿಕಳುಹಿಸಿದನೇಅಂಬುಜನಾಭನು ಅಹಲ್ಯೆಗೆ ತಾತನೆಅಂಬರದಿಂ ಶೀರೆ ಇಳಿವುದೇ ದ್ರುಪದೆಗೆ 2ಅಣು ಮಹತ್ತೆನಿಸಿರುವಾ ಶ್ರೀಹರಿಬಣಗುಜನರ ಮುರಿವಾಗಣನೆಯಿಲ್ಲದೆ ಪ್ರಾಣಿಗಳನು ಸಲಹುವತ್ರಿನಯನ ಸಖನುತಾ ಮಣಿವರ ಮರೆವನೆ 3ಅನ್ಯ ಚಿಂತೆಗಳನ್ನು ಬಿಟ್ಟುಪನ್ನಗಶಯನನೂಘನ್ನ ಭಕ್ತಿಯೊಳುರೆ ಇನ್ನಾದರೂ ನೆನೆಮನ್ನಿಸದಿರೆ ಗೋವಿಂದನು ದಾಸರ 4
--------------
ಗೋವಿಂದದಾಸ
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು