ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ
ಸಾಕಲಾರದೆ ಪೋದೆಯಾ ಎನ್ನನು ಪ.
ಏಕಚಿತ್ತದಿ ನಿನ್ನ ಚರಣ ನಂಬಿ ಬರಲು
ಭಾರತೀಶ ಅ.ಪ.
ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ
ನಳಿನಾಕ್ಷನ ದಾಸ ನಿನ್ನ ಕೀರ್ತಿ
ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು
ಬಳಿಗೆ ಬರಲು ಮನಕರಗದೆ ತಂದೆ 1
ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ
ಇಂದೆಲ್ಲಿ ಪೋಯಿತೊ ಆ ಕರುಣ
ತಂದೆ ಮುದ್ದುಮೋಹನ ಗುರುಗಳ ವಚನವ
ಇಂದು ಒಲಿದೆನ್ನ ಕಾಯೊ2
ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು
ದೋಷವೆಣಿಸುವರೆ ಎನ್ನಲಿ ನೀ
ಶೇಷಶಯನನೆ ಬಲ್ಲೆನೊ ಇದರ ಮರ್ಮ
ಘಾಸಿಗೊಳಿಸದೆ ನೀ ಅಭಯವನೀಯೊ 3
ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು
ರಾಮನಾಗಮ ಕಂಡು ಎರಗಿ ನಿಂದು
ಪತಿ ಪಾದ ದಾಸ ಸಿದ್ಧಿಯ ಪಡೆದು
ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4
ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ
ಮತ್ತೆ ಮುನಿಯಾಗಿ ಗ್ರಂಥವ ರಚಿಸಿ
ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ
ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5