ಒಟ್ಟು 14 ಕಡೆಗಳಲ್ಲಿ , 10 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಂತಾಮಣಿಗಮಿತ ಚಿಂತಾಮಣಿ ಚಿಂತಲವಾಡಿ ಶ್ರೀ ನೃಸಿಂಹಸ್ವಾಮಿ ಪ ಕಂತುಪಿತ ಕೊಟ್ಟರುವ ಸಾಮಥ್ರ್ಯದಿಂದಲೇ ಐಹಿಕ ವಸ್ತುವೀವುದು ಅನಂತ ಶ್ರೀಪತಿ ಚಿಂತಲವಾಡಿ ಕರುಣಿ ಸ್ವ - ತಂತ್ರನು ಇಹಪರದಿ ಐಶ್ವರ್ಯವ 1 ಕಾಕುಮನ ವಾಕ್ಕಾಯ ಶುದ್ಧ ಮಾಡುವ ದೇವಿ ಶ್ರೀ ಕಾವೇರಿ ತೀರದಲಿ ಕುಳಿತು ಸರ್ವ ಭಕುತರಿಗೆ ವರವೀವ ಶ್ರೀಕಾಂತ ನರಸಿಂಹ ಸುಖಜ್ಞಾನಮಯ ದೋಷದೂರ ಗುಣನಿಧಿಯು 2 ಮಮಕಾರ ಅಹಂಕಾರ ಡಂಭತನವನು ಬಿಟ್ಟು ಮಮಸ್ವಾಮಿ ಸರ್ವರಿಗೂ ಪರಮೈಕಸ್ವಾಮಿಯು ಸುಮನಸಾರ್ಚಿತ ಕುಸುಮಸಂಭವನ ತಾತನು ರಮಾಪತಿ ಪ್ರಸನ್ನ ಶ್ರೀನಿವಾಸ ನಮೋ ಎನ್ನಿ 3
--------------
ಪ್ರಸನ್ನ ಶ್ರೀನಿವಾಸದಾಸರು
ತಂದೆ ಪ್ರಾಣೇಶವಿಠ್ಠಲರಾಯ ಒಲಿದು ಆ |ನಂದ ಕೊಡು ಈ ಭಕ್ತಗೆ ||ಪೊಂದಿಕೊಂಡಿಹ ನಿನ್ನನೆಂದು ನಾ ಪ್ರಾರ್ಥಿಸುವೆ ಮಂದರೋದ್ಧರ ಮುಕುಂದಾ | ನಂದಾ ಪ ವೈರಿ ನಿನ್ನವರಡಿಗೆ ನಡಿಯೆ ಪದವನುಕೂಲವಾಗಿರಲೀ ಬರಲಿ1 ಇವನ ಕವನಾ ಕೇಳಿ ಹರುಷಯುತರಾಗಿ ಸತ್ಕವಿಗಳೂ ತಲಿದೂಗಲಿ |ಪವನ ಮತದಲಿ ಪೇಳಿದಂತೆ ಅದನನುಸರಿಸಿ ಕವಿತೆಯು ಬಂದೊದಗಲಿ ||ನವರಾಗಗಳಿಂದೊಪ್ಪಿ ಲಘು ದೀರ್ಘ ಮೊದಲು ಮರ್ಮವ ತಿಳಿದು ಪೇಳುತಿರಲಿ |ಭುವನದೊಳಗುಳ್ಳ ಸುಜ್ಜನರು ಶೋಧಿಸಿ ಆಶುಕವಿಯೆಂದು ಕರೆಯುತಿರಲಿ | ಮೆರೆಯಲಿ || ಚಿರಕಾಲ ಬಾಳಿ ಬಹು ಕೀರ್ತಿಯುತನಾಗಿ ಈ ಧರಿಯೊಳಗೆ ಸುಖಿಸುತಿರಲಿಪರಮ ಭಕುತಿಯು ಪೆಚ್ಚಿ ಸೋತ್ತುಮರ ಪದಗಳಿಗೆ ಎರಗಿ ಕರುಣವ ಪಡೆಯಲಿ ||ಮರೆಯದಲೆ ಇಹಪರದಿ ಸುಖಗಳನು ಕೊಟ್ಟು ಶ್ರೀ ಹರಿಯೆ ಪೊರೆಯಂದಾಡಲಿ |ಮರುತಾಂತರ್ಯಾಮಿ ಗುರು ಪ್ರಾಣೇಶ ವಿಠಲನೆ ಶರಣ ಜನ ಕಾಮಧೇನೂ ನೀನು 3
--------------
ಗುರುಪ್ರಾಣೇಶವಿಠಲರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನೀನು ಸರ್ವಜ್ಞನಾಗಿರಲು ನಿನ್ನಲಿ ಜನರು ಜಾಣತನ ತೋರಲಾಗುವುದೆ ಪವಮಾನ ಪ ಪ್ರಾಣಪತೇ ನಿನ್ನೊಲುಮೆ ಪಡೆದು ಸುಜನರು ದಿವ್ಯ ಸ್ಥಾನಗಳ ಪೊಂದಿ ಇಹಪರದಿ ಸುಖಿಸುವರು ಅ.ಪ ಧರ್ಮಯೋನಿಯ ಶಾಸನಗಳ ಸಂರಕ್ಷಣೆಯ ಕರ್ಮ ನಿನಗಲ್ಲದನ್ಯರಿಗೆ ತರವೆ ಕಿಮ್ಮೀರ ಕೀಚಕ ಜರಾಸಂಧ ಮೊದಲಾದ ಧರ್ಮಘಾತಕರ ಸದೆ ಬಡಿದ ಬಲಭೀಮ 1 ಜ್ಯೇóಷ್ಠನೆಂಬುವ ಮಮತೆ ತೊರೆದು ಧೈರ್ಯದಲಿ ಧೃತ ರಾಷ್ಟ್ರನಿಗೆ ಕಿಲುಬು ಕಾಸನು ಕೊಡದೆಲೆ ಭಾಗವತ ಧರ್ಮಗಳ ಹಂಚುವ ಹರಿಗೆ ಪ್ರೇಷ್ಟತಮ ನೀನಲ್ಲದನ್ಯರಾರಿಹರೊ 2 ನಿನ್ನ ಮತವೇ ಸಿರಿಯರಮಣನಿಗೆ ಸಮ್ಮತವು ನಿನ್ನ ದಯವೇ ಸಾಧು ಜನಕೆ ಅಭಯ ನಿನ್ನ ಮಾರ್ಗವ ನಂಬಿ ಧನ್ಯರಾಗುವರಲಿ ಪ್ರ ಸನ್ನನಾಗುವ ಹನುಮ ಭೀಮ ಮಧ್ವೇಶ 3
--------------
ವಿದ್ಯಾಪ್ರಸನ್ನತೀರ್ಥರು
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಮಧ್ವರಾಯರ ಕರುಣೆ ಪಡೆಯಿರೊ ಪ ಸಿದ್ಧವು ಇಹಪರದಿ ಸೌಖ್ಯವು ಅ.ಪ ವೀರ ವೈಷ್ಣವ ಮತ ತೋರಿದವರ ನಂಬಿ ವೀರ ವೈಷ್ಣವರಾಗಿ ಬಾಳಿರೊ 1 ಸತ್ಯ ಧರ್ಮಗಳಿಗೆ ಮೂರ್ತಿಗಳಾದ ಜೀ ವೋತ್ತಮರನು ನಂಬಿ ಬಾಳಿರೊ 2 ಉನ್ನತ ಧ್ಯೇಯವ ಸ್ವರ್ಣದಕ್ಷರದಲ್ಲಿ ಚೆನ್ನಾಗಿ ಬೋಧಿಸಿದ ಪ್ರಸನ್ನ ಶ್ರೀ 3
--------------
ವಿದ್ಯಾಪ್ರಸನ್ನತೀರ್ಥರು
ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಶ್ರೀ ತಾಂದೋಣಿ ವೆಂಕಟರಮಣ ಇಂದು ವೆಂಕಟನ ಕಂಡು ಅನ್ಯರೊಬ್ಬರು ಇವಗೆ ಸರಿಪರರು ಇಲ್ಲ ಪ ಅಮರರಿಗು ಮನುಜರಿಗು ಸರ್ವ ಪ್ರಾಣಿಗಳಿಗು ಸ್ವಾಮಿ ರಕ್ಷಕ ಸರ್ವ ಪ್ರೇರಕನು ದೇವ ಅಮರಾವತಿ ಸರಿತತೀರ ಗಿರಿಯಲಿ ನಿಂತ ಪ್ರೇಮದಿಂದಲಿ ಭಜಿಸೆ ಅಭಯ ವರವೀವ 1 ಎನ್ನ ಕುಲದೇವನು ತಿರುಪತಿ ವೆಂಕಟನು ತಾನೇವೆ ಭಕ್ತರಿಗೆ ಒಲಿಯೆ ಬಂದಿಹನು ಅನಂತ ಗುಣಪರಿಪೂರ್ಣ ತನ್ನ ಸೇವಿಸುವರ ಅನುಗಾಲ ರಕ್ಷಿಸುವ ಅನಿಮಿತ್ತಬಂಧು 2 ಮಧ್ವಮುನಿ ಹೃತ್ಸದನ ದೇವದೇವೋತ್ತಮನು ಮಧ್ವಮುನಿ ಗುರುಸ್ವಾಮಿ ವಿಧಿತಾತ ಶ್ರೀಶ ಶುದ್ಧಕಾರುಣ್ಯನಿಧಿ ಪ್ರಸನ್ನ ಶ್ರೀನಿವಾಸ ಉದ್ಧರಿಪ ಸಂಸ್ಮರಿಸೆ ಇಹಪರದಿ ಎಂದೂ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಹನುಮಂತ ದೇವರು (ದಂಡಕ) ಅಂಜನಿಯ ಉದರದಿಂ ಪುಟ್ಟುತಾರ್ಭಟಿಸುತಲಿ ಕಂಜಮಿತ್ರಂಗೆ ಹಾರ್ದೆ ಧೀರಾ ವಾಯುಕುಮಾರಾ ರಣರಂಗಧೀರಾ ಕದನಕಂಠೀರಾ ದಿನಮಣಿಯ ಪಿಡಿದು ನುಂಗುವೆನೆಂಬೊ ಸಮಯದೋಳ್ ಬರಲು ದೇವತೆ ನಿಕರಗಳೆಲ್ಲಾ ಬೆದರಿಸಿದಿ ಎಲ್ಲಾ ಭಾಪು ಭಲ ಭಲ್ಲ ಭಾರತಿಯ ನಲ್ಲ ಸೂರ್ಯಸುತನಂ ಕಂಡು ಪಂಪಾಸರೋವರದಿ ಭಾಸ್ಕರಾನ್ವಯಗೆರಗಿ- ದೆಂದು ಜಯ ಜಗದ್ಬಂಧು ಕಾರುಣ್ಯಸಿಂಧು ಸೀತಾಪತಿಯ ಕರುಣದಿಂದ ಗಗನಕ್ಕೆ ಖ್ಯಾತಿಯಿಂದಲಿ ಬ್ಯಾಗ ಬೆಳದಿ ವೃಷಿಗಳನಳದಿ ದೈತ್ಯರ ತುಳದಿ ರಾಮಮುದ್ರಿಯ ಕೊಂಡು ಅಜನಸುತ ಸಹಿತಾಗಿ ನೇಮದಿಂ ಶರಧಿಯಂ ನೋಡಿ ದುರಿತಗಳ ದೂಡಿ ಪಾಡಿ ಕೊಂಡಾಡಿ ಕೋಟಿ ಸಿಡಿಲಬ್ಬರಣೆಯಿಂದ ಜಲಧಿಯ ಜಿಗಿದು ದಾಟಿದಿ ಲಂಕಾಪುರ- ವನ್ನು ಪೇಳಲಿನ್ನೇನು ಭುಜಬಲವನ್ನು ತೃಣಬಿಂದು ಋಷಿಯ ಕಾಣುತಲಲ್ಲಿ ಕುಣಿದಾಡಿ ಪರಿಪರಿಯ ಚೇಷ್ಟೆ- ಗಳಿಂದ ಮಾಡಿದೈ ಛಂದ ಅಂಜನೆಯ ಕಂದ ಪುನಹ ಲಂಕೆಗೆ ಹಾರಿ ಲಂಕಿಣಿಯ ಸಂಹರಿಸಿ ಭೂಜಾತೆಯನು ಅರಸು- ತಲ್ಲಿ ಅತಿರೋಷದಲ್ಲಿ ತಿರುತಿರುಗುತಲ್ಲಿ ರಾಮನಾಮಾಮೃತವ ಜಿಹ್ವಾಗ್ರದೋಳ್ ಸುರಿವ ಭೂವಿಜಯ ಚರಣಮಂ ಕಂಡು.... ಮಾಡಿದೈ ಗಂಡು ರಘುವರನ ಮುದ್ರೆಯನಿತ್ತು ನಿಜಮಾತೆಗೆ ಹರುಷಬಡಿಸಿದಿ ಹನೂ- ಮಂತಾ ಗುರುಮುನಿಯ ಶಾಂತಾ ದಿವಸಾಧಿಪತಿಕೋಟಿತೇಜದಿಂ ಮೆರೆವಂಥಾ ಜಯ ಹನುಮ ಭೀಮ ಬಲವಂತಾ ಬಾಲದಿಂ ಬೆಂಕಿಯಂ ಹಚ್ಚಿ ಲಂಕಾಪುರವ ಲೀಲೆಯಿಂದಲಿ ದಹನಮಾಡಿ ಸುತ್ತ ಓಡ್ಯಾಡಿ ದೈತ್ಯರಂ ಕಾಡಿ ಸುರನಿಕರವಂದು ಆಕಾಶಮಾರ್ಗದಿ ಎಲ್ಲ ದೇವದುಂದುಭಿನಾದ ಗೈದು ..................................ಮಹಿಮೆ ಹೌಧೌದು ತ್ರಿಭುವನದೊಳಗಧಿಕನೈ ಕದರುಂಡಲಗಿರಾಯಾ ಅಭಯಮಂ ಕೊಡು ಎನ್ನ ಧೊರೆಯೆ ನಾ ನಿನ್ನ ಮರೆಯೆ ಅಗಡಿಪುರದಲಿ ನಿನ್ನ ಕೃಪೆಯಿಂದ ಪೇಳ್ದೆನೈ ಸೊಗಸಿನಿಂದ ಇಡು ಮಹಾರಾಯ ಅವನಾಯುಗೇಯಾ ಹನುಮಂತರಾಯಾ ಶ್ರೀಹನುಮಂತಗೌಡರ್À ಬಹಾದ್ದೂರರನ್ನು ಸರ್ಪಸುತಪುರದಲ್ಲಿ ಕಾಯ್ವ ಇಷ್ಟಾರ್ಥವೀವ ಭಕುತ ಸಂಜೀವ ಶ್ರೀ ಹನುಮಂತ ದಂಡಕವ ಕೇಳ್ದರ್ಗೆ ಇಹಪರದಿ ಶ್ರೀಹರಿಯೆ ಬಂದು ಅವರಲ್ಲಿ ನಿಂದು ಕಾರುಣ್ಯಸಿಂಧು ಪರಾಕು ಪರಾಕು
--------------
ಕದರುಂಡಲಗಿ ಹನುಮಯ್ಯ
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು
ಸಲ್ಲದು ಸಲ್ಲದು ಜ್ಞಾನ ಬೋಧೆಸುಳ್ಳರಿಗೆ ಮತ್ತು ಶುಂಠರಿಗೆಪಮುಂದೆ ಹೊಗಳಿ ಹಿಂದೆ ನಿಂದಿಸುವರಿಗೆಸಂದೇಹಿಸುತ ಸಜ್ಜನರಿಗೆ ಹಳಿಯುತಮುಂದೆ ಕಾಣದೆ ಮೂರ್ಖತೆಯಲಿ ನುಡಿಯುತಕುಂದುಕೊರತೆಯಹ ಕುಹಕರಿಗೆ1ಬರಡು ಮಾತಿನಲಿಕಾಲಕಳೆಯುತಜರಿದುನುಡಿಯುತಾ ಕೂಡಿ ನಗುವರಿಗೆಇರುಳು ಹಗಲು ಇಹಪರದಿ ಬಿದ್ದಿಹನರರುಗಳಿಗೆ ಮತಿ ನಷ್ಟರಿಗೆ2ಬ್ರಹ್ಮ ನುಡಿಯ ಮೂರು ನುಡಿಯನೆ ಕಲಿತಬ್ರಹ್ಮ ವಿದ್ವಾಂಸರು ವಾದಿಸುವಬ್ರಹ್ಮತಾವಾಗುವ ಪರಿಯೆಂತೋಪರಬ್ರಹ್ಮ ಚಿದಾನಂದನ ಕಾಣದವರಿಗೆ3
--------------
ಚಿದಾನಂದ ಅವಧೂತರು