ಒಟ್ಟು 9 ಕಡೆಗಳಲ್ಲಿ , 8 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
ಈಡಾಡಿದ್ಯಾ ಪಾಪಂಗಳ ಆಹಾ ಪ ಮನಸಿಲಿ ನೋಡಿದ್ಯಾ ಯತಿಗಳನ್ನ ನಾಡಿನೊಳಗೆ ಈಡಿಲ್ಲದಿಹ ಈ ಗುರುಗಳಾ ಅ.ಪ. ಹೊದ್ದ ಕಾವಿಶಾಠಿಯಲ್ಲಿ ಶ್ರೀ ಮುದ್ರೆ ಹಚ್ಚಿದ ದೇಹಕಾಂತಿಯು ಆಹಾ ತಿದ್ದಿದ ಅಂಗಾರದ ನಡುವೆ ಅಕ್ಷತೆಯು ಎದ್ದು ಬರುವಂಥ ಈ ಮುದ್ದು ಗುರುಗಳಾ 1 ನಿಂತ ಎದುರಲ್ಲಿ ಮುಖ್ಯಪ್ರಾಣಾ ಬೇಡಿ- ದಂಥ ವರಗಳ ಕೊಡುವ ಜಾಣಾ ಆಹಾ ಜಗದಂತರದೊಳಗೆ ಪ್ರವೀಣಾ ಸೀತಾ- ಕಾಂತರೊಳಗೆ ಅತಿಪ್ರಾಣಾ2 ಮಂತ್ರಾಲಯದಲ್ಲಿರುವ ಮುದ್ದು ಬೃಂದಾವನದ ನೋಟ ನಮ್ಮಲಿದ್ದ ಪಾಪಗಳೆಲ್ಲ ಓಟಾ ಅಲ್ಲಿ ವಿದ್ವಾಂಸರ ಜಗ್ಯಾಟ ಆಹಾ ಮುದ್ದುವಾಹನನೆ ನೀನು ನರಸಿಂಹವಿಠ್ಠಲ ದೂತ ದಾರಿದ್ರ್ಯಗಳೆಲ್ಲವ ಪರಿಹರಿಸುವಂಥಾ 3
--------------
ನರಸಿಂಹವಿಠಲರು
ಓಡಿಬಾರೋ ಶ್ರೀ ಮನ್ಮಥ ಜನಕನೆ ನೀಡುವೆ ತನುಮನವಾ ಪ. ನೋಡಿ ಮುದ್ದಾಡಿ ಕೊಂಡಾಡಿ ನಾ ಬೇಡುವೆಈಡಿಲ್ಲದ ನಿನ್ನೊಡನಾಡುವ ಸುಖ ಅ.ಪ. ಕಾಡಿನ ಸುಖಕೆ ಮತ್ತೀಡಿಲ್ಲ ಧರೆಯೊಳುಮಾಡುವೆ ಶಪಥವನುಹಾಡಿಪಾಡಿ ಕೈಜೋಡಿಸಿ ಕುಣಿಯುತಮಾಡಿದೆವೊ ನಾವ್ ರಾಸಕ್ರೀಡೆಯ 1 ನಿರಂಜನ ಮೂರ್ತೆ 2 ನೀರಜನಾಭನೆ ತೋರೋಕರಪಲ್ಲವಮೀರಿವೆ ಹೃದಯ ಸಂತಾಪಗಳುಮಾರ ಮೋಹನ ಸಾರುವೆ ನಿನ್ನಯಜಾರ ಬುದ್ಧಿಯ ತಾಪವ ನೀಗಿಸು 3 ಕಮಲ ವಿಹಂಗಮರಾಜ 4 ನೀನೇ ದಯಾಪರ ನೀನೇ ಭಕ್ತೋದ್ಧಾರನೀನೇ ಗತಿ ಪರನಾರೆರಿಗೆಪಾಣಿಮುಗೆವೆಯಮ್ಮ ವಾಣಿಯ ಲಾಲಿಸಿ ವೇಣುನಾದ ತೋರೊ ತಂದೆ ಶ್ರೀನೃಹರೇ 5
--------------
ತಂದೆ ಶ್ರೀನರಹರಿ
ತಂಬೂರಿ ಹಿಡಿಸಿದನು ಪ ಅಂಬುಜಾಕ್ಷನು ದಯದಿ ಅ.ಪ ನಂಬೀದ ಜನರಿಗೆ ಬೆಂಬಲ ತಾನೆಂಬ ನಂಬಿಕೆ ಹೃದಯದಿ ತುಂಬುತ ತಾನೀಗ 1 ಆಶಾ ಪಾಶಕೆ ಸಿಲುಕಿ ಬೇಸತ್ತು ಬೆಂಡಾಗಿ ಮೋಸ ಹೋಗುತ್ತಲಿದ್ದೆ ಶ್ರೀಶ ದಯಾಂಬುಧಿ 2 ಹುಟ್ಟಿದ ದಿನದಿಂದ ಕಷ್ಟದಲ್ಲೇ ಬಂದೆ ಮುಟ್ಟಲಿದನು ಈಗ ಸಂತುಷ್ಟಿಯ ಕಂಡೆನು 3 ಕಾಡಿ ಬೇಡುವರಿಲ್ಲ ನಾಡೆಲ್ಲ ನಮ್ಮದೇನೆ ನೀಡುವ ದೊರೆ ಒಬ್ಬ ಈಡಿಲ್ಲದವನಾತ 4 ವಿಧಿ ವಿಸ್ಮರಣೆ ನಿಷೇಧ ಹರಿನಾಮ ಸುಧೆಯನ್ನು ಕರೆದು ಕರೆದು ಕುಡಿವೆ5 ತಂಬೂರಿ ಸಿಗುವುದು ತುಂಬ ಭಾಗ್ಯವು ಸತ್ಯ ಹಂಬಲಂಗಳ ಬಿಡಿಸಿ ತುಂಬುವ ಹರಿ ಮನದಿ6 ಪುಣ್ಯ ರಾಶಿಗಳೆಲ್ಲ ವದಗಿ ಬಂದವೊ ಏನೋ ಚಿನ್ಮಯ “ಶ್ರೀ ಕೃಷ್ಣವಿಠಲ”ನ ದಾಸನಾದೆ7
--------------
ಕೃಷ್ಣವಿಠಲದಾಸರು
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ಆರಿತ್ತರಭವನೇ ಈ ಮನವನೆನಗೆವಾರಿಜೋದ್ಭವಪಿತನೆ ನೀನಲ್ಲದೆ ಬೇರೆ ಪಪರಮಪಾವನ ನಿನ್ನಪರಮಪರತರ ಚರಿತೆಸ್ಥಿರವೆಂದು ನೆರೆನಂಬಿ ಅರಿವ ಬುದ್ಧಿಯನುಮೆರೆವ ನಿಮ್ಮಯ ಬಿರುದ ಹರುಷದಿಂ ಸ್ಮರಿಸ್ಮರಿಸಿಹಿರಿ ಹಿರಿ ಹಿಗ್ಗುತ ಬರೆವ ಈಕರವ1ನಿನ್ನ ದಾಸರಪಾದಭಿನ್ನವಿಲ್ಲದೆ ನೋಡಿಉನ್ನತ ಸುಖಪಡೆವ ಧನ್ಯದ್ವಯನಯನಮುನ್ನ ನಾ ಮಾಡಿದ ಪುಣ್ಯಫಲವೆಂದರಿದುನಿನ್ನ ಚರಣಕೆ ನಮಿಪ ಮಹಪುಣ್ಯಶಿರವ 2ಗಾಢಮಹಿಮನೆ ನಿಮ್ಮ ಈಡಿಲ್ಲದ ಲೀಲೆರೂಢಿಯೊಳಧಿಕೆಂದು ಆಡ್ಯಾಡಿ ಕುಣಿದುಕಾಡಿ ಬೇಡುವ ಮಹಗಾಢ ನಿಮ್ಮಡಿಭಕ್ತಿನೀಡಿದವರೆನಗಾರುನೋಡುಶ್ರೀರಾಮ3
--------------
ರಾಮದಾಸರು
ಪೇಳಲಳವೆ ನಿನ್ನ ಮಹಿಮೆಯ-ಶ್ರೀರಂಗಧಾಮ|ಪೇಳಲಳವೆ ನಿನ್ನ ಮಹಿಮೆಯ ಪನೀಲಮೇಘಶ್ಯಾಮ ನಿನ್ನ |ಬಾಲಲೀಲೆಯಾಟವ ಅ.ಪವಿಷದ ಮೊಲೆಯ ಪೂತನಿಯ |ಅಸುವ ಹೀರಿದ ಶೂರನಾದೆ |||ಉಸಿರಲಳವೆ ನಿನ್ನ ಮಹಿಮೆ |ಅಮ್ಮಮ್ಮಮ್ಮಮ್ಮಮ್ಮ ||ಕೆಸರ ತಿನಬೇಡೆನುತ ತಾಯಿ |ಶಿಶುವಿನ ವದನವ ನೋಡಿದಳಾಗ |ದಶಚತುರ್ಭುವನವ ತೋರಿದ ಬಾಯೊಳ |ಗಲ್ಲಲ್ಲಲಲ್ಲಲ್ಲಲ್ಲೇ 1ಬಾಲಲೀಲೆಯ ಬಂಡಿ |ಕಾಲಿಲೊದ್ದು ಶಕಟಾಸುರನ ||ಮೂಲನಾಶ ಮಾಡಿದೆ ನೀ |ನಬ್ಬಬ್ಬಬ್ಬಬ್ಬಬ್ಬಬ್ಬ ||ತಾಳಮರದ ನಡುವೆಒರಳ|ಕಾಲಿಗೆ ಕಟ್ಟೆಳೆಯುತಿರಲು |ಬಾಲ ಸತ್ತನೆಂದುಗೋಪಿಅತ್ತ-|ಳಯ್ಯಯ್ಯಯ್ಯಯ್ಯಯ್ಯಯ್ಯೊ 2ಸಣ್ಣವನಿವನಲ್ಲ ನಮ್ಮ |ಬೆಣ್ಣೆ ಕದ್ದು ಗೊಲ್ಲರ ಮನೆಯ |ಹೆಣ್ಣು ಮಕ್ಕಳನು ಹಿಡಿದ ಕಳ್ಳ |ಎಲ್ಲೆಲ್ಲೆಲ್ಲೆಲ್ಲೆಲ್ಲೆಲ್ಲೆ ||ನಿನ್ನಾಣೆಯಿಲ್ಲೆಂಬ ರಂಗನ |ಬಿನ್ನಾಣಕೆ ನಕ್ಕವರನು ಬಯ್ಯುತ |ಎನ್ನ ಕಂದ ಹುಸಿಯನಾಡ |ನೆಂದೆಂದೆಂದೆಂದೆಂದು 3ನಾರಿಯರೆಲ್ಲ ಬತ್ತಲೆಯಾಗಿ |ನೀರಾಟವನಾಡುತಿರಲು |ಸೀರೆಗಳೊಯ್ದು ಮರವನೇರಿದ |ನತ್ತತ್ತತ್ತತ್ತತ್ತತ್ತ ||ವಾರಿಜಮುಖಿಯರು ಲಜ್ಜೆಯ ದೊರೆದು |ಸೀರೆಗಳನು ಬೇಡಲವರಮೋರೆ ನೋಡಿ ರಂಗ ನಕ್ಕ |ಅಬ್ಬಬ್ಬಬ್ಬಬ್ಬಬ್ಬಬ್ಬ 4ಕಾಡು ಕಿಚ್ಚು ಮುಸುಕಿ ಗೋವ-|ವಾಡಿಯು ಬೆಂದದ್ದು ನೋಡಿ |ಈಡಿಲ್ಲದ ಉರಿಯ ತೀಡಿದ |ಅತ್ತತ್ತತ್ತತ್ತತ್ತತ್ತ ||ಬೇಡಿದ ವರಗಳನೀವ |ಪುರಂದರವಿಠಲನ ಲೀಲೆಯ |ರೂಢಿಯೊಳೀಡನ ಸಮರು ಯಾರುಇಲ್ಲಿಲ್ಲಿಲ್ಲಿಲ್ಲಿಲ್ಲಿಲ್ಲ 5
--------------
ಪುರಂದರದಾಸರು
ಶ್ರೀ ಸೌಭಾಗ್ಯ ಸಪ್ತತ್ರಿಂಶತಿ71ಶರಣುವಿಧಿವಾಣೀಶ ಶರಣು ಧೃತಿ ಶ್ರಧ್ದೇಶ |ಶರಣು ಋಜುವರ್ಯರಲಿ ಶರಣು ಶರಣಾದೆ ಪಮೀನಕೂರ್ಮಕ್ರೋಡನರಸಿಂಹ ವಟುರೂಪರೇಣುಕಾತ್ಮಜ ರಾಮ ಶ್ರೀ ಕೃಷ್ಣ ಜಿನಜ ||ವಿಷ್ಣು ಯಶಸ್ಸುತ ಅಜಿತ ಶ್ರೀಶನಿಗೆ ಪ್ರಿಯತಮ |ಅನುಪಮ ಜೀವೋತ್ತಮರ ಚರಣಕಾನಮಿಪೇ 1ಪುರುಷವಿಧಿ ಕಾಲವಿಧಿ ವಾಸುದೇವೋತ್ಪನ್ನ |ವಿರಿಂಚ ಮಹತ್ತತ್ವತನು ಅನಿರುದ್ಧ ಜಾತ ||ನಾರಾಯಣ ನಾಭಿ ಕಮಲಜ ಚತುರ್ಮುಖನು |ಸರಸ್ವತೀಪತಿ ರುದ್ರ ತಾತನಿಗೆ ನಮಿಪೆ 2ಈ ನಾಲ್ಕು ಬ್ರಹ್ಮನ ಅವತಾರದಲಿ ಶುಕ್ಲ |ಶೋಣಿತಸಂಬಂಧ ಇಲ್ಲವೇ ಇಲ್ಲ ||ಜ್ಞಾನಾದಿ ಐಶ್ವರ್ಯದಲಿ ಯಾರು ನಾಲ್ಮುಗಗೆ |ಎಣೆ ಇಲ್ಲ ಹದಿನಾಲ್ಕು ಲೋಕದಲಿ ಎಲ್ಲೂ 3ಭಯವು ಅಜ್ಞಾನವು ಸಂಶಯವು ಇವಗಿಲ್ಲಸತ್ಯ ಲೋಕಾಧಿಪನ ಸುರರ ಅಧ್ಯಕ್ಷ ||ಹಯಮುಖ ತ್ರಿವೃತ್ತುರೀಯ ಹಂಸ ಇತರಾಸೂನು |ತೋಯಜಾಕ್ಷಕೇಶವನ ಪ್ರಥಮ ಪ್ರತಿಬಿಂಬ4ಜಗಜ್ಜನ್ಮಾದ್ಯಷ್ಟಕ ಕರ್ತನ ನಿಯಮನದಿ |ಜಗವ ಪಡೆದಿಹ ಬ್ರಹ್ಮಸತ್ವವಿಗ್ರಹನು ||ಖಗಪ ಭುಜಗಪ ಶಿವಾದ್ಯನಂತ ಜೀವೋತ್ತಮನು |ಅಘರಹಿತತಾರಕಗುರುಶತಾನಂದ5ಅವನಿಯಲಿ ಅವತಾರ ಬ್ರಹ್ಮದೇವನಿಗಿಲ್ಲ |ಭಾವಿ ಬ್ರಹ್ಮನು ಮುಖ್ಯವಾಯುದೇವ ||ದೇವೀಜಯಾ ಸಂಕರುಷಣಾತ್ಮಜನು ಈ |ಭುವಿಯಲ್ಲಿ ತೋರಿಹನು ಹರಿಯಪ್ರಥಮಾಂಗ6ಧೃತಿಪ್ರಭಂಜನವಾಯುಸ್ಮರಭರತ ಗುರುವರನು |ಮಾತರಿಶ್ವನುಸೂತ್ರಪವಮಾನ ಪ್ರಾಣ ||ಎದುರು ಸಮರಿಲ್ಲ ಈ ಬ್ರಹ್ಮ ಧಾಮನಿಗೆಲ್ಲೂ |ಸದಾ ನಮೋ ಭಾರತೀರಮಣ ಮಾಂಪಾಹಿ 7ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂ |ಪ್ರತಿಷ್ಠಿತವೂ ಜೀವರ ದೇಹಕಾಧಾರ ||ತ್ರಾತಪೋಷಕ ಸರ್ವವಶಿ ಪ್ರಜ್ಞಾಶ್ರೀದನು |ತತ್ವಾದಿ ದೇವ ವರಿಷ್ಠ ಚೇಷ್ಟಕನು 8ಶ್ರೀಶ ಹಂಸಗೆ ಪ್ರಿಯಶ್ವಾಸಜಪ ಪ್ರವೃತ್ತಿಸುವ |ಬಿಸಜಜಾಂಡವ ಹೊತ್ತು ಕೊಂಡು ಇರುತಿಹನು ||ಅಸಮ ಸಾಮಥ್ರ್ಯದಿ ಸರ್ವ ಕ್ರಿಯೆ ಮಾಡಿಸುವ |ಶಾಸ್ತನಾಗಿಹ ಪಂಚಅವರಪ್ರಾಣರಿಗೆ9ಬಲ ಜ್ಞಾನಾದಿಗಳಲ್ಲಿ ಹ್ರಾಸವಿಲ್ಲವು ಇವಗೆ |ಎಲ್ಲ ಅವತಾರಗಳು ಸಮವು ಅನ್ಯೂನ ||ಶುಕ್ಲಶೋಣಿತಸಂಬಂಧ ಇಲ್ಲವೇ ಇಲ್ಲ |ಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 10ವಾಯುದೇವನ ಒಲಿಸಿಕೊಳ್ಳದ ಜನರಿಗೆ |ಭಯ ಬಂಧ ನಿವೃತ್ತಿಯು ಸದ್ಗತಿಯು ಇಲ್ಲ ||ಮಾಯಾಜಯೇಶನಪರಮಪ್ರಸಾದವು |ವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 11ಶ್ರೀರಾಮಚಂದ್ರನು ಒಲಿದ ಸುಗ್ರೀವಗೆ |ಮಾರುತಿಯ ಒಲಿಸಿಕೊಂಡವನವನೆಂದು ||ಮಾರುತಿಯ ಒಲಿಸಿಕೊಳ್ಳದ ವಾಲಿ ಬಿದ್ದನು |ಕರ್ಣನೂ ಹಾಗೇವೇ ಅರ್ಜುನನು ಗೆದ್ದ 12ರಾಮನಿಗೆ ಸನ್ನಮಿಸಿ ವನದಿ ದಾಟುತ ಹನುಮ |ಶ್ರಮರಹಿತನು ಸುರಸೆಯನು ಜಯಿಸೆಸುರರು||ಪೂಮಳೆ ಕರೆಯಲು ಸಿಂಹಿಕೆಯನು ಸೀಳಿ |ಧುಮುಕಿದ ಲಂಕೆಯಲಿ ಲಂಕಿಣಿಯ ಬಡಿದ 13ರಾಮ ಪ್ರಿಯೆಗುಂಗುರವ ಕೊಟ್ಟು ಚೂಡಾರತ್ನ |ರಾಮಗೋಸ್ಕರ ಕೊಂಡು ವನವ ಕೆಡಹಿ ||ಶ್ರಮ ಇಲ್ಲದೆ ಅಕ್ಷಯಾದಿ ಅಧಮರ ಕೊಂದು |ರಾಮ ದೂತನು ಹನುಮ ಲಂಕೆಯ ಸುಟ್ಟ 14ಶ್ರೀರಾಮನಲಿ ಬಂದು ನಮಿಸಿ ಚೂಡಾಮಣಿಯ |ಚರಣದಿ ಇಡೆ ರಾಮ ಹನುಮನ ಕೊಂಡಾಡಿ ||ಸರಿಯಾದ ಬಹುಮಾನ ಯಾವುದು ಇಲ್ಲೆಂದು |ಶ್ರೀರಾಮ ತನ್ನನ್ನೇ ಇತ್ತಾಲಿಂಗನದಿ 15ಮೂಲ ರೂಪವನೆನೆದ ಲಕ್ಷ್ಮಣನ ಎತ್ತಲು |ಕೈಲಾಗದೆ ರಾವಣನು ಸೆಳೆಯೆ ಆಗ ||ಲೀಲೆಯಿಂದಲಿ ಎತ್ತಿ ರಾಮನಲಿ ತಂದನು |ಬಲವಂತ ಹನುಮ ಶೇಷಗುತ್ತಮತಮನು 16ಮೃತ ಸಂಜೀವಿನಿಯಾದಿ ಔಷಧಿ ಶೈಲವನು |ತಂದು ಸೌಮಿತ್ರಿ ಕಪಿಗಳಿಗೆಅಸುಇತ್ತ ||ಮುಂದಾಗಿ ಪೋಗಿ ಶ್ರೀರಾಮ ಬರುವುದು ಪೇಳಿ |ಕಾಯ್ದ ರಾಮಾನುಜನ ಅಗ್ನಿ ಮುಖದಿಂದ 17ಇತರರು ಮಾಡಲು ಅಶಕ್ಯ ಸೇವೆ ಹನುಮ |ಗೈದಿ ಮೋಕ್ಷವು ಸಾಲ್ದು ಏನು ಕೊಡಲೆನ್ನೆ ||ಸದಾ ಸರ್ವ ಜೀವರಿಂದಧಿಕ ಭಕ್ತಿ ಒಂದೇ |ಕೇಳ್ದ ಶ್ರೀರಾಮನ್ನ ವೈರಾಗ್ಯ ನಿಧಿಯು 18ಗಂಡು ಶಿಶು ಬೀಳಲು ಗುಂಡು ಪರ್ವತ ಒಡೆದು |ತುಂಡು ನೂರಾಯಿತು ಕಂಡಿಹರು ಅಂದು ಬೋ - ||ಮ್ಮಾಂಡದಲಿ ಪ್ರಚಂಡ ಭೀಮಗೆ ಸಮ |ಕಂಡಿಲ್ಲ ಕೇಳಿಲ್ಲ ನೋಡಿ ಭಾರತವ 19ಉಂಡು ತೇಗಿದಗರಳತಿಂಡಿಯ ಭೀಮನು |ಉಂಡು ಹಾಲಾಹಲವ ಹಿಂದೆ ಈ ವಾಯು ||ಹಿಂಡಿ ಸ್ವಲ್ಪವ ಮುಕ್ಕಣ್ಣಗೆ ಕೊಟ್ಟನು |ಬಂಡುಮಾತಲ್ಲವಿದುಕೇಳಿವೇದವನು20ಅರಗು ಮನೆಯಿಂದ್ಹೊರಟು ಸೇರಿ ವನವನು ಅಲ್ಲಿ |ಕ್ರೂರ ಹಿಡಿಂಬನ ಕೊಂದವನ ಸೋದರಿ ||ಭಾರತೀ ಯಕ್ಸ ್ವರ್ಗ ಶಿಕಿಯು ಹಿಡಿಂಬಿಯಕರಪಿಡಿದ ಭೀಮನು ಅನುಪಮ ಬಲಾಢ್ಯ 21ಬಕ ಕೀಚಕ ಜರಾಸಂಧಾದಿ ಅಸುರರು |ಲೋಕ ಕಂಟಕರನ್ನ ಕೊಂದು ಬಿಸುಟು ||ಲೋಕಕ್ಕೆ ಕ್ಷೇಮವ ಒದಗಿಸಿದ ಈ ಅಮಿತ |ವಿಕ್ರಮಭೀಮನಿಗೆ ಸಮರಾರು ಇಲ್ಲ22ಕಲಿಕಲಿಪರಿವಾರ ದುರ್ಯೋಧನಾದಿಗಳ |ಬಲವಂತ ಭೀಮನು ಬಡಿದು ಸಂಹರಿಸಿದ ||ಕಲಿಹರ ಸುಜನಪಾಲ ಭೀಮ ಸಮ್ರಾಟನ |ಕಾಲಿಗೆ ಎರಗುವೆ ದ್ರೌಪದೀ ಪತಿಗೆ 23ಮಾಲೋಲ ಕೃಷ್ಣನ ಸುಪ್ರೀತಿಗಾಗಿಯೇ |ಬಲ ಕಾರ್ಯಗಳ ಮಾಡಿ ಅರ್ಪಿಸಿದ ಭೀಮ ||ಕಲಿಯುಗದಿ ಈ ಭೀಮ ಅವತಾರ ಮಾಡಿಹನು |ಕಲಿಮಲಾಪಹ ಜಗದ್ಗುರು ಮಧ್ವನಾಗಿ 24ಹನುಮಂತನ ಮುಷ್ಠಿ ಭೀಮಸೇನನ ಗದೆ |ದಾನವಾರಾಣ್ಯವ ಕೆಡಹಿದ ತೆರದಿ ||ಆಮ್ನಾ ಯಸ್ಮøತಿ ಯುಕ್ತಿಯುತ ಮಧ್ವ ಶಾಸ್ತ್ರವು |ವೇನಾದಿಗಳ ಕುಮತ ತರಿದು ಸುಜನರ ಕಾಯ್ತು 25ಇಳೆಯ ಸುಜನರ ಭಾಗ್ಯಶ್ರುತಿಪುರಾಣಂಗಳು |ಪೇಳಿದಂತೆಕೊಂಡಯತಿರೂಪ ವಾಯು ||ಮೇಲಾಗಿ ಇದ್ದ ನಮ್ಮ ಅಜ್ಞಾನ ಕತ್ತಲೆಯ |ತೊಲಗಿಸಿದನು ಈ ಮಧ್ವಾಖ್ಯಸೂರ್ಯ26ದುರ್ವಾದ ಕುಮತಗಳು ಸಜ್ಜನರ ಮನ ಕೆಡಿಸೆ |ತತ್ವವಾದವ ಅರುಪಿ ಸಜ್ಜನರ ಪೊರೆದ ||ಮೂವತ್ತು ಮೇಲೇಳು ಗ್ರಂಥ ಚಿಂತಾಮಣಿ |ಸುವರ್ಣಕುಂದಣಪದಕ ಯೋಗ್ಯರಿಗೆ ಇತ್ತ27ದುಸ್ತರ್ಕ ದುರ್ಮತ ಬಿಸಿಲಿಲ್ಲಿ ಬಾಡುವ |ಸಸಿಗಳು ಸಾತ್ವಿಕ ಅಧಿಕಾರಿಗಳಿಗೆ ||ಹಸಿ ನೀರು ನೆರಳು ಈ ಮಾಧ್ವ ಮೂವತ್ತೇಳು |ಸಚ್ಛಾಸ್ತ್ರಪೀಯೂಷಗೋಕಲ್ಪ ತರುವು28ಮೂಢ ಅಧಮರ ದುಷ್ಟ ಮತಗಳ ಸಂಪರ್ಕದಿ |ಈಡಿಲ್ಲದ ಮೋದಪ್ರದ ಜ್ಞಾನ ಕಳಕೊಂಡು ||ಬಡತನದಿ ನರಳುವ ಸಜ್ಜನರ ಪೋಷಿಪುದು |ನೋಡಿ ಈಸುರಧೇನುಮಾಧ್ವ ಮೂವತ್ತೇಳ29ಬಿಲ್ವಪ್ರಿಯ ಶಿವ ಈಡ್ಯ ಸಾರಾತ್ಮ ಕೃಷ್ಣನ |ಚೆಲ್ವಉಡುಪಿಕ್ಷೇತ್ರದಲಿ ನಿಲ್ಲಿರಿಸಿ ||ಎಲ್ಲ ಭಕ್ತರಕಾವಸುಖಮಯ ಜಗತ್ಕರ್ತ |ಮೂಲ ರಾಮನ ಸಾಧು ಜನರಿಗೆ ಕಾಣಿಸಿದ 30ಮಹಿದಾಸ ಬೋಧಿಸಿದ ತತ್ವವನು ವಿವರಿಸುತ |ಮಹಂತಪೂರ್ಣಪ್ರಜÕಬದರೀಗೆ ತೆರಳಿ ||ಮಹಿಶಿರಿಕಾಂತ ಶ್ರೀ ವ್ಯಾಸನ ಬಳಿ ಇಹನು |ಅಹರಹ ಪ್ರೇಮದಿಂಸಂಸ್ಮರಿಸೆತೋರ್ವ 31ರಾಮ ಕೃಷ್ಣವ್ಯಾಸ ಜಾನಕೀಸತ್ಯಾ |ರುಕ್ಮಿಣೀಅಂಭ್ರಣಿಪ್ರಿಯತಮ ಹನುಮ ||ಭೀಮ ಮಹಾ ಪುರುಷೋತ್ತಮ ದಾಸರಿಗೆ |ನಮಿಪೆ ವಿಪಶೇಷ ಶಿವಾದ್ಯಮರ ಸನ್ನತರ್ಗೆ 32ಚತುರ್ಮುಖ ವರವಾಯು ಸರಸ್ವತಿ ಭಾರತಿಗೆ |ಸದಾ ಶ್ರೀಹರಿಯಲ್ಲಿ ಭಕ್ತಿ ಅಚ್ಛಿನ್ನ ||ಅತಿರೋಹಿತ ಜ್ಞಾನ ಪ್ರಾಚುರ್ಯರಾಗಿಹರು |ಸಾಧಾರಣವಲ್ಲ ಋಜುಗಳ ಮಹಿಮೆ 33ಋಜುಗಳರಾಜೀವಚರಣಗಳಿಗಾ ನಮಿಪೆ |ಭುಜಗಶಯ್ಯನಲಿ ಭಕ್ತಿ ಸಹಜ ಇವರಲ್ಲಿ ||ಭುಜಗಭೂಷಣಾದಿಗಳಿಗಧಿಕತಮ ಬಲಜ್ಞಾನ |ತ್ರಿಜಗಮಾನ್ಯರು ತ್ರಿಗುಣ ತಾಪವರ್ಜಿತರು 34ಅಪರೋಕ್ಷಋಜುಗಣಕೆ ಅನಾದಿಯಾಗಿಯೇ ಉಂಟು |ತಪ್ಪದೇ ಶತಕಲ್ಪ ಸಾಧನವ ಗೈದು ||ಶ್ರೀಪನಅಪರೋಕ್ಷಇನ್ನೂ ವಿಶೇಷದಿ |ಲಭಿಸಿ ಕಲ್ಕ್ಯಾದಿಸುನಾಮಧರಿಸುವರು35ಕಲ್ಕ್ಯಾದಿ ಪೆಸರಲ್ಲಿಪ್ರತಿಒಂದು ಕಲ್ಪದಲು |ಅಕಳಂಕ ಇವರು ಬಹು ಸುವಿಶೇಷ ಸಾಧನದಿ ||ಭಕ್ತ್ಯಾದಿ ಗುಣಕ್ರಮದಿ ಅಧಿಕ ಅಭಿವ್ಯಕ್ತಿಯಿಂ |ಮುಖ್ಯ ವಾಯು ಬ್ರಹ್ಮಪದವ ಪೊಂದುವರು 36ಈ ಬ್ರಹ್ಮಾದಿಗಳೊಳು ಇದ್ದು ಕೃತಿಮಾಡಿಸುವ |ಶಿರಿಸಹ ತ್ರಿವೃನ್ನಾಮ ಪ್ರಸನ್ನ ಶ್ರೀನಿವಾಸ ||ಸುಹೃದ ಸೌಭಾಗ್ಯದಗೆ ಜಯ ಜಯತು ಅರ್ಪಿತವು |ಹರಿವಾಯು ನುಡಿಸಿದಿದು ಜಯತು ಹರಿವಾಯ 37
--------------
ಪ್ರಸನ್ನ ಶ್ರೀನಿವಾಸದಾಸರು