ಮಂಗಳಾಂಗನ ಭಜಿಸೆ ಹಿಂಗಿಸುವ ಭವವ
ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ.
ಧ್ಯಾನಕೆ ತಂದು ನಿಧಾನದಲಿ ಯೋಚಿಸು
ಜ್ಞಾನಿಗಳರಸನ ಮಾನಸದೊಳಗೆ
ಕಾನನದೊಳು ವೃದ್ಧ ಶಬರಿಯೆಂಜಲನುಂಡು
ದಾನಶೀಲನು ರಾಮ ಕೈವಲ್ಯವನಿತ್ತಾ 1
ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ
ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ
ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ
ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2
ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ
ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ
ಹಾವಭಾವದ ತೆರದಿ ದೇವ ಬಂದೊದಗುವ
ಮತ್ತಾವ ದೇವರ ಕಾಣೆ ಶ್ರೀವರನಲದೇ 3