ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶ
ಮಾಧವ ಮಧುರಿಪು ಮಾನುಷವೇಷ ಶರಣಾಗತಪೋಷಪ.
ವೇದಾಗಮ್ಯ ದಯೋದಧಿ ಗೈದಪ-
ರಾಧ ಕ್ಷಮಿಸಿ ಸುಗುಣೋದಯನಾಗುತಅ.ಪ.
ಅನಾಥ ಜನರ ಕಾಮಧೇನು ಕಾಯೊ ಎಮ್ಮನು
ದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನು
ಆನತಜನ ಸುತ್ರಾಣಿಸುವಂತೆ ಪ್ರ-
ದಾನಿಯಂತೆ ಶತಭಾನು ಪ್ರಕಾಶದಿ1
ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮ
ಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮ
ಕಾಟಕ ಮನಸಿನ ಮಾಟವ ನಿಲ್ಲಿಸಿ
ಘೋಟಕಾಸ್ಯ ನರನಾಟಕಧಾರಿ2
ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆ
ಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆ
ಕಾಣಿಸದೆಮ್ಮಲಿ ಮೌನವ ಮಾಳ್ಪರೆ
ದೀನಜನರ ದುಮ್ಮಾನಗೊಳಿಸುವರೆ 3
ಹಿಂದೆಮ್ಮ ಕಾಯ್ದವ ನೀನೆ ಹರಿ ಸುರನರ ಕೈವಾರಿ
ಮಂದಜ್ಞಾನಿಗಳ ತಪ್ಪನು ಮಾರಿ ಮೂರ್ಲೋಕೋದ್ಧಾರಿ
ಹೊಂದಿದವರಿಗೆಂದೆಂದಿಗು ಬಿಡನೆಂ-
ಬಂದವ ತೋರಿ ಆನಂದವ ಬೀರುತ 4
ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದ
ಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದ
ಒಪ್ಪಿಸಿದೆಮ್ಮಭಿಪ್ರಾಯವ ತಿ-
ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5