ಒಟ್ಟು 10 ಕಡೆಗಳಲ್ಲಿ , 7 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವಎಲ್ಲಾ ಲೋಕ ಲೋಕದಿ ಪ ಭಂಗ ಪಡಿಸಿದೆ ನಿನಗೆಣೆ-ಯಿಲ್ಲ ಶನೈಶ್ಚರನೆ ಅ ಹರಿಹರ ಬ್ರಹ್ಮಾದಿಗಳ ಭಂಗಪಡಿಸಿದೆ ಕರುಣವಿಲ್ಲವೆ ನಿನಗೆ ಹರಿಶ್ಚಂದ್ರ ನಳಚಕ್ರವರ್ತಿ ಷೋಡಶ ಮಹಾರಾಯ ಪಾಂಡ್ಯರ ದಣಿಸಿ ತೋರಿಸಿದೆ ಮನೆ ಮನೆ ವಾರ್ತೆಗಳೆಲ್ಲವ ತಿರಿದುಂಡು ಮರುಳುಗೊಂಡು ಪರರ ಪೀಡಿಸಿ ಭ್ರಮೆಪಟ್ಟು ಲಜ್ಜೆಗೆಟ್ಟು ತಿರುಗುವಂದದಿ ಮಾಡಿದೆ 1 ಕಟ್ಟಿದ ಪಶು ಕರೆಯದು ತಾನಾಡಿದ ಮಾತು ಕಟ್ಟದು ಸಭೆಯೊಳಗೆ ಮೆಟ್ಟಿದ ನೆಲ ಮುನಿವುದು ಹೊನ್ನ ಹಿಡಿದರೆ ಬಕ್ಕಟ್ಟೆ ಬಯಲಹುದು ಉಟ್ಟದ್ದು ಹಾವಾಗಿ ಹರಿವುದು ಸಾಲಿ-ಗರಟ್ಟುಳಿ ಘನವಹುದು ಮುಟ್ಟ ಹೇಸುವರು ಕುರುಹ ನಾರಿಯರು ನೆಂಟರಿಷ್ಟರೆ ಕಾಣರು 2 ಸತಿ ಬದ್ಧದ್ವೇಷದಿ ಬೈವಳು ಇದ್ದ ಮನುಜರ ಪಾಡೇನು ನೀ ಬಂದು ಹೊದ್ದಿದ ಮಾತ್ರದಲಿ ನಿದ್ದೆ ಹಸಿವು ಬಳಲಿಕೆ ದಟ್ಟ-ದಾರಿದ್ರ್ಯವು ಕೈಗೊಂಬುದು 3 ಒಳ್ಳೆದಾಗಿದ್ದ ಸಂಗಾತಿಯ ಸ್ನೇಹವೆಲ್ಲವನು ಬಿಡಿಸಿ ಅಲ್ಲಲ್ಲಿ ಕೊಡುವ ದಾನಿಗಳ ಮನದಿ ಪೊಕ್ಕು ಇಲ್ಲಿಲ್ಲ ಹೋಗೆನಿಸಿ ಇಲ್ಲದ ಅಪವಾದ ಭಾಳ ಕಂಟಕ-ರೋಗದಲ್ಲಿ ನೋಯಿಸಿ ಒಲ್ಲೆನೀ ಜನ್ಮವೆಂದೆನಿಸಿ ಸಾಧಿಸಿ ಕಡೆಯಲ್ಲಿ ಗುಣ ತೋರಿಸಿ4 ದೇಶದೇಶದ ರಾಯರ್ಗಳನೆಲ್ಲರನು ಪರದೇಶಿಗಳನು ಮಾಡಿದೆ ವಾಸವನೆ ಬಿಡಿಸಿ ತಿರುಗಿಸಿ ಗಾಸಿ-ಯಿಂದಲೆ ನೋಯಿಸಿ ಶೇಷಶಯನ ಸರ್ವೇಶ ದೇವೇಶನೆ ಲೇಸು ಪಾಲಿಸೊ ಎನಗೆ ದೇಶದಂತರ್ಯಾಮಿ ನೆಲೆಯಾದಿಕೇಶವತೋಷದಿ ಸಲಹೊ ಎನ್ನ 5
--------------
ಕನಕದಾಸ
ಮುತ್ತಿ ಎನಗೆ ಬಡಿತವ್ವ ಹರಿ ಭಕ್ತರ ಮನಿಯನ ದೆವ್ವ ಪ ಅತ್ತಿತ್ತಮಾಡಿ ಬೆನ್ನ್ಹತ್ತಿ ಬಿಡದೆ ಎನ್ನ ನೆತ್ತಿಕೊಂಡು ಓಡ್ಹೋಯ್ತವ್ವ ಅ.ಪ ಬಿದ್ದರೆ ಬೀಳಗೊಡಲಿಲ್ಲವ್ವ ಸುಮ್ಮ ನಿದ್ದರೆ ಇರಗೊಡಲಿಲ್ಲವ್ವ ಬುದ್ಧಿಭ್ರಮಿಸಿ ಬಲುಗದ್ದಲಮಾಡೆನ್ನ ಮುದ್ದಿಟ್ಟೆಬ್ಬಿಸಿಕೊಂಡ್ಹೋಯ್ತವ್ವ 1 ಉಟ್ಟದಟ್ಟಬಿಡಿಸೊಗಿತವ್ವ ಬಂದ ಎರವು ಮಾಡಿತವ್ವ ವೊಷ್ಟು ಬಿಡಿಸಿ ಎನ್ನ ಗಟ್ಟ್ಯಪ್ಪಿ ತಿರುಗದ ಬೆಟ್ಟಕ್ಕೆ ಎಳಕೊಂಡ್ಹೋಯ್ತವ್ವ 2 ಭೋರಿಟ್ಟತ್ತರು ಎನ್ನ ಬಳಗವ್ವ ಸಮೀ ಪಾರನು ಬರಗೊಡಲಿಲ್ಲವ್ವ ಸಾರಸೌಖ್ಯಕ್ಕಾಧಾರ ಶ್ರೀರಾಮಪಾದ ಸೇರಿಸಾನಂದಪದವೇರಿಸಿತವ್ವ 3
--------------
ರಾಮದಾಸರು
ರಾಮಯನ್ನಮ:ಎನ್ನೋ ರಾಮಾಯನ್ನಮ: ನಾಮವರಿತದ್ದೇ ರಾಮಾಯನ್ನಮ: ಪ ಬಂದದ್ದು ಬಾರದ್ದು ರಾಮಾಯನ್ನಮ: ತಂದದ್ದು ತಾರದ್ದು ರಾಮಾಯನ್ನಮ: ಅಂದದ್ದು ಆಡದ್ದು ರಾಮಾಯನ್ನಮ: ಮಿಂದದ್ದು ಮೀಯದ್ದು ರಾಮಾಯನ್ನಮ: 1 ಉಂಡದ್ದು ಉಟ್ಟದ್ದು ರಾಮಾಯನ್ನಮ: ಕೊಂಡದ್ದು ಕೊಟ್ಟದ್ದು ರಾಮಾಯನ್ನಮ: ಕಂಡದ್ದು ಕಾಣದ್ದು ರಾಮಾಯನ್ನಮ: ಬಂಡಾದದ್ದಾಗದ್ದು ರಾಮಾಯನ್ನಮ: 2 ಇದ್ದದ್ದು ಇಲ್ಲದ್ದು ರಾಮಾಯನ್ನಮ: ಮೆದ್ದದ್ದು ಮೆಲ್ಲದ್ದು ರಾಮಾಯನ್ನಮ: ಬಿದ್ದದ್ದು ಬೀಳದ್ದು ರಾಮಾಯನ್ನಮ: ಕದ್ದದ್ದು ಕದಿಯದ್ದು ರಾಮಾಯನ್ನಮ: 3 ಬಿತ್ತಿದ್ದು ಬೆಳೆದದ್ದು ರಾಮಾಯನ್ನಮ: ಎತ್ತಿದ್ದು ಎತ್ತದ್ದು ರಾಮಾಯನ್ನಮ: ಸುತ್ತಿದ್ದು ಮುತ್ತಿದ್ದು ರಾಮಾಯನ್ನಮ: ಅತ್ತದ್ದು ಹೊತ್ತದ್ದು ರಾಮಾಯನ್ನಮ: 4 ಭಕ್ತಿ ಭಾವನೆಯೆಲ್ಲ ರಾಮಾಯನ್ನಮ: ಯುಕ್ತಿ ಯೋಚನೆಯೆಲ್ಲ ರಾಮಾಯನ್ನಮ: ಯುಕ್ತಾಯುಕ್ತವು ರಾಮಾಯನ್ನಮ: ಮುಕ್ತಿ ಸಾಧ್ಯ ಶ್ರೀ ರಾಮಾಯನ್ನಮ: 5
--------------
ರಾಮದಾಸರು
ಲಾಲಿ ಲಯ ಜಲ ಶಯ್ಯ | ಲೋಲ ಕೃಷ್ಣಯ್ಯಲಾಲಿ ವಟದೆಲೆ ಶಾಯಿ | ಹರಿಯೆ ತುರಗಾಯ ಲಾಲೀ ಪ ಕುಂಡಲ ಲೋಲ | ಸಿರಿಕೃಷ್ಣ ಬಾಲ1 ಪುಂಡರೀಕನಿಗೊಲಿದ | ಪಾಂಡವರ ಪ್ರೀಯಪಿಂಡಾಂಡದೊಳಗಿರುವ | ಬ್ರಹ್ಮಾಂಡದೊಡೆಯಉಂಡು ಉಟ್ಟದ್ದೆಲ್ಲ ನಿನಗೆಂಬ ಗೆಳೆಯಾಅಂಡಜಾಧಿಪ ತುರಗ | ಪೊರೆವ ಇದು ಖರೆಯ 2 ಅಮಿತ ಮಾಧವ ಶ್ರೀಶ ಮುಖ್ಯ ಪ್ರಾಣೇಶ 3 ಸೊಲ್ಲು ಬಾಯ್ತುಂಬಸಲ್ಲಿಪಗೆ ದಯ ತುಂಬ | ಉಣಿಪ ಮದ್ಬಿಂಬ 4 ಅಕ್ಷಯ ಹೊಯ್ಯೆ | ಶೀರೆಗಳ ಜಾಲಸುರಿಸಿದನೆ ತಾ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಹಯವದನನ ಪಾದದ್ವಯವ ನೆನೆಯದವ ಜಯಿಸುವನೆಂತೋ ಸಂಸ್ಮøತಿ ಫಲವ ಪ. ಕಾಗೆಯಂತಾದರು ಬಿದ್ದರು ಎದ್ದರು ಯೋಗದೊಳಿದ್ದರು ಬಿದ್ದವನೆ ಆಗಮವನು ತಂದು ಅಜನಿಗೆ ಬೋಧಿಸಿ- ದಾ ಗುಣನಿಧಿಯನರ್ಚಿಸದವನು 1 ಬೂದಿಗೆ ವಾದಿಸಿ ಮಣ್ಣಮೇಲುಣ್ಣಲು ಸಾಧಿಪುದೇನವ ಶ್ರವ ಶ್ರಾವಕ ವ್ರತವ ಬೂದಿಯ ಮಾಡಿದ ಮಣ್ಣಿನ ಗಂಡನ ಹಾದಿಯನೊಲ್ಲದ ಹಂಚುನರ2 ಉಟ್ಟದ ಬಿಟ್ಟು ತನ್ನಟ್ಟಲು ಬಟ್ಟೆಯ ಕಷ್ಟ ತಾ ಬಟ್ಟು ಕಂಗೆಟ್ಟನೈಸೆ ಸೃಷ್ಟಿಸಿ ಸಲಹುವ ಹಯವದನನ ಪರಿ- ತುಷ್ಟಿಗೆ ಪುಟ್ಟದ ದುಷ್ಟಪಶು3
--------------
ವಾದಿರಾಜ
ಧರಣಿಯಈರಡಿಮಾಡಿದನ | ಭೂ |ಸುರರಿಗೆ ದಾನವ ನೀಡಿದನೆ ||ನೆರೆದು ಕಪಿಹಿಂಡು ಕೂಡಿದನೆ |ಫಣಿ |ಶಿರದಲ್ಲಿ ಕುಣಿ ಕುಣಿದಾಡಿದನಕ್ಕ 2ಉಟ್ಟದ್ದು ಬಿಟ್ಟು ತಾ ನಿಂತಿಹನೆ | ರಂಗ |ದಿಟ್ಟಾದ ಕುದುರೆಯನೇರಿದನೆ ||ದುಷ್ಟರನೆಲ್ಲ ಅಳಿದಿಹನೆ | ನಮ್ಮ |ಬಿಟ್ಟಾದಿ ಪುರಂದರವಿಠಲ ಕಾಣಕ್ಕ
--------------
ಪುರಂದರದಾಸರು
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ಬಾರೋ ನಮ್ಮ ಮನೆಗೆ ಬೇಗನೆ ಗೋಪಾಲಕೃಷ್ಣಬಾರೋ ಶ್ಯಾಮ ಸುಂದರಾಂಗನೆ ಪಬಾರೊ ಭಾಮೆ ರುಕ್ಮಿಣೀಶ ಬಾರೊಯೋಗಿಹೃದಯವಾಸಬಾರೊ ದ್ವಾರಕಾಪುರೀಶ ಬಾರೊ ಭಕ್ತಜನರ ಪೋಷ ಅ.ಪಅಂದಿಗೆ ಕಾಲ್ಗೆಜ್ಜೆ ಸರಪಣಿ ಪಾಡಗರುಳಿಯುಕೆಂದಾವರೆಯು ಪೋಲ್ವಪಾದದಿನಂದಗೋಪತನಯಗೋಪವೃಂದದೊಳಗೆ ಕುಣಿದು ನಲಿದುಇಂದಿರೇಶ ಶ್ರೀಶನೆ ಬಂದೊಂದುಹೆಜ್ಜೆನಿಡುತ ಮುದದಿ 1ಉಟ್ಟದಟ್ಟಿಯು ಪಟ್ಟೆಚಲ್ಲಣ ಹವಳಕಟ್ಟುಗಟ್ಟಿ ಸರಪಣಿ ಕಿರುಗಂಟೆಯುಕಟ್ಟಿದ ಉಡುದಾರಗೆಜ್ಜೆಶ್ರೇಷ್ಠತನದಿ ಮೆರೆಯುತಿರಲುಪುಟ್ಟಬಾಲರೊಡನೆ ಪುಟ್ಟಪುಟ್ಟ ಹೆಜ್ಜೆನಿಡುತ ನಲಿದು 2ದುಂಡು ಕರಕೆ ಗುಂಡು ಬಿಂದಲಿ ಮುಂಗೈಮುರಿಗೆಉಂಗುರಗಳು ಶೋಭಿಸುತಲಿಬಂದಿ ಬಾಪುರಿಗಳು ತೋಳಬಂದಿ ನಾಗಮುರಿಗಿ ಕರದಿಚಂದ್ರನನ್ನು ಪಿಡಿದು ನಲಿದಸುಂದರಾಂಗ ಚೆಲುವ ಕೃಷ್ಣ 3ಪದಕ ಮುತ್ತಿನ ಸರಗಳ್ಹೊಳೆಯುತವೈಜಯಂತಿಮಾಲೆಸರಿಗೆ ಏಕಾವಳಿಗಳೊಲಿಯುತಪದುಮನಾಭ ನಿನಗೆ ದಿವ್ಯಮುದದಿಕೌಸ್ತುಭಮಾಲೆ ಹೊಳೆಯೆಯದುಕುಲೇಶ ಉಡುಪಿವಾಸಉದದಿ ಶ್ರೀಶಉದ್ಧವಸಖನೆ4ಸೋಮಸೂರ್ಯರ ಕಾಂತಿ ಸೋಲಿಪ ಮುಂಗುರುಳು ಮುಖವುಕಾಮಜನಕ ಕಮಲಲೋಚನಹೇಮಮಣಿ ಕಿರೀಟಕುಂಡಲಪ್ರೇಮತೋರ್ವ ಫಣಿಯ ತಿಲಕಶ್ರೀ ಮಹೀಶ ಶ್ರೀಶನೆ ಶ್ರೀ-ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ರಂಗನೆಂಥವನೆಂಥವನಲೆ ತಂಗಿರಂಗನಂತರಂಗ ಹಲವಂಗ ತಿಳಿಯದು ಬ್ರಹ್ಮಾದಿಗಳಿಗೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆಗಮದ ತಂದಿಹನೆ - ರಂಗಬೇಗದಿ ಗಿರಿಯ ಪೊತ್ತಿಹನೆಮೂಗಿಂದ ಭೂಮಿಯನೆತ್ತಿದನೆ - ಕಂದಕೂಗಲು ಕಂಬದಿ ಬಂದ ಕಾಣಕ್ಕ1ಧರೆಯಈರಡಿಮಾಡಿದನೆ - ಭೂಸುರರಿಗೆ ದಾನವ ನೀಡಿದನೆನೆರೆದಕಪಿಹಿಂಡುಕೂಡಿದನೆ -ಫಣಿಶಿರದಲಿ ಕುಣಿ ಕುಣಿದಾಡಿದನಕ್ಕ2ಉಟ್ಟದ್ದು ಬಿಟ್ಟು ತಾ ನಿಂತಿಹನೆ - ರಂಗದಿಟ್ಟಾದ ಕುದುರೆಯನೇರಿದನೆದುಷ್ಟರನೆಲ್ಲ ಅಳಿದಿಹನೆ - ನಮ್ಮಬಿಟ್ಟಾದಿಕೇಶವರಾಯ ಕಾಣಕ್ಕ3
--------------
ಕನಕದಾಸ