ಒಟ್ಟು 202 ಕಡೆಗಳಲ್ಲಿ , 48 ದಾಸರು , 178 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅದಕೋ ಬ್ರಹ್ಮಾಸ್ತ್ರ ನೋಡು ನೋಡದಕೋ ಬ್ರಹ್ಮಾಸ್ತ್ರಅದಕೋ ಬ್ರಹ್ಮಾಸ್ತ್ರ ಅದ್ಭುತವಾದಸ್ತ್ರಬೆದರಿಪುದೆಲ್ಲರ ಬೇವುವು ಬ್ರಹ್ಮಾಂಡ ಪ ಮಾರಿಗೆ ಮಾರಿಯು ಮೃತ್ಯುಗೆ ಮೃತ್ಯುವುಘೋರಕೆ ಘೋರವು ಕ್ರೂರಕೆ ಕ್ರೂರ 1 ತಗ ತಗ ಚಕಚಕ ಲಕಲಕ ನಳನಳಝಗ ಝಗ ನಿಗಿ ನಿಗಿ ಕಳೆ ಕೋರೈಸುತಿದೆ2 ಛಟಛಟ ಛಿಳಿಛಿಳಿ ಧಗಧಗ ಭುಗುಭುಗುಪಟಿ ಪಟಿಸುತ ಉರಿ ಹೊಗೆಯೊಂದಾಗುತಿದೆ 3 ಹಲವು ಬ್ರಹ್ಮಾಂಡವ ಸುಟ್ಟರು ಹಸಿವಡಗದುಹಲವು ಸಾಗರ ಕುಡಿದೆ ತೃಷೆಯಡಗದು ಬಿರುಗಣ್ಣಿಂದಲಿ ಖಡ್ಗವ ಬೀರುತಗುರುಚಿದಾನಂದ ತಾನಾಗಿಹ ಬಗಳೆ 5
--------------
ಚಿದಾನಂದ ಅವಧೂತರು
ಗೆಲಿಯಬಲ್ಲವರಾರು ಮೂಜಗದಿ ಪಣೆಯ ಬರಹ ಗೆಲಿಯಬಲ್ಲವರಾರು ಮೂಜಗದಿ ಪ ಗೆಲಿಯಬಲ್ಲವರಾರು ಮೂಜಗದೊಳಗೆ ಬಲ್ಲಿದರೆಂಬರೆಲ್ಲರು ಜಲಜಪೀಠನ ಲಿಪಿಗೆ ಸಿಲ್ಕಿ ತೊಳಲಿ ಬಲಳಿದರ್ಹಲವು ಪರಿಯಲಿ ಅ.ಪ ಒಂದೇ ಧರ್ಮದಿಗೂಡಿ ತಾ ನಡೆದ ವಿಕ್ರಮನೆಂಬುವ ಒಂದೆ ಕೊಡೆಲಿಡೀಭುವನವಾಳಿದ ಸದ್ಧರ್ಮ ತನದಿಂ ದೊಂದೆ ಆ ಸುಮರೂಪ ಪ್ರಜರ ಪಾಲಿಸಿದ ಉದ್ದಂಡನೆನಿಸಿದ ಒಂದು ಪಾಪಾಚರಣೆಗೈಯದೆ ಒಂದು ಬಿಡಿದಖಿಲ್ವಿದ್ಯವರಿದ ಒಂದು ಅರಿಯದೆ ತನ್ನ ಕೈಕಾಲು ಒಂದೇ ಮಾತಿಗೆ ಕಳೆದುಕೊಂಡ 1 ಎರಡುಹೊತ್ತು ಸತ್ಯಮಂ ಬಿಡದ ಸುಚಿಂತದಿರುವ ಎರಡನೇ ಗುಣ ಸ್ವಪ್ನದರಿಯದ ನಳಚಕ್ರವರ್ತಿ ಎರಡು ತಿಳಿಯದೆ ಜೂಜನಾಡಿದ ಮಹವಿಪಿನಕೈದಿದ ಎರಡು ಮಕ್ಕಳ ವನದಿ ಅಗಲಿದ ಎರಡನರಿಯದೆ ಮಲಗಿದರಸಿಯ ಎರಡನೆಬಗೆದಡವಿಯಲಿ ಬಿಟ್ಟು ಎರಡನೇರಾಯನಶ್ವ ತಿರುವಿದ 2 ಮೂರು ಜಗ ಅರೆಲವದಿ ತಿರುಗುವ ದಿನದಿನವುಬಿಡದೆ ಮೂರುಮೂರ್ತಿದರ್ಶನವ ಪಡೆಯುವ ಆ ಪರಮಪಾವನ ಮೂರು ಕಾಲದ ಜ್ಞಾನ ಬಲ್ಲವ ನಾರದನೆಂಬುವ ಮೂರುಮಂದಿ ಶಕ್ತಿಯರಿಗೆ ಮೂರು ಬಟ್ಟೆಯ ಸುದ್ದಿ ಪೇಳಿ ಮೂರು ಮೂರ್ತಿಗಳುಪಾಯನರಿಯದೆ ಮೂರಿಪ್ಪತ್ತು ಮಕ್ಕಳ್ಹಡದ 3 ನಾಲ್ಕುಯುಗ ಪ್ರಮಾಣಗಳ ತಿಳಿದ ಬ್ರಹ್ಮನುಬಿಡದೆ ನಾಲ್ಕುವೇದಗಳ್ಹಸ್ತದೋಳ್ಪಿಡಿದು ವಿಧವಿಧದಿ ಎಂಭತ್ತು ನಾಲ್ಕುಲಕ್ಷಜೀವರಾಶಿಗಳ ಬರಿದೆ ಉತ್ಪತ್ತಿಗೈದು ನಾಲ್ಕುಭುಜನ ಸುರನೆಂದೆನಿಸಿ ನಾಲ್ಕು ವಿಧ ಮತಿವಂತನಾದವ ನಾಲ್ಕು ಒಂದು ಮುಖ ಮೊದಲಿಗಿರ್ದನು ನಾಲ್ಕೆ ಮುಖದವನೆನಿಸಿಕೊಂಡು 4 ಐದುಬಾಣನಪಿತನಸಖನಾದ ಉರಿನೇತ್ರ ಬಿಟ್ಟು ಐದುಬಾಣನ ಭಸ್ಮ ಮಾಡಿದ ಅಪಾರ ಶಂಭೋ ಐದು ಒಂದು ಮುಖದವನ ತಾ ಪಡೆದ ಹರಿಕರುಣದಿಂದ ಐದು ಒಂದು ಮುಖದವನಿಂ ತಾರಕ ನೈದುವಂದುದಲ್ಲೆ ಸೀಳಿಸಿ ದೈದುತತ್ವಕಾಲಯೆನಿಸಿದ ಐದುಮುಖಸ್ಮಶಾನ ಸೇರಿದ 5 ಆರು ಎರಡೈಶ್ವರ್ಯಗಳಲೊಳ ವೈಕುಂಠನಾಯಕ ಆರು ಎಂಟುಲೋಕಗಳ ಪರಿಪಾಲ ಬಿಡದೇಳು ಇಪ್ಪತ್ತು ಆರುಕೋಟಿ ಅಮರಾದಿಗಳ ಮೂಲ ಮಹಮಂತ್ರ ಜಾಲ ಆರುನಾಲ್ಕು ಭುಜನ ಮೊರೆ ಕೇ ಳಾರುನಾಲ್ಕು ಶಿರನ ವಧಿಸಿದ ಆರುನಾಲ್ಕರಗಧಿಕನೆನಿಸಿ ಆರುನಾಲ್ಕವತಾರ ತಾಳಿದ 6 ಆರಿಗಾದರು ಬಿಡದೀ ಬರವಣಿಗೆ ಬಿದ್ದಂತೆ ಫಲಿಸಿತು ತೀರಲಿಲ್ಲದಂತಂಥ ಹಿರಿಯರಿಗೆ ಸಾಧ್ಯದಪ್ಪಿ ಮಹ ಘೋರ ಬಡಿಸಿತು ಸರ್ವ ಶಕ್ತರಿಗೆ ಬ್ರಹ್ಮನಸುಡಗಿ ವಾರಿಜನು ಬರೆದ ಬರೆಹ ಮೀರಿ ನಡೆದೇನೆಂದರಿನ್ನು ಸಾರಮೋಕ್ಷಕ್ಕಧಿಪ ನಮ್ಮ ಧೀರಪ್ರಭು ಶ್ರೀರಾಮ ಬಲ್ಲ 7
--------------
ರಾಮದಾಸರು
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಇ) ಆತ್ಮನಿವೇದನೆ ಏನು ಮಾಡಲಿ ವೆಂಕಟೇಶ ಈ ಬೆಳೆಯು ಸೋನೆಯಿಲ್ಲದೆ ಉರಿದುದು ಪ ನಾನಾ ಪ್ರಕಾರದೊಳು ಹಾನಿಯಾಯಿತು ಇರವು ಹೀನರಾದೆವು ನಾವು ಶ್ರೀನಿವಾಸನೆ ಕೇಳು ಅ.ಪ ಮೂಡದೆಸೆಯಳು ಬಂದುದು, ಆ ಮಳೆಯು ಬಡಗದೆಸೆಯಳು ಸುರಿದುದು ಎಡಬಿಡದೆ ತೆಂಕ ಕಡೆಯಲಿ ಹೊಡೆದ ಮಳೆಯು ತಾ ನಡುವೆ ಬಿಡುವುದು ಯಾತಕೆ 1 ಕಟ್ಟುಕಡು ಮದಗ ಸಹಿತ, ಈ ಊರ ತಲೆ ಗಟ್ಟಿನೊಳು ನಾ ಕಾಣೆನು ಕೆಟ್ಟು ಹೋಯಿತು ಮಳೆಯು ಹೊಟ್ಟೆಯನು ಉರಿಸುತ್ತ ದೃಷ್ಟಿಯಲಿ ನೋಡು ನೀನು 2 ಮಳೆಯಿಲ್ಲದಿಳೆಯಾರಿತು, ನಟ್ಟಿರ್ದ ಫಲವೆಲ್ಲ ಬೆಳೆ ಕೆಟ್ಟಿತು ಸ್ಥಳದ ತೆರಿಗೆಯ ಬಿಟ್ಟು ಕಳುಹುವನೆ ದೊರೆ ತಾನು ಎಳೆದೆಳೆದು ಕೊಲುವನಲ್ಲ 3 ಕಷ್ಟ ಬಂದುದು ನಮ್ಮ ಕಡೆಗೆ, ಈ ವೃಷ್ಟಿ ಬಿಟ್ಟು ಪೋದುದು ಇಳೆಯನು ಸುಟ್ಟ ಊರೆಲ್ಲವನು ತಟ್ಟಿನಾರಿದ ಮೇಲೆ ಮುಟ್ಟಿ ನೋಡುವರಿಲ್ಲವೊ 4 ಹದಿನಾಲ್ಕು ಲೋಕವನು ನೀ ನಿನ್ನ ಉದರದೊಳಗಳವಟ್ಟಿಹೆ ಬೆದರುತಿದೆ ಈ ಲೋಕ ಒದರುವುದು ಜನರೆಲ್ಲ ಉದುರದೇತಕೆ ಇಳೆಗೆ ಮಳೆಯು 5 ಎಲ್ಲ ಬೇಡಿಯೆ ಕೊಂಬರು, ಈ ಹರಕೆ ಯಲ್ಲಿ ಅಂತರಬಾರದು ಹಲ್ಲು ಬಾಯಾರಿರ್ದ ಮಕ್ಕಳಿಗೆ ಎಳೆನೀರು ಬೆಲ್ಲವಾಗಿಹ ಮಳೆಯನೆರೆಯೊ 6 ನೀಲಮೇಘಶಾಮ ವರ್ಣ, ಕಾಣಲಾ ಮೂಲೋಕದೊಡೆಯಾ ನಿನ್ನ ಕಾಲಮೇಘವು ನಿನಗೆ ದೂರವಾಗುವುದುಂಟೆ ಆಲಸ್ಯ ಮಾಡಬೇಡ 7 ಬಡವರೆಲ್ಲರು ಕೂಡಿಯೇ, ಒಪ್ಪು ಕೈ ವಿಡಿದು ಬೇಡಿಯೇ ಕೊಂಡೆವು ಸಿಡಿಲು ಮಳೆ ಮಿಂಚುಗಳು ಹೊಡಕರಿಸಿ ಬರುವಂತೆ ಒಡೆಯ ದಯದೋರೊ ನೀನು 8 ಸ್ವಾಮಿ ನಿನ್ನಯ ನಾಮವು, ಜನರಿಂಗೆ ಕಾಮಿತಾರ್ಥವನೀವುದು ಪ್ರೇಮವಾಗಿಹ ಮಳೆಯ ಭೂಮಿಯಲಿ ಇಳಿಬಿಟ್ಟು ನಾಮವಾಗೆವು ಸ್ವಾಮಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
(ಉ) ಲೋಕನೀತಿ ಕುರಿತ ಕೀರ್ತನೆಗಳು ಏಳಿಸು ನಂಜನನೂ ಬೇಗದೊಳೇಳಿಸು ನಂಜನನೂ ಬಾಳುವ ಮಗನನು ಕೋಳುವಿಡಿದುದು ಯಮನ ನಾಳಿದೊಡೆಯ ವೇಲಾಪುರದರಸಾ ಪ ಪತಿಯನು ನೀಗಿದ ಸತಿಮಾದಮ್ಮನು ಸುತನಿಂ ಬದುಕುವೆನೆಂದೀ ಊರೊಳು ಅತಿ ತಿರಿತಂದೋವುತಲಿದ್ದಳು ಸುತ ಅಚ್ಯುತ ಸಲಹಯ್ಯಾ 1 ಉರಿಯೊಳು ಬಿದ್ದಂತೊರಲಿ ಪೊರಲಿ ವೋ ಹರಿ ಹರಿ ಹರಿ ಯೆಂದುರುಳಿ ಬಡಿದುಕೊಳ್ಳೇ ದುರಿಯಶ ವೊಡೆಯಗೆ ಬರುವುದೆಂದು ನರ ಹರಿ ರಕ್ಷಿಪನೆಂದೊರೆದೆನು ಹರಿಯೆ 2 ಸತ್ತಮಗನ ನೀ ತಂದಿತ್ತುದಿಲ್ಲವೇ ಹೇ ಕತರ್ುೃವೆ ಸಾಂದೀಪೋತ್ತಮನಿಗೆ ಅಂದು ಉತ್ತರೆಯೊಡಲೊಳು ಅತ್ತು ಶಿಶುವು ಸಾ ವುತ್ತಿರಲುಳುಹಿದೆ ಚಿತ್ತಜನಯ್ಯಾ 3 ಇರಿದಪಮೃತ್ಯು ಪೊತ್ತಿರಿದಪವಾದವು ಉರುಳಿದೆ ನೋಡುತ್ತಿರುವರೆ ಸುಮ್ಮನೆ ಅರಿಯದಂತಿರ್ದಡೆ ಪರಿಪಾಲಿಪರಾರು ವರಮೃತ್ಯುಂಜಯ ಕರುಣಾಕರನೇ 4 ಮರಣವನೈದಿದ ತರಳ ನಂಜುಂಡನ ಕರುಣಿಸದಿರ್ದಡೆ ಶಿರವನರಿದು ನಾ ಚರಣದೊಳಿಡುವೆನು ದುರಿತಬಾಹುದು ನಿನ ಗರಿಯದೆ ವೈಕುಂಠವಿಠಲ ಚೆನ್ನಿಗನೇ 5
--------------
ಬೇಲೂರು ವೈಕುಂಠದಾಸರು
2. ಶನೀಶ್ವರ ದಂಡಕ ಮಾಸ ಮಾನಿನಿ ಒಡಲು ಹಿಂಡು ನೆಟ್ಟನೆ ಹಗೇವದಲ್ಲಿದ್ದ ನಿಜಧಾನ್ಯ ಪಟ್ಟೆಂದು ಚಲಿಪುದು ಪರಿಪರಿಯ ವಸನಗಳು ಇಟ್ಟಲ್ಲಿ ನೆಲೆಸಿಹವಾಗಿಕಾಣಿಸದು ಅಟ್ಟೀವಹುಲಿಕರಡಿಉರಿಬಿಸಿಲು ಘನವಾಗಿ ಮಟ್ಟ ಮಧ್ಯಾಹ್ನದಲಿ ನೀರಡಿಸಿ ಕುಳಿತಿರಲು ಆರಿ[ಹ] ರೈ[ಕಾ]ವರಿಲ್ಲೆಂದು ಸಾರಸಂ [ಬಡುತ] ಕಾಡಿ [ಮೊರೆ]ಯಿಡೆ ನಿನ್ನ ಮೋಡಿ [ಮೆರೆವುದು] ಜರ್ಝರಿ ಭೂತ[ಂಗಳೆಲ್ಲಂ] ಬಿಟ್ಟು ಈ ದಂಡಕಂ ಹನ್ನೊಂದು ಬಾರಿ ಶನಿವಾರವೈದರಲಿ ಪಠಿಪರ್ಗೆ ಹನ್ನೊಂದನೆ ರಾಶಿಯೊಳಿರ್ದ ಫಲವನಿತ್ತು ಚೆಲುವ ವೇಲಾಪುರದ ವೈಕುಂಠ ವಿಠಲನ ಭಕ್ತನೆಂದೆನಿಸಿ ನಿನ್ನ ಪೆತ್ತ ಮಾತೆಯ ಪೆಸರನೆನಿತ ಧನ್ಯರಂ ಮಾಡಿಸದೆ ಅನ್ಯಾಯ[ಹಂ] ಕಾರಗಳಿಗಂಜಿ ನೀ ಬಿಡದೆ ನಿನ್ನ ಮನಬಂದ ರೀತಿಯಲಿ ಬಾಧಿಸದೈಯಾ ಸನ್ಮುನಿವಂದ್ಯ ಸರ್ವೇಶ್ವರಾನಂದ ಸಂಚಾರಿರವಿಸೂನು ಯಮ ಸಹೋದರ ವೀರಧರ್ಮ ಪರಿಪಾಲನೆ ಶನೈಶ್ವರ ಮಹಾರಾಯನೆ ತ್ರಾಹಿ ತ್ರಾಹಿ ನಮಸ್ತೆ ನಮಸ್ತೆ ನಮಃ ಶ್ರೀ ಕೃಷ್ಣಾರ್ಪಣಮಸ್ತುಃ
--------------
ಬೇಲೂರು ವೈಕುಂಠದಾಸರು
ಅಂಜ್ಯಾಕೆ ಎಲೆ ಮನುಜ ಭಯವಿಲ್ಲ ನಿನಗೆ ಕಂಜನಾಭನ ಧ್ಯಾನವಿರಲಿ ಮನದೊಳಗೆ ಪ ತಾಪತ್ರ ಬಂದೊದಗೆ ಪಾಂಡುಪ್ರಿಯನೆಂದೆನ್ನು ಶಾಪವೊದಗಲು ಅಂಬರೀಷನ್ವರದೆನಲೋ ಭೂಪತಿಗಳು ಮುನಿಯೆ ಪಾಂಚಾಲಿಪಾಲಕನೆನ್ನು ಆಪಾರ ಕಷ್ಟದಲಿ ಕರಿವರದೆನೆನಲೋ 1 ಮಾತೃ ವೈರ್ಯಾದರೆ ಧ್ರುವಪಾಲನೆನಲೋ ಭ್ರಾತೃವೈರ್ಯಾದರೆ ಸುಗ್ರೀವಸಖನೆನ್ನು ಖಾತ್ರಿಯಿಂ ಸತತದಿ ಸೂತ್ರಧಾರೆನಲೋ 2 ಸೆರೆಮನೆಯು ಒದಗಿರಲು ಪಿತಮಾತೆರ್ವರದೆನ್ನು ಧುರದೊಳಗೆ ಪೊಕ್ಕಿರಲು ನರಸಹಾಯನೆನಲೋ ಬರಿ ಮಳೆಯೊಳ್ಸಿಕ್ಕಿರಲು ಗಿರಿಯೆತ್ತಿದವನೆನ್ನು ದುರುಳರ್ಹಾವಳಿಯೊಳಗೆ ದನುಜಹರನೆನಲೋ 3 ಕವಿಯಲು ವೈರಿಗಳು ಕಂಸಮರ್ದನನೆನ್ನು ಶಿವನ ಕಾಯ್ದವನೆನ್ನು ಉರಿಹತ್ತಿಸುಡಲು ಭವಿಜನುಮ ಬಂದಿರಲು ಭವರೋಗಹರನೆನ್ನು ದಿವನಿಶೆಯು ಎಡೆಬಿಡದೆ ಭಯದೂರನೆನಲೋ 4 ಸ್ಥೂಲಭ್ರಷ್ಟನಾದರೆ ಬಲಿದ್ವಾರಪಾಲಕನೆನ್ನು ಕುಲಭ್ರಷ್ಟನಾದರಜಮಿಳನ್ವರದನೆನಲೋ ಇಳೆಮೂರು ಸಂರಕ್ಷ ಚೆಲುವ ಶ್ರೀರಾಮನಂ ಹಲವು ವಿಧದಲಿ ಭಜಿಸಿ ಫಲಗಳಿಸು ಬಿಡದೆ 5
--------------
ರಾಮದಾಸರು
ಅರೋಗಣೆಯ ಮಾಡೊ ಅಂಜನಾದ್ರಿಯ ವಾಸ ಆಲಸ್ಯವೇತಕೋ ಆಯಿತು ವೆಂಕಟೇಶ ಪ ತಳಿಗೆಯ ತೊಳೆದಿಟ್ಟು ಸುಳಿಬಾಳೆ ಎಲೆಯಿಕ್ಕಿ ನಳಿನಲೋಚನೆಯರುಗಳಿಂದ ಅಭಿಘರಿಸಿ ಎಳೆಯ ಮಾವಿನ ಮಿಡಿಯು ಉಪ್ಪು ಬೇವಿನ ಸೊಪ್ಪು ಹುಳಿಗೂಡಿ ಅರೆದಿಟ್ಟ ಶುಂಠಿ ಕಡಲೆ ಹಂಬೆ 1 ಕಣಿಲೆ ಕಂಚಿನಕಾಯಿ ಅಣಿಲೆ ಅಂಬಟನೆಲ್ಲಿ ಒಣಗಿದ ಮೆಣಸಿನ ಉರಿಯು ಉಪ್ಪಿನ ಹೆರೆಯು ಕಣುಮನಕ್ಕೊದಗಿಯೇ ಅಣಿಯಾಯಿತೆಡೆಯೊಳು 2 ಹೆರೆದ ತೆಂಗಿನಕಾಯ ಅರೆದ ಸಾಸಿವೆಯಿಕ್ಕಿ ಅರೆದು ಬೇಯ್ಸಿದ ಓಗರದೊಳು ಕಲಸಿಟ್ಟು ತರಿದ ಗುಳ್ಳದಕಾಯಿ ಹಾಗಲು ಕುಂಬಳಕಾಯಿ ಕೊರೆದ ಬಾಳೆಯಕಾಯಿ ಹುರಿದದೇ ತುಪ್ಪದಿ 3 ಸಣ್ಣಕ್ಕಿಯೋಗರವು ಬೆಣ್ಣೆಕಾಸಿದ ತುಪ್ಪ ಗಿಣ್ಣಲನೊರೆಹಾಲು ಸಣ್ಣ ಮೆಣಸು ಸಾರು ಅನ್ನ ಚಿತ್ರಾನ್ನವು ಮೊಸರನ್ನ ಹೆಸರ್ಹುಗ್ಗಿ ಉಣ್ಣಬಾರೆಲೋ ನೀನು ಇನ್ನು ತಡ ಬೇಡ 4 ಕೇಸಕ್ಕಿಯೋಗರವು ದೋಸೆ ಪಾಯಸವನ್ನು ಬೀಸು ಹಾರಿಗೆಯತಿರಸವು ಮಂಡಿಗೆಯು ಏಸು ಹೋಳಿಗೆ ಬೇಕೈಸನೀ ಉಣಲೇಳು 5 ಚಕ್ಕುಲಿ ಕರಜಿಯಕಾಯಿ ಮನೋಹರವು ಚೊಕ್ಕ ಬಿಳಿಯ ಬೇಳೆಸುಕ್ಕಿನುಂಡೆಯು ಕದಳಿ ರಸಾಯನವು ಇಕ್ಕಿಸಿಕೊಳ್ಳೊ ನೀ ಮಕ್ಕಳಾಟಿಕೆ ಬೇಡ 6 ಏಲಕ್ಕಿ ನಾಗರನಿಂಬೆ ಬೇವಿನಸೊಪ್ಪು ಮೇಲೆ ಒಗ್ಗರಿಸಿದ ನೀರು ಮಜ್ಜಿಗೆಯು ಹಾಲು ಮೊಸರು ಹಸಿಮಜ್ಜಿಗೆ ಸಹವಾಗಿ ಜಲವು ಮುಟ್ಟದ ಹಾಗೆ ಬೇರೆ ಬೇರಿರಿಸಿದೆ 7 ಗಾಯಿತ್ರಿ ಮಂತ್ರದಿಂ ತೋಯವ ಪ್ರೋಕ್ಷಿಸಿ ಬಾಯೊಳು ಪ್ರಣವವನು ಜಪಿಸಲಾಕ್ಷಣದಿ ರಾಯವೆಂಕಟಪತಿಯು ಆಪ್ಯಾಯನವ ಮಾಡಿ ದಾಯವಾಗಿತ್ತನು ಭಕ್ತಜನರಿಗೆಲ್ಲ 8 ಈ ರೀತಿಯಿಂದಲೆ ಆರೋಗಿಸುವುದೆಂದು ವಾರಿಜನಾಭನ ಸಾರಿ ವರ್ಣಿಸಲು ಮೋರೆಯ ಪ್ರಸಾದ ಕರೆದು ಇವನು ನಮ್ಮ ವರಾಹತಿಮ್ಮಪ್ಪನೊಂದುಗೂಡಿರುವನು 9
--------------
ವರಹತಿಮ್ಮಪ್ಪ
ಅವತರಿಸಿದ ನೃಸಿಂಹ | ಶ್ರೀ ಹರಿ ಪರಬ್ರಹ್ಮ ಪ ತವಕದಿ ಭೂ ಭಾರವನಿಳುಹುವುದಕೆ ಅ.ಪ ನೊಡನೆ ಘುಡುಘುಡಿಸಿ ಕಿಡಿಗಳುದುರೆ ಕೋಟಿ ಸಿಡಿಲಿದೆನ್ನುತ ಕಿವುಡುಗೊಳೆ ಲೋಕವು 1 ತುಂಬಿ ಪೊಗೆ ಸುತ್ತಿ ಉರಿಯಲು ಶ ತಾನಂದಾದ್ಯಮರರು ಕರಗಳ ಮುಗಿ ದಾನತರಾಗಿ ನಮೋನಮೋಯೆನಲ್ 2 ಚಿಟಿಲು ಚಿಟಿಲು ನಿರ್ ನಿಟಿಲು ಶಬ್ದದಿ ಕ್ತಟಗಳೊಡೆಯೆ ಲಟಕಟಿಸೆ ಭುವನಚಯ ಹಟಯೋಗದ ಮುನಿಕಟಕವು ಗುರುರಾಮ ವಿಠಲನ ಪೊಗಳುತ ಮಿಟಿಮಿಟಿ ನೋಡಲು 3
--------------
ಗುರುರಾಮವಿಠಲ
ಆ ಮಹಿಮಗೆ ಮಂಗಳಾರತಿಯ ಎತ್ತಿದರು 1 ಮತ್ಸ್ಯಾವತಾರ ಶ್ರೀಹರಿಯ ಅಕ್ಷಗಂಗಳದೊಂದು ಬೆಳಕು ನಿತ್ಯವೇದವ ತಂದ ಬೆಳಕು ತುಂಬಿತು ದ್ವಾರಾವತಿಗೆ 2 ಕೂರ್ಮಾವತಾರ ಶ್ರೀಹರಿಯ ಹೇಮಗಿರಿಯ ತಂದ ಬೆಳಕು ಬಲ್ಲಿದ ಕಾಯನ್ನ ಬೆಳಕು ತುಂಬಿತು ದ್ವಾರಾವತಿಗೆ 3 ವರಾಹಾವತಾರ ಶ್ರೀಹರಿಯ ಹೊಳೆದ ಕೋರೆದಾಡೆಯ ಬೆಳಕು ಧಾರುಣಿಯ ನೆಗವಿದ ಬೆಳಕು ತುಂಬಿತು ದ್ವಾರಾವತಿಗೆ 4 ನರಮೃಗರೂಪ ಶ್ರೀಹರಿಯ ಮೆರೆವೊ ನಖದ ಬೆಳಕು ಉರಿಗಣ್ಣು ಜ್ವಾಲೆಯ ಬೆಳಕು ತುಂಬಿತು ದ್ವಾರಾವತಿಗೆ 5 ವಾಮನಾವತಾರ ಶ್ರೀಹರಿಯ ಭೂಮಿಯನಳೆದೊಂದು ಬೆಳಕು ಬಾಲಕ ತನಯನ ಬೆಳಕು ತುಂಬಿತು ದ್ವಾರಾವತಿಗೆ 6 ಭಾರ್ಗವಾವತಾರ ಶ್ರೀಹರಿಯ ಮೆರೆÉವೊ ಬಲುಭುಜದೊಂದು ಬೆಳಕು ದುರುಳ ಕ್ಷತ್ರೆÉೀರ ಗೆದ್ದ ಬೆಳಕು ತುಂಬಿತು ದ್ವಾರಾವತಿಗೆ 7 ದಶರಥತನಯ ಶ್ರೀಹರಿಯ ಎಸೆವೊ ಬಿಲ್ಲುಬಾಣದ ಬೆಳಕು ಶಶಿವದನೆಯ ತಂದ ಬೆಳಕು ತುಂಬಿತು ದ್ವಾರಾವತಿಗೆ 8 ಗೋಪಿ ಮುದ್ದಾಡಿದ ಬೆಳಕು ದೇವಕ್ಕಿತನಯನ ಬೆಳಕು ತುಂಬಿತು ದ್ವಾರಾವತಿಗೆ 9 ಬೌದ್ಧಾವತಾರ ಶ್ರೀಹರಿಯ ಬುದ್ಧಿಪಲ್ಲಟದೊಂದು ಬೆಳಕು ರುದ್ರನ್ನ ಗೆಲಿದೊಂದು ಬೆಳಕು ತುಂಬಿತು ದ್ವಾರಾವತಿಗೆ 10 ಕಲ್ಕ್ಯವತಾರ ಶ್ರೀಹರಿಯ ಹೊಳೆವಾಖಂಡದೊಂದು ಬೆಳಕು ಗುರು ಹಯವದನನ್ನ ಬೆಳಕು ತುಂಬಿತು ದ್ವಾರಾವತಿಗೆ 11
--------------
ವಾದಿರಾಜ
ಆ ಹರಿ ನಾನೆಂಬ ಕುಮತವ ಸುಡು ಸುಡು ದೇಹಿಯುಣವುಣದವನ ನೋಡುತಲಿಹ ಪ. ನೀರೊಳು ಬಹುಕಾಲ ಪೊಕ್ಕು ಮುಳುಗಿದವ ಭಾರದ ಗಿರಿಯನುದ್ಧರಿಸಿರುವ ಈರೇಳು ಲೋಕದ ಹೊರೆಯನೆಲ್ಲವ ಹೊತ್ತು ಹಾರುವ ಹಕ್ಕಿಯ ಹೆಗಲನೇರಿ ಬಹ 1 ಜಲಚರ ಸ್ಥಲಚರ ಯಾಚಕನೆನಿಸಿ ಮ- ತ್ತಲಸದೆ ಮಾತೃವಧೆಯ ಮಾಡಿದ ಛಲದಿಂದಸುರರ ಕೊಂದು ಸಿಂಧುವ ದಾಟಿ ಬಲುಗಳ್ಳನೆನಿಸಿ ಮಾವನ ಸೀಳ್ದವ 2 ಸತಿಯರ ವ್ರತವ ಕೆಡಿಸಿ ಕುಮಾರ್ಗವ ತೋರಿ ಕ್ಷಿತಿಯೊಳು ಯುಗದ ರಾಯರ ಕೊಲ್ಲುವ ಶ್ರುತಿನಿಷಿದ್ಧಪಥದಿ ನಡೆದು ಪಾಪಕಂಜದೆ ಯತಿಶ್ರುತಿತತಿಗಳೆಲ್ಲರ ಹೊಂದಿದ 3 ಸಾವಿರ ಫಣದ ಫಣಿಯೊಳ್ಕಟ್ಟುವಡೆದಾಗ ಹಾವಿನ ಮೈಮೇಲೆ ಒರಗಿದವ ಜೀವರೆಲ್ಲರ ಕೊಂದು ಧರೆಯನೆಲ್ಲವ ನುಂಗಿ ಸ್ಥಾವರದೊಂದೆಲೆಯನೆ ಪೊಂದಿಹ 4 ಉರಿವ ಕಿಚ್ಚ ನುಂಗಿ ಜ್ವಲಿಸುವಗ್ನಿಯೊಳು ಸ್ಥಿರವಾದ ಪ್ರಬಲದೈತ್ಯರ ವೈರವ ಸಿರಿ ಹಯವದನನ್ನ ದಾಸರ ದಾಸನು ಚರಣಸೇವಕನೆಂಬ ಮತವೆ ಲೇಸು 5
--------------
ವಾದಿರಾಜ
ಆರೂ ಸಮಯಕ್ಕೊದಗಲಿಲ್ಲಮೋರೆ ನೋಡುತ ಸುಮ್ಮನಿಹರೆಲ್ಲ ಪ ಮಗಳು ಮಹಲಕುಮಿ ಮೊಮ್ಮಗನು ಸರಸಿಜಭವನುಖಗರಾಜವಾಹನನು ತನ್ನಳಿಯನುಅಗಜನಂದು ತನ್ನೊಡಲೊಳಿಂಬಿಟ್ಟು ಮೂ-ರ್ಬೊಗಸೆ ಮಾಡಿದ ಮುನಿಯ ಬಿಡಿಸಲಿಲ್ಲ1 ಶ್ರೀದೇವಿ ಭೂದೇವಿ ಮಾತೆಯರು ತಾವಿರಲುಯಾದವರಾಯ ಮೋಹದ ತಂದೆಯುವೇದಮುಖದಣ್ಣನಿರೆ ಉರಿ ನಯನದಿಂದ ಸ್ಮರಬೂದಿಯಾಗುವಾಗ ಬಿಡಿಸಲಿಲ್ಲವೇಕೆ2 ಬೊಮ್ಮ ಮನ್ಮಥರಿರಲಾಗಿಕ್ಷಿತಿಯೊಳಗೆ ಶಶಿ ಕ್ಷೀಣವಾಗುವ ಸಮಯದಿ 3 ತೆತ್ತೀಸ ಕೋಟಿ ದೇವರ್ಕಳು ತಾವಿರಲುಒತ್ತಿನಲಿ ಇಂದ್ರ ಉಪೇಂದ್ರರಿರಲುಮತ್ತೆ ಪಾರ್ವತಿ ಪುತ್ರ ವೀರೇಶ ದಕ್ಷನನೆತ್ತಿ ಹರಿಗಡಿವಾಗ ನೋಡುತಿಹರೆಲ್ಲ 4 ಇಂಥಿಂಥ ದೊಡ್ಡವರು ಈ ಪಾಡು ಪಡಲಾಗಿಭ್ರಾಂತ ಮನುಜರಿಗೆ ಪೇಳಲಿನ್ನೆಷ್ಟುಕಂತುಪಿತ ಕಾಗಿನೆಲೆಯಾದಿಕೇಶವನಸಂತೋಷದಿಂ ನೆನೆದು ಸುಖಿಯಾಗೊ ಮನುಜ5
--------------
ಕನಕದಾಸ
ಆವಬಂಧುಗಳೆಲೋ ಜೀವ ವಿಚಾರಿಸೋ ಕಾವ ಸಮರ್ಥದೇವ ಹರಿಯಲ್ಲದೆ ಪ ಮಾಯಮೋಹವ ನೀಗಿ ಕಾಯಶುದ್ಧಲಿ ಮನ ಪಾದ ದಿವ್ಯಭಕ್ತಿಲಿ ಭಜಿಸೊ ಅ.ಪ ಜನನಿ ಬಂದಹಳೆಂಬೆ ಜನನಿರ್ದಳಾಧ್ರುವಗೆ ಜನಕನ ತೊಡೆಯಿಂದ ಕನಿಕರಿಲ್ಲದೆ ಮಲ- ಜನನಿ ನೂಕಲು ಕಂದ ವನಕ್ಹೊರಟು ಪೋಗಲು ಜನನಿ ಸಲಹಿದಳೆನೋ ವನಜಾಕ್ಷನಲ್ಲದೆ 1 ಸತಿಹಿತದವಳೆನುವೆ ಸತಿಯಿರ್ದು ಸುಗ್ರೀವ ಖತಿಪಟ್ಟಾಗ್ರಜನಿಂ ವ್ಯಥೆಯಿಂದುಸುರ ಬಿಡಲು ಸತಿಬಂದು ಪತಿಯನ್ನು ಹಿತದಿ ಕರೆದೊಯ್ದಳೆ ಹಿತದ ಬಂಧುಗಳಿವರೇ ಕ್ಷಿತಿಪತಿಯಲ್ಲದೆ 2 ಸುತರ ಬಲವಿಹುದೆನುವೆ ಸುತರತಿ ಬಲಾನ್ವಿತರು ಜಿತಮಾರನಿಗಿರೆ ಉರಿಹಸ್ತ ವರವಿತ್ತು ಗತಿದೋರದಿರುತಿರೆ ಸುತರು ನೆರವಾದರೆ ಗತಿ ರಮಾಪತಿಯೆನೆ ಹಿತದಿಂ ಮೊರೆಕಾಯ್ದ 3 ಬಂಧುಗಳತಿಶಯದ ವೃಂದನೆರೆದು ಇರ ಲಂದು ಕರಿಮಕರಿಕೆಯಿಂದ ಬಂಧನ ಪಡಲ ವಂದು ಬೆಂಬಲಗೊಟ್ಟು ಬಂಧನವ ಬಿಡಿಸಿದುವೆ ತಂದೆಯಾ ಶ್ರಿ ಮುಕ್ಕುಂದನಲ್ಲದಲೆ 4 ಹರಿಯೆ ಪರದೈವವೋ ಹರಿಯೆ ಪರಲೋಕವು ಹರಿಯೇ ಸ್ಥಿರಸುಖವು ಹರಿಯೆ ವರ ಮುಕ್ತಿಯೋ ಹರಿಯೆಂದು ಅಜಮಿಳ ನರಕಯಾತನೆ ಗೆದ್ದ ಪಾದ 5
--------------
ರಾಮದಾಸರು