ಶ್ರೀ ಜಗನ್ನಾಥತೀರ್ಥರ ದಿವ್ಯ ಮಹಿಮೆಯನು
ರಾಜಿಸುವ ಹೈಮಲಿಪಿಯಲ್ಲಿ ಬರೆಯಲಿ ಬೇಕು ಪ
ಸುಜನ ಸುರಭೂಜರಾಗಿಹ ಮಹಾ
ಕರ ಸಂಜಾತ ಅ.ಪ
ಉದ್ಭವಿಸಿದರು ಗಾಲವರು ಜಗದೊಳೆಂಬಂಶ
ವೇದ್ಯವಾಯಿತು ಆಪ್ತಜನವೃಂದಕೆ
ಮಧ್ವಮತ ತತ್ವಗಳನುದ್ಧಾರವನೆಗೈದ
ದಿಗ್ಧಂತಿಗಳತಿ ಪ್ರಸಿದ್ಧ ಸ್ಥಾನವ ಪಡೆದ 1
ಸಕಲ ಶಾಸ್ತ್ರಾರ್ಥ ನಿರ್ಣಯಗೈವ ಪರಸೂತ್ರ
ನಿಕರಗಳಿಗಲವಬೋಧರ ಭಾಷ್ಯವ
ಸುಖದಿಂದಲರಿಯಲುಪಕೃತಿಗೈದ ಯತಿಕುಲ
ತಿಲಕ ಭಾಷ್ಯಾದೀಪಿಕಾಚಾರ್ಯರೆಂದತಿ ಖ್ಯಾತ 2
ಸರ್ವಗುಣ ಗುಣಪೂರ್ಣ ಸರ್ವತ್ರ ವ್ಯಾಪ್ತ ಹರಿ
ಸರ್ವಭಕ್ತ ಪ್ರಸನ್ನನೆಂದರುಹಲು
ಉರ್ವನುಗ್ರಹ ಪಡೆದ ಸರ್ವತಂತ್ರ ಸ್ವತಂತ್ರ 3