ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛೀ ಹಳಿ ಥೂ ಖೋಡಿ ಪಾಪಿ ಮನವೆ, ನಿನ್ನ ಪ ಕುಹಕ ಬುದ್ಧಿಗಳೆಲ್ಲ ಬಿಡು ಕಂಡ್ಯ ಮನವೆಅ.ಪ ಬಣ್ಣದ ಬೀಸಣೆಗ್ಯಂತೆ ಹೆಣ್ಣು ತಿರುಗೋದ ಕಂಡು ಕಣ್ಣು ಸನ್ನೆಯಮಾಡಿ ಕೈ ಹೊನ್ನು ತೋರಿ ತಣ್ಣೀರು ಹೊಯಿದ ಹೊಸ ಸುಣ್ಣದಂತೆ ಕುದಿದು ನಿನ್ನ ಕಣ್ಣಿಗೆ ಮಣ್ಣು ಚೆಲ್ಲಿಕೊಂಬರೆ ಮನವೆ 1 ನೆರೆಹೊರೆ ಮನೆಗಳಲಿ ಪ್ರಸ್ಥವನ್ನು ಮಾಡಿದರೆ ಕರೆಯದೆಲೆ ಮೊದಲ್ಹೋಗಿ ಹಾಳು ಹರಟೆ ಬಡಿಗಂಟು ಸುದ್ದಿ ನೂರಾರು ಹೇಳಿ ಅವರ ಹಿರಿಯ ಮಗನಂತೆ ಉದರವ ಪೊರೆವೆ ಮನವೆ 2 ಉತ್ತಮಾನ್ನವ ನೀಡೆ ಮುಸುರೆ ಬಯಸುವಂತೆ ಚಿತ್ತದೊಲ್ಲಭನ ಸಂಗಡದಿ ನಲಿದು ಮತ್ತೆ ಉಪರತಿಗೆ ಪರಪುರುಷನ ಬಯಸುವ ತೊತ್ತು ಬುದ್ಧಿಯನೆಲ್ಲ ಬಿಡು ಕಂಡ್ಯ ಮನವೆ 3 ಪಗಡೆ ಚದುರಂಗ ಕವಡೆಯನಾಡÀ ಕರೆದರೆ ನಿಗುರುವುವು ಕರ್ಣಗಳು ಮೊಚ್ಚೆಯಂತೆ ಜಗದೀಶನ ದಿನದಿ ಜಾಗರಕೆ ಕರೆದರೆ ಮುಗಿಲ್ಹರಿದು ಬಿದ್ದಂತೆ ಧರೆಗಿಳಿವೆ ಮನವೆ 4 ವಾಸುದೇವನ ಪೂಜೆಯೊಮ್ಮೆ ಮಾಡೆಂದರೆ ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ಆ ಸಮಯದೊಳಗೊಬ್ಬ ಕಾಸು ಕೊಟ್ಟೇನೆನಲು ದಾಸಿ ಮಗನಂತೆ ಬೆನ್ನಟ್ಟಿ ಪೋದೆ ಮನವೆ 5 ಕುಳ್ಳಿರುವ ಸ್ಥಳವೆಷ್ಟು ಕೂಳು ತಿಂಬುವುದೆಷ್ಟು ಉಳ್ಳನಕ ಕೀರ್ತಿಯಪಕೀರ್ತಿಯೆಷ್ಟು ಗುಳ್ಳೆಯಂದದ ದೇಹನೆಚ್ಚಿ ನೀ ಕೆಡಬೇಡ ಉಳ್ಳಿಪÀರೆ ಸುಲಿದರೆ ಹುರುಳಿಲ್ಲ ಮನವೆ 6 ಬಿಂದು ಮಾತ್ರವೊ ಸುಖವು ದು:ಖ ಪರ್ವತದಷ್ಟು ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ಎಂದೆಂದು ಸಿರಿಯರಸ ವಿಜಯವಿಠ್ಠಲನಂಘ್ರಿ ಕುಂದದೆ ಹೃದಯದೊಳು ನೆನೆಕಂಡ್ಯ ಮನವೆ 7
--------------
ವಿಜಯದಾಸ