ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಶ್ರೀಕರಾರ್ಚಿತ ರಂಗನಾಥ ಜಗದೇಕನಾಥ ಪ. ಪಾಕಶಾಸನವಂದ್ಯ ಪರಮ ಕಾರುಣ್ಯನಿಧಿ ಜೋಕೆಯಿಂ ಭಕ್ತರನು ರಕ್ಷಿಸಲು ಬಂದೆಯೊ ಅ.ಪ. ಸಿರಿ ಆಲದೆಲೆಯ ಮೇ- ಲೊಂದು ಬೆರಳನೆ ಚೀಪುತ ಮುಂದೆ ಶೇಷಶಯನನಾಗಿ ಬ್ರಹ್ಮನ ಪಡೆದು ಮಂದಹಾಸದಿ ನಲಿಯುತ ಇಂದಿರೆ ಸಹಿತಲಿರೆ ಭಕ್ತರೆಲ್ಲರು ಆಗ ನೋಡಲಿಲ್ಲೆಂದೆನುತ ಇಂದು ಈ ನಾಗರಾಜನ ಮಂಚವನೆ ಏರಿ ಸಿಂಧುಶಯನನೆ ಮಲಗಿದ್ಯಾ ಸ್ವಾಮಿ 1 ಅಜಗೆ ವೇದವನಿತ್ತು ಅಸುರನ್ನ ಕೊಂದು ನೀ ಭುಜಗಶಯನನೆ ಮಲಗಿದ್ಯಾ ಋಜುಗಣವಂದಿತನೆ ಬೆನ್ನಲಿ ಗಿರಿಪೊತ್ತ ಆಯಾಸದಿಂ ಮಲಗಿದ್ಯಾ ದ್ವಿಜಧ್ವಜನೆ ಭೂಮಿಯನು ಮೇಲೆತ್ತಿ ತಂದು ಸಾಕಾಗಿಲ್ಲಿ ಶಯನಿಸಿದೆಯಾ ಭಜಿಸಿದ ಬಾಲಕನ ಪಿತನೊಡನೆ ಕಾದಾಡಿ ಬಳಲಿ ನೀ ಪವಡಿಸಿದೆಯಾ ಸ್ವಾಮಿ 2 ಇಂದ್ರ ಪದವಿಗೆ ಬಂದ ಬಲೀಂದ್ರನ ನೆಲಕೊತ್ತಿ ಬಂದಿಲ್ಲಿ ಮಲಗಿಪ್ಪೆಯಾ ಕೊಂದು ಜನನಿಯ ಚಿಂತೆಯಿಂದ ಮನದಿನೊಂದು ಬಂದಿಲ್ಲಿ ಮಲಗಿಪ್ಪೆಯಾ ತಂದೆ ತಾಯಿ ಆಜ್ಞೆಯಿಂದ ಅಡವಿಯ ಅಲೆದು ಬಂದಿಲ್ಲಿ ಮಲಗಿಪ್ಪೆಯಾ ಮಂದರೋದ್ಧರ ಶ್ರೀಶ ಮಾವನ್ನ ಕೊಂದು ನೀ ಬಂದಿಲ್ಲಿ ಪವಡಿಸಿದೆಯಾ ಸ್ವಾಮಿ 3 ನಾರಿಯರ ವ್ರತ ಕೆಡಿಸಿ ನಾಚಿಕೆಯಿಂ ಬಂದು ಏರಿ ಮಂಚವÀ ಮಲಗಿದ್ಯಾ ಏರಿ ಕುದುರೆಯನು ದುಷ್ಟರ ಶಿರವ ತರಿಯುತ್ತ ಸೇರಿ ಶೇಷನ ಮಲಗಿದ್ಯಾ ಬಾರಿ ಬಾರಿಗೆ ಇಂಥ ಕಾರ್ಯಗಳ ಮಾಡಿಸಿ ಬಳಲಿಲ್ಲಿ ಮಲಗಿಪ್ಪೆಯಾ ನಾರದಾದ್ಯರ ಗಾನ ಕೇಳುತಾನಂದದಿಂ ನಿದ್ರೆಗೈಯುತ ಮಲಗಿದ್ಯಾ ಸ್ವಾಮಿ 4 ಭಕ್ತ್ರರಾಡುವ ಸಲಿಗೆ ಬಿನ್ನಪಕೆ ಬ್ಯಾಸತ್ತು ಯುಕ್ತಿಯಿಂ ಪವಡಿಸಿದೆಯಾ ಮುಕ್ತರ ಸ್ತುತಿಗೆ ನಿದ್ರೆಯು ಬಾರದೆಂತೆಂದು ಮುಕ್ತೇಶ ಇಲ್ಲಿ ಮಲಗಿದೆಯಾ ಎತ್ತ ನೋಡಲು ಮಾರ್ಗಬಿಡಳು ಕಾವೇರಿ ಎಂದು ಸೋತಿಲ್ಲಿ ಮಲಗಿಪ್ಪೆಯಾ ಚಿತ್ತಜಾಪಿತ ಸ್ವಾಮಿ ಭಕ್ತರೆಬ್ಬಿಸಲೆಂದು ಚಿತ್ತದಲಿ ಇಪ್ಪದೇನೋ ದೇವ 5 ಅಸುರರ ಕಾಟ ವೆಗ್ಗಳವಾಗೆ ಬಂದಿಲ್ಲಿ ಅಡಗಿ ನೀ ಮಲಗಿಪ್ಪೆಯಾ ಬಿಸಜನಾಭನೆ ನಿನ್ನ ಬಗೆಯರಿತು ಎಬ್ಬಿಸುವ ಬಲವಂತರನ್ಯಾರೆಲೊ ಶಶಿವದನ ಭಕ್ತರನುದ್ಧರಿಸಲೋಸುಗದಿ ಬಂದಿಲ್ಲಿ ಮಲಗಿಪ್ಪೆಯಾ ಭವ ಬಂಧನವ ಪರಿಹರಿಸಿ ಘಸನಗೊಳಿಸದಲೆ ಕಾಯೊ ಜೀಯ 6 ಏಳು ಫಣೆಯ ಸರ್ಪನ ಮೇಲೆ ಮಲಗಿ ಏಳು ಕಣ್ದೆರದು ನೋಡೋ ತಾಳಲಾರೆನೊ ನಿನ್ನ ಸೇವೆಯಗಲಿದ ದುಃಖ ಏಳು ಮನ್ನಿಸಿ ಪಾಲಿಸೊ ವ್ಯಾಳಶಯನನೆ ನಿನ್ನ ಸೇವೆಯನು ಎನ್ನಿಂದ ಲೀಲೆಯಿಂ ಸ್ವೀಕರಿಸೆಲೊ ಭಾಳ ಬೇಡುವದೇನೊ ಗೋಪಾಲಕೃಷ್ಣವಿಠ್ಠಲ ಈ ವ್ಯಾಳೆ ಎನ್ನ ಸಲಹೊ ಸ್ವಾಮಿ 7
--------------
ಅಂಬಾಬಾಯಿ