ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ ನೀನೆ ಸದೋದಿತ ಸಹಕಾರ ನಿಜವಸ್ತು ನೀನೆ ಅಖಂಡಿತ ಗುಹ್ಯ ತಿಳಿಯದೊ ನಿನ್ನ ಸದ್ಗುರು ಸಮರ್ಥ 1 ಸೆರಗ ಸಿಲುಕದೆಂದು ತಿರುಗಿತು ವೇದ ಸರಸ್ವತಿ ಸ್ತುತಿಗೆ ತಾ ತೀರಲಿಲ್ಲ ಬೋಧ ವರಣಿಸಲಿಕ್ಕೆ ಶೇಷ ತಲೆಯು ಬಾಗಿದ ಮೊರೆ ಇಡುತಿಹುದೆಲ್ಲ ನಿನಗೆ ಗೋವಿಂದ 2 ಋಷಿಮುನಿಗಳಿಗೆ ತಾ ಪೆಸರೊಡೆಯದು ತುಸು ಕೊರತೆಲ್ಲ ತಾ ಪಸರಿಸಿಹ್ಯದು ಮಸಿ ಮಣ್ಣಾಯಿತು ಲೋಕ ಹೆಸರಿಗೆ ಬಂದು ದೆಸೆಗೆಟ್ಟಾಯಿತು ಬಹಳ ಉಸುರೊಡಿಯೆಂದು 3 ಮಾಡದ ಮಾಡಿತು ಲೋಕ ನೋಡೊ ನಿನಗಾಗಿ ಬಡದ ಭವಣೆಬಟ್ಟು ಹಿಡಿಯಲಿಕ್ಕೆ ಹೋಗಿ ಕೊಡಲಿಲ್ಲ ನಿಜಗುಟ್ಟು ಇವ್ಹನೀ ಅಡಗಿ ಯೋಗಿ 4 ಇದೆ ಮುಂದಣುವಾದ ನನ್ನದೇನು ಪಾಡು ಸಾಧಿಸಿ ಸದ್ಗುರು ಕೃಪೆ ನೀನೆ ದಂiÀiಮಾಡು ಒದಗಿ ಮಹಿಪತಿ ನೀ ದಯದಿಂದ ನೋಡು ಸದಮಲ ಸುಖವಾದ ಸುಧಾರಸವ ಕೊಡು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು