ಒಟ್ಟು 56 ಕಡೆಗಳಲ್ಲಿ , 32 ದಾಸರು , 55 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆಯರಸನ ಛಂದದಿಂದ ಭಜಿಸೋ | ಮನದಲಿ ನೀ ನಿಲಿಸೊ ಪ ಕುಂದನು ಎಣಿಸದೆ ಬಂದು ಕಾಯ್ವ ನಿನ್ನಾ |ನೆಂದು ಕಂದ ಬಲು ಘನ್ನಾ ಅ.ಪ. ಪಾದದ ಮೂಲವು | ಪಾತಾಲವು ಎಂದೂ | ಉಪರಿ ರಸಾತಲವೆಂದುಪಾದದ ಪರ್ವವು | ಮಹಾ ತಲಾಖ್ಯ ಲೋಕ | ಉಪರಿ ತಲಾತಲ ಲೋಕ ||ಸಾಧಿಸು ಜಂಘೆಗಳ್ | ದ್ವಯವೆ ಸುತಲ ಲೋಕ |ಚಿಂತಿಸಿ ಕಳೆ ಶೋಕ ||ಮೋದದ ಊರು ದ್ವಯ | ವಿತಲಾತಲವೆನ್ನೂ | ಮುಂದೆ ಸಾಗುತಲಿನ್ನು 1 ಭೂರಿ ಲಲಾಟವೆ | ತಪಸಿಗಳಾಸ್ಥಾನಾ | ಶಿರ ಬ್ರಹ್ಮನ ಸ್ಥಾನ 2 ಮುನ್ನ ಸೂಕ್ಷ್ಮ ಚಿಂ | ತನೆಯೇ ಬಲು ಕಷ್ಟ | ಎಂದೆನುತ ವಿಶಿಷ್ಟಘನ್ನ ಮಹಿಮ ಹರಿ | ತಾಳಿದ ಬೃಹದ್ರೂಪ | ಅದುವೆ ವಿರಾಟ್ರೂಪಾ ||ನಿನ್ನ ಬಿಂಬ ಗುರು | ಗೋವಿಂದ ವಿಠಲನ್ನ | ಮತ್ತೆ ಸ್ಥೂಲವನ್ನಾ ನನ್ನೆಯೆಂದೈಕ್ಯವೆ | ಚಿಂತಿಸೋದು ಮುನ್ನ | ಒಲಿವನು ಗುಣ ಪೂರ್ಣ 3
--------------
ಗುರುಗೋವಿಂದವಿಠಲರು
ಸರ್ವಾಂತರ್ಯಾಮಿ-ನೀನೇಸರಿ-ಸರ್ವಜ್ಞನು ಸ್ವಾಮೀ ಪ ಸರ್ವಕಾರಣ ಸರ್ವಾಧಾರನು ಸರ್ವಶರಿರೇಕ ಸರ್ವನಿಮಾಯಕ ಅ.ಪ. ಹರಿತನಯನಿಗಂದೂ ಸ್ವಶಕ್ತಿಯ ಹರಿಕೊಡುವನು ಬಂದು ಗುರಿಮಾಡಿದೆ ಹರಿ1 ಕಾಣಿಸುವನು ಎಂದೂ ಸಪ್ರಾಣರಮಾಡಿದೆ 2 ಮರುತನ ಸುತನೆಂದು ಧೃತರಾಷ್ಟ್ರನು ಕರದಪ್ಪುವನೆಂದು ಶರಣನಹರಣವನುಳಹಿದೆ 3 ಪಾಲನ ಖತಿಯೊಳಗೆ ಶರಧಿಯೊಳಾಲಯ ಮಾಡಿದೆ 4 ದುರುಳ ಪುಲಿಯು ಬಂದು ಕರದಖಡುಗದಿಂ-ಹರಿಯನು ಖಂಡಿಸಿ ಶರಣನ ಸಲಹಿದ ವರದವಿಠಲಹರಿ5
--------------
ಸರಗೂರು ವೆಂಕಟವರದಾರ್ಯರು
ಅಧ್ಯಾಯ ಮೂರು ಪೂತನಾ ಅಸುಹಾರಿಣಿ ನಮಃ ಪದ್ಯ ಪೊಡವಿಯಲಿ ಎಲ್ಲರಿಗೆ ಒಡಿಯನಾಗಿರುವಂಥ ಖಡು ಪಾಪಿ ಕಂಸಗೆ ಬಿಡದೆ ಪ್ರತಿವರ್ಷಕ್ಕೆ ಕೊಡತಕ್ಕ ಕಪ್ಪವನು ಕುಡಬೇಕು ಎಂತ್ಯೆಂದು ನಡದು ತಾ ಮಥುರೆಯಲಿ ಖಡುನಂದಗೋಪಾ| ಒಡಿಯನಪ್ಪಣಿಯಿಂದ ಗಡಬಡಿಸೆ ಪೂತನಿಯು ಹುಡುಗರನ್ನು ಹುಡುಕುತಲೆ ಬಡಿವಾರ ತೋರುತಲೆ ನÀಡದು ಬಂದುಳು ಹಾದಿ ಹಿಡಿದು ಗೋಕುಳಕೆ|| 1 ಧಡಿಯ ದಿವ್ಯಾಂಬರವು ಶಡಗರದಿ ಉಟ್ಟಿಹಳು ಕಿಡಿಯಂಥ ಕುಪ್ಪುಸವು ದೃಢ ಬಿಗಿದು ತೊಟ್ಟಿಹಳು| ಬಿಡÀದೆ ಸರ್ವಾಭರಣ ಜಡದಿಹಳು ತಾ ಮಿಂಚು ಹೊಡದಂತೆ ತೋರುವಳು ಉಡುರಾಜ ಮುಖಿಯು| ಎಡಬಾರಿ ದುರಬಿನಲಿ ದೃಢವಾಗಿ ಮಲ್ಲಿಗಿಯು ಮುಡಿದಿಹಳು ಉರದಲ್ಲಿ ದೃಢವಾದ ಕುಚವೆರಡು ನಡವುದಾ ಕಾಲಕ್ಕೆ ನಡಗುತಿಹವು 2 ಬಿಂಬೋಷ್ಟಿ ಮಾಯ ಅವಲಂಬಿಸುತ ಗೋಕುಲದ ತುಂಬ ಬೆಳಕವು ಮಾಡಿ ಜಂಭದಲಿ ಬರುತಿಹಳು ಗಂಭೀರಳಾಗಿ ತನಗುಂಭ ತಿಳಿಗುಡದೆ ಕುಚ ಕುಂಭಗಳವಳಗ ವಿಷ ತುಂಬಿಟ್ಟು ಕೊಂಡು ಅಂಬುಜಾಕ್ಷಿಯ ಕಂಡು ಸಂಭ್ರಮದಿ ಗೋಕುಲದ ಜಗದಂಬಿಯೊ ಎಂದೂ 3 ಮುಂದ ಆ ಪೂತನಿಯು ನಂದಗೋಪನ ಮನಿಗೆ ಬಂದು ದೇವೇಚ್ಛಿಯಲಿ ನಂದನಂದನನ ಕಣ್ಣಿಂದ ನೋಡಿದಳಾಗ ಛಂದದ್ಹಾಸಿಕೆಯಲಿ ಛಂದಾದ ಲೌಕೀಕದ ಕಂದನಂತೆ| ಮುಂದವನ ತೊಡಿಯ ಮ್ಯಾಲೆ ಛಂದಾಗಿ ಧರಿಸಿದಳು ಕಂದರ್ಪನೈಯನೆ ಕಂದನಾಗಿರುವನೆಂತ್ಯೆಂದು ತಿಳಿಯದೆ ನಿದ್ರಿ ಯಿಂದಿರುವ ಸರ್ಪ ಕರದಿಂದ್ಹಿಡಪರಿ ರಜ್ಜು ಎಂದುಬ್ಯಾಗೆ 4 ಶ್ರೀನಿವಾಸನ ಜನನಿ ಮೌನ ಹಿಡಿದಳು ಕಪಟತನ ತಿಳಿಯದೆ ಬುದ್ಧಿಹೀನ ಪೂತನಿಯು ಸ್ತನಪಾನ ಮಾಡಿಸಿದಳಾ ದಾನವಾರಿಗೆ ಅವನು ಪ್ರಾಣಸಹಿತಾಗಿ ವಿಷಪಾನ ಮಾಡಿದನು| ದ್ರೂಣನಾಗಿರುವವನ ಪಾಣಿಯಲಿ ಸಿಕ್ಕು ಗತಿಗಾಣದಲೆ ಉತ್ಕøಷ್ಟ ವಾಣಿಯಿಂದಲೆ ಒದರಿ ಭ್ರೂಣಹನನಕ ಬಹಳ ಜಾಣಿ ಎಂತ್ಯೆನಿಸುವಳು ಪ್ರಾಣ್ಹೋಗಿಬಿದ್ದಳಾ ಪ್ರಾಣಿ ಪೂತನಿಯು. ಪದ:ರಾಗ :ಶಂಕರಾಭರಣ ಅಟತಾಳ, ಸ್ವರಷಡ್ಜ ಬಿದ್ದಾಳು ಪ್ರಾಣ ಹೋಗಿ ಪೂತನಿ ಜನ್ಮಗೆದ್ದಾಳು ಬಾಲಕ ಘಾತಿನಿ| ಬಂತುದೆವಾಯಿತು ಮತ್ತಲ್ಲೆ|| 1 ಗಿರಿಯಂತೆ ಆ ದೇಹ ಇರುವೋದು ಆರು ಹರದಾರಿ ಪರಿಯಂತೆ ಬಿದ್ದಿಹದು| ಕರಚರಣಗಳ್ಹರವಿ ಇರವದು ಅಲ್ಲಿ ಇರವೂ ವೃಕ್ಷಗಳೆಲ್ಲಾ ಮುರದಿಹದು|| 2 ಎರಡು ಕಣ್ಣುಗಳು| ದಾಡುವರಲ್ಲೆ ನದಿಗಳು|| 3 ಭಾವಿಯಪರಿ ತೋರುವುದು ಹೇಳುವದಿನ್ನು ಉಳದಿಹುದು ದಾನವಾರಿಯಕೊಂಡು ಕರದಿಂದ ವಿಷಪಾನ ಮಾಡಿಸಿದ ಕಾರಣಿದಿಂದ | ಹಾನಿತನಗೆ ಬಂತು ತ್ವರದಿಂದ| ಅಚುತಾನಂತಾದ್ರೀಶ ಕರದಿಂದ|5 ಪದ್ಯ ಬಾಲಕಾಕಿಯ ಎದಿಯಮ್ಯಾಲೆ ನಿರ್ಭಯದಿಂದ ಲೀತಿಯನ ಮಾಡುತಿಹ ಬಾಲಿಯರು ಬ್ಯಾಗ ಆ ಬಾಲಕನ ಕರಕೊಂಡು ಮ್ಯಾಲೆ ಗೋಮೂತ್ರದಲಿ ಬಾಲಗ್ಯರದರು ಅವರು ಭಾಳ ಸಂಭ್ರಮದಿ| ಕಾಲ ಆ ಕಾಲಕಿಟ್ಟರು ನಂದ ಬಾಲಕರನೆನಿಸುವ ಜಗತ್ಪಾಲಕಗ ರಕ್ಷಾ|| 1 ಬಾಲ ನಿನ್ನನ್ನು ಜಗತ್ಪಾಲಕನು ರಕ್ಷಿಸಲಿ| ಪದಾಗಳು ಆ ಮೂರು ಪಾದದವ ರಕ್ಷಿಸುತಾ ಜಂಘವನು ಮತ್ತ ಶ್ರೀರಂಗ ತಾ ರಕ್ಷಿಸಲಿ ಜಾನುವನು ರಕ್ಷಿಸಿ ಜಾನ್ಹವಿಜನಕಾ | ಉರುಗಳಾ ರಕ್ಷಿಸಲಿ ಉರ್ವೀಶ ಹರಿತಾನು ನಾಭಿಯನು ಶ್ರೀಪದ್ಮನಾಭ ಸಂರಕ್ಷಿಸಲಿ ಹೃದಯಗತ ಶ್ರೀ ಹರಿಯು ಭುಜಗಳನು ರಕ್ಷಿಸಲಿ ಭುಜಗಶಯನಾ||2 ಕಂಠವನು ಮತ್ತ ವೈಕುಂಠಪತಿ ರಕ್ಷಿಸಲಿ ಮುಬವನ್ನು ರಕ್ಷಿಸಲಿ ಮುಕುಟವರ್ಧನ ಹರಿಯು| ಶಿರವನ್ನು ರಕ್ಷಿಸಲಿ ಶಿರಿಯರಮಣನನು ತಾನು ಅಂಗಜನ ಜನಕ ಸರ್ವಾಂಗ ರಕ್ಷಿಸಲಿ| ಜಲಜಾಕ್ಷಿಯರು ಹೀಂಗ ಹಲವು ದೇವತಿಗಳನ ಬಲಗೊಂಡು ಮತ್ತವರ ಬಲದಿ ರಕ್ಷೆಯ ನೀಡಲು| ಜಲಜಮುಖಿ ಜನನಿ ತನ್ನ ಚಲುವ ಬಾಲಕಗ ತಾ ಮೊಲಿಕೊಟ್ಟು ಮಂಚದಲಿ ಮಲಗಿಸಿದಳವನಾ| ಖಳಕಂಸಗಾ ಕಪ್ಪುಗಳ ಕೊಟ್ಟು ನಂದ ತಾ ಇಳದ ಮನಿಯಲಿ ಇರಲು ತಿಳದು ಆ ಸುದ್ದಿ ತನ್ನ ಸ್ಥಳವನ್ನು ಬಿಟ್ಟು ಆ ಸ್ಥಳಕ ಬಂದನು ಪರಮ ಗೆಳೆಯ ವಸುದೇವ ಮನದೊಳಗ ಹಿಗ್ಗುತಲೆ|| 3 ಆರ್ಯಾ ಜಾಣನು ಆತನ ಕಾಣುತಲ್ಯದ್ದನು ಪ್ರಾಣಬರಲು ದೇಹದ ಪರಿಯು| ಪ್ರಣಾಮಮಾಡಿ ಆ ಪ್ರಾಣಯನಪ್ಪಿದ ಪಾಣಿಹಿಡಿದು ಗೋಕುಲ ಧೊರಿಯು|| 1 ಆಮ್ಯಾಲಿಬ್ಬರು ಪ್ರೇಮದಿ ಕುಳಿತರು ಕ್ಷೇಮವಿಚಾರ ಮಾಡುತಲೆ| ಆಮ್ಯಾಲ ಶೌರಿಯು ಕೋಮಲ ಹೃದಯದಿ ತಾ ಮಾತಾಡಿದ ಪ್ರೇಮದಲೆ|| 2 ಪದ:ರಾಗ:ಶಂಕರಾಭರಣ ತಾಳ:ಭಿಲಂದಿ ಸ್ವರ:ಪಂಚಮ ಸಕಲ ಜನರು ನಂದಗೋಪ ಸುಖದಲಿರುವರೆ ಸಖನೆ ನಿನ್ನ ಮನಿಗೆ ಭಾವುಕರು ಬರುವರೆ|| ಪ ದೃಷ್ಟ ವಿಷಯನಾದಿ ನೀ ಅದೃಷ್ಟಯೋಗದಿ| ವೃಷ್ಟಿ ಮಾಡಿದಿ|| 1 ನಿನಗ ಪುತ್ರನಾದ ಸುದ್ದಿ ಎನಗ ಮುಟ್ಟಿತು | ನನಗೆ ಕಡೆಯ ಪುತ್ರನವನೆ ನಿನಗೆ ಒಪ್ಪಿತು|| 2 ಸಕಲರಿಂದ ಕೂಡಿ ಅವನು ಸುಖದಲಿರುವನೆ ಸಕಲ ಜನರಿಗ್ಯವನು ಪ್ರಾಣಸಖನು ಆದನೆ|| 3 ಅಲ್ಯೆ ಗೋಗಳೆಲ್ಲ ರೋಗ ಇಲ್ಲದಿರುವವೆ| ಹುಲ್ಲು ನೀರಿನಿಂದ ಸೌಖ್ಯದಲ್ಲಿ ಇರುವವೆ|| 4 ಚನ್ನಿ ಗಾನಂತಾದ್ರೀಶನ್ನ ನೆನುವರೆ 5 ಆರ್ಯಾ ಛಂದಾಗ್ಯವ ಹೀಗೆಂದ ಮಾತು ಆನಂದಗೋಪ ತಾ ಕೇಳುತಲೆ| ಮುಂದಾ ಶೌರಿಯಮುಂದ ನುಡದನು ಮಂದಹಾಸ್ಯದಲಿ ನಗುವುತಲೆ|| 1 ಪದ, ರಾಗ :ಮುಖರಿ ತಾಳ :ಆದಿ ದುಃಖವು ಸುಖಕಾರಿಯೆ ಪ ಎನಗೆ ತಿಳಿನೀನು|| 1 ಹಿಂದಿನ ದುಃಖ ಹಿಂದೆ ಹೋಯಿತು | ತಿಳಿ ಮುಂದ ನಿನಗೆ ಸೌಖ್ಯವಾದೀತು|| 2 ಚಿಂತಿಮಾಡಲಿ ಬ್ಯಾಡಾ ವಸುದೇವಾ| ಚಲುವಾನಂತಾದ್ರೀಶನೆ ದಯ ಮಾಡಿರುವಾ|| 3 ಆರ್ಯಾ ನಂದ ಗೋಪನಾನಂದ ವಚನಗಳ ಛಂದದಿ ಕೇಳುತ ವಸುದೇವಾ | ಮುಂದ ನುಡದ ಹೀಗಂದು ಮತ್ತ ತ್ವರದಿಂದ ತನ್ನ ಹೃದ್ಗತ ಭಾವಾ || 1 ಪದ ರಾಗ:ಸಾರಂಗ ಆದಿತಾಳ ಸ್ವರ:ಷಡ್ಜ ಭಿಡಯಾ ಬಿಟ್ಟ ಹೇಳುವೆ ಎನ್ನ ನುಡಿಯು ಲಾಲಿಸಿ|| ಪ ಉತ್ತಮ ಕೇಳಿನ್ನಾಮಗನಾ ಉತ್ಪತ್ತಿ ಕಿವಿಯಿಂದ ಕೇಳಿ| ಉತ್ಪನ್ನವಾದಾವು ಬಹಳ ಉತ್ಪಾತಗಳು|| 1 ಕಂಸನ ಅಂಜಿಕೆಯಿಂದ ಸಂಶಯ ಬಿಡುವÀಲ್ಲದಿನ್ನು| ಸಂಸಾರದೋಳ್ಸುಖವು ಸ್ವಲ್ಪಾ ಸಂಶಯವೆ ಭಾಳಾ||2 ಮುಟ್ಟಿತು ಕಂಸಗ ಕಪ್ಪ ಭೆಟ್ಟಿ ಆಯಿತು ನಿಮ್ಮನು| ಘಡ್ಯಾಗಿ ಅನಂತಾದ್ರೀಶನ ಮುಡ್ಡಿ ಭಜಿಸುತ|| 3 ಪದ್ಯ ಯಾದವನ ಮಾತಿಗ್ಯನು ಮೋದವನು ಬಟ್ಟು ನಂದಾದಿಗಳು ಗೋಕುಲದ ಹಾದಿಯನು ಹಿಡಿದು ಪರಮಾದರದಿ ನಡದರು. ಅಗಾಧವಾಗಿಹ ದೇಹ ಹಾದಿಯಲಿ ಬಿದ್ದಿಹುದು ಹಾದಿಯನು ಕಟ್ಟಿ| ಆ ದೇಹ ನೋಡುತ ಅಗಾಧ ಬಟ್ಟವರು ಅಲ್ಯಾದದ್ದು ಮನದಲ್ಲಿ ಶೋಧಿಸ್ಯಂದರು ಹೀಗೆ | ಸಾಧು ವಸುದೇವ ಹುಸಿ ಆದದ್ದು ಉಂಟೇ| 1 ಪರಿ ಅವರು ಕೊಡಲಿಯನು ಕೊಂಡು ಕಡಕಡದು ಈ ದೇಹವನು ಸುಡಲು ದೂರದಲಿಟ್ಟು ಕಡೆ ಬಿಡದೆ ಆಕಾಶಕ್ಕೆ ಅಡರಿತಾಗೆ| ಖಡುಪಾಪಿ ಪೂತನಿಯು ಕುಡಲು ವಿಷ ಮೊಲಿಯನ್ನು ಕುಡುದು ಸದ್ಗತಿಕೊಟ್ಟ ತಡವಿಲ್ಲದಲೆ ಹರಿಯು ದೃಢಭಕ್ತಿಯಿಂದಲೆ ಕಡಿಗೆ ಕ್ಷೀರಾದಿಗಳು ಕೊಡಲು ಸದ್ಗತಿಯನ್ನು ಕುಡವದೇನÀದು|| 2 ಶೌರಿಸಖನಂದ ಪರಿವಾರ ಸಹಿತಾಗಿ ತಾ ಈ ರೀತಿ ಉತ್ಪಾತ ಮೀರಿ ಮನಿಯಲಿ ಬಂದು ಪೂರ್ವದಲಿ ಆಗಿಹ ಅಪೂರ್ವ ವೃತಾಂತವನು ಪೂರ ಕೇಳ್ಯಾಶ್ಚರ್ಯ ಪೂರಿತನು ಆಗಿ ವೈರಿ ಪೂತನಿಯ ಸಂಹಾರಿಯಾ ಕರಕೊಂಡು| ಚಾರುಮುಖ ನೋಡಿ ಸುಖಪೂರನಾದಾ | ಈ ರೀತಿ ಚರಿತವನು ಆರು ಕೇಳುವರು ಅವರ ಘೋರ ದುರ್ಷಟವೆಲ್ಲ ದೂರಾಗಿ ಹೋಗುವದು ಶುಭಚನ್ಹ ಚಾರ್ವನಂತಾದ್ರೀಶ ಮೂರುತಿಯು ಮುಗಿಸಿದಿದು ಭಾಗವತ ದಶಮಸ್ಕಂಧ 3 ಪೂತನಾದಧೋ ನಾಮ ತೃತಿಯೋಧ್ಯಾಯಃ| || ಶ್ರೀ ಕೃಷ್ಣಾರ್ಪಣಮಸ್ತು|| || ಮೂರನೆಯ ಅಧ್ಯಾಯವು ಸಂಪೂರ್ಣ||
--------------
ಅನಂತಾದ್ರೀಶ - ಕಥನಕಾವ್ಯಗಳು
ಆ ನಮಿಪೆ ವಿಷ್ಣು ಶ್ರೀ ಬ್ರಹ್ಮ ವಾಯು ವಾಣಿ ಭಾರತಿ ಮುಖ್ಯರವತಾರ ಆವೇಶಕಾನಮಿಪೆ ಪ ಮತ್ಸ್ಯ ಕೂರ್ಮ ಭೂವರಹ ನರಸಿಂಹ ದಧಿ ವಾಮನ ತ್ರಿವಿಕ್ರಮ ಭೃಗುಕುಲೋದ್ಭವ ಬುದ್ಧ ಕಲ್ಕಿ ಹಯಾಸ್ಯ ನಾಮ ತಾಪಸ ಮನು ಉಪೇಂದ್ರ ಅಜಿತಾದಿಗಳಿಗಾ ನಮಿಪೆ 1 ದಾಸ ಧನ್ವಂತ್ರಿ ಹರಿ ಹಂಸ ದತ್ತಾ ವ್ಯಾಸ ಕಪಿಲಾತ್ಮಂತರಾತ್ಮ ಪರಮಾತ್ಮ ಯ ಜ್ಞೇಶ ವೈಕುಂಠ ನಾರಾಯಣಾಧ್ಯವತಾರಕಾನಮಿಪೆ 2 ನಾರಾಯಣೀ ಋಷಭ ಐತರೇಯ ಶಿಂಶು ಮಾರ ಯಜ್ಞ ಪ್ರಾಜ್ಞ ಸಂಕರುಷಣಾ ಕ್ಷಿರಾಬ್ದಿ ನಿಲಯ ಯಮನಂದನಾ ಕೃಷ್ಣ ಹರಿ ನಾರಾಯಣ ಧರ್ಮಸೇತು ರೂಪಾದಿಗಳಿಗಾನಮಿಪೆ 3 ಗುಣಗಳಭಿಮಾನಿ ಶ್ರೀ ಭೂ ದುರ್ಗ ದಕ್ಷಿಣಾಂ ಭೃಣಿ ಮಹಾಲಕ್ಷ್ಮೀ ಶ್ರೀ ವಿಷ್ಣುಪತ್ನೀ ಮಾಯಾ ಕೃತಿ ಶಾಂತಿ ಶುದ್ಧ ರು ಕ್ಮಿಣಿ ಸತ್ಯ ಸೀತಾದ್ಯಮಿತ ರೂಪಗಳಿಗಾನಮಿಪೆ 4 ಹೀನಳೆನಿಸುವಳನಂತಾಂಶದಲಿ ಸುಖ ಬಲ ಜ್ಞಾನಾದಿ ಗುಣದಿ ಮಹಾಲಕ್ಷ್ಮಿ ಹರಿಗೆ ಆನಂದ ವಿಜ್ಞಾನ ಮಯನ ವಕ್ಷಸ್ಥಳವೆ ಸ್ಥಾನವಾಗಿಹುದು ಇಂದಿರೆಗೆ ಆವಾಗ 5 ವಿಧಿ ವಿರಿಂಚಿ ಮಹನ್ ಬ್ರಹ್ಮ ಸೂತ್ರ ಗುರು ಮಹಾಪ್ರಭು ಋಜ ಸಮಾನ ವಿಜ್ಞ ಪ್ರಾಜ್ಞ ಹರಿಭಕ್ತಿ ಮೇಧಾವಿ ಮುಕ್ತಿ ಧೃತಿ ಅಮೃತನಿಗೆ 6 ಸ್ಥಿತಿ ಯೋಗ ವೈರಾಗ್ಯ ಚಿಂತ್ಯ ಬಲಸುಖ ಬುದ್ಧಿ ವಿತತಾದಿ ಗೋಪ ಹನುಮ ಭೀಮ ವೃಷಿವರಾನಂದ ಮುನಿ ಮೊದಲಾದ ರೂಪಶ್ರೀ ಪತಿಗಧಿಷ್ಟಾನ ಕೋಟಿಗುಣಾಧಮರು ರಮೆಗೆ ಆ ನಮಿಪ 7 ಸರಸ್ವತಿ ಗಾಯತ್ರಿ ಬುದ್ಧಿ ವಿದ್ಯಾ ಪ್ರೀತಿ ಗುರುಭಕ್ತಿ ಸರ್ವ ವೇದಾತ್ಮಿಕ ಭುಜಿ ಪರಮಾನು ಭೂತಿ ಸಾವಿತ್ರಿ ಸು ಸುಖಾತ್ಮಿಕಾ ಪತಿ ನಾಮಗಳಿವೆಂದರಿದು 8 ಶಿವಕನ್ಯ ಇಂದ್ರಸೇನಾ ಕಾಶಿಜಾ ಚಂದ್ರ ಯುವತಿ ದ್ರೌಪದಿಯು ಭಾರತಿ ರೂಪವು ಪವಮಾನ ಬ್ರಹ್ಮರಿಗೆ ಶತಗುಣಾಧಮ ಸದಾ ಶಿವನ ರೂಪಗಳ ಈ ಪರಿಯ ಚಿಂತಿಸುತ 9 ತತ್ಪುಮಾನ್ನೂಧ್ರ್ವಪಟ ದುರ್ವಾಸ ವ್ಯಾಧ ಅ ಶ್ವತ್ಥಾಮ ಜೈಗೀಷವ್ಯ ತಪ ಅಹಂಕ್ರತು ಶುಕ ವಾಮದೇವ ಗುರು ಮೃತ್ಯುಂಜಯೋರ್ವ ಸದ್ಯೋಜಾತ ತತ್ಪುರುಷಗಾನಮಿಪೆ 10 ನರ ವಯು ಶುಕಕೇಶವೇಶ ಬಲಗೆ ಸಂ ಕರುಷಗಾವೇಶ ಲಕ್ಷ್ಮಣದೇವಗೆ ಗರುಡ ಶೇಷಾಘೋರ ಸಮರು ಶತಗುಣದಿಂದ ಕೊರತೆಯೆನಿಸುವರು ಮೂವರು ವಾಣಿ ದೇವಿಗೆ 11 ಶೇಷಗೆ ಸಮಾನನೆನಿಪಳು ಜಾಂಬವತಿ ರಮಾ ವೇಶ ಕಾಲದಿ ಷಣ್ಮಹಿಷಿಯರ ಒಳಗೆ ಹ್ರಾಸಕಾಲದಿ ಸಮಳು ಐವರಿಗೆ ಜಾಂಬವತಿ ವೀಶಾದ್ಯರಿಗೆ ಹರಿ ಸ್ತ್ರೀಯರ ಸಮರೈದುಗುಣ12 ರೇವತಿ ಶ್ರೀಯುತ ಶ್ರೀ ಪೇಯ ರೂಪತ್ರ ಯಾವಕಾಲದಿ ವಾರುಣಿಗೆ ಪಾರ್ವತೀ ದೇವಿ ಸೌಪರಣಿಗೆ ಸಮ ಷಣ್ಮಹಿಷಿಯರಿಗೆರಡು ಮೂವರೀರೈದು ಗುಣ ಕಡಿಮೆ ಪತಿಗಳಿಗೆ 13 ಕುಶ ವಾಲಿ ಗಾಧಿ ಮಂದ್ರದ್ಯುಮ್ನನು ವಿಕುಕ್ಷಿ ಶ್ವಸನ ಹರಿ ಶೇಷ ಸಂಯುಕ್ತಾರ್ಜುನಾ ಅಶನೀಧರನ ಸುರೂಪಂಗಳಿವು ಮನ್ಮಥನ ನಿತ್ಯ 14 ಪ್ರದ್ಯುಮ್ನ ಸಂಯುಕ್ತ ರುಕ್ಮಿಣೀ ದೇವಿ ಸುತ ಪ್ರದ್ಯುಮ್ನ ಭರತನು ಸನತ್ಕು ಮಾರಾ ಸಾಂಬ ಸ್ಕಂಧ ಸುದರುಶನ ರುದ್ರ ನಾರ್ಧಾಂಗಿನಿಗೆ ದಶಗುಣಾಧಮರೆಂದು15 ಭವ ಪ್ರಾಣ ನಾಮರಗೆ ರೂಪ ಸರ್ಮೋತ್ತುಂಗನು ಕಾಮ ಪುತ್ರಾನಿರುದ್ದಾದಿಗಳು ದಶ ಹೀನ ಈ ಮಹಾತ್ಮರ ದಿವ್ಯ ಅವತಾರರೂಪಗಳಿಗಾನಮಿಪೆ 16 ಪ್ಲವಗ ಬ್ರಹ್ಮಾಂಶಯುಗ್ದೋಣ ಮಾರುತಾವೇಶ ಸಂಯುತ ವುದ್ಧವಾ ಮುರು ರೂಪವು ಬೃಹಸ್ಪತಿಗೆ ಪ್ರದ್ಯುಮ್ನನ ಕು ಮಾರಾನಿರುದ್ಧ ಶತೃಘ್ನ ಅನಿರುದ್ಧನಿಗೆ 17 ತಾರ ಚಿತ್ರಾಂಗದ ಶಚಿ ರೂಪ ಲಕ್ಷುಣ ಈ ರುಗ್ಮವತ್ರಿ ಎರಡು ರತಿರೂಪವು ಆರುಜನ ದಕ್ಷ ಸ್ವಯಂಭುವ ಮನು ಪ್ರಾಣ ಗಿರೈದು ಗುಣಗಳಿಂದಧಮರೆಂದರಿದು 18 ಭೂತಾಭಿಮಾನಿ ಪ್ರವಹ ಪಂಚಗುಣದಿ ಪುರು ಹೊತ ಪತ್ನ್ಯಾದಿಗಳಿಗಧಮನೆನಿಪ ಈತಗವತಾರವಿಲ್ಲವನಿಯೊಳು ಚಂದ್ರ ಪ್ರ ದ್ಯೋತನಾಂತಕ ಸ್ವಯಂಭುವ ಪತ್ನಿ ಶತರೂಪಿ 19 ಸತ್ಯಜಿತ ಜಾಂಬವಾನ್ ವಿದುರ ಗುರು ವಾಯು ಸಂ ಯುಕ್ತ ಧರ್ಮಜ ಯಮಗೆ ರೂಪ ನಾಲ್ಕು ರಾತ್ರಿ ಚರನವತಾರ ಯಿಂದ್ರ ಯುಕ್ತಾಂಗದಾ ದಿತ್ಯ ನವತಾರ ಬ್ರಹ್ಮ ವಿಷ್ಟ ಸುಗ್ರೀವ 20 ಹರಿಯುಕ್ತ ಕರ್ನ ಮನು ಪತ್ನಿ ಶತರೂಪ ನಾ ಲ್ವರು ಸಮರು ಪ್ರವಹಗಿಂದೆರಡು ಗುಣದೀ ಕೊರತಿ ಮಹ ಭಿಷಕು ಮಂಡೂಕ ಶಂತನು ಸುಶೇ ಪಾದ ಪಾದಾರ್ಧಿಕಾನಮಿಪೆ21 ನಾರದಾಧಮ ವರುಣಗಿಂತಗ್ನಿ ಅವ ತಾರ ದೃಷ್ಟದ್ಯುಮ್ನ ಲವ ನೀಲರೂ ಪಾದ ಗುಣದಾಧಮರು ಎಂದು22 ಅಂಗೀರ ಪುಲಸ್ತ್ಯಾತ್ರಿ ಪುಲಹನು ಮರೀಚಿ ಮುನಿ ಪುಂಗವ ದಶಿಷ್ಠ ಕೃತು ಬ್ರಹ್ಮ ಸುತರೂ ತುಂಗ ವಿಶ್ವಾಮಿತ್ರ ವೈವಸ್ವತರು ಸದಾ ಕೆಂಗದಿರಗಧಮರೊಂಭತ್ತು ಜನರೆಂದು 23 ಸಪ್ತ ಋಷಿಗಳಿಗೆ ಸಮನೆನಿಪ ವೈವಸ್ವತನು ಲುಪ್ತವಾಗಲು ಕಡಿಮೆಯೆನಿಪ ಪ್ರಾವಹ ತಾರ ಕ್ಲುಪ್ತ ಒಂದೇ ರೂಪ ಕೃಪೆಯೆಂದು ಕರೆಸುವಳಿಗಾನಮಿಪೆ24 ಹರನಾವೇಶಯುತ ಘಟೋತ್ಕಚ ದುರ್ಮಖನು ನಿಋಋತಿ ಕರೆಸುವನು ರಾಹು ಯುಗ್ಭೀಷ್ಟಕ ನೃಪಾ ನರೆ ಮಿತ್ರ ನಾಮಕನ ರೂಪ ನಾಲ್ವರು ಅಗ್ನಿ ಗೆರಡು ಗುಣದಿಂಧಮರೆನಿಪರೆಂದೆಂದು 25 ಮಾರಾರಿಯುಕ್ತ ಭಗದತ್ತ ತತ್ತನÀಯ ಕು ಬೇರಗೆರಡವತಾರ ವಿಘ್ನೇಶಗೆ ಚಾರುದೇಷ್ಣನು ಒಂದೆ ಇಂದ್ರನಾವೇಶಯುತ ಆರುರೂಪಗಳುಳ್ಳ ನಾಸತ್ಯ ದಸ್ರರಿಗೆ 26 ವಿವಿಧÀ ಮೈಂದ ತ್ರಿಸಿಖ ನಕುಲ ಸಹದೇವ ವಿಭು ಅವತಾರ ಅಶ್ವಿನೀ ದೇವತೆಗಳ ಲವಣಾದಿ ಷಡ್ರಸಗಳೊಳಗಿದ್ದು ಜೀವರಿಗೆ ವಿವಿಧ ಭೋಗಗಳಿತ್ತು ಸಂತೈಪರೆಂದೆಂದು 27 ದ್ರೋಣಾರ್ಕ ದೋಷಾಗ್ನಿ ಧ್ರುವ ವಿಭಾವಸು ವಸ್ತು ಪ್ರಾಣಾಷ್ಟ ವಸುಗಳೊಳಗೆ ದ್ಯುನಾಮಕ ವಾಣೀಶಯುಕ್ತ ಭೀಷ್ಮನು ನಂದಗೋಪಾಲ ದ್ರೋಣನಾಮಕ ಪ್ರಧಾನಾಗ್ನಿಗಿಂದಧಮರೆಂದಾ ನಮಿಪೆ 28 ಭೀಮರೈವತ ವೋಜಜ್ಯೆಕಪಾದ ಹಿರ್ಬದ್ನಿ ಭವ ವಾಮ ಬಹುರೂಪೋಗ್ರಜ ವೃಷಾಕಪಿ ಈ ಮಹನ್ನೆಂಬ ಹನ್ನೊಂದು ರುದ್ರರು ಭೂರಿ ನಾಮಕ ಜೈಕ ಪಾದಹಿರ್ಬದ್ನಿ ಭೂರಿಶ್ರವಗಾನಮಿಪೆ29 ತ್ರ್ಯಕ್ಷನುಳಿಧತ್ತು ರುದ್ರರು ಸಮರು ಶಲ್ಯ ವಿರು ಪಾಕ್ಷನವತಾರ ಕೃಪ ವಿಷ್ಕಂಭುನೂ ಅಕ್ಷೀಣಬಲ ಪತ್ರತಾಪಕ ಸಹದೇವ ರಕ್ಷಘ್ನ ಸೋಮದತ್ತನು ಎನಿಸುತಿಹಗೆ 30 ವಿರೂಪಾಕ್ಷ ವಿಷ್ಕಂಭ ಪತ್ರತಾಪಕ ಮೂರು ಹರನ ರೂಪಾಂತರಗಳಿವು ವಿವಸ್ವಾನ್ ಅರಿಯಮ ಪೂಷ ಭಗ ಸವಿತು ತೃಷ್ಟಾಧಾತ ವರುಣ ಶಕ್ರೋರುಕ್ರಮನು ಮಿತ್ರ ಪರ್ಜನ್ಯಗಾನಮಿಪೆ 31 ಶೌರಿನಂದನ ಭಾನು ಸವಿತ್ರ ನಾಮಕ ಸೂರ್ಯ ವೀರಸೇನನು ಯಮಾವಿಷ್ಟ ತ್ವಷ್ಟಾ ಆರುಜನ ರುಕ್ತರೆನಿಪರು ವುರುಕ್ರ್ರಮ ಶಕ್ರ ವಾರಿಧಿ ವಿವಸ್ವಾನ್ ಮಿತ್ರ ಪರ್ಜನ್ಯರಿಗೆ 32 ಪ್ರಾಣ ನಾಗ ಪಂಚಕ ಅಹಂಕಾರಿಕ ಪ್ರಾಣ ಪ್ರವಹ ನಿವಹ ಸಂವಹ ಸ್ವಹಾ ಕಾಲ ಶ್ವಾಸ ಏ ಕೋನ ಪಂಚಾಶನ್ ಮರುದ್ಗಣಸ್ಥರು ಎಂದು 33 ಶ್ವೇತ ಶಂ ಹನುಮ ಭೀಮ ಯತಿವುದಿತ ಕಾಮ ಜಡಪಿಂಗ ಕಂ ಪನ ವೃದ್ವಹ ಧನಂಜಯ ದೇವದತ್ತರಿಗೆ 34 ಶುಕ್ರ ಶಂಕು ಗುರು ಕಾಂತ ಪ್ರತಿಭ ಸಂವರ್ತಕನು ಪಿಕ ಕಪಿಗಳಿವರು ಮುರುತರು ಸಮೀರಾ ಯುಕುತ ಪಾಂಡು ವರಾಹನು ಎನಿಪ ಸಂಪಾತಿ ಕೇಸರಿ ಶ್ವೇತ ಮರುತನವತಾರ ವೆಂದಾನಮಿಪೆ35 ಪ್ರತಿಭವಂಶನು ಚೇಕಿತಾನೆಂದೆನಿಪ ವಿ ಪ್ರಥು ಸೌಮ್ಯ ಕುಂತೀಭೋಜನೆ ಕೂರ್ಮನು ಕ್ಷಿತಿ ಯೊಳಗೆ ಪ್ರಾಣಪಂಚಕರೊಳು ಪ್ರಾಣ ಗಜ ಅಥ ಗವಾಕ್ಷಾಪಾನ ವ್ಯಾನ ಗವಯನು ಎಂದು 36 ವೃಷನು ಸರ್ವತ್ರಾತನು ವುದಾನಗಂಧ ಮಾ ದ ಸಮಾನನರಿವರು ವಿತ್ತಪನ ಸುತರು ಶ್ವಸನಗಣದೊಳು ಕಿಂಚಿದುತ್ತ ಮರಹಂ ಪ್ರವಹ ಗಸಮರೆನಿಪರು ಪ್ರಾಣ ಪಂಚಕರು ಎಂದೂ 37 ಪ್ರತಿ ವಿಂಧ್ಯ ಧರ್ಮಜನ ಭೀಮಸೇನನ ಪುತ್ರ ಶೃತಸೋಮ ಅರ್ಜುನಜ ಶೃತಕೀರ್ತಿಸಾ ಶತಾನೀಕÀನ ಕುಲಜ ಸಹದೇವಾತ್ಮಜನು ಶೃತಕರ್ಮರಿವರು ದ್ರೌಪದಿ ದೇವಿಗಾತ್ಮಜರಿಗಾನಮಿಪೆ38 ಚಿತ್ರರಥ ಅಭಿಪೌಮ್ರಬಲ ಕಿಶೋರ ಗೋಪಾಲ ರುತ್ತಮರು ಗಂಧರ್ವರೈವರಿಂದ ಯುಕ್ತರಾಗಿಹರು ಕೈಕೇಯರೈವರು ಪಾಂಡು ಪುತ್ರಜರು ವಿಶ್ವದೇವತೆಗಳಿವರೆಂದು39 ಕಾಲ ಕಾಮಲೋಚನದಕ್ಷ ಕೃತು ಪುರೂ ರವ ಸತ್ಯ ವಸು ಧುರಿಗಳಿವರು ವಿಶ್ವೇ ಋಭು ಗುಣ ಪಿತೃತ್ರಯ ದ್ಯಾವ ಅವನಿಪರು ಗಣಪಾದ್ಯರಧಮ ಮಿತ್ರನಿಗೆಂದು 40 ವಸುಗಳೆಂಟಾದಿತ್ಯರೀರಾರು ಒಂದಧಿಕ ದಶರುದ್ರಗಣ ಪಿತೃತ್ರಯ ಬೃಹಸ್ಪತೀ ವಿಶ್ವ ದೇವ ಅಶ್ವಿನಿಗಳೆರಡೈವತ್ತು ಶ್ವಸನಗಣರು ಋಭುವೊಂದು ಎರಡು ದ್ಯಾವಾಪೃಥವಿ 41 ಒಂಭತ್ತು ಕೋಟಿ ದೇವತೆಗಳೊಳು ನೂರು ಜನ ಅಂಬುಜಾಪ್ತರ ಒಳಗುರುರುಕ್ರಮನುಳಿದು ಪದ್ಮ ಸಂಭವನ ಸಹರಾಗಿಹರು ಶತಸ್ಥರಿಗೆ 42 ಮರುತತ್ರಯರು ವನಿಯಮ ಸೋಮ ಶಿವದಿವಾ ಕರರಾರು ರುದ್ರ ಗುರು ಇವರುಕ್ತರೂ ಉರವರಿತ ಎಂಭತ್ತೈದು ಸಮರು ತಮ್ಮೊಳಗೆ ಸರಸಿಜೋದ್ಭವನ ಸುತರೆನಿಪ ಸನÀಕಾದಿಗಳಿಗಾನಮಿಪೆ43 ಸನಕಾದಿಗಳೊಳುತ್ತಮ ಸತತ್ಕುಮಾರ ಶಿಖಿ ತನುಜ ಪಾವಕನು ಪರ್ಜನ್ಯನು ಮೇಘಪ ಎನಿಸುವನು ಶರಭವೊಂದೇರೂಪ ಧರ್ಮರಾ ಜನ ಪತ್ನಿ ದೇವಕಿಯು ಶಾಮಲೆಯ ರೂಪವೆಂದಾ ನಮಿಪೆ44 ಯಮ ಭಾರ್ಯ ಶಾಮಲಾ ರೋಹಿಣಿದೇವಿ ಚಂ ದ್ರಮನ ಸ್ತ್ರೀ ಅನಿರುದ್ಧದೇಹಿ ಉಷಾ ದ್ಯುಮಣಿ ಭಾರ್ಯಾ ಸಂಜ್ಞ ಗಂಗಾ ವರುಣ ಭಾರ್ಯ ಸುಮರಾರು ಜನರು ಪಾವಕಗೆ ಕಿಂಚಿದಧಮರೆಂದಾ ನಮಿಪೆ45 ಪರ್ಜನ್ಯ ಈ ರೆರಡು ವನ್ಹಿಗೆ ಕಡಿಮೆ ಪಾದಮಾನೀ ಸುರಪನಂದನ ಜಯಂತನು ಪ್ರಹಲ್ಲಾದ ಈ ರ್ವರು ಮುಖ್ಯರಧಮ ಪರ್ಜನ್ಯಗೆಂದೆಂದು 46 ಎರಡು ಗುಣ ಪರ್ಜನ್ಯಗಿಂದಧಮಳು ಸ್ವಹಾ ರೆರಡಧಿಕ ಗುಣದಿ ಸ್ವಪತಿಗೆ ನೀಚಳೂ ಹರಿ ಶಕ್ರಸತಿ ಅಶ್ವಿ ಯುಕ್ತಾಭಿಮನ್ಯು ಚಂ ದಿರಜ ಬುಧನವತಾರ ಸ್ವಾಹಾ ದೇವಿಗಧಮಳೆಂದಾ ನಮಿಪೆ 47 ಎನಿಸುವಳು ಶಲ್ಯ ಜರಾಸಂಧನಾತ್ಮಜಾ ಶ್ವಿನಿ ಭಾರ್ಯಾನಾಮಾಭಿಮಾನಿ ಉಷಾ ಘನರಸಾಧಿಪ ಬುಧಗೆ ಕಿಂಚಿದ್ಗುಣ ಕಡಿಮೆ ಅವಳ ಪತ್ನಿಗೆ ದಶಗುಣಾಧಮಳುಯೆಂದು 48 ಧರಣಿಗಭಿಮಾನಿ ಎನಿಸುವ ಸೂರ್ಯಸುತ ಶನೇ ಶ್ವರ ಉಷಾದೇವಿಗೆರಡು ಗುಣಾಧಮ ತರಣಿ ನಂದನಗೆ ಸತ್ಕರ್ಮಾಭಿಮಾನಿ ಪು ಷ್ಕರ ಕಡಿಮೆ ಪಂಚಗುಣದಿಂದ ಎಂದೆಂದು 49 ನಾರದನ ಶಿಷ್ಯ ಪ್ರಹ್ಲಾದ ಬಾಲ್ಹೀಕ ಸ ಮೀರ ಸಂಯುಕ್ತ ಸಹ್ಲಾದ ಶಲ್ಯಾ ಮೂರನೆಯನುಹ್ಲಾದ ಸವಿತ್ರನಾವೇಶದಲಿ ತೋರಿದನು ದೃಷ್ಟಕೇತು ಎನಿಸಿ ಧರೆಯೊಳಗೆ 50 ತಾಮಾಂಶಯುಗ್ ಜಯಂತನು ಬಭ್ರುವಹ ವರು <ಈ
--------------
ಜಗನ್ನಾಥದಾಸರು
ಆಗಿನ್ನೆಂಥ ಕವತುಕ ಕಂಡೆ ಅಮ್ಮಿನ ಎಂಥ ಅಂಜಿದೆವೆ ಪ. ಮತ್ತೆ ಎರಗಲು ಹೋದೆನಮ್ಮ ಪಾದ ಕಂಡು ಕಣ್ಣು ಕತ್ತಲೆ ಹೊಯ್ದಾವೆ ಅಮ್ಮಿನ 1 ಪಂಚ ಹಸ್ತ ಕಂಡು ಮನದಲೆ ಚಂಚಲಗೈಯ್ದೆನೆ 2 ಅತ್ಯಂತ ಪ್ರೇಮದಲಿ ದ್ರೌಪತಿ ಹತ್ತು ಹಸ್ತ ಕಂಡು ಮೈಯ ಮರೆತೆನೆ ನಾನು 3 ಬಾರಿ ಬಾರಿಗೆ ಬೆದರಿಬೆಚ್ಚಿ ನಾರಿಯ ನೋಡಿದೆನೆ ನಾನು ಸೂರ್ಯನಂತೆ ಹೊಳೆವೊ ಐದುಮಾರಿ ಕಂಡೆನೆ4 ವಾರ್ತೆಯ ಹೇಳುತಲಿದ್ದೆ ಮಾರುತನ ರಾಣಿ ಭಾರತಿಯು ಆದಳೆ ಅಮ್ಮಿನ್ 5 ವಚನ ಪೇಳುತ ನಿಂತೆನಮ್ಮ ರುಚಿರರೂಪ ಅಡಗಿ ಆಗ ಶಚಿಯು ಆದಳೆ ಆಮ್ಮಿನ್ 6 ಇಂದ್ರನರಸಿ ಅಡಗಿ ಶ್ಯಾಮಲೆ ಬಂದು ನಿಂತಾಳಮ್ಮ ಕ್ಷಣದಿ ಎಂದೂ ಕಾಣದ ಸೋಜಿಗ ಒಂದೊಂದು ಕಂಡೆನೆ ಅಮ್ಮಿನ್7 ಎಂಥ ಬೆಳಕನೆ ತೋರಿಸಿದಳಮ್ಮ ಇಂಥ ಬೆಡಗು ರಾಮೇಶನ ಕಾಂತೆ ಕೇಳಮ್ಮ ಅಮ್ಮಿನ್8
--------------
ಗಲಗಲಿಅವ್ವನವರು
ಇಂದಿರಾ ರಮಣ ಗೋವಿಂದನಾ ಜ್ಞೆಯ ಪಡೆದು ಬಂದಿರುವ ದಾಸರಿವರು ಪ ಇಂದು ಧರ್ಮದಿ ಹರಿಯ ಬಾಂಧವರ ಗೃಹ ಸ್ವರ್ಣ ಮಂದಿರವಾಗುವುದೆಂದು ಸಂದೇಶ ಕಳಿಸಿರುವ ಅ.ಪ ಸತ್ವ ರಜ ತಮ ಭೇದವಿಹುದು ದಾನಗಳಲ್ಲಿ ಕರ್ತವ್ಯವೆಂದರಿತು ಭಕ್ತಿಯಿಂದ ಉತ್ತಮೋತ್ತಮ ದೇಶ ಪಾತ್ರ ಕಾಲಗಳರಿತು ಪ್ರತ್ಯುಪಕೃತಿಯ ಗಣಿಸದಿತ್ತ ದಾನವೇ ಶ್ರೇಷ್ಠ 1 ಶ್ರಾವಣದ ಶನಿವಾರ ಶ್ರೀ ವ್ಯಾಸರಾಜರ ಮಾಧವ ದೇಶಕಾಲ ಪಾತ್ರ ಈ ವಿಧದ ಯೋಗವಿನ್ಯಾವ ಜನಗಳಿಗುಂಟು ನೀವು ನೀಡುವ ದಾನ ಕಾವುದಾಪತ್ತಿನಲಿ 2 ಒಂದು ಹಿಡಿಯವಲಕ್ಕಿ ತಂದಿತಾ ಬ್ರಾಹ್ಮಣಗೆ ಎಂದೂ ಕೇಳದ ಸಕಲ ಸೌಭಾಗ್ಯವ ಇಂದು ನೀಡಿರಿ ಮಿತ್ರ ಬಾಂಧವರೆ ದೇವಕಿಯ ಕಂದನ ಪ್ರಸನ್ನತೆಯ ಬಂದು ಪಡೆಯಲಿಬಹುದು 3
--------------
ವಿದ್ಯಾಪ್ರಸನ್ನತೀರ್ಥರು
ಇಂದು ಪಬಂದಾನು ರಾಘವೇಂದ್ರ ಎಂದೂ ಗೊತ್ತಿರದೆವೃಂದಾವನ ರೂಪದಿಂದಅ.ಪ'ಂದಿನ 'ರಿಯರ ಪುಣ್ಯ ಫಲಿಸಿತೆಂದುತಂದೆ ರಾಘವೇಂದ್ರ ಬಂದು ನೆಲೆಸಿದನಿಲ್ಲಿ 1ಸಂದೇಹಬೇಡ ಈ ವೃಂದಾವನದಿರಾಘವೇಂದ್ರರಾಯರು ಸ್ವಯಂವ್ಯಕ್ತರೂಪದಿ ಇಹರು 2ಭೂಪತಿ'ಠ್ಠಲನ ಕರುಣದಿಂದಲಿ ಇಲ್ಲಿಅಪರೂಪವಾದ ವೃಂದಾವನ ದೊರಕಿತು 3
--------------
ಭೂಪತಿ ವಿಠಲರು
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇನ್ನು ಏನು ತಿಳಿಯದು ಹರಿ ಪ ಪನ್ನಗಾದ್ರಿನಿಲಯ ಪರಮ ಪಾವನ್ನ ಜಗನ್ಮೋಹನ ಅ.ಪ ಎಲ್ಲಾ ಜಗನಿನ್ನೊಳಗಿಹುದು ಎಲ್ಲರೊಳಗೆ ನೀನಿರುವೈ ಬಲ್ಲಿದನು ನೀನು ನಿನಗೆ ಸಮ ಬ್ರಹ್ಮಾದಿಸುರರೊಳಗ್ಯಾರು 1 ದೀನರು ಮಾಡಿದ ಕರ್ಮವ ನೀನು ಕಳೆಯಲಾರೆಯಾ ನಾನಿದಕೆ ಭಾಗಿಯೋ ನೀನಿದ್ದು ಮಾಡಿಸಲಿಲ್ಲವೆ 2 ಎಂದೂ ನಿನ್ನ ಆಜ್ಞೆಯಿಲ್ಲದೆ ಒಂದಾದರು ಚಲಿಸುವುದೆ ತಂದೆ ತಾಯಿ ಗುರುದೈವ ನೀನೆಂದು ನಂಬಿದೆ ಇಂದಿರೇಶ3 ಶೃತಿತತಿ ಶಾಸ್ತ್ರ ಪುರಾಣಗಳತಿಶಯದಲಿ ಪೊಗಳುವುದು ಗತಿ ನೀನೆ ಎಂದನವರತವು ಕಥೆಗಳ ಕೇಳುವುದೇಕೆ 4 ಅಗಣಿತ ಗುಣನಿಧಿ ಗುರುರಾಮವಿಠಲ 5
--------------
ಗುರುರಾಮವಿಠಲ
ಎಂದೂ ಬಂಧವಿಲ್ಲ ಆತ್ಮಗೆ ಬಂಧವ ಕಲ್ಪನೆ ಮಿಥ್ಯವಿದೆಲ್ಲ ಮಂದರ ನುಡಿಯಿದು ಈ ಸಂಸಾರ ಪ ನಿತ್ಯಮುಕ್ತನೇ ತಾನಾದವಗೆ ಮಿಥ್ಯವ ಕಲ್ಪನೆ ಬರುವದೆಂತೋ ತಥ್ಯವಿಲ್ಲದ ಮಾತಿನ ಮಾಲೆ ಮತ್ತೆ ಬಂಜೆಯಾ ಮಗನೆಂಬುವವೋಲ್ 1 ಆತ್ಮನೆ ತಾನೆಂಬನುಭವ ಪಡೆಯದೆ ಮತ್ತೆ ಶಬ್ದ ಮಾತ್ರವನರಿತವಗೆ ಸುತ್ತಿಕೊಳ್ಳುವುದು ಸಂಶಯ ವಿದುವೆ ಅನುಭವದೊಳಗೇನಿಲ್ಲ ವಿಕಲ್ಪ 2 ಭಾನುವಿಗುಂಟೇ ಉದಯಾಸ್ತಗಳು ಮಾನವಕಲ್ಪನೆಗಳು ತಾನೆಲ್ಲ ತಾನೇ ತಾನಾದವಗಿನ್ನು ಹೀನಭವದ ಭಾಧೆಯುತಾನುಂಟೇ 3 ಅನುಭವರೂಪನು ತಾನಾದಾಗ ಅನುಭವ ಬರುವದು ಈ ನುಡಿ ಕೇಳೈ ಮನವಾಣಿಗೆ ಮೀರಿದ ಸ್ವಾತ್ಮನುನೀ ಚಿನುಮಯ ಶಂಕರತಾನಾದವಗೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಎಂದೂ ಹಿಡಿಯದಿರು ಗರ್ವಾ | ಗೋ ವಿಂದನಲೀಲೆಯ ಕಾಣೊ ಸರ್ವಾ ಪ ಕ್ಷಿತಿಯೊಳಧಿಕವೆನ್ನ ಕುಲವು | ಗುಣ | ವತಿ ಸುಲಕ್ಷಣೆಯಾದಾ | ಸತಿಯಳ ವಲವು | ಸುತನಲ್ಲಿ ಗುಣ ನಿಶ್ಚಲಿಪು | ಯನ | ಗತಿಶಯ ಭಾಗ್ಯದ ಧನ ಧಾನ್ಯ ಒಲವು 1 ಎಲ್ಲರೊಳಗ ಅಭಿಮಾನಿ | ಶಾಸ್ತ್ರ | ಬಲ್ಲಿದ ಯೌವ್ವನ ತ್ರಾಣಿ | ಯನ್ನು | ಸೊಲ್ಲು ಸೊಲ್ಲಿಗ್ಹೇಳುವ ಕವಿತೆಯ ವಾಣಿ 2 ಸುಂದರವಾದ ಮಂದಿರವು | ಯನ | ಗೊಂದು ಕೊರತೆಯಿಲ್ಲಾವೆಂಬುದೀ ಮರವು ಹೊಂದದೆ ಬಾಗಿರೆಚ್ಚವು | ಗುರು | ತಂದೆ ಮಹಿಪತಿ ಬೋಧಿಸಿದರಹು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಸು ಜನ್ಮದಲೇನು ಪುಣ್ಯಮಾಡಿದೆವೊ ಲೇಸಾಗಿನ್ನು ಸ್ವಾಮಿ ನಿಮ್ಮನ ಕಂಡೆವೊ ಧ್ರುವ ಸಾಧನವೆಂಥಾದೆಂಬುದು ನಾವಿನ್ನರಿಯೆವೊ ನಿಮ್ಮ ದರುಶನದಲಿ ಪಾವನಾದೆವೊ ಇದೆ ಸಕಲ ಸಾಧನದ ಸುಫಲವೊ ಸ್ವಾಮಿ ನಿಮ್ಮ ದಯಕ ಸಾನುಕೂಲವೊ 1 ಮನೋಹರ ಮೋಹನಮೂರ್ತಿ ಕಂಡೆವೊ ಕೃಷ್ಣ ನಿಮ್ಮನ ಬಿಗಿದಪ್ಪಿಕೊಂಡೆವೊ ನಾನಾಸವಿಯ ನೆಲೆಗಳೂಟ ಉಂಡೆವೊ ಎಂದೂ ಬಿಡದೆ ಹೃದಯಲಿಟ್ಟುಕೊಂಡೆವೊ 2 ಹೆಣ್ಣು ಪ್ರಾಣಿಗಳು ನಾವೇನು ಬಲ್ಲ್ಲಿವೊ ನಿಮ್ಮ ವಿನಾ ಇನ್ನೊಂದು ನಾವೊಲ್ಲಿವೊ ಚನ್ನಾಗೊಲಿದ ಭಾನುಕೋಟಿ ನಮ್ಮಲ್ಲಿವೊ ಚಿಣ್ಣಮಹಿಪತಿಗಿದೆ ಸಾಫಲ್ಯವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಓಂ ನಮೋ ಮಹೀಪತಿ ಸದಾನಂದ ಗುರುಮೂರ್ತಿ | ಸನ್ನುತ ನಿಮ್ಮ ಖ್ಯಾತಿ ಪೊಗಳಲಾಪೆನೆ ಕೀರ್ತಿ ಪ ತನ್ನ ತಾ ಮರೆದವರಾ | ನೀನು ಕೊಟ್ಟು ಎಚ್ಚರಾ | ಮುನ್ನಿ ನಂದದಿ ಮಾಡಿ | ಓಡಿಸಿದೇ ಭವದೂರಾ 1 ಸಹಜ ಬೀರುವ ವಚನಾ | ಅದೇ ಉಪದೇಶ ಜ್ಞಾನಾ| ಇಹ ಪರಕ ನಿಧಾನಾ | ಮಾಡುವದು ಸಾವಧಾನಾ2 ವೇದ ಸಿದ್ಧಾಂತದಲ್ಲಿ | ರಾಜಯೋಗ ಮನೆಯಲ್ಲಿ | ಬೋಧಿಸುವ ವಸ್ತು ನೀನೇ | ಸರಿಗಾಣೆ ನಾನೆಲ್ಲಿ3 ಏನು ಪುಣ್ಯವೋ ಎನ್ನಾ | ಅದೇ ಬಾಲಕ ನಿನ್ನಾ | ತಾನೇನ ಸಾಧುವೆನಗ | ಇರಲು ನಿಮ್ಮ ದಯಾಘನಾ 4 ದಾಸರಾ ದಾಸನೆಂದು | ಇನ್ನು ನೋಡದೆವೆ ಕುಂದು | ಭಾಸಿ ಪಾಲಿಸು ಕೃಷ್ಣಗ ಎಂದೂ | ಕೈಯ್ಯಾ ಬಿಡೆನೆಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಗಜಮುಖ ಗಣನಾಥಾ | ಬೇಡುವೆಸುಜನರ ಪೊರೆ ಎಂದೂ ಪ ಅಜನಯ್ಯನು ಶ್ರೀರಾಮನು ನಿನ್ನನುಪೂಜಿಸಿ ಪ್ರಥಮದಿ ಜಗಕೆ ತೋರಿದನುಅ.ಪ. ದಶಮುಖ ರಾವಣನು ನಿನ್ನಹಸನಾಗಿ ಪೂಜಿಸದೇ |ವಶನಾದ ಮರಣಕೆ ರಣರಂಗದೊಳುಬಿಸಜ ಸಂಭವವರ ಬಹುವಾಗಿದ್ದರೂ 1 ಯಮಸುತ ಮೊದಲಾಗಿ ನಿನ್ನನಮಿಸಲು ಅಧ್ವರದೀ |ಅಮಮ ಪಾಪಾತ್ಮಕರ ಮಿತರಸವರುತಸ್ವಾಮಿ ಎನಿಸಿದನು ಅಪಾರ ರಾಜ್ಯಕೆ 2 ಗುರುಗೋವಿಂದ ವಿಠಲನಾ | ಕರುಣಭರಣವಮಿತ ಪಡೆದಾ |ವರದಾಯಕ ವಿಘ್ನವ ಕಳೆಯುತಅರವಿದೂರ ಪದರಜವನೆ ಕಾಣಿಸೋ 3
--------------
ಗುರುಗೋವಿಂದವಿಠಲರು