ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸು ಮನವೇ ನೀ ಪೂರ್ಣ ಕರುಣಾಸಾಗರ ದೇವನ್ನಾ ಪ ದಾವ ನಿಗಮಾಗಮ ಪೌರಣಿಕ ತಿಳಿಯದು ಮಹಿಮೆದಾವನ್ನ ಅವನ ನಖಕಾಂತಿಗೆ ಸರಿ ಪೊಲಿರು ಮಿತ್ರೆಂದು ಹವ್ಯವಾಹನ್ನಾ 1 ಭಕ್ತಿ ಭಾವಕ ಶಿಲ್ಕಅನುದಿನ ಬಲಿಬಾಗಿಲ ಕಾಯಿದಿಹನಾ| ಶಾಪದಿ ವಿರಹಿತ ಮಾಡಿದನಾ 2 ಹೋ ಹೋ ಎಂದು ಬಯಿವನಾ| ಎಣಿಕೆ ಇಲ್ಲದೆ ಪರಿಪರಿ ಯಿಂದಲಿ ಅಡಿಗಡಿಗೆ ರಕ್ಷಿಪನ್ನಾ 3 ಭಗದತ್ತನು ಗಜವೇರಿ ಬಾಣವ ಬಿಡಲಾಗಳೆ ಉರುವಾತನ್ನಾ | ಗೋಪಾಲರ ರಕ್ಷಿಸಲೋಸುಗ ಬೆರಳಲಿ ಗಿರಿ ಎತ್ತಿದನ್ನಾ 4 ಏಳದೆ ಗರ್ವದಿ ಕುಳಿತರೆ ದುರ್ಯೋಧನನ ಕೆಳಗೆಡಹಿದನ್ನಾ| ಶ್ರೀಲಲನೆಯ ಮನೋಭಾವನೆ ಪೂರಿತ ಮಹಿಪತಿ ನಂದನ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು