ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರಿಜಗ ವಂದಿತಗಾರತಿ ಎತ್ತಿರೆ ಪ ಎಳ್ಳುಂಡಲಿಗೆ ಕಬ್ಬು ಮೆಲುವವವಗೆ ಬೆಳ್ಳಿಯ ಹುರಿಗೆಜ್ಜೆಗಳ ಕಟ್ಟಿನಲಿವಗೆ ಡೊಳ್ಳಿನ ಗಣಪಗಾರತಿ ಎತ್ತಿರೆ1 ಭಕ್ತರ ಪೊರೆವವಗೆ ಉರಗ ಕುಂಡಲನ ಕುಮಾರ ಗಜವದನಗೆ ಶರಣ ಜನಕಗಾರತಿ ಎತ್ತಿರೆ 2 ದೇವತೆಗಳ ಕೈಯ ಕಪ್ಪವ ಕೊಂಬುವಗೆ ದಾವಾಗ್ನಿಯಿಂದ ಮೀರಿರುವಗೆ ಗಣೇಶಗಾರತಿ ಎತ್ತಿರೇ 3
--------------
ಕವಿ ಪರಮದೇವದಾಸರು
ನೀರಜಾಕ್ಷೇರೆಲ್ಲ ಬಂದು ಮಾರಜನಕಗೆ ಆರತಿ ಎತ್ತಿರೇ ನಾರಿಮಣಿ ಶ್ರೀ ರುಕ್ಮಿಣಿಮಣಿಗೆ ಪ ವೇದವನು ಕದ್ದ ಖಳನ ಬೇಧಿಸಿದವಗೆ ಆದರದಿಂದ ಮಂದರವೆಂಬೋ ಭೂಧರ ತಂದವಗೆ 1 ಕುಂಭಣಿಯನ್ನು ಬಿಡದೆ ತಂದ ಕುಂಭಿಣಿರಮಣಗೆ ಕಂಭದಿ ಬಂದು ದನುಜ ಡಿಂಭನ ಕಾಯ್ದ ನೃಹರಿಗೆ 2 ಭೂಮಿ ಬೇಡಿದವನಿಗೆ ದುಷ್ಟ ಭೂಮಿಪ ಹರನಿಗೆ ಕಾಮಿನಿಚೋರನ ಶಿರವ ತರಿದ ಸ್ವಾಮಿ ರಾಮಗೆ 3 ಪಾಂಡುಸುತರ ಸಲಹಿ ಖಳರ ದಂಡಿಸಿದವಗೆ ಚಂಡತ್ರಿಪುರರ ಹೆಂಡರ ವ್ರತವ ಖಂಡನೆ ಮಾಳ್ಪಗೆ 4 ದುರುಳ ನೃಪರ ತರಿದ ಕಲ್ಕಿಗೆ ವರದ ನಾಮಗಿರಿ ಶ್ರೀಹರಿಯ ಚರಣಕಮಲಕೆ 5
--------------
ವಿದ್ಯಾರತ್ನಾಕರತೀರ್ಥರು