ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆ ಶ್ರೀನಾರಾಯಣನನು ಸ್ಮರಿಸದೆ ಮಾಯಾಪಾಶಕೆ ಸಿಲುಕುವರೇ ಪ. ವನಜನಾಭನ ಪದ ವನರುಹಯುಗ್ಮವ ಅನುದಿನ ನೆನೆಯದೆ ಒಣಗುವರೇ ವನಿತಾಲಂಪಟನಾಗುತ ಸಂತತ ಮನಸಿಜಯಂತ್ರಕೆ ಮನಮರಗುವರೇ ಅ.ಪ. ತುಂಡು ಸೂಳೆಯರ ದುಂಡುಕುಚವ ಪಿಡಿದು ಗಂಡಸುತನವನು ಕೆಡಿಸುವರೆ ದಂಡಧರನ ಬಾಧೆ ಹೆಂಡತಿಯನು ಪಡ ಕೊಂಡು ವೇದನೆಯನು ತಾಳುವರೆ ಕಂಡು ಕಂಡು ನೀ ಗುಂಡಿಗೆ ಬಾಳ್ವರೆ ಹೆಂಡಿರ ಸುಖರಸ ಉಂಡರು ಸಾಲದೆ 1 ಬಂದ ಸುಖಕೆ ನೀ ಮುಂದುವರೆಯುತಲಿ ಮಂದ ಅಸಮ ದುಃಖ ತಾಳುವರೇ ಬಂದುದೆನ್ನ ಕಣ್ಣ ಮುಂದೆಯನುಭವಿಪೆ ಎಂದಿಗೆನ್ನಾಜ್ಞೆಯು ಬಂದಪುದೋ ನಿಜ 2 ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹ ಪಟ್ಟ ಭಾಗ್ಯವನೆಲ್ಲ ತೋರೊ ನೀನು ಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ- ನಷ್ಟು ಸುಖವನ್ನು ಕಾಣೆನಿನ್ನು ಇಷ್ಟಾರ್ಥಗಳೆಲ್ಲ ದೊರೆಕುವುದೈ ಪರ ಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3 ವಿಷಯ ಪಳಂಚಿತನಾಗುವ ಸಂತತ ಪಂಚಡಕೀರನು ಆಗುವರೇ ಕರ್ಮ ಸಾಲದೆಂದೆನುತಲಿ ಸಂಚಿತ ಪಾಪವ ಸಂಗ್ರಹಿಸುವರೇ ಚಂಚಲಾಕ್ಷಿಯರ ಚಪಲದ ಮಾತನು ವಂಚನೆ ಎಂಬುದು ತಿಳಿಯದೆ ಇರುವರೆ 4 ಸಾರಿಸಾರಿ ಕೈ ಮುಗಿದು ಬೇಡುವೆನು ವಿ- ಕಾರ ದುರ್ಬುದ್ಧಿಯ ಬಿಡು ಎಂದು ಭಾರಿ ತಪ್ಪುಗಳ ಕ್ಷಮಿಸಿ ಕಾವ ಲಕ್ಷ್ಮೀ ನಾರಾಯಣ ನೀನೇ ಗತಿಯೆಂದು ಪಾರಮಾರ್ಥಿಕ ವಿಚಾರವ ಮಾಡುತ ಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮನವೆ ಶ್ರೀನಾರಾಯಣನನು ಸ್ಮರಿಸದೆಮಾಯಾಪಾಶಕೆ ಸಿಲುಕುವರೇ ಪ.ವನಜನಾಭನ ಪದ ವನರುಹಯುಗ್ಮವಅನುದಿನನೆನೆಯದೆ ಒಣಗುವರೇವನಿತಾಲಂಪಟನಾಗುತ ಸಂತತಮನಸಿಜಯಂತ್ರಕೆ ಮನಮರಗುವರೇ ಅ.ಪ.ತುಂಡು ಸೂಳೆಯರ ದುಂಡುಕುಚವ ಪಿಡಿದುಗಂಡಸುತನವನು ಕೆಡಿಸುವರೆದಂಡಧರನ ಬಾಧೆ ಹೆಂಡತಿಯನು ಪಡಕೊಂಡು ವೇದನೆಯನು ತಾಳುವರೆಕಂಡು ಕಂಡು ನೀ ಗುಂಡಿಗೆ ಬಾಳ್ವರೆಹೆಂಡಿರ ಸುಖರಸ ಉಂಡರು ಸಾಲದೆ 1ಬಂದ ಸುಖಕೆ ನೀ ಮುಂದುವರೆಯುತಲಿಮಂದಅಸಮ ದುಃಖ ತಾಳುವರೇಬಂದುದೆನ್ನ ಕಣ್ಣ ಮುಂದೆಯನುಭವಿಪೆಎಂದಿಗೆನ್ನಾಜೆÕಯು ಬಂದಪುದೋ ನಿಜ 2ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹಪಟ್ಟ ಭಾಗ್ಯವನೆಲ್ಲ ತೋರೊ ನೀನುಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ-ನಷ್ಟು ಸುಖವನ್ನು ಕಾಣೆನಿನ್ನುಇಷ್ಟಾರ್ಥಗಳೆಲ್ಲ ದೊರೆಕುವುದೈಪರಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3ವಿಷಯ ಪಳಂಚಿತನಾಗುವ ಸಂತತಪಂಚಡಕೀರನು ಆಗುವರೇಮುಂಚೆ ಮಾಡಿದಕರ್ಮಸಾಲದೆಂದೆನುತಲಿಸಂಚಿತಪಾಪವ ಸಂಗ್ರಹಿಸುವರೇಚಂಚಲಾಕ್ಷಿಯರ ಚಪಲದ ಮಾತನುವಂಚನೆ ಎಂಬುದು ತಿಳಿಯದೆ ಇರುವರೆ 4ಸಾರಿಸಾರಿ ಕೈ ಮುಗಿದು ಬೇಡುವೆನು ವಿ-ಕಾರ ದುರ್ಬುದ್ಧಿಯ ಬಿಡು ಎಂದುಭಾರಿ ತಪ್ಪುಗಳ ಕ್ಷಮಿಸಿಕಾವಲಕ್ಷ್ಮೀನಾರಾಯಣ ನೀನೇ ಗತಿಯೆಂದುಪಾರಮಾರ್ಥಿಕ ವಿಚಾರವ ಮಾಡುತಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ