ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ |ನಾಮವಿಠಲ ತುಪ್ಪ ಬೆರೆಸಿ ಬಾಯಿ ಚಪ್ಪರಿಸಿರೊ ಪಒಮ್ಮನ ಗೊದಿಯ ತಂದು | ವೈರಾಗ್ಯ ಕಲ್ಲಲಿ ಬೀಸಿ |ಸುಮ್ಮನ ಸಜ್ಜಿಗೆ ತೆಗೆದು | ಸಣ್ಣ ಸೇವಗೆ ಹೊಸೆದು 1ಹೃದಯವೆಂಬ ಪಾತ್ರೆಯೊಳಗೆ | ಮನವೆಂಬ ಎಸರನಿಟ್ಟು |ಬುದ್ದಿಯಿಂದ ಪಾಕ ಮಾಡಿ |ಹರಿವಾಣತುಂಬಿರೋ 2ಆನಂದ ಆನಂದವೆಂಬ ತೇಗು ಬಂದ ಪರಿಯಲಿ |ಆನಂದ ಮೂರುತಿ ನಮ್ಮ ಪುರಂದರವಿಠಲ 3
--------------
ಪುರಂದರದಾಸರು