ಬಿನ್ನವೆನ್ನೆಣೆಸದಿರು ಎಲೆ ಮಾನವಾ
ಚನ್ನಕೇಶವ ಸ್ವಾಮಿ ಒಲಿದು ಪಾಲಿಸುವಾ ಪ
ವಸುಧೆಯಲಿ ಚಲಿಸುತಿಂತ ಸಕಲ ಜಂತುಗಳೆಲ್ಲ
ಹಸನಾಗಿ ತಿಳಿಯದೆ ನಿನ್ನಾತ್ಮವೆಂದು
ತೃಷೆ ಕ್ಲೇಶಗಳು ಮುರಿದೊಗೆವ ಜೀವವನು
ಕಸಕಸರಿ ಮಾಡದಿರು ಪರರಾತ್ಮವೆಂದು 1
ಅವರಿವರು ಬಂಧುಗಳು ಅಪ್ತೇಷ್ಟ ಸಹೃದರು
ಇವರವರು ದೂಷಕರು ಪರಜಾತಿಯೆಂದು
ಸವಿಸುತಲಿ ಮನಸನ್ನು ಪರಪಂಚವೆನಿಸುತ್ತ
ಭವವನ್ನೆ ಸೆಲೆ ನಂಬಿ ಪರರಾತ್ಮವೆಂದು 2
ದಾಸದಾಸರಿಗೆಲ್ಲ ವಂದನೆಯ ಮಾಡುತ್ತ
ದಾಸರೆಲ್ಲರು ಜಗದಿ ಏಕಾತ್ಮರೆಂಬ
ವಾತನೆಯ ನಂಬದಲೆ ಬಿನ್ನಾತ್ಮರೆಂದೆಣಿಸಿ
ವಾಸುಕೀಶಯನನೂ ಭಿನ್ನಾತ್ಮನೆಂದು 3