ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದವಾ ನೋಡು ನೀ ವಿಚಾರಿಸಿ ಏನೊಂದುಮಿಲ್ಲಾಗಿ ತಾನೆ ತಾನಾಗಿಹ ಪ ಅನಿಸಿಕೆ ತೋರಿಕೆ ಅಡಗುತಲಿರುತಿರೆ ತನಿನಿದ್ರೆಯೆನಿಸದ ಘನಪದವಾಗಿಹ ಮನಸಿನಿಂದಾಚೆಗೆ ನಿಜವಾಗಿ ನೆಲಗೊಂಡ 1 ಇದೇ ಬ್ರಹ್ಮಾನಂದವು ನೋಡೈ ಸದಾ ನಿರ್ವಿಕಲ್ಪವಾಗಿರುವಾ ಆ ಸ್ಥಿತಿಯನೆ ಗುರುತಿಸಿ ಅನುಭವಿಸುತದನಾ ಮರಳಿ ಜಾಗರದಲಿ ನೆನೆಸಿ ಆ ಸ್ಥಿತಿಯನು ಮರಣರಹಿತವದು ಅದೇ ಪರಮಾತ್ಮನುಗುರುಶಂಕರನು ಪೇಳ್ದ ಅದೇ ತಾನು ಎನ್ನುತ 2
--------------
ಶಂಕರಭಟ್ಟ ಅಗ್ನಿಹೋತ್ರಿ