ಭಕ್ತವತ್ಸಲನೆಂಬ ಬಿರುದು ಬಿಡದಿರು ದೇವ
ಬಹು ಪರಾಕೆಲೊ ಮುರಾರಿ ಪ.
ಶಕ್ತ ನೀನೆಂದು ನಂಬಿರುವೆ ಕೃಪಾಸಿಂಧು
ಮತ್ತಗಜ ಮೈಮರೆದು ಸುತ್ತಿ ಕೆಸರೊಳು ಬಿದ್ದು
ಶಕ್ತಿ ಹೀನನಾಗಿ ಏಳದಂತಾಗಿದೆ
ಮತ್ತಾರಿಗಳವಲ್ಲ ಮಂದರಾದ್ರಿಧರನೆ
ಎತ್ತಿ ಕಡೆಹಾಯಿಸೊ ಎನ್ನೊಡೆಯ ಶ್ರೀ ಹರಿಯೆ 1
ನಿಂದ ನೆಲ ಮುನಿಯುತಿದೆ ನಿಪುಣತನವಡಗಿತು
ಮಂದಮತಿ ವೆಗ್ಗಳಿಸಿ ನೆಲೆಗಾಣೆ ಮುಂದೆ
ತಂದೆ ನೀನಲ್ಲದಿನ್ಯಾರು ರಕ್ಷಿಪರಯ್ಯ
ಬಂಧನವ ಪರಿಹರಿಸೊ ಭಯನಿವಾರಣ ಹರಿಯೆ 2
ಕೊಂಡೆಯರ ಕೆಡಮೆಟ್ಟಿ ಕುಹಕಿಗಳ ಮಸ್ತಕವ
ಚೆಂಡಾಡಿದ ಚಿನ್ಮಯರೂಪ ನೀನು
ದಿಂಡರಿದು ದುರಳರನು ದುರಿತಗಳ ಪರಿಹರಿಸಿ
ಪುಂಡರೀಕಾಕ್ಷ 3
ವ್ಯಾಕುಲದಿ ಕೃಷ್ಣಮೃಗವು ಎದೆಗುಂದಿರೆ
ನೀ ಕರುಣಿ ಸಮಯದಲಿ ವೃಷ್ಟಿಯ ಕರೆದು
ಜೋಕೆಯಲಿ ಪಥÀವೆನೇರಿಸಿದ್ಯೊ ಜಗದೀಶ 4
ನಿನ್ನನೆ ಪೂಜಿಪೆನು ನಿನ್ನನೆ ಪಾಡಿ ಪೊಗಳುವೆನು
ನಿನ್ನನೆ ನಂಬಿದವಳಿಗಿಂತ
ಉನ್ನತವಾದ ಕಂಟಕವು ಬಂದಿದೆ ಕಾಯೊ
ಪನ್ನಗಶಯನ ಹೆಳವನಕಟ್ಟೆ ರಂಗಯ್ಯ 5