ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದೆ ಮೂಢಮನುಜಾಮಾನವ ಜನುಮದಿ ಬಂದೀ ಜಗದೀ ಪ ದೇಶದ ಸೇವೆಗೆ ತನು ನೀಡಿದೆಯಾಭಾಷೆಯ ಏಳ್ಗೆಗೆ ಮನ ಮಾಡಿದೆಯಾಕಾಸಿಗಾಗಿ ವಂಚಿಸಿ ನಿನ್ನೊಡಲಿನಪೋಷಣೆಗಾಗಿ ದುಡಿದೆಯಲ್ಲದೆ 1 ಆರ್ತರ ದುಃಖವನೀಡಾಡಿದೆಯಾಸ್ವಾರ್ಥದ ಹಂಬಲ ಬಿಟ್ಟು ನಡೆದೆಯಾಪೂರ್ತಿಯಾಗಿ ಜನಹಿತ ನೋಡಿದೆಯಾಧೂರ್ತತನವ ಬರಿದೆ ತೋರಿದೆಯಲ್ಲದೆ 2 ಮದಮತ್ಸರಗಳ ನೆಲಕೆ ಬಡೆದೆಯಾಹೃದಯ ನಿರ್ಮಲಗೊಳಿಸಿ ನುಡಿದೆಯಾಮುದದಿ ಗದುಗಿನ ವೀರನಾರಾಯಣನಪದವನೊಮ್ಮೆಯಾದರೂ ಸ್ಮರಿಸಿದೆಯಾ 3
--------------
ವೀರನಾರಾಯಣ