ಒಟ್ಟು 45 ಕಡೆಗಳಲ್ಲಿ , 8 ದಾಸರು , 43 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕಾಲಜ್ಞಾನ) ಮೈಯ್ಯವ ಮರಿಯ ಬ್ಯಾಡಿರೋ | ಮತ್ರ್ಯದೊಳಗ ಕಲಿರಾಯ ನರಸುತನ | ಪ್ರಬಲ ವಾಯಿತು ಕೇಳಿರೋ ಪ ಬೀಳು ಬಿದ್ದಾವೋ ಧರ್ಮದಾ ಭೂಮಿಯು | ಅಧರ್ಮವೇ ಹೆಚ್ಚೀತು | ಹೇಳಲಿನ್ನೇನವಗುಣಿಗಳು ಪ್ರಕಟಿಸಿ | ಕೇಡು ತಂದಾರು ಜಗಕೆ | ಖೂಳರ ಹಿರಿತನವು ಒಳ್ಳೆವರಾ |ಮಾನ ಮನ್ನಣೆ ಹೋದಾವು | ಮನೆಯ ಕೊಂಡುಂಬುವರು 1 ಮರ್ಯಾದೆಗಳ ಬಿಟ್ಟಾರೋ | ಕುಲಕ ಮಾತವ ತಾಹರು | ಹಗೆ ಹಾರೋ | ಹುಸಿನುಡಿದು ಮನೆ ದೈವವನೇ ಮಾರಿ | ಹದಗೆಟ್ಟು ಹೋಗುವರೋ 2 ಒಡಲು ಕಾಮಾಟಿಕೆಯಾ ಎರಡರಿಂದ | ಕೋಣ-ನಂದದಿ ಬಗಿದು | ಪಡಿ ಕೊಟ್ಟು ಸಲಹುವ ಒಡಿಯ ನೆಚ್ಚರ ವಿಲ್ಲಾ | ಮರಹು ಕತ್ತಲೆ ಮುಸುಕಿ | ಪೊಡವಿಲಿ ಭಕುತಿ ಮಾರ್ಗ ಮುಗ್ಗಿತು | ಎಲ್ಯಾರಿದ್ದರ ಹೋಲಿಕೆಯು 3 ಕಡಲ ಶಯನನ ದಾಸನೆಂದರೆ ಬಾಗರು | ನೀಚರಿಗೆರಗುವರು ಕನ್ಯರೈದು ವರುಷಕ ಗಂಡನ | ಸಂಗವ ಬಯಸುವರು | ಇನ್ನೇನು ಏಳು ಬರುಷದ ಬಾಲೇರು | ಗರ್ಭವ ಧರಿಸುವರು | ಅಣ್ಣಾ ತಂಗಿಗೆ ಮದುವೆ ಮುಂದಕ | ಆದಾವೋ ಜಗದೊಳಗ | ಜಾತಿ ಸಂಕರ ವಾಹುದು 4 ಯಾತ್ರೆಯು ನಿಲ್ಲುವವು | ನೀರು ತೋರವೆಲ್ಲಿ 5 ಶಾಸ್ತ್ರಗಳು ಮರೆವುದು | ಸಾರಿದಾ ಬೋಧವಿದು6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಧ್ಯಾಯ :ನಾಲ್ಕು ಪದ್ಯ ಮುಂದೆ ತ್ರೇತಾಯುಗವು ಬಂದಂಥ ಕಾಲದಲಿ ಇಂದಿರೇಶನು ರಾಮಯೆಂದು ದಶರಥನಲ್ಲಿ ಕಂದನಾಗ್ಯವತರಿಸಿ ತಂದೆ ಆಜ್ಞದಿ ಸೀತೆಯಿಂದ ಲಕ್ಷ್ಮಣನಿಂದ ಚಂದಾಗಿ ಬಡಗೂಡಿ ವನ ಚರಿಸಿ ಬಂದ ಯಮುನಾದ್ರಿಯಲಿ ನೊಂದು ನೀರಡಿಸಿ ತನ್ನ ಬಾಣದಿಂದ ಭೇದಿಸಿದಾ|| 1 ತಡವು ಇಲ್ಲದೆ ಭೂಮಿ ಒಡೆದು ಬಂದಿತು ಆಗ ಕಡು ಭೋಗವತಿ ನಾರಿಯು ಗುಡದಂಥ ಸವಿನೀರು ಕುಡಿದು ನರನಂತೆ ದೃಢನಿದ್ರೆಗೊಂಡ ಜಗದೊಡೆಯ ರಾಘವನು|| ದೃಢವಾಗಿ ಬಹುಕಾಲ ಬಿಡದೆ ಅಲ್ಲಿರುವ ಆ ಮೃಡನ ರಾಣಿಯು ತಾನು ನಡೆದು ಬಂದಳು ಅಲ್ಲೇ ಶರಗರಾದಿ ಕೈಯಲ್ಲಿ ಹಿಡಿದು, ಆರತಿಯನ್ನು ದೃಢಭಕುತ ಲಕ್ಷಣನು ದೃಢ ನಿದ್ರಿಗೊಂಡಂಥ ಒಡಿಯಗೆಚ್ಚರ ಮಾಡಗೊಡದೆ ಆಕೆಯ ಕಂಡು ನುಡಿದನೀಪರಿಯ|| ಪದ ರಾಗ:ಭೈರವಿ ಅಟತಾಳ ಸ್ವರ ಋಷಭ ದಾವಾಕಿ ಪೇಳಮ್ಮಾ|| ಬಂದವಳು ನೀ ದಾವಾಕಿ|| ದಾವಾಕಿ ಪೇಳಮ್ಮಾ ದಾವ ರಾಜನ ಸತಿ ದಾವ ಕಾರಣದಿಂದ ಧಾವಿಸಿಲ್ಲಿಗೆ ಬಂದೆ|| ಪ ಸುಂದರಿ ವಾಣಿಯೋ|| ಅಥವಾ ಮುಶುಂದನ ರಾಣಿಯೋ|| ಇಂದ್ರನ ರಾಣಿಯೋ|| ಚಂದ್ರನ ರಾಣಿಯೋ|| ಚಂದ್ರಮುಖಿಯೇ ನೀನು ಚಂದಾಗಿ ಪೇಳಮ್ಮಾ|| 1 ಭಾತೃರಾದವರು ನಾವು|| ಪರಸ್ಪರ ಪ್ರೀತಿಯಿಂದಿರುವೆವು|| ಸೀತಾವಿರಹದಿಂದ ಸೋತುಬಂದೆವು ಇಲ್ಲೆ ಮಾತೇ ಮೌನವು ಬಿಟ್ಟು ಮಾತಾಡು ಬ್ಯಾಗನೇ|| 2 ಬ್ರಹ್ಮಚರ್ಯವೆಂಬುದು|| ಈ ಕಾಲಕ್ಕೆ ನಮ್ಮಲ್ಲಿ ಇರುವುದು|| ತಮ್ಮ ಲಕ್ಷ್ಮಣ ನಾನು ನಿರ್ಮಲ ಗುಣರಾಮ ನಮ್ಮಣ್ಣನಿವ ಪರಬ್ರಹ್ಮಾನಂತಾಧ್ರೀಶಾ|| 3 ಆರ್ಯಾ ಲಕ್ಷ್ಮಣ ನಾಡಿದ ಮಾತೂ|| ಲಕ್ಷಿಗೆ ತರಲಿಲ್ಲ ದೇವಿ ಮಾತಾಡಿದನೂ ಹೀಗೆಂದೂ|| ಪದ ರಾಗ:ಧನ್ಯಾಸಿ ಆದಿತಾಳ ನಡಿ ನಡಿ £ಡಿ ನೀನು || ನುಡಿಯದ ಭಾಗಿಯೇನು|| ನ || ನಡಿ ನಡಿ ಹಿಂದಕು ಬಡಿವಾರೇನಿದು ಬಿಡು ಬ್ಯಾಗನೆ ನಿನ್ನ ಎನಗೆ ಬಿಡದೆ ಬಾಣದಿಂದೊಡೆವೆನು ನಾನು| ಪ ಎಕಾಂತ ಸ್ಥಳಕೆ ಕಾಲಕೆ ಒಬ್ಬಾಕೆ ಬರುವದಿದು ದಿಂದ ನೀ ಬೇಕಾದಲ್ಲೆ|| 1 ವನವನ ಚರಿಸುಲವ ವನವಾಸಿಗಳಿಗೆ ವನುತಿಯ ಸಂದರ್ಶನ ನಮಗ್ಯಾಕಿದು ಗುಣವಂತಿಯೆ ಅರಕ್ಷಣ ನಿಲ್ಲದಲೆ 2 ಕಾಲದಲಿ ಗದ್ದಲ ಮಾಡದೆ ಬುದ್ಧಿವಂತೆಯೆ|| 3 ಅನುಜನ ಈಪರಿ ಸಿಟ್ಟು || ಅನುಸರಿಸುತಾ ಎದ್ದ ನಿದ್ರೆಯನು ಬಿಟ್ಟು || ವನುತಿಯ ನೋಡಿದ ರಾಮ|| ವಿನಯದಿ ಮಾತಾಡಿವನು ಗುಣಧಾಮ || 1 ಪದ ರಾಗ:ದೇಶಿ ಅಟತಾಳ ಸ್ವರ :ಷಡ್ಜ ದಾರ್ಹೇಳಮ್ಮಯಾ ಉದಾರ್ಹಳಗಿರುವೆ ನೀ || ದಾರ್ಹೇಳಮ್ಮಯ|| ದಾರಿಲ್ಲಿ ಸ್ಥಳದಲ್ಲಿ ದಾರನ್ಹುಡುಕುವಿ ನಿ|| ದಾ|| ಪ ವನದಲ್ಲೆ ಇರುವಂಥ ವನದೇವತೆಯೇ ನೀ|| ದಾ|| ಮನಿಯಲ್ಲೇ ಇರುವಂಥ ಮನಿದೇವತೆಯೋ ನೀ || ದಾ|| 1 ಪ್ರಾಯಶ ಶ್ರೀಹರಿ ಮಾಯಾರೂಪಿಯೋ ನೀನು || ದಾ|| ಆಯಾದ ವಿಲ್ಲದೆ ಬಾಯಿಲೆ ಬಿಚ್ಚಾಡು || ದಾ||2 ಕ್ಲೇಶ ವೋಡಿಸುವಂಥ ಈಶನ ರಾಣಿಯೋ || ದಾ|| ದೋಷರಹಿ ತಾನಂತಾಧ್ರೀಶನ ರಾಣಿಯೋ|| 3 ಆರ್ಯಾ ಕೋಮಲತರ ವಚನಗಳೂ || ರಾಮನ ಬಾಯಿಂದ ಮಾತಾಡಿದಳು ಹೀಗೆಂದೂ|| 1 ಪದ ರಾಗ:ದೇಶೀ ಆಟತಾಳ ಸ್ವರ :ಷಡ್ಜÀ ಕೇಳೋ ರಾಮನೆ ನಿನಗ್ಹೇಳುವೆ ಗುರುತವ || ಕೇಳೋ ರಾಮ|| ಕೇಳುತ ನಿನ್ನ ಮಾತು ಬಾಳ್ಹಾನಂದಾಯಿತು || ಕೇಳೋ|| ಪ ವನದೇವತೆ ಅಲ್ಲ ಮನಿಯ ದೇವತೆ ಅಲ್ಲ || ಕೇ|| ವನಜಾಕ್ಷ ತುಳಜಾಯಂದ್ಯನಿ ಕೊಂಬುವೆ ನಾನೂ || ಕೇ|| 1 ಮಾಯಾರೂಪಿಯು ಅಲ್ಲ ಆಯಾಸಯನಗಿಲ್ಲ ||ಕೇ|| ಮಾಯಾರಮಣ ನಿನ್ನ ತಾಯಿ ಯಂದ್ಯನಿಸುವೆ || ಕೇ|| 2 ಶುದ್ಧ ಚಿನ್ಮಯ ಅನಂತಾದ್ರಿರಮಣ ನೀನು || ಕೇ|| ಸಿದ್ಧಾಗಿ ನಾ ಯಮುನಾದ್ರಿಯಲ್ಲಿರುವೆನು||3 ಆರ್ಯಾ ಕಾಯಜ ಪಿತ ಕೇಳಿದನೂ|| ಹಾಯಿದು ಏನೆಂದೂ|| ಮಾತನಾಡಿದನೂ || ಆಯತಾಕ್ಷಿ ಆದವಳೂ || ತಾಯಿಯು ಎನಗ್ನಾಂಗಾದಿ ನೀ ಪೇಳೆ|| 1 ರಾಮನ ಮಾತಿಗೆ ತುಳಜಾ || ಪ್ರೇಮದಿ ಮಾತಾಡಿದಳು ತಾವಿರಜಾ || ರಾಮಗ ಕಥಿ ಆದಂತಾ|| ನೇಮಿಸಿ ಹೇಳಿದಳು ಪೂರ್ವ ವೃತ್ತಾಂತಾ|| 2 ಪದ್ಯ ರಾಮಕೇಳು ಪೂರ್ವದಲ್ಲಿ ಜಮದಾಗ್ನಿಯು ಪರಶುರಾಮನಾಗಿರುವಿ ನೀನಾ ಮಹಾಮುನಿ ಪತ್ನಿ ನಾಮದಲೆ ರೇಣುಕಿಯು ನೀ ಮಗನು ಎನಗಾದಿ ಭೂಮಿಯಲಿ ಪ್ರಾಖ್ಯಾತ ನಾಮತಿ ಕೃತವೀರ್ಯಜನು ಕಾಮಧೇನುವು ಬಯಸಿ ಆ ಮುನಿಯ ಕೊಂದಿರಲು ಆಮ್ಯಾಲ ಪತಿಯಿಂದ ನೇಮದಲಿ ಸಹಗಮನ ನಾ ಮಾಡಿದೆನು|| 1 ಪತಿಯ ಪ್ರೇಮದಲಿ ಸ್ಮರಿಸಿ ಪರಶುರಾಮನು ಎನ್ನಸ್ಮರಿಸಿ ಕೈಮುಗಿದು ಈ ಪರಿಯು ಮಾತಾಡಿದನು ವರ ಮಾತೆಯನು ಕೂಡಿ ಇರದೆ ನೀ ಹೋದಿ ಸಂದರ್ಶನವು ಎಂದಿನ್ನ ತ್ವರದಿ ನೀ ಹೇಳೆನಗೆ ಕೇಳುತಲೆ ತ್ವರದಿಂದ ನಾನು ಸುಂದರ ರೂಪವ ತೋರಿ ಈ ಪರಿಯು ಮಾತಾಡಿದೆನು ವರಪುತ್ರ ಕೇಳು ಮುಂದಿರುವ ತ್ರೇತಾಯುಗವು ಬರುತಿರಲು ಆಗ ಸಂದರ್ಶನವ ಕೊಡವೆ|| 2 ಹೀಗೆಂದು ಹೇಳಿದ್ಯಾಗ ಆತಗ ನಾನು ಈಗ ಆತನೇ ನೀನು ರಾಘವನು ಆಗಿರುವಿ || ಹಿಂಗೆನಲು ಮುಂದೆ ಆ ರಾಘವನು ಕೊಟ್ಟಳಾಗ ತುಳಜಾದೇವಿ ಬ್ಯಾಗ ನಿನ್ನ ಕಾರ್ಯ ಚನ್ನಾಗಿ ಆಗುವುದೆಂದು || ನಾಗವೇಣಿಯು ತಾನು ಹೋಗಿಬರುವೆನೆಂದು ಆಗ ಅಲ್ಲೇವೇ ಗುಪ್ತಾಗಿ ಇರುವುವಳು|| 3 ಪದ ರಾಗ:ಶಂಕರಾಭರಣ ಆದಿತಾಳ ಸ್ವರ :ಮಧ್ಯಮಾ ತಂದನು ಕೇವಳ್ಹಾಗ್ನಿಯ ಸಾಕ್ಷಿಯಿಂದೆ|| 1 ಆದರೂ ಇಷ್ಟಾರ್ಥಗಳು ಕೊಡುವೋದು|| 2 ವರದ ಶ್ರೀರಾಮ ವರವು ಕೊಟ್ಟಿರುವಂಥಾ ತುಳಜಾ ದೇವಿಯ ದಿವ್ಯ ಮಹಿಮೆ || ಹರುಷದಿ ಕೇಳಿದರೆ ಹರುಷವ ಕೊಡುವುದು ಪರಿಹರಿಸೋದು ಕಷ್ಟವೆಲ್ಲಾ 3 ಪುತ್ರರು ಆಗುವರು ಪೌತ್ರರು ಆಗುವರು ಸತ್ಯಮಾತಿದು ಭಾವವ ಬಿಟ್ಟು|| 4 ಗ್ರಂಥವೆಂಬುವದಿಂದು || ಎಂಥಾದಾದರೂ ಎನೂ ಸಂತೋಷ ನಮ್ಮ ಗುರುಗಳಿಗೆ|| ಸಂತರೆಂಬುವರಿಗೆ ಸಂತೋಷಾಗಲಿ ನಮ್ಮಾನಂತಾದ್ರೀಶನೆ ನುಡಿಸಿದಾ|| 5 ಆರ್ಯಾ ವರ ಕವಿತಾ ರZನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದೆನ್ನ ಉಪಾಯಾ || ಗುರುಕೃಪೆಯಿಂದಾಯಿತು ನಾಲ್ಕು ಅಧ್ಯಾಯಾ|| 1 ಪದ ರಾಗ:ಪೂರ್ವಿ ಅಟತಾಳ ಸ್ವರ:ಮಧ್ಯಮಾ ನಿತ್ಯ ಮಂಗಳವನು ಕೊಟ್ಟು ಸಲಹುವ ತಾಯಿಗೆ|| ಪ ಘನತರ ಕೈಲಾಸ ಮನಿಯು ಮಾಡಿದವಳಿಗೆ|| ಅನುದಿನ ಅಲ್ಲಿರುವಂಥಾಕಿಗೆ | ಅನುಭೂತಿ ತಪಸಿಗೆ ಅನುಕೂಲಾಗುವೆನೆಂದು ಅನುಮಾನಿಲ್ಲದೆ ಬಂದಿರುವಾಕಿಗೆ|| 1 ಅಷ್ಟಭುಜಗಳುಳ್ಳಂಥಾಕಿಗೆ || ಅಷ್ಟೆಶ್ಚರ್ಯದಿಂದಿರುವಾಕಿಗೆ|| ದುಷ್ಟದೈತ್ಯನ ಕೊಂದಂಥಾಕೆಗೆ|| 2 ಅಮಿತ ಮಹಿಮೆ ಉಳ್ಳಂಥಾಕೆಗೆ|| ಯಮುನಾದ್ರಿಯಲಿ ಬಂದಿರುವಾಕೆಗೆ|| ಗಮನದಿಂದಲಿ ರಾಮ ಶ್ರಮಬಟ್ಟು ಅಲ್ಲೇ ವಿಶ್ರಾಮಿಸಲು ದರ್ಶನ ಕೆÀೂಟ್ಟಾಕೆಗೆ|| 3 ಕಾಮಿತ ಫಲವನು ಕೊಡುವಾಕೆಗೆ|| ರಾಮನು ಸಾವಿರ ನಾಮದಿ ಸ್ತುತಿಸಲು|| ಪ್ರೇಮದಿವರವು ಕೊಟ್ಟಂಥಾಕಿಗೆ|| 4 ಚಿಂತಿಸುವರ ಮುಂದ ನಿಂತಾಕೆಗೆ|| ಸಂತೋಷವನು ಕೊಡುವಂಥಾಕಿಗೆ|| ಅಂತರಂಗದಲ್ಲಿಹ ಚಿಂತೆಯ ಬಿಡಿಸಿ|| ಅನಂತಾದ್ರೀಶನ ತೋರುವಂಥಾಕೆಗೆ|| 5
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಪೂತನಾ ಅಸುಹಾರಿಣಿ ನಮಃ ಪದ್ಯ ಪೊಡವಿಯಲಿ ಎಲ್ಲರಿಗೆ ಒಡಿಯನಾಗಿರುವಂಥ ಖಡು ಪಾಪಿ ಕಂಸಗೆ ಬಿಡದೆ ಪ್ರತಿವರ್ಷಕ್ಕೆ ಕೊಡತಕ್ಕ ಕಪ್ಪವನು ಕುಡಬೇಕು ಎಂತ್ಯೆಂದು ನಡದು ತಾ ಮಥುರೆಯಲಿ ಖಡುನಂದಗೋಪಾ| ಒಡಿಯನಪ್ಪಣಿಯಿಂದ ಗಡಬಡಿಸೆ ಪೂತನಿಯು ಹುಡುಗರನ್ನು ಹುಡುಕುತಲೆ ಬಡಿವಾರ ತೋರುತಲೆ ನÀಡದು ಬಂದುಳು ಹಾದಿ ಹಿಡಿದು ಗೋಕುಳಕೆ|| 1 ಧಡಿಯ ದಿವ್ಯಾಂಬರವು ಶಡಗರದಿ ಉಟ್ಟಿಹಳು ಕಿಡಿಯಂಥ ಕುಪ್ಪುಸವು ದೃಢ ಬಿಗಿದು ತೊಟ್ಟಿಹಳು| ಬಿಡÀದೆ ಸರ್ವಾಭರಣ ಜಡದಿಹಳು ತಾ ಮಿಂಚು ಹೊಡದಂತೆ ತೋರುವಳು ಉಡುರಾಜ ಮುಖಿಯು| ಎಡಬಾರಿ ದುರಬಿನಲಿ ದೃಢವಾಗಿ ಮಲ್ಲಿಗಿಯು ಮುಡಿದಿಹಳು ಉರದಲ್ಲಿ ದೃಢವಾದ ಕುಚವೆರಡು ನಡವುದಾ ಕಾಲಕ್ಕೆ ನಡಗುತಿಹವು 2 ಬಿಂಬೋಷ್ಟಿ ಮಾಯ ಅವಲಂಬಿಸುತ ಗೋಕುಲದ ತುಂಬ ಬೆಳಕವು ಮಾಡಿ ಜಂಭದಲಿ ಬರುತಿಹಳು ಗಂಭೀರಳಾಗಿ ತನಗುಂಭ ತಿಳಿಗುಡದೆ ಕುಚ ಕುಂಭಗಳವಳಗ ವಿಷ ತುಂಬಿಟ್ಟು ಕೊಂಡು ಅಂಬುಜಾಕ್ಷಿಯ ಕಂಡು ಸಂಭ್ರಮದಿ ಗೋಕುಲದ ಜಗದಂಬಿಯೊ ಎಂದೂ 3 ಮುಂದ ಆ ಪೂತನಿಯು ನಂದಗೋಪನ ಮನಿಗೆ ಬಂದು ದೇವೇಚ್ಛಿಯಲಿ ನಂದನಂದನನ ಕಣ್ಣಿಂದ ನೋಡಿದಳಾಗ ಛಂದದ್ಹಾಸಿಕೆಯಲಿ ಛಂದಾದ ಲೌಕೀಕದ ಕಂದನಂತೆ| ಮುಂದವನ ತೊಡಿಯ ಮ್ಯಾಲೆ ಛಂದಾಗಿ ಧರಿಸಿದಳು ಕಂದರ್ಪನೈಯನೆ ಕಂದನಾಗಿರುವನೆಂತ್ಯೆಂದು ತಿಳಿಯದೆ ನಿದ್ರಿ ಯಿಂದಿರುವ ಸರ್ಪ ಕರದಿಂದ್ಹಿಡಪರಿ ರಜ್ಜು ಎಂದುಬ್ಯಾಗೆ 4 ಶ್ರೀನಿವಾಸನ ಜನನಿ ಮೌನ ಹಿಡಿದಳು ಕಪಟತನ ತಿಳಿಯದೆ ಬುದ್ಧಿಹೀನ ಪೂತನಿಯು ಸ್ತನಪಾನ ಮಾಡಿಸಿದಳಾ ದಾನವಾರಿಗೆ ಅವನು ಪ್ರಾಣಸಹಿತಾಗಿ ವಿಷಪಾನ ಮಾಡಿದನು| ದ್ರೂಣನಾಗಿರುವವನ ಪಾಣಿಯಲಿ ಸಿಕ್ಕು ಗತಿಗಾಣದಲೆ ಉತ್ಕøಷ್ಟ ವಾಣಿಯಿಂದಲೆ ಒದರಿ ಭ್ರೂಣಹನನಕ ಬಹಳ ಜಾಣಿ ಎಂತ್ಯೆನಿಸುವಳು ಪ್ರಾಣ್ಹೋಗಿಬಿದ್ದಳಾ ಪ್ರಾಣಿ ಪೂತನಿಯು. ಪದ:ರಾಗ :ಶಂಕರಾಭರಣ ಅಟತಾಳ, ಸ್ವರಷಡ್ಜ ಬಿದ್ದಾಳು ಪ್ರಾಣ ಹೋಗಿ ಪೂತನಿ ಜನ್ಮಗೆದ್ದಾಳು ಬಾಲಕ ಘಾತಿನಿ| ಬಂತುದೆವಾಯಿತು ಮತ್ತಲ್ಲೆ|| 1 ಗಿರಿಯಂತೆ ಆ ದೇಹ ಇರುವೋದು ಆರು ಹರದಾರಿ ಪರಿಯಂತೆ ಬಿದ್ದಿಹದು| ಕರಚರಣಗಳ್ಹರವಿ ಇರವದು ಅಲ್ಲಿ ಇರವೂ ವೃಕ್ಷಗಳೆಲ್ಲಾ ಮುರದಿಹದು|| 2 ಎರಡು ಕಣ್ಣುಗಳು| ದಾಡುವರಲ್ಲೆ ನದಿಗಳು|| 3 ಭಾವಿಯಪರಿ ತೋರುವುದು ಹೇಳುವದಿನ್ನು ಉಳದಿಹುದು ದಾನವಾರಿಯಕೊಂಡು ಕರದಿಂದ ವಿಷಪಾನ ಮಾಡಿಸಿದ ಕಾರಣಿದಿಂದ | ಹಾನಿತನಗೆ ಬಂತು ತ್ವರದಿಂದ| ಅಚುತಾನಂತಾದ್ರೀಶ ಕರದಿಂದ|5 ಪದ್ಯ ಬಾಲಕಾಕಿಯ ಎದಿಯಮ್ಯಾಲೆ ನಿರ್ಭಯದಿಂದ ಲೀತಿಯನ ಮಾಡುತಿಹ ಬಾಲಿಯರು ಬ್ಯಾಗ ಆ ಬಾಲಕನ ಕರಕೊಂಡು ಮ್ಯಾಲೆ ಗೋಮೂತ್ರದಲಿ ಬಾಲಗ್ಯರದರು ಅವರು ಭಾಳ ಸಂಭ್ರಮದಿ| ಕಾಲ ಆ ಕಾಲಕಿಟ್ಟರು ನಂದ ಬಾಲಕರನೆನಿಸುವ ಜಗತ್ಪಾಲಕಗ ರಕ್ಷಾ|| 1 ಬಾಲ ನಿನ್ನನ್ನು ಜಗತ್ಪಾಲಕನು ರಕ್ಷಿಸಲಿ| ಪದಾಗಳು ಆ ಮೂರು ಪಾದದವ ರಕ್ಷಿಸುತಾ ಜಂಘವನು ಮತ್ತ ಶ್ರೀರಂಗ ತಾ ರಕ್ಷಿಸಲಿ ಜಾನುವನು ರಕ್ಷಿಸಿ ಜಾನ್ಹವಿಜನಕಾ | ಉರುಗಳಾ ರಕ್ಷಿಸಲಿ ಉರ್ವೀಶ ಹರಿತಾನು ನಾಭಿಯನು ಶ್ರೀಪದ್ಮನಾಭ ಸಂರಕ್ಷಿಸಲಿ ಹೃದಯಗತ ಶ್ರೀ ಹರಿಯು ಭುಜಗಳನು ರಕ್ಷಿಸಲಿ ಭುಜಗಶಯನಾ||2 ಕಂಠವನು ಮತ್ತ ವೈಕುಂಠಪತಿ ರಕ್ಷಿಸಲಿ ಮುಬವನ್ನು ರಕ್ಷಿಸಲಿ ಮುಕುಟವರ್ಧನ ಹರಿಯು| ಶಿರವನ್ನು ರಕ್ಷಿಸಲಿ ಶಿರಿಯರಮಣನನು ತಾನು ಅಂಗಜನ ಜನಕ ಸರ್ವಾಂಗ ರಕ್ಷಿಸಲಿ| ಜಲಜಾಕ್ಷಿಯರು ಹೀಂಗ ಹಲವು ದೇವತಿಗಳನ ಬಲಗೊಂಡು ಮತ್ತವರ ಬಲದಿ ರಕ್ಷೆಯ ನೀಡಲು| ಜಲಜಮುಖಿ ಜನನಿ ತನ್ನ ಚಲುವ ಬಾಲಕಗ ತಾ ಮೊಲಿಕೊಟ್ಟು ಮಂಚದಲಿ ಮಲಗಿಸಿದಳವನಾ| ಖಳಕಂಸಗಾ ಕಪ್ಪುಗಳ ಕೊಟ್ಟು ನಂದ ತಾ ಇಳದ ಮನಿಯಲಿ ಇರಲು ತಿಳದು ಆ ಸುದ್ದಿ ತನ್ನ ಸ್ಥಳವನ್ನು ಬಿಟ್ಟು ಆ ಸ್ಥಳಕ ಬಂದನು ಪರಮ ಗೆಳೆಯ ವಸುದೇವ ಮನದೊಳಗ ಹಿಗ್ಗುತಲೆ|| 3 ಆರ್ಯಾ ಜಾಣನು ಆತನ ಕಾಣುತಲ್ಯದ್ದನು ಪ್ರಾಣಬರಲು ದೇಹದ ಪರಿಯು| ಪ್ರಣಾಮಮಾಡಿ ಆ ಪ್ರಾಣಯನಪ್ಪಿದ ಪಾಣಿಹಿಡಿದು ಗೋಕುಲ ಧೊರಿಯು|| 1 ಆಮ್ಯಾಲಿಬ್ಬರು ಪ್ರೇಮದಿ ಕುಳಿತರು ಕ್ಷೇಮವಿಚಾರ ಮಾಡುತಲೆ| ಆಮ್ಯಾಲ ಶೌರಿಯು ಕೋಮಲ ಹೃದಯದಿ ತಾ ಮಾತಾಡಿದ ಪ್ರೇಮದಲೆ|| 2 ಪದ:ರಾಗ:ಶಂಕರಾಭರಣ ತಾಳ:ಭಿಲಂದಿ ಸ್ವರ:ಪಂಚಮ ಸಕಲ ಜನರು ನಂದಗೋಪ ಸುಖದಲಿರುವರೆ ಸಖನೆ ನಿನ್ನ ಮನಿಗೆ ಭಾವುಕರು ಬರುವರೆ|| ಪ ದೃಷ್ಟ ವಿಷಯನಾದಿ ನೀ ಅದೃಷ್ಟಯೋಗದಿ| ವೃಷ್ಟಿ ಮಾಡಿದಿ|| 1 ನಿನಗ ಪುತ್ರನಾದ ಸುದ್ದಿ ಎನಗ ಮುಟ್ಟಿತು | ನನಗೆ ಕಡೆಯ ಪುತ್ರನವನೆ ನಿನಗೆ ಒಪ್ಪಿತು|| 2 ಸಕಲರಿಂದ ಕೂಡಿ ಅವನು ಸುಖದಲಿರುವನೆ ಸಕಲ ಜನರಿಗ್ಯವನು ಪ್ರಾಣಸಖನು ಆದನೆ|| 3 ಅಲ್ಯೆ ಗೋಗಳೆಲ್ಲ ರೋಗ ಇಲ್ಲದಿರುವವೆ| ಹುಲ್ಲು ನೀರಿನಿಂದ ಸೌಖ್ಯದಲ್ಲಿ ಇರುವವೆ|| 4 ಚನ್ನಿ ಗಾನಂತಾದ್ರೀಶನ್ನ ನೆನುವರೆ 5 ಆರ್ಯಾ ಛಂದಾಗ್ಯವ ಹೀಗೆಂದ ಮಾತು ಆನಂದಗೋಪ ತಾ ಕೇಳುತಲೆ| ಮುಂದಾ ಶೌರಿಯಮುಂದ ನುಡದನು ಮಂದಹಾಸ್ಯದಲಿ ನಗುವುತಲೆ|| 1 ಪದ, ರಾಗ :ಮುಖರಿ ತಾಳ :ಆದಿ ದುಃಖವು ಸುಖಕಾರಿಯೆ ಪ ಎನಗೆ ತಿಳಿನೀನು|| 1 ಹಿಂದಿನ ದುಃಖ ಹಿಂದೆ ಹೋಯಿತು | ತಿಳಿ ಮುಂದ ನಿನಗೆ ಸೌಖ್ಯವಾದೀತು|| 2 ಚಿಂತಿಮಾಡಲಿ ಬ್ಯಾಡಾ ವಸುದೇವಾ| ಚಲುವಾನಂತಾದ್ರೀಶನೆ ದಯ ಮಾಡಿರುವಾ|| 3 ಆರ್ಯಾ ನಂದ ಗೋಪನಾನಂದ ವಚನಗಳ ಛಂದದಿ ಕೇಳುತ ವಸುದೇವಾ | ಮುಂದ ನುಡದ ಹೀಗಂದು ಮತ್ತ ತ್ವರದಿಂದ ತನ್ನ ಹೃದ್ಗತ ಭಾವಾ || 1 ಪದ ರಾಗ:ಸಾರಂಗ ಆದಿತಾಳ ಸ್ವರ:ಷಡ್ಜ ಭಿಡಯಾ ಬಿಟ್ಟ ಹೇಳುವೆ ಎನ್ನ ನುಡಿಯು ಲಾಲಿಸಿ|| ಪ ಉತ್ತಮ ಕೇಳಿನ್ನಾಮಗನಾ ಉತ್ಪತ್ತಿ ಕಿವಿಯಿಂದ ಕೇಳಿ| ಉತ್ಪನ್ನವಾದಾವು ಬಹಳ ಉತ್ಪಾತಗಳು|| 1 ಕಂಸನ ಅಂಜಿಕೆಯಿಂದ ಸಂಶಯ ಬಿಡುವÀಲ್ಲದಿನ್ನು| ಸಂಸಾರದೋಳ್ಸುಖವು ಸ್ವಲ್ಪಾ ಸಂಶಯವೆ ಭಾಳಾ||2 ಮುಟ್ಟಿತು ಕಂಸಗ ಕಪ್ಪ ಭೆಟ್ಟಿ ಆಯಿತು ನಿಮ್ಮನು| ಘಡ್ಯಾಗಿ ಅನಂತಾದ್ರೀಶನ ಮುಡ್ಡಿ ಭಜಿಸುತ|| 3 ಪದ್ಯ ಯಾದವನ ಮಾತಿಗ್ಯನು ಮೋದವನು ಬಟ್ಟು ನಂದಾದಿಗಳು ಗೋಕುಲದ ಹಾದಿಯನು ಹಿಡಿದು ಪರಮಾದರದಿ ನಡದರು. ಅಗಾಧವಾಗಿಹ ದೇಹ ಹಾದಿಯಲಿ ಬಿದ್ದಿಹುದು ಹಾದಿಯನು ಕಟ್ಟಿ| ಆ ದೇಹ ನೋಡುತ ಅಗಾಧ ಬಟ್ಟವರು ಅಲ್ಯಾದದ್ದು ಮನದಲ್ಲಿ ಶೋಧಿಸ್ಯಂದರು ಹೀಗೆ | ಸಾಧು ವಸುದೇವ ಹುಸಿ ಆದದ್ದು ಉಂಟೇ| 1 ಪರಿ ಅವರು ಕೊಡಲಿಯನು ಕೊಂಡು ಕಡಕಡದು ಈ ದೇಹವನು ಸುಡಲು ದೂರದಲಿಟ್ಟು ಕಡೆ ಬಿಡದೆ ಆಕಾಶಕ್ಕೆ ಅಡರಿತಾಗೆ| ಖಡುಪಾಪಿ ಪೂತನಿಯು ಕುಡಲು ವಿಷ ಮೊಲಿಯನ್ನು ಕುಡುದು ಸದ್ಗತಿಕೊಟ್ಟ ತಡವಿಲ್ಲದಲೆ ಹರಿಯು ದೃಢಭಕ್ತಿಯಿಂದಲೆ ಕಡಿಗೆ ಕ್ಷೀರಾದಿಗಳು ಕೊಡಲು ಸದ್ಗತಿಯನ್ನು ಕುಡವದೇನÀದು|| 2 ಶೌರಿಸಖನಂದ ಪರಿವಾರ ಸಹಿತಾಗಿ ತಾ ಈ ರೀತಿ ಉತ್ಪಾತ ಮೀರಿ ಮನಿಯಲಿ ಬಂದು ಪೂರ್ವದಲಿ ಆಗಿಹ ಅಪೂರ್ವ ವೃತಾಂತವನು ಪೂರ ಕೇಳ್ಯಾಶ್ಚರ್ಯ ಪೂರಿತನು ಆಗಿ ವೈರಿ ಪೂತನಿಯ ಸಂಹಾರಿಯಾ ಕರಕೊಂಡು| ಚಾರುಮುಖ ನೋಡಿ ಸುಖಪೂರನಾದಾ | ಈ ರೀತಿ ಚರಿತವನು ಆರು ಕೇಳುವರು ಅವರ ಘೋರ ದುರ್ಷಟವೆಲ್ಲ ದೂರಾಗಿ ಹೋಗುವದು ಶುಭಚನ್ಹ ಚಾರ್ವನಂತಾದ್ರೀಶ ಮೂರುತಿಯು ಮುಗಿಸಿದಿದು ಭಾಗವತ ದಶಮಸ್ಕಂಧ 3 ಪೂತನಾದಧೋ ನಾಮ ತೃತಿಯೋಧ್ಯಾಯಃ| || ಶ್ರೀ ಕೃಷ್ಣಾರ್ಪಣಮಸ್ತು|| || ಮೂರನೆಯ ಅಧ್ಯಾಯವು ಸಂಪೂರ್ಣ||
--------------
ಅನಂತಾದ್ರೀಶ - ಕಥನಕಾವ್ಯಗಳು
ಆರಿಗ್ಯಾತಕೆ ಮೊರೆಯಿಡಲಿ ಸಾರಿದವರನ ಪೊರೆವ ಶ್ರೀರಮಣ ನೀನಿರಲು ಪ ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ ಅಳತಿಗೆ ಇನ್ನೊಬ್ಬನೆ ಹಾಗೆವೆ ವಳತಿಗೊಬ್ಬರು ದೊರೆಗಳೆ ಮ್ಯಾಲೆನ್ನ ಪ್ರಳಯಕೆ ಮತ್ತೊಬ್ಬನೆ ಪರಿಪರಿ ಖಳರ ಮಾತುಗಳೇ ಸ್ವಾಮಿ 1 ಆಕಾಲ ನೀನೆವೆ ಈ ಕಾಲದಲಿ ನೀನೆ ಸಾಕುವನು ಇನ್ನೊಬ್ಬನೆ ಸ್ಥಿರವಾಗಿ ತಾಕು ತಗಲಿಲ್ಲದೆಲೆ ಬೊಮ್ಮಾದಿ ಲೋಕಪತಿಗಳ ಒಡಿಯನೇ ಈ ವ್ಯಾಳ್ಯ ಲೋಕರನ ಕಾಯಬೇಕೊ ಸ್ವಾಮಿ 2 ಕಾಸು ಒಬ್ಬರಿಗಿಲ್ಲ ಲೇಸು ತೋರದಲೇವೆ ದೇಶಕೊಬ್ಬರು ಪೋದರೋ ಪೊಟ್ಟಿಗೆ ಕೂಸುಗಳ ಮಾರುಂಡರೋ ಈ ಜನರ ಕ್ಲೇಶಬಡಸದಲೆ ಪೊರಿಯೊ ಕರುಣದಲಿ ವಾಸುದೇವವಿಠಲ ಸ್ವಾಮಿ 3
--------------
ವ್ಯಾಸತತ್ವಜ್ಞದಾಸರು
ಇಕ್ಕೊ ಇಲ್ಲೆ ಹಾನೆ ಸಕಲ ಪಾಲಕ ತಾನೆ ಭಕುತಿ ನಿಜವಾಗಲಿಕೆ ಪ್ರಕಟವಾಗತಾನೆ ಧ್ರುವ ಒಡನೆ ತನ್ನೊಳು ನೋಡಲಿಕ್ಕೆ ಜಯಜಯವೆನ್ನಿ 1 ಪಡೆದುಕೊಳ್ಳಿ ಖೂನವಿಡಿದು ಗುರುಙÁ್ಞನ ಬಿಡದೆ ಭಾಸುತಾನೆ ಒಡಿಯ ನೋಡಿ ನಿಜಸ್ಥಾನ 2 ಹಿಡಿಯಬೇಕು ಬ್ಯಾಗ ಜಡಿದು ಮನಯೋಗ ಕುಡುವಾ ಮಹಿಪತಿ ಗುರು ಸ್ವಾನುಭವಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಪರಬ್ರಹ್ಮದ ನೆಲೆಯು ಇಹಪರವೆಂಡನು ಗೆಲು ವದು ಗುರು ಕರುಣಾನಂದದ ಬೆಳಗಹುದÀಹುದು ಧ್ರುವ ಮಾತಿಗೆ ದೊರೆಯದಿದು ಅನುದಿನ ಭೇದಿಸದಲ್ಲದೆ ಕಾಣಿಸದು ಮುನ್ನಬಾರನು ಕಾಣಿಕಿಗೆಂದು ಅಳವಹುದೆ 1 ಸದ್ಗತಿಮೋಕ್ಷವು ಮಾರಗವು ಸಾಭ್ಯಸ್ತವಾಗದೆ ಸಾಕ್ಷಾತ್ಕಾರದಿ ಪ್ರತ್ಯಕ್ಷ ಪ್ರಮಾಣವಿವು ಇದು ಎಂದಿಗೆ ತಿಳಿಯದು ಭೇದಕನಲ್ಲದೆ ಸೋಹ್ಯ ಸೊನ್ನೆಯ ಮತಿಹೀನರಿಗಿದು ಅಳವಹುದೆ 2 ಲೋಲ್ಯಾಡುವ ನಿಜ ಮಂದಿರವು ಭೂಮಂಡಲದೊಡೆಯನ ಚರಣಕಮಲವಿದು ಒಡಿಯನ ಕೃಪಾದೃಷ್ಟಿಯಿದು ಕರವ ಮನದೊಳು ತ್ರಾಹಿ ತ್ರಾಹಿ ಎನುತಲಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸುಕಾಲ ಸುಪರ್ವಕಾಲ ಧ್ರುವ ಇಂದು ಸುಕಾಲ ಇಂದು ಸುಕಾಲ ಸುಪರ್ವಕಾಲ 1 ಇಂದು ಸುಕಾಲ ಬಂದ ಗೋಪಾಲ ಸಂಧಿಸಿ ಮನದೊಳಗಾದನುಕೂಲ 2 ಇಂದು ಸುದಿನ ಚಂದವಾಯಿತು ಎನ್ನಮನ ಉನ್ಮನ3 ಭಿಕ್ಷೆ ನೋಡುವ ಲಕ್ಷ ಒಡಿಯ ಪೂರಿಸಿದ ಬೇಡುವಪೇಕ್ಷ4 ಇಂದು ಆನಂದ ಹೊಂದಿ ಮಹಿಪತಿಗುರುಪಾದಾರವಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿಗ್ಹೋಗಿ ತಡಮಾಡಿದ್ಯೋ ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ ಧ್ರುವ ಬಲ್ಲವರಿಗೆ ಬಲ್ಲತನದೋರ ಹೋಗಿದ್ಯೊ ಅಲ್ಲಿ ಅವರ ಸಹಕಾರ ನೀನಾದ್ಯೊ ಸುಲ್ಲಭವಾಗಿ ಜ್ಞಾನಕೆ ನೀ ಸಿಲುಕಿದ್ಯೋ ಒಲ್ಲದ್ಹಾಂಗ್ಹೋಗಿ ಎಲ್ಲರಿಗಾಗಿದ್ಯೊ 1 ಙÁ್ಞನಿಗಳಿಗೆ ಙÁ್ಞನಸಮುದ್ರ ನಾಗಿದ್ಯೊ ಧ್ಯಾನಮಾಡುವರ ಧ್ಯಾನವೆ ಅಗಿದ್ಯೊ ಮುನಿಜನರೊಡನೆ ಮಾನಸ ಹಂಸನಾಗಿದ್ಯೊ ಖೂನದೋರಲು ಹೋಗಿ ನೀನೆ ಆಗಿದ್ಯೊ 2 ಧೃಢಭಕ್ತರೊಡನೆ ಭಿಡಿಯೊಳಗಾಗಿದ್ಯೊ ಕಡಿಗಾಗದ್ಹಾಂಗ ಕೈಯೊಳಗಾಗಿದ್ಯೊ ಎಡಬಲಕವರೆಂದು ಬಿಡದ್ಹಾಂಗಾಗಿದ್ಯೊ ಒಡಲ ಹೊಕ್ಕವರ ಒಡಿಯನಾಗಿದ್ಯೊ 3 ಪ್ರೇಮ ಉಳ್ಳವರ ಪ್ರೀತಿಯೊಳಗಾಗಿದ್ಯೊ ಸ್ವಾಮಿತನದಲಿ ಸಮೀಪನಾಗಿದ್ಯೊ ಕಾಮ ಪೂರಿಸಲಿಕೆ ನೇಮವ ಪಿಡಿದ್ಯೊ ಮಾಮನೋಹರ ನೀ ಸುಗಮವಾಗಿದ್ಯೊ 4 ಇಂದು ನೆನಪಾಯಿತೆಂದು ಓಡಿ ನೀ ಬಂದ್ಯೊ ಚಂಚವಾಗೆನ್ನೊಳಗಾದ್ಯೊ ನೀ ಬಂದ್ಯೊ ಕಂದಮಹಿಪತಿಗನುಭವದೋರ ನೀ ಬಂದ್ಯೊ ತಂದೆ ಸದ್ಗುರು ಅನಂದವ ತಂದ್ಯೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಒಡಿಯ ನೀನಹುದೊ ಎನ್ನ ಬಡವನಾಧಾರಿ ನೀನು ಧ್ರುವ ಪೊಡವಿಯೊಳಗೆ ಎನ್ನ ಬಿಣದೆ ಸಲಹುತಿಹ್ಯ ಅಡಿಗಡಿಗೆ ತಂದು ನೀ ಪಡಿಯ ನಡೆಸುವ ಸ್ವಾಮಿ 1 ಪಿಡಿದು ಎನ್ನ ನೀ ಕೈಯ ಕಡೆಗಾಣಿಸುವಿ ಪೂರ್ಣ ಬಿಡಿಸಿ ಧಾವತಿಯಿಂದ ಕೊಡುವಿ ತಂದು ನಿಧಾನ 2 ಕೊಂಡಾಡಲಳವೆ ನಿನ್ನ ಮಂಡಲದೊಳು ಕೀರ್ತಿ ಪಿಂಡ ಬ್ರಹ್ಮಾಂಡ ಪರಿಪೂರ್ಣವಾಗಿಹ ದೇಹ 3 ಕೊಳದೆ ಸೇವೆಯ ನಿನ್ನ ಅಳೆದು ನಡೆಸುವ ಪಡೆಯ ಪಾಲಕನಹುದೊ ಎನ್ನ ಮೂಲೋಕದೊಡಿಯನೆ 4 ನಿತ್ಯನಿಜವಾಗ್ಯಾಗ ಹೊತ್ತು ನಡೆಸುವ ಪಡೆಯ ಭೃತ್ಯ ನಿಜ ದಾಸಮಹಿಪತಿಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಡಿಯನಹುದೊ ಎನ್ನ ನೀ ಎನ್ನ ಪಿಡಿದಿಹ ಕೈಯಲ್ಲಿ ನಿನ್ನ ಧ್ರುವ ನೋಡದವಗುಣನ್ನ ಅವಗುಣನ್ನ ಮಾಡುವೆ ನೀ ಪಾವನ ನೀಡುವೆ ಪಡೆದೆನ್ನ ಪಡೆದೆನ್ನ ಕೂಡು ದಯದಲಿ ಸಂಪನ್ನ 1 ಭಿನ್ನವಿಲ್ಲದೆ ನೀಯೆನ್ನ ನೀಯೆನ್ನ ಚನ್ನಾಗ್ಯಾದೆ ಪ್ರಸನ್ನ ಉನ್ನತಗುಣ ನಿನ್ನ ನಿನ್ನ ಚಿನ್ಮಯದ ಚಂದ್ರನ್ನ 2 ಬಿರುದಿನ ಪ್ರಖ್ಯಾತ ಪ್ರಖ್ಯಾತ ಬಿರುದು ಪ್ರಾಣನಾಥ ತರಳ ಮಹಿಪತಿದಾತ ಸುದಾತ ಗುರುಶಿರೋಮಣಿ ಸಾಕ್ಷಾತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಒಳ್ಳೇದೋ ಒಳ್ಳೇದೋ ಎಲ್ಲ ಸ್ಥಳವ ಬಿಟ್ಟು | ಇಲ್ಲಿ ಅಡಗಿದ ಬಲ್ಲಿದ ತನವೇ ಪ ಬಿಡೆ ಬಿಡೆನೊ ಎನ್ನ ಒಡಿಯ ತಿರುಮಲ ನಿನ್ನ | ಉಡಿಯ ಪೀತಾಂಬರ ಪಿಡಿದು ನಿಲಿಸಿಕೊಂಬೆ 1 ಎರವು ಮಾಡಿ ತಿರುಗಿಸಿದಿ ನೀ ಎನ್ನ ಕೊರಳಿಗೆ ನಿನ್ನ ಚರಣ ಕಟ್ಟಿಕೊಂಬೆ 2 ಅತ್ತ ಇತ್ತಲಿ ನೋಡಿನೆತ್ತ ಪೋಗಲಿ ಎನ್ನ | ಚಿತ್ತದಲಿ ನಿನ್ನ ಹತ್ತೆಗಟ್ಟಿಕೊಂಬೆ 3 ಅತ್ತಿಯ ಮಕ್ಕಳಿಗೆ ತೆತ್ತಿಗ ನೀನಾಗಿ | ವಿತ್ತವಿತ್ತದರಾದ ರಾಸಿ ಸಿರಿಯಲ್ಲಿ 4 ಇರಳು ಹಗಲು ಬಿಡದೆ ಗುರು ಪುರಂದರಗೊಲಿದೆ | ಬಿರಿದು ಏನೊ ಇಷ್ಟು ವಿಜಯವಿಠಲಾ5
--------------
ವಿಜಯದಾಸ