ಬೇಸಾಯ ಮಾಡಬೇಕು ಬೇಸಾಯ ಮಾಡಬೇಕು ಪ
ಹೃದಯವೆಂಬ ಕ್ಷೇತ್ರದಲಿ ಬೇಸಾಯ ಮಾಡಬೇಕು ಅ.ಪ
ಮಧ್ವಾಚಾರ್ಯರವರ ಗ್ರಂಥಗಳೆಂಬ ಸರೋವರ ತುಂಬಿಹುದು
ಬುದ್ಧಿ ಜಲವ ವರಗುರುಗಳೆಂಬ ತೂಬಿನಲಿ ತರಲಿಬೇಕು
ಶುದ್ಧ ಧರ್ಮದಾಚರಣೆಗಳೆಂಬ ನೇಗಿಲ ಪಿಡಿಬೇಕು
ಪರಿ ನೆಲವನುಳಲಿಬೇಕು 1
ತತ್ವಜಲವು ಹರಿದೋಡದ ಪರಿಯಲಿ ತೆವರಿ ಹಾಕಬೇಕು
ಸುತ್ತಲು ದುರ್ಜನ ನರಿಗಳ ತಡಿಯಲು ಬೇಲಿ ಹಾಕಬೇಕು
ಉತ್ತಮ ರೀತಿಯ ಭಕುತಿ ಪೈರುಗಳ ನಾಟಿ ಮಾಡಬೇಕು
ಮತ್ತೆ ಪೈರುಗಳು ಒಣಗದಂತೆ ಜಲವನು ಹಾಯಿಸುತಿರಬೇಕು 2
ಬೆಳೆಯುವ ವಿಷಯದ ಅನುಭವದಾಸೆಯ ಕಳೆಯು ಕೀಳಬೇಕು
ಕೊಳೆವೆಯ ರೋಗಕೆ ಸಜ್ಜನ ಸಂಘದ ಔಷಧಿ ಕೊಡಬೇಕು
ಕಲಿಪುರುಷನ ತಲೆಯೆಂಬ ಗೊಬ್ಬರವ ತುಳಿಯುತಲಿರಬೇಕು
ಕುಳಿತೆಡೆಯಲಿ ವರಭಕುತ ಪ್ರಸನ್ನನು ಕೊಡುವ ಮುಕುತಿ ದವಸ 3