ಆವ ಜನ್ಮದ ಪುಣ್ಯ ಫಲಿಸಿತೆನಗೆ |
ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ
ಭವರಾಸಿಗಳು ಹಾರಿ ಬಯಲಾದವು|
ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ |
ಪರಿ ಶುದ್ಧನಾದೆ ಗುರು ಕರುಣದಲೀ1
ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ |
ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು |
ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2
ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ |
ಸೋಜಿಗವು ಬಲು ತೀವ್ರದಲಿ 3
ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ |
ಅಕ್ಷಯವಾಗುವದು ಇದ್ದ ಪುಣ್ಯ |
ಮಾಳ್ಪ ಮನಸು ಪುಟ್ಟಿತು ನೋಡಾ4
ಓದನವು ಉದರದಲಿ ತುಂಬಲಾಕ್ಷಣದಲ್ಲಿ |
ಜ್ಞಾನ ಬಂದೊದಗುವದು ಗುರು ಪೂರ್ಣ |
ಬೋಧರಾ ಮತದಲ್ಲಿ ಲೋಲಾಡುವಾನಂದಾ 5
ದಧಿ ತಕ್ರ ಮೊದಲಾದ ವ್ಯಂಜನ ಉಣಲು |
ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ |
ರತಿಪತಿಪಿತನ ಪದಸೇವೆಯೊಳಗಿಪ್ಪವೊ 6
ಕೃಷ್ಣ ಸಂದರುಶನ ಮೃಷ್ಟಾನ ಭೋಜನ |
ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ |
ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7