ಓದಿ ಮರುಳಾದರಯ್ಯ ಬೋಧವಿಲ್ಲದೆ
ಓದಿನೋಡಲದನರಿತು ಹರಿಯ ನೆನೆಯಲೊಲ್ಲದೆ ಪ.
ಕರಣೇಂದ್ರಿಯ ಕಾಟಕೆ ಸಿಲುಕದ ಕರ್ಮದಾವುದು
ಪರಗತಿ ವಿಚಾರವಿಲ್ಲದ ನಿಜದಾವುದು
ಗುರುಚರಣ ಪರಿಚಯವಿಲ್ಲದ....ಯಾವುದು1
ಅಂತರಂಗ ಶುದ್ಧಿಯಿಲ್ಲದ ಕಂತೆಯಾವುದು ನಿತ್ಯ
ಶಾಂತಿ ಶಮದಮವಿಲ್ಲದ ಭ್ರಾಂತಿ ಯಾವುದು
ಸಂತತ ಸಮಾಧಾನದ ಚಿಂತೆಯಾವುದು ನಮ್ಮ
ಕಪಟ ದಾವುದು 2
ಮಧ್ವಮತದ ಮಾರ್ಗವನ್ನು ಮೀರಿದಾವುದು ಶ್ರುತಿ
ಸಿದ್ಧ ಹರಿಯ ಗುಣವ ಹಾಡಿಪಾಡದ್ಯಾವುದು
ವೃದ್ಧರನ್ನು ಕೆಣಕಿ ಕಾಡಿ ಕೊಂಬದಾವುದು ಅದು
ಸಿದ್ಧಯಮನ ಬಾಧೆಗೆ ಒಳಗಾಗುವದಾವುದು 3
ಸಾರತತ್ವ ಸುಧೆಯ ಸವಿಯ ದೂರಿದಾವುದು ಪರಿ-
ವಾರ ಜನರ ಪೊರೆವರುಪಚಾರ ದಾವುದು
ಸಾರಿ ತನ್ನ ಸಾಕ್ಷಿಗಿನ್ನು ಬಾರದಾವುದು ಅದು
ಕೀರನಾಕ....ಯಾ ಸಂಸ್ಕಾರ ದಾವುದು 4
ಅನ್ನದ ಜೀವ ಭಿನ್ನಹರಿ ಎನ್ನದಾವುದು ದ್ವಾಸು-
ಪರ್ನಪಥವ ಪಾ....ಮಾಡದಾವುದು
ಧನ್ಯ ಹಯವದನ ನಾನೆನ್ನುವುದು ಅದು
ಕುನ್ನಿಯಂತೆ ಹಲವು ಪರಿಯ ಕೂಗುವುದದು 5