ಒಟ್ಟು 15 ಕಡೆಗಳಲ್ಲಿ , 14 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(2) ತುಳಸಿರಾಮದಾಸರ ಅಂತಿಮ ಯಾತ್ರೆ ಬೆಂಗಳೂರಿಗೆ ಹೋಗಿ ಬಂದರೂ ಮೈಸೂರಿಂದಾ ಪ ಬೆಂಗಳೂರಿಗೆ ಹೋಗಿಬಂದ ಜಂಗಮನು ತಾನಾಗಿ ನಿಂದಾ ಕಂಗಳೆರಡರ ಮಧ್ಯ ತಾ ನಿಜ ಲಿಂಗನಾಗಿ ಕಾಣಬಂದಾ ಅ.ಪ ಬಿದಿಗೆ ಪಾಡ್ಯವ ಮಾಡಿ ನೋಡೆಂದಾ ಬಂದಾಗ ಬರದಾ ವಿಧಿಯ ಬರಹವ ತೊಡೆದುಕೊಂಡೆಂದ ಕದಿವ ಕಳ್ಳರ ಕಂಡುಹಿಡಿದು ಮದನಪಿತನಾ ಯುಧದಿ ಹೊಡೆದೂ ನದಿಯ ಸ್ನಾನವ ಮಾಡಿ ನಿಜ ಪದವಿ ತೋರಿದ ನಮ್ಮ ದೇಶಿಕ 1 ಸೃಷ್ಟಿ ತದಿಗೆಯೊಳಿರಲು ಬೇಡೆಂದಾ ಅಲ್ಲಾಗ ತನ್ನ ಇಷ್ಟದೈವದ ಪೂಜೆ ಮಾಡೆಂದಾ ದೃಷ್ಟಿಗೋಚರಮಾದ ಗುರುವು ಸೃಷ್ಟಿಗಧಿಕಾ ತುಲಶಿರಾಮನ ಇಷ್ಟದಿಂದಲಿ ಭಜಿಸಿನೋಡಲು ಸ್ಪಷ್ಟನಾಗಿ ಕಾಣುತೈತೆ 2
--------------
ಚನ್ನಪಟ್ಟಣದ ಅಹೋಬಲದಾಸರು
(ಇ) ಶ್ರೀಕೃಷ್ಣಲೀಲೆ ಅಂಗಜನೈಯನು ಗೋಕುಲ ಪೋಗುವಾಗಕಂಗಳ್ಹಬ್ಬದ ಉಬ್ಬಿನೇನ ಬಣ್ಣಿಪೆನಾ ಪ ಎಳೆಗರುಗಳ ಝುಂಗುಗಳನ್ನು ಮತ್ತೆಮಲೆವ ಗೂಳಿಗಳ ಗೂರಾಟವನ್ನುಒಲಿವಾವಿನ ಕೆಚ್ಚಲು ಸಂದಣಿಯಲ್ಲಿನಲಿವ ಮರಿಗರುಗಳ ನೋಡುತಲಿ 1 ಆಡಿಸುವ ಮೊಗ ಬದಿಗಳ ತುರಿಸುತ್ತಝಾಡಿಸುವಾಕಾರ ಬೆದರು ನೋಟಏಡಿಸುವ ಹುಬ್ಬಿನ ಗೋವಳರಕೋಡಂಗಿ ಆಟಕ್ಕೆ ಕುಲುಕಿ ನಗುತ 2 ಒಂದು ಹುಬ್ಬೊಂದು ಕಿವಿಯನಲಗಿಸುತಮುಂದಣ ಚಂಡಿಕೆ ತಾಳದ ಗತಿಗೆಚಂದದಿ ಕುಣಿಸುವ ಭೃಂಗಿ ಆಟಕೆ ಗೋಪಸಂದೋಹಕೆ ಮೆಚ್ಚಿ ಬಲಗೆ ತೋರಿಸುತ 3 ಕೆಲರು ಕೋಗಿಲೆಯಂತೆ ಕೆಲರು ನವಿಲಿನಂತೆಕೆಲರು ಹಂಸದಂತೆ ಸಾರಸದಂತೆಗಳರವದಿಂ ಗೋಪರು ಕೂಗೆ ಋತುಗಳುನಳಿನಾಕ್ಷನ ಸೇವೆಗೆ ಕೂಡಿದಂತಿರೆ 4 ಒಂದೊಂದು ತಾಳಕ್ಕೆ ಒಂದೊಂದು ಪದಗತಿಒಂದೊಂದು ರಸಕ್ಕೆ ಮತ್ತೊಂದು ಕೈಗತಿಒಂದೊಂದು ಭಾವಕ್ಕೆ ಒಂದೊಂದು ನೇತ್ರವಾನಂದದಿ ಗೋವರ್ಧನ ನಾಟ್ಯವಾಡೆ 5 ಕಿನ್ನರ ಗಾನ ಗೋಪರ ಗೀತ ದೇವಕನ್ಯೇರ ನಾಟ್ಯ ಗೋಪರನಾಟ್ಯಚೆನ್ನಾರ ಕುಣಿಸುವ ಚಿಣ್ಣರ ಕಣ್ಣುಸನ್ನೆ ಝೇಂಕರಿಸುವ ಗೋಪರ ನೋಡುತ6 ನಾರಂದನ ವೀಣೆ ಗೋಪರ ಕಿನ್ನರಿಗೀರ್ವಾಣದುಂದುಭಿ ಗೋಪರ ಮುರಜಆ ರಂಭೆಯರಾಟ ಗೋಪರ ತಾಂಡವಕ್ಷೀರೋದಕದಂತೆ ಕಲೆಸಿ ಬೆರೆಸಿರೆ 7 ರಸತುಂಬಿ ತುಳುಕುವ ಕೊಳಲ ರವಂಗಳುಹಸುಗಳ ಕೊರಳ ಘಂಟೆಗಳ ನಿನಾದಎಸೆವೆಳಗಂದಿಯ ಅಂಬಾರವಂಗಳು ಪಸರಿಸೆ ಗೋವಳೆಯರು ಸಡಗರಿಸಿ8 ಜಂಗುಳಿ ಗತಿಯರ ಮುಖ ಕನ್ನಡಿ ಊರೋ-ಜಂಗಳೆ ಮಂಗಳ ಪೂರ್ಣ ಕುಂಭಗಳುಕಂಗಳೆ ನೀಲೋತ್ಪಲಂಗಳು ಕರಗಳೆತುಂಗ ಪಲ್ಲವ ತೋರಣದಂತೆಸೆಯೆ 9 ಚೆಂದದ ನೋಟವು ಮಂಗಳಾರತಿಯಾಗೆಮಂದಹಾಸವು ಪೂಮಳೆಯಾಗೆ ಆನಂದ ಪುಳಕಗÀಳೆ ಕೋಡಿಯಾಗೆ ಗೋಪವೃಂದವಿದಿರುಗೊಳ್ಳ ಬಂದರೊಲವಿಲಿ 10 ಕಂಗಳ ಕುಡಿ ನೋಟಂಗಳಿÀಂ ಸೆಳೆದುರಂಗನ ತಮ್ಮಂತರಂಗದೊಳಿಟ್ಟುಹಿಂಗದಾಲಂಗಿಸಿ ಸುಖಾಂಬುಧಿಯ ತ-ರಂಗದಿ ಗೋಪಾಂಗನೆಯರು ಮುಳುಗಿ11 ಗೋಪಿಜನರು ರಂಗಗೆ ಮರುಳಾಗಿರೆನೂಪುರ ಮರಕತ ಪ್ರಭೆ ಸಾರಳೆಯಾಗೆಆ ಪದ್ಮರಾಗವೆ ಕೆಂಪು ಕಾರಳೆಯಾಗೆಶ್ರೀಪದನಖ ಕಾಂತಿ ರಂಗವಲ್ಲಿಯಾಗೆ 12 ಬೃಂದಾರಕರು ಪೂಮಳೆಗರೆಯಲು ಬೇಗಬಂದಾಳಿಗಳು ಬೃಂದಾವನದಲ್ಲಿ ಮಕರಂದವನುಂಡು ಸ್ವರ್ಗವ ಹಳಿದಿಳೆಗೆಬಂದಳಿಂದಿರೆಯೆಂಬ ಸಂಭ್ರಮದಿಂದ 13 ತುರುಗಾತಿಯರ ನೋಟದ ಬೇಟಂಗಳುಹರಿಮುಖೇಂದವಿನಲ್ಲಿ ಚಕೋರಗಳುಹರಿನಾಭಿಸರೋವರದಲ್ಲಿ ಮೀನ್ಗಳುಹರಿಪಾದಪದುಮದಿ ತುಂಬಿಗಳಾಗೆ14 ಇತ್ತ ಗೋವಳರಾಟಕೆ ತಲೆದೂಗುತಅತ್ತ ದೇವತೆಗಳ ಸ್ತುತಿ ಕೇಳುತ್ತಇತ್ತ ಗೋವಳೆಯರ ನಗಿಸುತ್ತ ನಗುತ್ತಅತ್ತಿತ್ತ ಮುನಿಗಳ ಸ್ತುತಿ ಕೇಳುತ್ತ 15 ಕಂಜಾಸನ ನಮಿಸಲು ಕೈಹಿಡಿದೆತ್ತಿ ಮೃ-ತÀ್ಯುಂಜಯ ವಂದಿಸೆ ಬಾ ಯೆನ್ನುತ್ತಅಂಜಲಿ ಪುಂಜದ ಇಂದ್ರಾದಿಗಳನ್ನುಕಂಜನೇತ್ರಗಳ ಸನ್ನೆಯಲಿ ಮನ್ನಿಸುತ16 ಸಿರಿ ವನಿತೆಗೆ ವನಮಾಲೆ ಉಯ್ಯಾಲೆಮೊರೆವಳಿಕುಲಗಳ ರವ ಸಂಗೀತ ವರ ಮುತ್ತಿನ ಹಾರ ಚಾಮರ ಶ್ರೀಕೃಷ್ಣ-ನುರಮಧ್ಯವೆ ಮಂಟಪವಾಗೆಸೆಯೆ 17
--------------
ವ್ಯಾಸರಾಯರು
ಅಧ್ಯಾಯ ನಾಲ್ಕು ಮೃಗಯಾಯೈ ಹಯಾರೂಢಂ ಗಹನೆ ಹಸ್ತಿನಾಹೃತಂ ಪದ್ಮಾವತೀ ಕಟಾಕ್ಷೇಷು ತಾಡಿತಂ ನËಮಿ ಶ್ರೀಪತಂ ವಚನ ಅಂದಿಗಾವೇಂಕಟನು ಇಂದು ಪೋಗಲಿಬೇಕೆಂದು ಸ್ಮರಿಸಿದ ಆ ಕ್ಷಣದಿ ಚೆಂದಾದ ಮೈ ಬಣ್ಣದಿಂದ ಇರುವುದು ಸ್ವರ್ಣ ಬಿಂದುಗಳು ಅಲ್ಲಲ್ಲೆ ಮೇಲ್ಗರಿಯಂ ಒಂದೊಂದು ಚಂದದರÀಳಲೆಯು ದೂರದಿಂದ ಹೊಳೆಯುವುದು 1 ಮತ್ತೆ ಸರಗಳನೆಲ್ಲ ಮತ್ತೆ ಪರಿಮಿತಿಯಿಲ್ಲ ಉತ್ತಮಾಶ್ವವ ತಾನು ಮತ್ತೆ ಮೇಲೆ ಸುತ್ತಿದನು ಕೌಸ್ತುಭ ಶಕ್ತವಸ್ತ್ರಾ2 ಊಧ್ರ್ವಪುಂಡ್ರಾಂಕಿತನು ಆಗಿ ಅಕಳಂಕಕೇಸರ ಕುಂಕುಮಾಂಕಿತ ಶ್ರೀಗಂಧ ಪೊಂಕದಲ್ಲಿ ಪಂಕಜಗಳಿಗೆ ಟೊಂಕದಲಿ ಏಲೆ ಅಡಿಕೆಸಣ್ಣ ಕೊಂಕು ಇಲ್ಲದ ಕನ್ನಡಿ ಕಟ್ಟಿದನು ವಸ್ತ್ರಾದಿಂದÀ 3 ಕಂಠದಲಿ ಇಟ್ಟು ಜರತಾರಿ ಒಂಟಿ ಚಾದರವನ್ನು ಕಂಠದಲಿ ಚಲ್ಲರಿಪುಕಂಟ- ಕಾಗಿರುವಂಥ ಒಂಟಿ ಬಂಟನಾಗಿ ಅಂಟರಾ ಬಿಗಿದು ನೂರೆಂಟು ವೈಕುಂಠನಾಥನು ಎಂಬ ಬಂಟನ ಕುದುರೆ ಹೊರಗ್ಹೊಂಟಿತಾಗ 4 ವೇಂಕಟನು ವನದಲ್ಲಿ ಘನವಾದ ಮದ್ದಾನೆಯನು ಹತ್ತಿ ನಡೆದ ವನಜ ಓಡುತ್ತ ಮುಂದೆ ಸಮ್ಮುಖವಾಗಿ ವಿನಯದಿಂದಲಿ ಸೊಂಡೆಯನು ಮೇಲೆತ್ತಿ ಗರ್ಜನವ ಮಾಡುತಲೆ 5 ಕಂಡು ಗಡಬಡಿಸಿದರು ಮುಗ್ಗುತಲೆ ಒಡಗೂಡಿ ಅಡಗಿದರು ಬೇಗ ದೃಢಭಕ್ತಿ ನಡೆದು ಅಲ್ಲಿಂದ ಹಣಹಣಿಕೆ ನೋಡ್ಯಡಗಿದರು ನಡೆಸಿದನು ಕುದರೆ 6 ಒದರಿದಳು ಅಮ್ಮಯ್ಯ ಏರಿ ನಮ್ಮೆದುರಿಗೆ ಚದುರನಾಗಿ ಮಧುರ ಹೆದರೆ ಬೇಡಿರಿ ನೀವು ಚದುರ ವೃತ್ತಾಂತವನು ಕೆದರಿ ಕೇಳಿರಿ ಅವನ ಇದರಿಗ್ಹೋಗಿ 7 ಬಂದು ಪುರುಷನ ನೋಡಿ ಇಂದು ಇಲ್ಲಿಗೆ ನೀನು ಬಂದ ಗಮನ ತಂದೆತಾಯಿಗಳ್ಯಾರು ಬಂಧು ಮಂದಿ ಎಲ್ಲರು ಏನೆಂದು ಕರೆವರು ನಿನಗೆ ಚಂದಾಗಿ ಕುಲಗೋತ್ರ ಒಂದು ಬಿಡದಲೆ ನಮ್ಮ ಮುಂದೆ ನೀಪೇಳು 8 ಇಂದು ನಮ್ಮ ಮುಂದೆ ಕೇಳಿರಿ ನಮ್ಮ ಕ್ರಮದಿಂದ ಹೇಳುವೆನು ಬಂಧು ತಾ ಬಲರಾಮ ಇಂದು ಸುಭದ್ರೆಯೆಂದೆನಿಸುವಳು ತಂಗಿ ಸುಂದರಾರ್ಜುನ ನಮ್ಮ ಹೊಂದಿರ್ದ ಬೀಗ 9 ಕೃಷ್ಣ ಪಕ್ಷದಲ್ಲಿ ನಾ ಕರೆವರು ಯೆನಗೆ ಕಿವಿಯಲ್ಲಿ ಇಟ್ಟು ಬಹುಸಂತೋಷ ಪೇಳಿರಿ ಎನಲು ಥಟ್ಟನೆ ನುಡಿದಳು ದಿಟ್ಟಪದ್ಮಾವತಿಯು ಸ್ಪಷ್ಟತಾನೆ 10 ಸುವಿವೇಕದ ವೃತ್ತಾಂತ ಶ್ರೀಕರಾತ್ರಿಯ ಗೋತ್ರ ಧರಣೀ ದೇವಿ ವಸುಧಾನ ತಾ ಖೂನ ಪದ್ಮಾವತಿಯು ನೀ ಕೇಳಿ ಆಕೆಯಮೇಲೆ ಸ್ವಲ್ಪ ಪುತ್ರಿ ತಾ ಕೋಪವನು ಎಂದಳಾ ಕಾಲದಲಿ ಹರಿ ವಿವೇಕದಲಿನುಡಿದ11 ಧ್ವನಿ ರಾಗ :ಶಂಕರಾಭರಣ ಭಿಲಂದಿತಾಳ ಇಷ್ಟು ಎನ್ನ ಮೇಲೆ ಏಕೆ ಸಿಟ್ಟು ಮಾಡುವಿ ಬಟ್ಟ ಕುಚದ ಬಾಲೆ ಬಹಳ ನಿಷ್ಠುರಾಡುವಿ 1 ಧಿಟ್ಟ ಪುರುಷ ನೀನು ನಡತೆಗೆಟ್ಟು ಇರುವರೆ ಖೊಟ್ಟಿ ಕುದುರೆಯೇರಿ ಮೈಯ ಮುಟ್ಟ ಬರುವರೆ 2 ಮೆಚ್ಚಿ ಬಂದೆ ನಿನಗೆ ನಾನು ಹೆಚ್ಚಿನ್ಹೆಂಗಳೆ ಇಚ್ಛೆ ಪೂರ್ಣಮಾಡು ನೀನು ಮಚ್ಚಕಂಗಳೆ 3 ಹೆಚ್ಚು ಕಡಿಮೆ ಆಡದೀರು ಹೆಚ್ಚಿನಾತನೆ ಎಚ್ಚರಿಲ್ಲ ಮೈಯ ಮೇಲೆ ಹುಚ್ಚು ಪುರಷನೆ4 ಏನು ಹೆಚ್ಚು ಕಡಿಮೆ ಆಡಿದೇನು ಅನುಚಿತ ನೀನು ಕನ್ಯಾ ನಾನು ವರನು ಏನು ಅನುಚಿತ 5 ಮೂಢನೀನು ಇಂಥ ಮಾತು ಆಡೋದುಚಿತವೆ ಬೇಡ ಅರಸಗ್ಹೇಳಿ ನಿನಗೆ ಬೇಡಿ ಬಿಗಿಸುವೆ 6 ಮಡದಿ ನಿನ್ನ ಕಡೆಯುಗಣ್ಣು ಕುಡಿಯ ಹುಬ್ಬುಗಳ್ ಕಡಿಯದಂಥ ಬೇಡಿ ಎನಗೆ ಕಡೆಗೆ ಅಲ್ಲವೆ 7 ಇಂದು ಪ್ರಾಣವ ತಂದೆ ಕಂಡರೀಗ ನಿನ್ನ ಕೊಂದು ಹಾಕುವ 8 ಜಾಣೆ ನಿನ್ನ ಬಿಡೆನು ಎನ್ನ ಪ್ರಾಣ ಹೋದರೂ ಪ್ರಾಣದರಸಿ ಎನಿಸು ಪಟ್ಟರಾಣಿಯಾಗಿರು 9 ಇಂದು ವ್ಯರ್ಥವು ಹಂದಿನಾಯಿ ಹದ್ದು ಕಾಗೆ ತಿಂದು ಬಿಡುವವು 10 ಎನ್ನ ಫಣಿಯಲ್ಲಿದ್ದ ಲಿಖಿತ ಮುನ್ನ ತಪ್ಪದು ಚನ್ನವಾಗಿ ನಿನ್ನಕೂಡಿ ಇನ್ನು ಇರುವುದು11 ಸೊಲ್ಲ ಕೇಳಿ ಸಿಟ್ಟಿನಿಂದ ನಿಲ್ಲೋ ಎಂದಳು ಎಲ್ಲ ಗೆಳತೆರಿಂದ ಕೂಡಿಕಲ್ಲು ಒಗೆದಳು 12 ಕಲ್ಲು ತಾಗಿ ಕುದುರೆ ಭೂಮಿಯಲ್ಲಿ ಬಿದ್ದಿತು ಬಲ್ಲಿ ದಾನಂತಾದ್ರೀಶನಲ್ಲಿ ಸ್ಮರಿಸಿತು 13 ವಚನ ಆ ಕುದುರೆಯನು ಆಗುತ ವಿವೇಕದಲಿ ಪರಿ ಆಯಿತೀಕಾಲದಲ್ಲೀ ಲೋಕದಲಿ ಕಾಲಬೀಳದಲೆ ಆಕಾಲ ದಲಿ ಹೊರಟೆ ಆ ಕಾರಣದಿಂದೆನಗೆ ಸಂಕಟವು ಸೋಕಿತಿ ಮಾಡಿದ ಕರ್ಮಫಲ ದೊರೆಯದಿರದು 1 ಗಿರಿಯೇರುತಲೆ ತಾನು ಮೂಕತನದಲಿ ಶೇಷಾಯಿಯಂತೆ ಮುಂದಕೆ ಅನೇಕ ಕರೆದು ಕೊಡುವವನ ಶ್ರೀ ಕರುಣದಿ ಆಯಿತು ನಾಲ್ಕು ಅಧ್ಯಾಯ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಮಲ ಸಂಭವೆ ಹಿಮನಗಜಾರಮಣ ಸನ್ನುತೆ ತಮರಿಪು ಶತ ಸಮಸನ್ನಿಭೆ ಇಭ ಇಂದಿರೆ ಶೋಭಾನೆ ಪ ಶೃಂಗಾರ ತರಂಗ ಹೆಳಲಾ ಬಂಗಾರವ ಪೊಂಗ್ಲಾದಿಗೆ ಬಲಿ ವಂಗನೆ ಶಿರೋಮಂಗಳ ಮಡಿ ಜಡ ಜಂಗಮ ವ್ಯಾಪ್ತಿ ಅಂಗಜ ಶರ ಕಂಗಳೆ ದ್ವಿಜೋ ತ್ತುಂಗಮ ರಂಗನ ನಿಜ ಅ ರ್ಧಾಂಗಿನಿಯೆ ಬಾ ಹಸಿಯ ಜಗುಲೀಗೆ 1 ಪೊಸುಕುಸುಮ ಶಿರಸದಲೊಪ್ಪುವ ನೊಸಲಲಿ ರಂಜಿಸುವ ಕಸ್ತೂರಿ ದಿಶದುಂಬಿದ ಬಿಸಿಜಾನನ ಪ್ರಭೆ ಎಸೆವ ಕಂಧರ ಕಕ್ಕಜ ಕುಚಕು ಪ್ಪುಸದಲ್ಲತಿ ಶೋಭಿಸುತಿಹ ಪವಳ ದಾ ಸರವ ತೂಗುವ ಅಸಮೇ ಬಾ ಹಸೆಯ ಜಗುಲೀಗೆ 2 ಕರಿಸೊಂಡಿಲುತೆರ ಚತುರಕರ ವರ ಅಭಯಸರಸಿಜಯುಗಧರ ಜಠರಾ ವರತ್ರಿವಳಿ ಗಂಭೀರನಾಭಿ ಕ ಟಸೂತರೆ ಹೇಮಾಂಬರೆ ಚರಣಂದಿಗಿ ಸಪಳಿ ಪೊಂಗೆಜ್ಜೆಯಾ ಮೆರೆಯುತ ಸರಸಳೆ ಬಾಹಸಿಯ ಜಗುಲೀಗೆ 3 ಮೃಗಲಾಂಛನೆ ಮಿಗೆ ಶೋಭಿಪ ಪದ ನಖ ಪಂಕ್ತಿಗಳೊಪ್ಪುವ ಗತ ಅಗಣಿತ ಮಹಿಮಳೆ ಸುಗುಣ ಸಂಪನ್ನೆ ಭಗವಂತನ ಜಘನದಿ ಪೊಳೆಯುತ ಖಗರಾಜನ ಪೆಗಲನೇರಿ ಅಮ ರ ಗಣವ ಚಿರ ಬಾ ಹಸಿಯ ಜಗಲೀಗೆ 4 ಅಂಭೃಣಿ ಸ್ವಾಯಂಭೂ ಸುರ ನಿಕು ರುಂಬಕರ ಅಂಬುಜ ಪೂಜಿತೆ ನಂಬಿದ ಜನರ್ಹಂಬಲಿಸುವ ಫಲ ಸಂಭ್ರಮದಿ ಕೊಡುವಾ ಗಂಭೀರಾ ಸು ಖಾಂಬೋಧಿ ಹರಿ ನಿತಂಬೆ ಪ ಯಾಂಬೋಧಿ ಸುತೆ ಜಗದಂಬೆ ಬಾ ಹಸಿಯ ಜಗುಲೀಗೆ 5 ಮಾಯೆ ನಾರಾಯಣಿ ಶ್ರೀ ಭೂ ಕೃತಿ ಆಯತಾಕ್ಷಳೆ ಕಾಯಜನ ತಾಯೆ ಶರಣೆ ಪ್ರಿಯ ಪಾವನ್ನೆ ವಾಯುಭುಕು ಶಾಯಿ ಅಮರಾಧೇಯಾ ಜಗನ್ನಾಥವಿಠಲನ ಜಾಯೆ ಬಾ ಹಸಿಯ ಜಗುಲೀಗೆ 6
--------------
ಜಗನ್ನಾಥದಾಸರು
ಗೌರಿ ಗಜಮುಖನ ಮಾತೆ | ಗುಣಗಣ ಭರಿತೆ ಶೌರಿ ಸಖನಂಗಸಂಗೀ ಸಂಪೂರ್ತೆ ಪ ಶುಭ ತನು ವಾರಿಜನೇತ್ರಳೆ ವೀರಸತಿಯೆ ದಯವಾರಿಧಿ ಪಾಲಿಸು ಅ.ಪ. ತುಂಗ ಮಂಗಳೇ ದೇವಿ | ಕಲಿಗೆ ಭೈರವೀ ರಂಗಾನ ನವವಿಧಿ ಭಕ್ತಿ ಸಂಗ ನೀಡುವಿ ಹಿಂಗದೆ ಪೊರಿಯೆ ತಾಯೇ | ಭಕ್ತ ಸಂಜೀವೆ ತಿಂಗಳ ಮುಖಿವರಗರಿವೆ | ನಮ್ಮ ಶಂಭುವೆ ಭಂಗಬಟ್ಟೇನು ನುಂಗುವ ಭವದೊಳು ಮಂಗಳ ಕರುಣಾಪಾಂಗದಿ ನೋಡೆನ್ನ ಭವ ಭಯ ಗಂಗೆಯ ಧರನಂಘ್ರಿ- ಭೃಂಗಳೆ ಬೋದಯಾಕಂಗಳೆ ಕರುಣಿಸು 1 ಇಂದ್ರಾದಿ ಸುರಗುರುವೆ | ದೇವ ತರುವೆ ಪರಿ ನಿನ್ನ ಬೇಡುವೆ ಕುಂದನೆಣಿಸದಲೆ ಶಿವ ಶಂಕರಿ ಕಾವೆ ಸಂದೇಹ ಕಳಿ ವಿಭುವೆ | ವೀರಜತನುವೆ ನೊಂದವನಾ ಮ್ಯಾಲ್ಹೊಂದಿಸು ಕರುಣವ ಮಂದಸ್ಮಿತೆ ಮುಕುಂದನ ಮನದಲಿ ವಂದಿಸು ಅನಿಮಿತ್ತ ಬಂಧುವೆ ರಕ್ಷಿಸು 2 ಕಸ್ತೂರಿ ಕುಂಕುಮ ಫಾಲೆ | ರನ್ನಾದ ಓಲೆ ವಸ್ತುಗಳಿಟ್ಟ ಹಿಮವಂತನ ಬಾಲೆ ಶಿಸ್ತಿನ ಶುಭ್ರಾಂಬರಧಾರೆ ವನಮಾಲೆ ಮಸ್ತಕದ ಕಿರೀಟ ವದನೆ ತಾಂಬೂಲೆ ಸಿರಿ ಹಸ್ತಗಳಿಟ್ಟೆನ್ನ ದುಸ್ತರದ ಹಾದಿಗಳಸ್ತಮಮಾಳ್ಪುದು ವಿಸ್ತರ ಮಹಿಮ ಜಯೇಶವಿಠಲ ವಸ್ತುವ ನೀಡಮ್ಮ ಹಸ್ತಿಯ ಗಮನೆ 3
--------------
ಜಯೇಶವಿಠಲ
ತಾರಿಸಬೇಕೋ ಎನ್ನಾ|ಯಾದವ ರನ್ನಾ ಪ ತಾರಿಸಬೇಕೋ ಎನ್ನಾ | ಯಾದವ ರನ್ನಾ| ಸಾರಿದೆ ನಾನು ನಿನ್ನಾ|ಘೋರ ಭವಾಂಬುಧಿಯಾ| ಪಾರಗಾಣೆನೋ ಜೀಯಾ | ವಾರೆ ಕಂಗಳೆನ್ನಾ ನೋಡಿ| ದಯಮಾಡಿ ಒಡಮೂಡಿ ಅಭಯವ ನೀಡಿ1 ತಾನಾರೆಂಬುದು ನೋಡದೇ ತನುವಿನೊಳು| ನಾ ನನ್ನದೆಂದು ಪಾಡಿದೇ| ಶ್ರೀನಾಥ ನಿನ್ನ ನಾಮಾ|ನೆನೆಯದೆ ಮನದೊಳೊಮ್ಮಾ| ನಾನಾ ವಿಷಯದೊಳು ಬೆರೆದು|ಮೈಮುರಿದು| ಹಿತಜರಿದು ಕೆಡುವಾದೇನರಿದು 2 ಶರಣರಾ ಸಂಗದೋರಿಸಿ|ಸ್ವರೂಪವಾ| ಮರೆದ ವಿಭ್ರಮ ಹಾರಿಸೀ| ಗುರುಮೂರ್ತಿ ಪ್ರಭು|ಅರಹು ನೀಡೋ ಭಕ್ತಿಯಾ| ಸುರಸಾ ಸಾರಾಯದ|ಸುಖನುಂಬೆ|ಬಲಗೊಂಬೆ| ನಮೋಯೆಂಬೆ ಎನ್ನಿಂಬ ಬಿಂಬವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೇಜಿಯೇರಿ ಮೆರೆದು ಬಂದ ರಾಜಬೀದಿಯೊಳಗಿಂದ ಕಸ್ತೂರಿ ರಂಗ ಪ. ಸುತ್ತಮುತ್ತ ಸಾವಿರಾರು ಸಾಲುದೀವಟಿಗೆ ಹತ್ತುದಿಕ್ಕಿಲಿ ಬೆಳಗುತಿಹ ಹಗಲುಬತ್ತಿಗಳು ಇತ್ತೆರಪು ಭೂಸುರರು ಸಾಲುಗಟ್ಟಿ ನಿಂತಿರಲು ಮತ್ತೆ ಸಭಾದಿಂದ ತೇಜಿ ಮೆಲ್ಲನೆ ನಡೆಸುತ್ತ ಜಾಣ1 ತಾಳ ಶಂಖ ಭೇರಿ ತಮ್ಮಟೆ ತಂಬೂರಿ ಮೊದಲಾದ ಮೇಲು ಪಂಚಕಂಗಳೆಲ್ಲ[ಮಿಗೆ] ಪೊಗಳಲು ಗಾಳಿ ಗೋಪುರದ ಮುಂದೆ ರಾಯಬಿಡದಂತೆ ಸುತ್ತ ಧೂಳುಗಳೆಬ್ಬಿಸಿ [ವೈಹಾಳಿ] ನಿಕ್ಕುತ ಜಾಣ 2 ಮುತ್ತಿನ ತುರಾಯಿ ಅಂಗಿ ಮುಂಡಾಸು ತತ್ಥಳಿಪ ವಜ್ರಕೆಂಪಿನ ತಾಳಿ ಚೌಕಳಿ ಮುತ್ತಿನ ಕುಂಡಲವಿಟ್ಟು ಮೋಹಿಸುತ ಬೀದಿಯೊಳು ಕತ್ತಿಯ ಉಡಿಯಲ್ಲಿ ಕಟ್ಟಿ ಕೈಯಲಿ [ತೇಜಿಯ] ಪಿಡಿದು 3 ರಂಭೆ ಮೊದಲಾದ ದೇವರಮಣಿಯರು ಕುಂಭದ ಆರತಿಯೆತ್ತಿ ಕೂಡಿ ಪಾಡಲು ಶಂಭು ಮುಖ್ಯ ನಿರ್ಜರರೆಲ್ಲ ಸ್ವಾಮಿ ಪರಾಕೆಂದೆನುತ ಅಂಬುಜಭವಾದಿಗಳ ಆಳಿದ ಶ್ರೀರಂಗಧಾಮ 4 ವೇದಘೋಷದಿಂದ ವಿಪ್ರರು ಸ್ತುತಿಸಲು ಮೋದದಿಂದ ಗಾಯಕರು ಹಾಡಿ ಪಾಡಲು ಹಾದಿ ಬೀದಿಯಲಿ ನಿಂತು ಸಜ್ಜನರಿಗೆಲ್ಲ ದೇವ ಆದರದಿಂದಿಷ್ಟಾರ್ಥವಿತ್ತು ಮೋದದಿಂದ ಮನ್ನಿಸುವ 5 ಹಚ್ಚನೆ ಹೆಸರುಬೇಳೆ ಹಾಲುಕೆನೆಗಳು ಮುಚ್ಚಿತಂದ ಕೆನೆಮೊಸರು ಮೀಸಲು ಬೆಣ್ಣೆಯು ಅಚ್ಚ ತುಪ್ಪದಿ ಪಕ್ವವಾದ ಅತಿರಸ ಹುಗ್ಗಿಗಳು ಮೆಚ್ಚಿವುಂಡು ಪಾನಕ ನೀರುಮಜ್ಜಿಗೆಗಳನೆ ಕುಡಿದು 6 ಸಣ್ಣಮುತ್ತು [ತೆತ್ತಿಸಿದ] ಸಕಲಾತಿ ಗೊಂಡ್ಯ ಹೊನ್ನ [ತೆತ್ತಿಸಿದ ಹೊಸ] ಹೊಳೆವ ಸೊಬಗಿನ ಉನ್ನಂತ ಗುಣರಾಯ ಉತ್ತಮರಾಜಾಶ್ವವೇರಿ ಎನ್ನ ಹಯವದನ ರಂಗ ಎಲ್ಲರಿಗಿಷ್ಟಾರ್ಥಕೊಡುವ 7
--------------
ವಾದಿರಾಜ
ಧ್ಯಾನಿಸು ಮನವೆ ನೀ ಧ್ಯಾನಿಸು ಪ. ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ. ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1 ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2 ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3 ತೈಜಸ ನಿತ್ಯ 4 ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5 ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6 ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8 ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9 ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10 ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11 ಕುಕ್ಷಿ ನಿಜ ಸುಖಪೂರ್ಣನ 12 ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13 ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14 ಸಿರಿ ಭುಜಕೀರುತಿ15 ಕಂಬು ಅಗಣಿತ ಮಹಿಮನ16 ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17 ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18 ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19 ನಿತ್ಯ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20 ನಿತ್ಯ 21
--------------
ಗೋಪಾಲದಾಸರು
ನಲ್ಲೆಯರು ನಮೋ ಎಂಬೆವು ಸುರರಎಲ್ಲರ ಬಲಗೊಂಬೆವು ಪ. ಚಲ್ವೆ ಕಂಗಳೆಯರಿಗೆ ಹೊಲ್ಲವು ಎನುತಿರೆಹೊಲ್ಲ ತನವೆಲ್ಲ ಹೊರಗ್ಹಾಕಿ ಬಾಹೊಅ.ಪ. ಅಗಣಿತ ಮಹಿಮ ಹೌದೆಂದುಅಗಣಿತ ಮಹಿಮಎನುತಿರೆಮಗನ ಮುಂದಾಗಿ ಬಲಗೊಂಬೆ1 ಸಾಗರಶಯನಗೆ ಆಗುವ ಹಾಸಿಗೆ ಬ್ಯಾಗನೆ ವರವ ಕೊಡುವೋನುಬ್ಯಾಗನೆ ವರವ ಕೊಡುವ ನಾಗೇಂದ್ರನಮೋ ಎಂಬÉ ನಮ್ಮ ಗೆಲಿಸೆಂದು 2 ನಂದಿವಾಹನ ಶಿವನ ಮುಂದಾಗಿ ಬಲಗೊಂಬೆ ಇಂದಿಗೆ ಪಂಥಗೆಲಿಸೆಂದುಇಂದಿಗೆ ಪಂಥಗೆಲಿಸೆಂದು ಬ್ರಹ್ಮನ ಕಂದನ ಮೊದಲೆ ಬಲಗೊಂಬೆ 3 ಸೌಪರ್ಣವಾರುಣಿ ಅಪರ್ಣ ದೇವಿಯರು ಸೌಕರ್ಯದಿಂದ ನಮ್ಮ ಪಂಥಸೌಕರ್ಯದಿಂದ ನಮ್ಮ ಪಂಥಗೆಲಿಸೆಂದುಕರವ ಮುಗಿವೆವು ಕ್ಷಣಕ್ಕೊಮ್ಮೆ 4 ಇಂದು ರಾಮೇಶನನುಗಾಲ ನೆನೆಯುತ ಮುಂದಕ್ಕೆ ಹೆಜ್ಜೆನಿಡುವೋಣ5
--------------
ಗಲಗಲಿಅವ್ವನವರು
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ಪನ್ನಗ ವೇಣಿ | ನಿನ್ನ ನಗಲಿದಾ | ಮೊದಲಿನ್ನುಕೋಮಲಾಂಗನಾ | ಮುನ್ನಿನೊಲುವನಾಕಾಣೆ | ಮಂದಗಮನೆ ಪ ಕಂಗಳೆವಿಯಾ ಸಿಕ್ಕದೆ | ನಿನ್ನನೆನೆದು | ಅಂಗ ಕಳೆಗಳ ತೋರದೇ | ರಂಗ ನೆಡಬಲ ನೋಡಾ | ಇಂಗಿತ ಮಾನಿನಿಯರಾ | ಮುಂಗೋಪಿಯಾದಾ ಕೇಳಮ್ಮಾ ಹೇಳಲೇನಮ್ಮ1 ವಿರಹ ತಾಪವ ಬರೆದು ವಿರಕ್ತಿಯಿಂದಾ | ತಿರುಕರ ವೇಷ ತಳೆದು ಧರೆಯಾಧಾರೆಯೆರೆದು | ಅರಸುತನವ ಬಿಟ್ಟು | ಮರಳ ಗೋಲರಾ ಸೇರಿದಾ | ಮಾತು ಮೀರಿದಾ 2 ವರದ ತಂದೆ ಮಹಿಪತಿ | ನಂದನ ಪ್ರಾಣಾ | ಸಾರಥಿ | ಕರುಣಾಳು ಎಂಬುದಕೆ | ತುರುಗಾವನಾಗಿ ಬಂದ | ಹರಿಣಾಕ್ಷಿ ಏಳಾಲಿಂಗಿಸೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ ವಾಯುಗತಿಯಂತೆ ಗಮಿಸುತಲಿ ಹೇಯ ಕಾಮಾದಿಗಳೆಂಬ ರಜವನಡಗಿಸುತ ನಾಯಕನುಪೇಂದ್ರನಾಜ್ಞೆಯ ಪಡೆದು 1 ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ ಕಂಗಳೆಂಬ ಮಿಂಚನೆ ನೆರಹಿ ಲೋಕದಿ ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ಭಂಗಿಸಿ ಸುರಪಥವ ತೋರಿಸುತ್ತ 2 ಸಿರಿಯರಸನ ಸಮ್ಯಕ್ಜ್ಞಾನವೆಂಬ ಪೈರಿಗೆ ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
--------------
ವಿಜಯೀಂದ್ರತೀರ್ಥರು
ಸರಸ್ವತಿ ತಾಯಿ ಬಿಡದೆನ್ನ ಕಾಯಿ || ಮೂರ್ತಿ ಹರಿಯ ಸುತನಸತಿ || ಪ ಕಡಗ ಕಂಕಣ ಗೆಜ್ಜೆ ಕಾಲು ಪೆಂಡಿಗಿಯಿಂದ || ಸಡಗರದಲಿ ಹೊಳೆವ ನಡುವಿನೊಡ್ಯಾಣವು || ಪೊಡವಿಯೊಳಗೆ ನಿಮ್ಮ ವಡಸತಿಯರೊಳು || ಕಡುಸುಂದರಿ ಜಗದಂಬೆ ಕನಕದ ಗೊಂಬೆ 1 ಕೊರಳಿಗೆ ವೈರನ(?) ಪೊಲುವ ಮುಖದಲ್ಲಿ ಹೊರಳೆಲಿಯಂದದಿ(?)ಫಣಿಯಲ್ಲಿ ತಿಲಕ | ಎರಳೆ ಕಂಗಳೆ ನಿನ್ನ ಹೆರಳಿನ ಸೊಬಗು ಉರಗನ ಪೋಲ್ವದು ಬಾಲೆ ಸುಲೀಲೆ 2 ಧರೆಯೊಳಧಿಕ ` ಹೆನ್ನೆಪುರ ಹೆನ್ನೆವಿಠಲನ’ ಚರಣ ಕಮಲದಲಿ ದೇವ ಭಜಿಸುವ ಪರಮ ಭಕುತಿಯಿಂದ ಪಾಲಿಸೆ ಮಣೀಯುವೆ | ಸ್ಥಿರ ನಿನ್ನ ನಂಬಿದ ಜನರನು ಕಾಯುವೀ 3
--------------
ಹೆನ್ನೆರಂಗದಾಸರು
ಹರಿಯೆ ನಿಮ್ಮಯ ಚರಣಕಮಲದಿ ನಿರುತಭಕುತಲಿ ಬೇಡುವೆ ಪ ಪರಮ ಕರುಣಾಕರನೆ ತರಳಗೀ ವರವ ಕರುಣಿಸು ಬೇಗನೆ ಅ.ಪ ಪರರ ಅಂಗನೆಯರನು ನೋಡಲಿಕ್ಕೆ ನ್ನೆರಡು ಕಣ್ಣು ಕರುಡಾಗಲಿ ಪರದ್ರವ್ಯ ಮುಟ್ಟಲಿಕ್ಕೆನ್ನ ಎರಡುಕರ ಮುರಿದ್ಹೋಗಲಿ 1 ಒಡನೆ ಬಿದ್ದು ಹೋಗಲಿ ಕೇಡು ಪರರಿಗೆ ಬಗೆವ ಮನ ಎ ನ್ನೊಡಲೊಳಿಲ್ಲದ್ಹಾಂಗಾಗಲಿ 2 ಮಂಗಳಾಂಗ ನಿಮ್ಮ ಚರಣ ಕಾಣಲೆನ್ನ ಕಂಗಳೆರಡು ದೃಷ್ಟಿಬಲಿಸಲಿ ರಂಗ ಶ್ರೀರಾಮನಂಘ್ರಿಕಮಲದ ಧ್ಯಾನದಲಿ ಮನ ಒಲಿಯಲಿ 3
--------------
ರಾಮದಾಸರು
ಮಂಗಳ ಮಹಿಮಗೆ ನೀರಾಜನಂಗಳ ಪೈಸರಿಸಿ ಭೃಂಗಾಳಕಂಗಳೆಯರು ಸ್ಮಿತವದನಂಗಳೆಯರು ಶಿರಿ ತಿರುವೆಂಗಳಪತಿಗಾರತಿಯ ಬೆಳಗಿರೆ ಪ.ಅಕ್ರಮದಲಿಶ್ರುತಿಕದ್ದೊಯ್ದವನಾಕ್ರಂದಿಸಿ ಸೀಳಿದಶುಭಮತ್ಸ್ಯಾಕೃತಗೆ ಜಗಂಗರ್ಭಾಕೃತಗೆ ಹತತಮವ್ಯಾಕೃತಗಾರತಿಯ ಬೆಳಗಿರೆ 1ಇಂದಿರನೈಶ್ವರ್ಯವು ಮಕರದಮಂದಿರ ಮಗ್ನಾಗಿರೆ ಗಿರಿಭೃತಕಂಧರಗೆ ಕಚ್ಛಪ ಸುಂದರಗೆ ಕರುಣಾಸಾಂದರಗಾರತಿಯ ಬೆಳಗಿರೆ 2ಪೊಂಗಣ್ಣಿನದಿತಿಜಕ್ಷಿತಿಯಹಿಂಗದೆ ಬೈಚಿಡಲು ಕ್ರೋಡದಿಭಂಗಿತಗೆ ವಸುಮತಿ ಸಂಗತಗೆ ದಿವಿಜರಇಂಗಿತಗಾರತಿಯ ಬೆಳಗಿರೆ 3ದಾನವಗಂಜದೆ ಶಿಶು ವರಹರಿನೀನೆ ಗತಿಯೆನೆ ಕಾಯ್ದ ಸುಜಾಣನಿಗೆ ನಿಜಜನಪ್ರಾಣನಿಗೆ ನರಪಂಚಾನನಗಾರತಿಯ ಬೆಳಗಿರೆ 4ಧರ್ಮದಿ ಕೊಬ್ಬಿದ ಬಲಿಚಕ್ರನಮರ್ಮದಿ ಜಡಿದ ವಿಚಿತ್ರಕರ್ಮನಿಗೆ ಧೃತಮೃಗಚರ್ಮನಿಗೆ ಅಣುವಟುಶರ್ಮನಿಗಾರತಿಯ ಬೆಳಗಿರೆ 5ವೀರ ಕ್ಷತ್ರಿಯರ ಕುಲ ಸಂಹಾರ ರೇಣುಕೆ ಕಂಠ ವಿದಾರಿಗೆ ವಿತರಣ ಶೂರಗೆಘೋರಕುಠಾರಿಗಾರತಿಯ ಬೆಳಗಿರೆ 6ಮುನಿಮಖಪಾಲಕ ತ್ರಯಂಬಕಧನುಹರ ಸೀತಾವರ ದಶಮುಖಹನನಗೆ ಮತ್ತವನನುಜಪಗೆ ಅಂಜನಾತನುಜಪಗಾರತಿಯ ಬೆಳಗಿರೆ 7ಪೊಂಗೊಳಲೂದುತ ಗೋಜಂಗುಳಿಹೆಂಗೆಳೆಯರ ಮೋಹಿಪ ತಾವರೆಗಂಗಳಗೆ ಸುಖದ ತರಂಗನಿಗೆ ಪಾಂಡವಸಂಗನಿಗಾರತಿಯ ಬೆಳಗಿರೆ 8ನೀಚರ ಬಲವಳಿಯಲು ಸತ್ವರಖೇಚರನಾರಿಯರ ವ್ರತಹೃತಆಚರಗೆಜಿತಬೌದ್ಧಾಚರಗೆ ನಿಗಮವಿಗೋಚರಗಾರತಿಯ ಬೆಳಗಿರೆ 9ಸಂಕರ ಕಲಿಯಂ ಮಥಿüಸಲು ತಾಬಿಂಕದಿ ಹಯವೇರಿದ ಸದ್ಧರ್ಮಾಂಕುರಗೆ ವರ್ಧಿಪ ಕಿಂಕರಗೆ ಪ್ರಸನ್ವೆಂಕಟರೇಯಗಾರತಿಯ ಬೆಳಗಿರೆ 10
--------------
ಪ್ರಸನ್ನವೆಂಕಟದಾಸರು