ಒಟ್ಟು 107 ಕಡೆಗಳಲ್ಲಿ , 38 ದಾಸರು , 99 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಮೃತ ಗಜಾನನ ಯನ್ನಾಲಯದಿ ತಗದಾ ಆನನಾ ಪ ತನುಜನ ತನ್ವೀ ತನುವಿನ ಘನತರ ಬಾಧೆಯು ಅನುದಿನಾದವರಾ ತೊಳಲಿಸೆ ಅನಷ್ಟೇಕದಂತ ತನು ರಕ್ಷಿಸಿ ತನ್ನ ಜನರೆಂದೆಣಿಸೆಮ್ಮ ಮನದಿ ನೆಲಸೀದಾ 1 ಸಂತತಾನಂತ ಚೀಂತೆಯು ಅಂತರ ದುಗುಡವು ಎಂತು ಕಂಗೆಡಿಸಿ ನೋಳ್ಪವು ಸುತಗಜಾನನ ಸಂತ ಮಹಿಮ ಎನ್ನಂತ ತಿಳಿದು ತಾ ಚಿಂತೆಯ ತವಿಸಿದಾ 2 ಶಿರಿಯನ್ನಾ ಗುರುತಾವರಿಯಳು ಮೆರದಿ ಹರನು ಬಂದು ನಿರುತ ನಿನ್ನನಾ ಸ್ತುತಿಪೆನು ಪರಿಪರಿನುತಿಪುದ ನರಿತು ಗಜಮುಖನು ನರಸೀಂಹವಿಠ್ಠಲಗೆರಗಿ ಹರಸೀದಾ 3
--------------
ನರಸಿಂಹವಿಠಲರು
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇಷ್ಟೇಕೆ ನಿರ್ದಯ ಶ್ರೀಹರಿಯೇ ಸೃಷ್ಟೀಪತಿಯೆ ಪ. ಮುಟ್ಟಿ ಭಜಿಪರ ನಿಟ್ಟಿಸಿ ನೋಡದೆ ನಿಷ್ಠುರವಾಗಿಹುದಿಷ್ಟವೆ ನಿನಗಿದು ಅ.ಪ. ಸಣ್ಣ ಮಾತುಗಳಾಡಿದೆನೇನೊ ದೆನ್ನ ತಲೆಯ ಮೇಲಿನ್ನೊಗೆಯದಿರು 1 ಕೋರೆಯ ತೋರುತ ಕೊಸರುವುದೇಕೋ ಶ್ರೀಹರಿ ನೀ ನೀರೀತಿ ಮಾಡುವ ಬಗೆಯಿನ್ನೇಕೋ ನೀರಜಭವಪಿತ ನೀನೇನಗೈದರು ಸೇರಿದೆ ನಿನ್ನನು ಸಾರೆನದಾರನು 2 ಸಿಂಗನ್ನ ಪೋಲುವ ಮುಖ ಧರಿಸಿ ಕಂಗೆಡೆ ಭಯದಿ ಜಗಂಗಳ ನಡುಗಿಪ ನುಂಗಲು ಬರುವಾಸಿಂಗನ ಬಗೆ ಸಾಕೋ 3 ಮುನ್ನಾ ಶುಕ್ರನ ಕಣ್ಣನು ತಿವಿದಾ ಪುಲ್ಲಿನತುದಿಯಿಂ ಎನ್ನೀ ಕಣ್ಣನ್ನು ತಿವಿಯದಿರಣ್ಣಾ ನಿನ್ನೀಕರದೊಳಿಹ ಘನ ಕೊಡಲಿಗೆ ನೀ ನಿನ್ನಾರನು ಗುರಿಗೈಯದಿರೆಂಬೆನು 4 ಶಿಲೆಯಾಗಿದ್ದವಳ ಕಲುಷವ ಕಳೆದು ಪಾವನೆಯೆನಿ ಕಾಳಿಂಗನ ಫಣೆಯೊಳು ಕುಣಿಕುಣಿದೇ ಭಳಿರೆನೆ ಬಾಲ ಗೋಕುಲ ಬಾಲೆಯರೆಲ್ಲರ ಜಾಲವಿದ್ಯೆಯಿಂ ಮರುಳುಗೊಳಿಸಿದೆ 5 ತುರುಗವನೇರುತ ತರುಬಲು ಬೇಡೈ ಧರೆಯೊಳು ನೀನೆತ್ತಿದ ಪರಿಪರಿ ರೂಪವ ಸ್ಮರಿಸಿ ಸ್ಮರಿಸಿ ಮನಬೆರಗಾಗಿದೆ ಹರಿ6 ಶರಣಾಭರಣನೇ ನೀನೆಂದು ಮನದೆಂದು ಮರೆಬೇಡುವೆನೈ ಬಳಿಸಂದು ವರಶೇಷಗಿರಿ ದೊರೆನೀನಿಂದು 7
--------------
ನಂಜನಗೂಡು ತಿರುಮಲಾಂಬಾ
ಈಡುಗಾಣೆನಯ್ಯ ಜಗದೊಳಗೆ ಪ. ಬೇಡಿದಭೀಷ್ಟಗಳ ಕೊಡುವ ಹನುಮ ಭೀಮ ಮಧ್ವರಾಯ ಅ.ಪ. ಅಷ್ಟದಿಕ್ಕಲಿ ಭೂಪರಾಳಿದ ದುಷ್ಟರಾವಣನ್ನ ಪುರವ ದೃಷ್ಟಿಸಿ ನೋಡಿ ಸಮರದಲಿ ಪ್ರಹಾರವನೆ ಕೊಡಲು ಕಷ್ಟದಿ ಮೂಛ್ರ್ಯಕೃತನಾಗಿಯೆದೆ ಹಿಟ್ಟಾಗಿಸನಂತಕಂದಿಸಿಯೆ ಕಂಗೆಟ್ಟು ಹತ್ತು ದಿಸೆಗೆ ಓಡಿಸಿದ್ಯೊ ದಿಟ್ಟನಾಗಿ ನಿರಂತರದಿ ಹನುಮಾ 1 ನಾರದ ಅಯೋಧ್ಯದಿ ಪೇಳಲು ಶ್ರೀ ರಾವಣ ಸೈನ್ಯಗಳ ಓಡಿಸಿ ವಾರಿಧಿಗಳ ದಾಟಿ ಬೇಗ ನೂರುತಲೆ ಅಸುರನ ಪಟ್ಟಣದ ದ್ವಾರ ಬಂಧಿಸಿ ಸಕಲದ್ವೀಪದಲ್ಲಿದ್ದ ಕ್ರೂರ ಅಸುರನ್ನ ಕಾಲಲೊದ್ದು ವರ ವಿಭೀಷಣ ಸುಗ್ರೀವರ ಪುಚ್ಛದಲಿ ತರುಬಿದಿಯೊ ಸಮರ್ಥ ಹನುಮಾ 2 ರುದ್ರ ಬ್ರಹ್ಮರ ವರದಲವಧ್ಯನಾದ ಜರಾಸಂಧನಾ ಖಳರ ಸೀಳಿದ್ಯೊ ನೃಪರ ನಿಂದೆ ಯುದ್ಧದಲಿ ದುರ್ಯೋಧನನ ಕೊಂದ ಪ್ರಸಿದ್ಧ ಭೀಮರಾಯ ನಿಮಗೆ3 ವಾದಿಗಜಕೆ ಮೃಗೇಂದ್ರ ವಾದಿವಾರುಧಿ ಬಡಿವ ಮಾಯಾ ವಜ್ರ ಭೇದ ಮತಾಂಬುಧಿಗೆ ಚಂದ್ರ ಮೋದತೀರ್ಥಾನಂದಗೆ ಕೃಷ್ಣಾ ಅಷ್ಟವಾಳುಕ ಮುಷ್ಟಿ ತಂದೆ ಸಾಧುಜನರಿಗೆ ತತ್ವಬೋಧಿಸಿದೆ ಮೇದಿನಿಯೊಳು ಮಧ್ವರಾಯ ನಿಮಗೆ 4 ಇಂದುಮುಖಿ ಸೀತೆಗೆ ಮುದ್ರಿಕೆಯನಿತ್ತು ವಂದಿಸಿ ರಾಮಕಥೆಯ ಪೇಳಿದೆ ಅಂದು ರೋಮಕೋಟಿ ಶಿವರಮಾಡಿ ಪುರುಷಮೃಗವನೆ ತಂದೆ ಚಂದದಿಂ ಮಣಿಮಂತನ ಕೊಂದು ಸೌಗಂಧಿಕವ ತಂದೆ ನಂದತೀರ್ಥರಾದ ಅಚಲಾನಂದ ವಿಠಲನ ದಾಸ ನಿಮಗೆ5
--------------
ಅಚಲಾನಂದದಾಸ
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ
ಎಲ್ಲಿ ನೋಡಿದರಲ್ಲಿ ರಾಮ - ಇದ ಪ ಬಲ್ಲ ಜಾಣರ ದೇಹದೊಳಗೆ ನೋಡಣ್ಣ ಅ ಕಣ್ಣೇ ಕಾಮನ ಬೀಜ - ಈಕಣ್ಣಿಂದಲೆ ನೋಡು ಮೋಕ್ಷ ಸಾಮ್ರಾಜ್ಯಕಣ್ಣಿನ ಮೂರುತಿ ಬಿಗಿದು - ಒಳಗಣ್ಣಿಂದಲೇ ದೇವರ ನೋಡಣ್ಣ 1 ಮೂಗೇ ಶ್ವಾಸ ನಿಶ್ವಾಸ - ಈಮೂಗಿಂದಲೇ ಕಾಣೊ ಯೋಗ ಸಂನ್ಯಾಸಮೂಗನಾದರೆ ವಿಶೇಷ - ಒಳಮೂಗಲಿ ನೋಡಣ್ಣ ಲೀಲಾವಿಲಾಸ 2 ಕರ್ಮ ಕುಠಾರ - ಒಳಗಿವಿಯಲ್ಲಿ ಕಾಣೊ ನಾದದ ಬೇರ 3 ಬೊಮ್ಮ ಮಾಡಿದ ತನುಬಿಟ್ಟು - ವಿಶ್ವಕರ್ಮನು ಮಾಡಿದ ಬೊಂಬೆಯನಿಟ್ಟುಸುಮ್ಮನೆ ಕೂಗುಗಳಿಟ್ಟು - ಅದನಂಬುವನೆಂಬೋನು ಹೋಹ ಕಂಗೆಟ್ಟು4 ರೂಢಿಯೊಳಗೆ ಶುದ್ಧ ಮೂಢ - ಈಕಾಡುಕಲ್ಲುಗಳನ್ನು ನಂಬಬೇಡನಾಡಾಡಿ ದೈವಗಳನೆಲ್ಲ - ನಮ್ಮಬಡದಾದಿ ಕೇಶವನೊಬ್ಬನೆ ಬಲ್ಲ 5
--------------
ಕನಕದಾಸ
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಕಂಗೆಡದಿರು ಮನವೆ ಕಂಗೆಡದಿರು ಒಡನೊಡನೆ ನೆರೆದು ಬಂದು ಪ ಜನಕೆ ಗ್ರಾಸವೆಂತಹುದೆಂದು ಅನುಮಾನ ಹಚ್ಚಿಕೊಂಡು ಬಡವಾಗದಿರೆಲೆ ಆಲೋಚನೆ ಮಾಡು ನಿನ್ನೊಳಗೆ ತಿಳಿದು ಮರಳಿ ಮರಳಿ ಘನಮಹಿಮ ನಾರಾಯಣ ಅನಾದಿ ಸ್ವಾಭಾವಿಕ ಚಿನುಮಯ ಸತ್ಯಸಂಕಲ್ಪ ದೇವ| 1 ಇನಿತು ಜೀವಿಗಳಿಗೆ ಕಾಲಕಾಲಕೆ ಗ್ರಾಸ ಮಾಡಿಯಿಪ್ಪಾ ಕ್ಷಣಮಿರಗೊಡದೆ ಆವಲ್ಲಿಯಿದ್ದರೂ ವುಣಿಸುವ ಉಚಿತವನ್ನೆ ತಿಳಿದು ನೋಡಿ ದಿನ ದಿನಕೆ ಅಧಿಕವಿಲ್ಲಾ ತತ್ಪೂರ್ವ ಚೇತನಕೆ ನಿರ್ಮಾಣ ಮಾಡಿದಂತೆ ಬೊಮ್ಮಾ2 ಫಣಿತಿಯಲ್ಲಿ ಬರೆದಿರುವ ಆಯು:ಕರ್ಮವಿದ್ಯಾ ಧನ ನಿಧಾನನೆನೆಸಿ ಶ್ರೀಹರಿಯ ಆಜ್ಞಾದಿ ಜನಿಸುವಾಗಲೆ ಅವರವರವಾಡಿಪನಾ ಕೊನೆಯ ಸೆರಗಿನಲಿ ಕಟ್ಟಿಹನೋ ನಿನಗೆ ಕಾಣಬಾರದೋ ಪದಶಾಸ್ತ್ರಗಳಿಂದೆ ಗುಣಿಸಿ ನೋಡಿದರೆ ಕಾರುಣಿಕÀವಹುದೊ 3 ಅಣುಮಾತ್ರನಿಂ ನಿಂದಾ ಆಗುವಾ ಶೌರ್ಯವೇನೋ ಅನುಭವಕೆ ತಂದುಕೊಂಡು ಗ್ಲಾನಿಯಾಗೋ ಮಿನುಗು ಚಿಂತೆಗಳಿಂದಾ ಬರುವ ಲಾಭವೇ ಕಾಣೆ ತನುವ ಶೋಷಿಸಿ ವಿರೋಧಾವಾಗಿ ಕೊಂಬೆ ಸಿರಿ ನಮ್ಮ ವಿಜಯವಿಠಲರೇಯಾ ಮನುಜಾದಿ ದೇಹಿಗಳಿಗೆ ಸ್ವಾಮಿಯಾಗಿಪ್ಪನೋ
--------------
ವಿಜಯದಾಸ
ಕಂಡ ದೈವಕ್ಕೆ ಕಂಗೆಟ್ಟು ಕೈ ಮುಗಿದು | ದಣಿದಿಯಾತಕೋ ಪ ಶರಧಿ ಗರ್ವ ಪರಿಹರನಸೇರಿ ಹೋದ ದಿವಿಜರ ಬಿಡಿಸಿ ಸಿರಿಯಿತ್ತು ಸಲಹಿದಾತನ 1 ಸುರರು ಪೊಗಳಲು |ಹುರುಳಿಲ್ಲದ ಭವವನಳಿದು ಪರಮ ಪದವಿಯನಿತ್ತನ 2 ವೈರಿ ತಮ್ಮಗೆ |ರುಕ್ಮನಗರ ಧಾರೆಯೆರೆದ ಶ್ರೀ ರಾಮಚಂದ್ರನ 3
--------------
ರುಕ್ಮಾಂಗದರು
ಕಂಡದ್ದು ಬಯಸಿ ಕಂಗೆಡು ಬೇಡಾ ಪಾದ ಬಿಡಬೇಡಾ ಪ ಕಾಲನಿನ್ನದಲ್ಲ ಕಡುಮೂರ್ಖ ಆ ಕಾಲ ಪುರುಷ ಮಾಡಿದನೇಕಾ ಪರಿಗಳಿಂದ ಇನ್ನು ಯಾಲೋಕಾದಲಿ ನಡುವುದಲ್ಲಾ ಸುಖದು:ಖ ಪಾಲಿಗೆ ಬಂದದ್ದು ಬಿಡದನಕಾ ಪ್ರಾಪ್ತಿ ಇದ್ದಷ್ಟೇ ಇಲ್ಲಧಿಕಾ ಶ್ರೀಲೋಲನ ನೀನಿರುವತನಕಾ ಸ್ಮರಿಸದೆ ಇರಬೇಡ ಅವಿವೇಕಾ 1 ಘಣಿಯಲ್ಲಿ ಬರದದ್ದು ತಪ್ಪದಲ್ಲೆ ಜಗ ಭಗವಂತ ನೀ ಮಾಡಿದಲ್ಲೆ--- -------- ನಿನ್ನದಲ್ಲೆ ಅನುಗ್ರಹ ಮಾಡುವ ಭರದಲ್ಲೆ ನಗಧರನಾ ನಾಮ ಬಲದಲ್ಲೆ ಅಘಗಳ ಕಳಿ ನೀ ತೀವ್ರದಲ್ಲೆ 2 ಇಷ್ಟಾರ್ಥ ನೀ ಮಾಡಬೇಕಂದಿ ಸಂಚಿತ ಎಲ್ಲೆಂದಿ ಕಷ್ಟವ ಪಡಕೊಂಡು ನೀ ಬಂದಿ ಕಾಮಕೆ ಸುಖವು ಇಲ್ಲೆಂದಿ ಇಷ್ಟದಿ ಶ್ರೀ ಹರಿ ಪದಹೊಂದಿ ಇರದೆ ನೀ ಇರಬೇಡಾ ಇಬ್ಬಂದಿ ಸ್ಪಷ್ಟದಿ 'ಹೊನ್ನಯ್ಯ ವಿಠ್ಠಲಂದಿ’ ಸಾರ್ವದಿ ಮುಂದಕ ನೀ ಬಂದಿ3
--------------
ಹೆನ್ನೆರಂಗದಾಸರು
ಕಾಗಿಣಿ ತೀರದ ಯೋಗಿವರ್ಯ ಗುರುವೇ | ನಿನ್ನಲಿ ಮೊರೆಯಿಡುವೆ ಪ ಭೋಗಿಶಯನ ಗುಣ ಯೋಗದಿಂದ ಭಜಿಪಾ | ಹರಿ ಪದಾಬ್ಜ ಮಧುಪಾ ಅ.ಪ. ಸಿಂಗರವೆನಿಸಿದ ಮಂಗಳವೇಡಿಯಲಿ |ನೀನುದಿಸುತಲಲ್ಲೀಸಿಂಗರಿಸಿಹ ಬಲು ರಂಗ ಕುದುರೆ ನೇರಿ | ರಾವುತರೊಡಸೇರೀ ||ಕಂಗೆಡುತಲಿ ಬಲು ತುಂಗೆ ಕಾಗಿಣೀಯಾ | ಸಾರುತ ತನಹಯಾ ಹಿಂಗದೆ ನದಿಯಲಿ ಮಂಗಳ ಹಯವೇರಿ | ನೀರ್ಗುಡಿದ ಬಾಯಾರಿ 1 ಆಚೆ ತಟದಿ ಅಕ್ಷೋಭ್ಯಮುನಿಪ ನೋಡಿ | ಸ್ವಪ್ನದರ್ಥ ಮಾಡೀಸೂಚಿಸಿದನು ತವ ಶಿಷ್ಯನ ಕೈಯಲ್ಲೀ | ಬಂದ ಸಾದಿ ಅಲ್ಲೀ ||ಯಾಚಿಸಿದನು ಮುನಿ ಪದಕೇ ಬಾಗೀ | ತುರ್ಯಾಶ್ರಮಕಾಗೀಖೇಚರ ವಹನಾಜ್ಞೆಯೆಂದು ತ್ವರ್ಯಾ | ಮಾಡ್ದ ಸಾದಿ ಯತಿಯಾ 2 ತಂದೆ ಬಹು ಕೋಪದಿಂದ ಬಂದೂ | ಯತಿಯ ನಿಂದಿಸ್ಯಂದೂತಂದು ಮಗನ ಏಕಾಂತ ಗೃಹಕೆ ಆಗ | ಸತಿಯನು ಕೂಡಿಸಿ ವೇಗ ||ಅಂದು ಕಂಡು ಸರ್ಪಾಕೃತಿ ಪತಿಯಾ | ಚೀರಿದಳ್ ಬಲ್ಪರಿಯಾತಂದೆ ಕೊಂಡು ಮಗನರ್ಪಿಸಿದನುಯತಿಗೇ | ಕ್ಷಮೆ ಬೇಡಿದನಾಗೇ 3 ತ್ರ್ಯಕ್ಷನಂಶ ಅಕ್ಷೋಭ್ಯ ಮುನಿಪ ಆಗ | ಸನ್ಯಾಸ ವೇಗಭಿಕ್ಷುಕ ಮಧ್ವರ ಗ್ರಂಥ ಪೊತ್ತ ವೃಷಭ | ಎನುತೀತನ ಪ್ರಭಾ ||ಲಕ್ಷಿಸಿವರ ಕರೆದನೂ ನಾಮಾನ್ವರ್ಥ | ಯತಿಯನೆ ಜಯತೀರ್ಥಕುಕ್ಷಿಲಿ ಮೆರೆವರಗೋಳ ಗುಹೆಯು ಅಲ್ಲೀ | ರಚಿಸಿದ ಟೀಕೆಗಳಲ್ಲೀ4 ಮಧ್ವಭಾಷ್ಯಕೇ ರಚಿತ ಟೀಕಾ ಗ್ರಂಥಾ | ನೋಡಿದ ಮುನಿ ಮತ್ತವಿದ್ಯಾರಣ್ಯರ ಗೆದ್ದ ಆರ್ಯ ಧೀರಾ | ಅಕ್ಷೋಭ್ಯರ ಕುವರ ||ಅದ್ವೈತಾದಿಗಳೇಕವಿಂಶ ಪಂಥ | ಗೆಲ್ಲುತ ಸುಧೆ ಗ್ರಂಥಅದ್ವಿತೀಯ ಗುರುಗೋವಿಂದ ವಿಠ್ಠಲಗೇ | ಅರ್ಪಿಸಿದನು ಆಗೇ 5
--------------
ಗುರುಗೋವಿಂದವಿಠಲರು
ಕಾಡದೆ ಬೇಡದೆ ಕಂಗೆಡದೆ ಕೋ ಮನವೆ ನಿಜ ಸುಭಿಕ್ಷ ಗುರು ಸಂರಕ್ಷ ಧ್ರುವ ಅಳುಕದೆ ಬಳುಕದೆ ತುಳುಕದೆ ನಿಂದು ತಿಳಕೊ ನಿಜಸುಭಿಕ್ಷೆ ಕೊಳಕ ಹುಳಕ ಮೊಳಕನೆಂದು ಮಾಡದಿರುಪೇಕ್ಷ ನಾಳೆ ನಾಡದಿಂದ್ಯಾಗೆಂದು ಕಲ್ಪಿಸಿಕೊಬ್ಯಾಡಪೇಕ್ಷ 1 ಲಜ್ಜೆ ಅಳಿದು ಗುರು ಶರಣವ ಹೊಕ್ಕು ಸರಕ್ಕನೆ ಕೋ ಸುಭಿಕ್ಷೆ ಹೆಜ್ಜೆಜ್ಜಿಗೆ ಸುರಿಮಳೆಗರೆವುತಲದೆ ಗುರುಕರುಣದಕಟಾಕ್ಷ ಫಜ್ಜಿಗೆ ಬಂದುವರಿತ ಮ್ಯಾಲೆ ಕಂಜನಾಭನೆ ಸುಪಕ್ಷ 2 ಬೇಡಿಸಿಕೊಳ್ಳದೆ ನೀಡುತಲಾನೆ ಭಾಸ್ಕರ ಗುರು ಸಮರ್ಥ ನೀಡಿ ನಿಜನಿಧಾನವ ಕೊಟ್ಟು ಮಾಡುತಲಾನೆ ಹಿತಾರ್ಥ ಬಡವರಾಧಾರೆನ್ನೊಡೆಯನೆ ಜಗತ್ರಯಕ್ಕೊಬ್ಬನೆ ಕರ್ತ ಮೂಢ ಮಹಿಪತಿಗನುದಿನ ಬಿಡದೆ ನೀಡುತಾನೆ ಸಕಲಾರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು