ತಾತ್ಸಾರಕಿದು ಕಾಲವಲ್ಲ ರಂಗಯ್ಯ ಶ್ರೀ-
ವತ್ಸಲಾಂಛನ ಸುಖ ಚಿನ್ಮಯನೆ
ವತ್ಸನ ಧ್ವನಿ ಕೇಳಿ ಒದಗುವ ಗೋವಂತೆ
ಭೃತ್ಯರ ಸಲಹುವ ಬಿರುದುಳ್ಳ ನರಸಿಂಹ ಪ.
ಹುಚ್ಚಾಗೆಲ್ಲರ ಕಚ್ಚುವ ನಾಯಂತೆ
ತುಚ್ಛವಾದ ಬಗುಳುಚ್ಚರಿಸಿ
ಇಚ್ಛಾನುಸಾರದಿಂದಿರುವ ಹೂಣನ ಬಾಯಿ
ಮುಚ್ಚಿಸಿ ಮೂಲೆಯೊಳ್ಮುರಿದೊತ್ತು ಮುರಹರ 1
ನಿನ್ನ ಸೇವೆಯನ್ನು ನಿರುತದಿ ನಡೆಸುತ
ಅನ್ಯರ ಲಕ್ಷಿಸದಿರಲೆನ್ನನು
ಭಿನ್ನ ಭಾವದಿ ಭೀತಿ ಬಡಿಸುವ ದುಷ್ಟನ
ಇನ್ನುಪೇಕ್ಷಿಸಿ ಸುಮ್ಮನಿರುವೆ ಯಾತಕೆ ಸ್ವಾಮಿ 2
ದುಷ್ಟ ಹಿರಣ್ಯಚರ್ಮಾದಿದಮನ ನಿನ-
ಗೆಷ್ಟೆಂದು ಪೇಳಲಿ ವಿಧಿಜನಕ
ಸೃಷ್ಟಿಗೊಡೆಯ ವೆಂಕಟೇಶನ ಹೂಣನ
ಮಾಧವ 3