ಒಟ್ಟು 8 ಕಡೆಗಳಲ್ಲಿ , 5 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು ಪ್ರಾರ್ಥಿಸಲು ನೂರೊಂದು ಕೊಟ್ಟಿಯೊ ದೇವ ತಂದೆ ನಿನ್ನಯ ಕರುಣವೆಂದಿಗೂ ಇರಲಿ ಪ ಇಂದು ನೀನಿತ್ತ ನೂರೊಂದು ನಿನ್ನಯ ಪಾದ ದ್ವಂದ್ವಕರ್ಪಿಸುವೆ ನಿನ್ನಯ ಸೇವೆ ಎಂದೆನುತ ಅ.ಪ ನಿನ್ನ ಮೂರ್ತಿಯ ನೋಡಿ ನಿನ್ನ ಸ್ತುತಿಯನೆ ಮಾಡಿ ನಿನ್ನ ಕರದಲಿ ಪಿಡಿದು ಪುಣ್ಯಗಳಿಸಿದೆನೊ ನಿನ್ನ ಸುಂದರ ರೂಪ ಸತತ ಹೃದಯದಿ ಪೊತ್ತು ಧನ್ಯನಾಗಿರುವೆನಿನ್ನೇನು ಬೇಕಿಹುದೆನಗೆ 1 ನಿಟ್ಟುಸಿರು ಬಿಡಿಸಿದೆಯೊ ಹೊಟ್ಟೆಯನು ಸುಡಿಸಿದೆಯೊ ಕಟ್ಟಕಡೆಯಲಿ ಕರವನಿತ್ತು ಮೇಲೆತ್ತಿದೆಯೊ ಕಟ್ಟುಬಣ್ಣವಿದಲ್ಲ ಸುಟ್ಟರಿದು ಪೋಗದೊ ಘಟ್ಟಿಯಾಯಿತು ಎನ್ನ ಪ್ರೇಮ ನಿನ್ನೊಳಗೆ 2 ಕೆಸರಿನಲಿ ಕಂಬದಂತಿದ್ದ ಎನ್ನಯ ಸ್ಥಿತಿಯು ಕುಸಿಯಲಿಲ್ಲವೊ ದೇವ ಶಶಿಕುಲ ಪ್ರಸನ್ನ ಹೊಸದಾದ ಚೈತನ್ಯವೆನಗೆ ವಿಕಸಿತವಾಯ್ತು ಉಸಿರಿರುವ ತನಕ ನಾ ಮರೆವುದಿಲ್ಲವೊ ನಿನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಧೀರತನವ ಪಾಲಿಸೋ ಪ ಭವ ತೀರಕ್ಕೆನ್ನನು ಸೇರಿಸೋ ಅ.ಪ ತೊಳಲುತ ಖಿನ್ನನಾಗಿ ವರ್ಣಶ್ರೇಷ್ಠರಕುಲದಿಬಹು ಪುಣ್ಯದಿ ಇನ್ನು ಪುನರಪಿ ಜನ್ಮವಿಲ್ಲ ನಿನ್ನ ಕಿಂಕರನನ್ನು ಸೇರಿಸಿ ಪಾಲಿಸಿ ||ನಾರಾ|| 1 ಅಷ್ಟಯೋನಿಗಳಲ್ಲಿ ಹುಟ್ಟಿಸಾಯುತ ಬಲು ಮೊರೆಯಿಟ್ಟು ಬೇಡಲಿ ಎಳ್ಳಿನಷ್ಟು ಕಾರುಣ್ಯವು ಪುಟ್ಟದೇನೋ ಸೃಷ್ಟಿಗೈಯುವೇ ಪುಷ್ಠಿಗೈಯುವೆ ಕಟ್ಟಕಡೆಯೊಳು ನಷ್ಟಪಡಿಸುವೆ ಸೃಷ್ಟಿಯೊಳು ಜೊತೆಗಟ್ಟಿನೋಡುವ ದಿಟ್ಟರಾರೈ ವಿಷ್ಟಮೂರುತಿ2 ಧರೆಯ ರಾಜ್ಯವನೊಲ್ಲೆ ಸಿರಿಯಸಂಪದ ವೊಲ್ಲೆ ಸುರರು ಭೋಗಿಪ ಸುರಪುರವಾನೊಲ್ಲೆ ನಿನ್ನ ಹೊರತಾದಕೈವಲ್ಯ ಸ್ಥಿರವೊಲ್ಲೆನು ನಾನಾ ತೆರದಿ ಭಕ್ತಿಯೊಳಿರಲಿ ಯನ್ನಯ ಕರಣವೃತ್ತಿಯು ಪರಮ ಪುಲಿಗಿರಿ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ನಾರಾಯಣನಿನ್ನಪಾರಾಯಣಗೈವ ಧೀರತನವಪಾಲಿಸೋ ಪ ತೀರಕೆನ್ನನು ಸೇರಿಸೋ ಅ.ಪ ಜನ್ಮದಿ ತೊಳಲುತ ಖಿನ್ನನಾಗಿ ವರ್ಣಶ್ರೇಷ್ಠಕುಲದಿ ಬಹುಪುಣ್ಯದಿ ಘನ್ನ ಮಹಿಮನೆ ನಿನ್ನ ಸೇವೆಯೊ ಳುನ್ನತದ ರತಿಯನ್ನು ಪಾಲಿಸಿ 1 ಅಷ್ಟಯೋನಿಗಳಲ್ಲಿ ಹುಟ್ಟಿ ಸಾಯುತ ಬಲು ಕೆಟ್ಟಕರ್ಮವ ಮಾಡಿ ಕಷ್ಟಪಟ್ಟು ಎಷ್ಟು ನಿನಗೆ ಮೊರೆಯಿಟ್ಟು ಬೇಡಲು ಎಳ್ಳಿ ನಷ್ಟು ಕಾರುಣ್ಯವು ಪುಟ್ಟದೇನೋ ಕಟ್ಟಕಡೆಯೊಳು ನಷ್ಟಪಡಿಸುವೆ ದಿಟ್ಟರಾರೈ ಇಷ್ಟ ಮೂರುತಿ 2 ಪರಮೇಷ್ಟಿ ಪುರದೊಳಗಿರಲಾನೊಲ್ಲೆನು ನಿನ್ನ ನಿರುತ ನಿನ್ನಯ ಚರಿತೆಯಲಿ ಮನ ವಿರಲಿ ನಾನಾತೆರದ ಭಕ್ತಿಯೊಳು ಪರಮ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ಸಂದರುಶನಂಗಳ ಬಯಸಿ ಪ ಕಾಮಿನೀ ಮಣಿಗೆ ಪ್ರೆಮದುಂಗುರುವನಿತ್ತೆ 1 ಭಂಡಿಲನ್ನವನುಂಡು ದುರುಳನ ಚೆಂಡಾಡಿದ ಕೇಳಿ2 ಕಟ್ಟಕಡೆಯಲ್ಲೇ ಪುಟ್ಟಿ ಕೆಟ್ಟಕುಮತಗಳ ತರಿದು ಪುಟ್ಟ ಜಗನ್ನಾಥ ವಿಠಲನ ಕೊಂಡಾಡಿದ ಕೇಳಿ 3
--------------
ಜಗನ್ನಾಥದಾಸರು
ಅಂತಕನ ದೂತರಿಗೆ ಕೃಪೆಯಿಲ್ಲವದರಿಂದ |ಚಿಂತೆಯನು ಬಿಟ್ಟು ಶ್ರೀ ಹರಿಯೆ ನೆನೆ ಮನವೆ ಪ.ದಿವರಾತ್ರಿಯೆನ್ನದೇ ತಿರುಗಿ ಲಂಪಟನಾಗಿ |ಸವಿಗಂಡ ಊಟಗಳ ಉಣಲರಿಯದೆ |ಅವನ ಕೊಂದು ಇವನ ಕೊಂದು ಅರ್ಥವನು ಗಳಿಸಿಕೊಂಡು |ಜವನ ದೂತರು ಬಂದು ಎಳೆವ ಹೊತ್ತರಿಯೆ 1ಮೊನ್ನೆ ಮದುವೆಯಾದೆ ಕರೆವುವು ಒಂದೆರಡಮ್ಮೆ |ನಿನ್ನೆ ಕೊಂಡೆನು ಕ್ಷೇತ್ರ ಫಲಬಾಹೊದು ||ಹೊನ್ನು ಹಣವುಂಟೆನಗೆ ಸಾಯಲಾರೆನು ಎನಲಾ |ತನ್ನ ದೂತರು ಬಂದು ಎಳೆವ ಹೊತ್ತರಿಯೆ 2ಹೊಸ ಮನೆಯ ಕಟ್ಟಿದೆನು ಗೃಹಶಾಂತಿ ಮನೆಯೊಳಗೆ |ಬಸಿರೆ ಹೆಂಡತಿ ಮಗನ ಮದುವೆಯು ನಾಳೆ ||ಹಸನವಾಗಿದೆ ಬದುಕು ಸಾಯಲಾರೆನು ಎನಲು |ವಿಷಮ ದೂತರು ಬಂದು ಎಳೆವ ಹೊತ್ತರಿಯೆ 3ಪುತ್ರ ಹುಟ್ಟಿದ ದಿವಸ ಹಾಲು ಊಟದ ಹಬ್ಬಮತ್ತೊಬ್ಬ ಮಗನ ಉಪನಯನ ನಾಳೆ ||ಅರ್ಥಿಯಾಗದೆ ಬದುಕು ಸಾಯಲಾರೆನು ಎನಲು |ಮೃತ್ಯು ಹೆಡತಲೆಯಲಿ ನಗುತಿಹುದರಿಯೆ 4ಅಟ್ಟಡಿಗೆ ಉಣಲಿಲ್ಲ ಇಟ್ಟ ನೀರ್ಮೀಯಲಿಲ್ಲ |ಕೊಟ್ಟ ಸಾಲವ ಕೇಳ್ವ ಹೊತ್ತ ಕಾಣೆ ||ಕಟ್ಟಕಡೆಯ ದಿವಸ ತಂಬಿದ ಬಳಿಕಿರಲಿಲ್ಲ |ಇಷ್ಟರೊಳು ಪುರಂದರವಿಠಲನ ನೆನೆಮನೆವೆ 5
--------------
ಪುರಂದರದಾಸರು
ಏಕೆ ಚಿಂತಿಸುತಿರುವೆ ಕೋತಿಮನವೆ |ಶ್ರೀ ಕೃಷ್ಣರಾಯನನು ಸ್ತುತಿಸಲೊಲ್ಲದಲೆ ಪ.ಹುಟ್ಟಿದಾಗುತ್ಪತ್ತಿಗಾರು ಚಿಂತಿಸಿದವರು |ಕಟ್ಟಕಡೆಯಲಿ ಲಯಕೆ ಏನು ಚಿಂತೆ ? ||ನಟ್ಟನಡುವಿನ ಬದುಕಿಗೇಕೆ ಚಿಂತಿಸುತಿರುವೆ ? |ಕಟ್ಟಕಡೆಯಲಿ ಮೂರುಬಟ್ಟೆತಾನಲ್ಲವೆ ?1ನವಿಲಿಂಗೆ ಚಿತ್ರಪತ್ರವನಾರು ಬರೆದವರು ? |ಪವಳಜಾತಿಗೆ ಕೆಂಪನಾರಿತ್ತರು ? ||ಸವಿಮಾತಿನರಗಿಳಿಗೆ ಹಸಿರಾರು ಬರೆದವರು ? |ಇವ ಮಾಡಿದವ ಕೃಷ್ಣ ನಮ್ಮ ಮರೆದಿಹನೆ ? 2ಬಸಿರೊಳಗೆ ಇದ್ದಾಗ ಶಿಶುವ ಹೊರೆದವರಾರು |ವಸುಧೆಯನು ಬಸಿರೊಳಗೆ ಹೆತ್ತರಾರು ?ವಸುದೇವಸುತ ನಮ್ಮ ಪುರಂದರವಿಠಲನ |ಪೆಸರ ಬಸಿರೊಳಗಿಟ್ಟು ಸ್ತುತಿಸುತಿರು ಮನವೆ 3
--------------
ಪುರಂದರದಾಸರು
ಮಧ್ವಮುನಿಯೆ -ಗುರು- ಮಧ್ವಮುನಿಯೆಪಮಧ್ವಮುನಿ ನಮ್ಮೆಲ್ಲರ | ಉದ್ಧರಿಸುವ ಕಾಣಿರೊ ಅ.ಪಅಂದು ಹನುಮಂತನಾಗಿ | ಬಂದ ರಾಮಪದಾರ-ವಿಂದದಿ ನೆರೆದು ತುಂಬಿಯಂದದಿ ಶೋಭಿಸಿದ 1ಏಣಾಂಕವಂಶದಿ ಪುಟ್ಟಿ | ಕ್ಷೋಣಿಪಾಲಕ ಶಿರೋಮಾಣಿಕ್ಯವಾಗಿ ಹರಿಗೆ | ಪ್ರಾಣನೆಂದೆನಿಸಿಕೊಂಬ 2ಕಟ್ಟಕಡೆಯಲ್ಲಿ ಯೋಗ | ದಿಟ್ಟನಾಗಿಪುರಂದರ|ವಿಠಲಗಾವಾಸವಾದ | ಪೆಟ್ಟಿಗೆಯೊಲೊಪ್ಪುವಂಥ 3
--------------
ಪುರಂದರದಾಸರು