ಶ್ರೀನರಹರಿ ಕರುಣಾಜಲಧೆ ತವಚರಣವ ನಂಬಿದೆ ಪ
ದೀನಜನರು ಪ್ರತಿದಿನ ಮೊರೆಯಿಡುತಿರೆ
ನಿಕರ ಕುಲಿಶಾಯುಧ ಧುರಧೀರಾ ಶೂರಾ
ಹಿರಣ್ಯ ಕಶಿಪು ಪುರಂದರ ಸನ್ಮುನೀಂದ್ರ ನುತಿ ಪಾತ್ರಸುಚರಿತ 1
ಉಗ್ರರೂಪ ಸಕಲಗ್ರಹಭಯ ಪರಿಹಾರೀ ಶೌರೀ
ಮುರ ವೈರಿ
ಜಲಜನಾಭ ನಿನ್ನಯ ಚಿಂತನೆ ಕೊಡು 2
ಕ್ಷುದ್ರರೋಗಗಳುಪದ್ರಪಡಿಸುತಿಹದೈಯ್ಯ | ಜೀಯಾ
ಕ್ಷೇಮವಿತ್ತು ನಿನ್ನವರ ದಾಸನೆನಿಸೈಯ್ಯಾ
ರುದ್ರಾಂತರ್ಗತ ಗುರುರಾಮ ವಿಠಲ
ಭದ್ರಮೂರುತಿ ಘಟಿಕಾಚಲನಿಲಯ 3