ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೈತ್ಯರಲ್ಲೆ ದುರ್ಜನ ಸೇವೆ ಪ ಪರರ ಲಾಭವನು ಧರಿಯೊಳು ನೋಡುತ | ಧರಿಸಲಾರ ಧಿಕ್ಕರಿಸುತ ನುಡಿವನು | ಪರರ ಹಾನಿಯಲಿ ಮರುಗದೆ ಮನದೊಳು | ಹರುಷ ಬಡವುತ ಚರಿಸು-ನೈಯ್ಯಾ 1 ಖಳ್ಳೆದೆಯೊಳು ಮನದಲ್ಲಿ ಕಪಟವು | ಸೊಲ್ಲಿತೆ ನೋಡಲು ಬೆಲ್ಲನೆ ಬೀರುವಾ | ಒಳ್ಳಿತು ಗುಣಗಳ ಯಳ್ಳಿಲಿ ನಿತೈಣಿಸದೆ | ಕ್ಷುಲ್ಲತನದಿ ಕುಂದಲ್ಲಿಡುವ-ಕೈಯ್ಯಾ 2 ಸತಿ | ಎನ್ನ ಮಗÀನೆ ಮಗ ಯನ್ನ ಗುಣವೇಗುಣ | ತನ್ನನೆ ಹೊಗಳುತ ಅನ್ಯಕ್ಹಳಿವರೆ 3 ಆವದು ಅರಿಯದ ಭಾವಿಕ ಜನರನು | ತಾವೀಗ ಕಂಡರೆ ಆವನನುಗ್ರಹ | ಆವ ಮಂತ್ರ ನಿನಗಾವ ನ್ಯಾಸವೇ | ದಾವಾಗ ಛಲಣಿಯ ಭಾವಿಪರವರೇ 4 ತಂದೆ ಮಹಿಪತಿ ನಂದನ ಪ್ರಭುವಿನಾ | ಒಂದರಗಳಿಗೆಯ ಛಂದದಿ ಸ್ಮರಿಸದೆ | ನಿಂದೆಯ ಮನೆಯೊಳು ಸಂದಿಸಿ ಅನುದಿನಾ | ಮಂದ ಮತಿಯರೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು