ಭಾರತೀಶನೆ ಬೇಗ ಬಾರೊ ಮನ್ಮನದಲಿ
ಹರಣ ಪ
ಚಾರು ಭಾಸ್ಕರ ಕ್ಷೇತ್ರ
ಗಾರನೆ ದಶರಥಕುಮಾರ ಸೇವಕಾಗ್ರಣಿ ಅ.ಪ
ವಾರಿಧಿ ಲಂಘಿಸಿದ
ಶೂರನೆ ಗಿರಿಯಾಶ್ರಯದಿ ತೋರುವಿ ಶ್ರಮಪರಿ-
ಹಾರಾರ್ಥಿಗಳ ತೆರ ಘೋರ ಪಾತಕಾಂಬುದ ಸ
ಮೀರ ಪಾಲಿಸೆನ್ನನು 1
ತಂದು ನೀಡಿದಿ ದ್ರುಪದ ನಂದಿನಿಯಳಿಗೆ ಸೌ
ಗಂಧಿಕ ಪುಷ್ಪ ದಯದಿ ವಂದಿಸುವೆನು ಮನ
ಮಂದಿರದಲಿ ಯದು ನಂದನನಂಘ್ರೀ ನೋಳ್ಪಾ
ನಂದವ ಕರುಣಿಸೊ 2
ಭೇದಾಬೋಧಿಸಿ ಬಲುಮೋದವ ಗರಿವ ಶಾಸ್ತ್ರ
ನೀದಯದಲಿ ರಚಿಸಿ ವಾದಿ ಮದಗಜ ಮೃ
ಗಾಧಿಪನೆನಿಸಿದ ಮೋದತೀರ್ಥಾಹ್ವಯಾ-
ಗಾಧ ಮಹಿಮ ಗುರು 3
ಸತತ ಸೇವಿಪ ಗರ್ಭವತಿಯಾಗಿರುವ ವಿಪ್ರ
ಸತಿಯ ನುಡಿಯ ಲಾಲಿಸಿ ನತಜನ ಪಾಲನೆ ಪ-
ರ್ವತ ದಿಂದಿಳಿದಶ್ವತ್ಥ ಕ್ಷಿತಿರುಹ ಮೂಲದಿ ಪಾ-
ರ್ವಾತಿ ನಾಥ ಸೇವಿತನೆ 4
ಈ ಸುಕ್ಷೇತ್ರದೊಳು ವಿದ್ವಾಂಸ ದೇವರಾಜಾಖ್ಯ
ಸನ್ನುತ ವಾಸಕಾರ್ಪರ ನರ
ಕೇಸರಿ ಗತಿ ಪ್ರಿಯ ದಾಸ ಪಾಲಿಸೊ ಗುರು
ವ್ಯಾಸರಾಜ ಪೂಜಿತ 5