ಮುದದಿ ಹರಿಯ ಧ್ಯಾನ ಮಾಡಿ ಸಾಧಿಸೊ
ಸದಯ ಹೃದಯರಾದ ಸಂಗದೊಳಗೆ
ನೀನು ಬೆರೆದು ಪ
--ಕರ್ತನಾದ ದೇವ ಸದ್ಪಿಲಾಸನಾ
ನಿಖರವಾಗಿ ಹೃದಯದಲ್ಲಿ ನಿಲ್ಲಿಸುವೆನಾ
ಪ್ರಕಟಮಾಡಿ ಸ್ತುತಿಸುತಿರುವ ಬಿಡದೆ ಅನುದಿನ
ಭಕುತಿಯಿಂದ ಕ--------ಭಕ್ತ ಜನರಕೂಡಿ 1
ಯೋಗಿಜನರ ಹೃದಯದೊಳು ನಿಖರವಾಗಿಇರುವ
ಭೋಗಿಶಯನನಾಗಿ ಇರುವ ಪುಣ್ಯ ಪುರುಷನಾ
ಸಾಗರಾನಸುತಿಯರಾಳ್ವ ಸಾರ್ವಭೌಮನ
ಬೇಗ ಭಜಿಸಿ ಗತಿಯು ಕಾಣ್ವ ಭಾಗವತರ ಸಂಗದಲ್ಲಿ 2
ದುಷ್ಟ ಜನರ ಸಂಗವೆಂಬುದು ದೂರಮಾಡೋ ನೀ
ಶಿಷ್ಟ ಜನರ ಪಾದ----------ಯಾಗೋ ನೀ
ಇಷ್ಟದಿಂದ ವಿಷ್ಣು ಚಿಂತನೆ ಹಿತದಿ ಮನದಿ ನೀ
ನಿಷ್ಠೆಯುಳ್ಳವನು ಆಗಿ ಕೃಷ್ಣ ಹೊನ್ನ ವಿಠ್ಠಲರಾಯನಾ 3