ಜಯ ದೇವ ಜಯ ದೇವ ಜಯ ಗುರು ನಾಗೇಶ
ದಯಗುಣದಲಿ ನೀ ಮಾಡೊ ಭವತಾಪ ನಾಶ ದ್ರುವ
ಜನ್ಮ ಮರಣಗಳೆಂಬ ಖಚ್ಚಿಖವಡಿಗಳು
ನಿಮ್ಮ ನಾಮಸ್ಮರಣಿಲೆ ಓಡುದು ದುರಿತಗಳು
ಬ್ರಹ್ಮಾನಂದದ ಸುಖ ಭಾಸುದು ಮನದೊಳು
ನಮ್ಮ ಸ್ವಾಮಿ ನೀನೆ ಅಹುದೊ ಕೃಪಾಳು 1
ತಾಪತ್ರಯವೆಂಬುದು ಬಲು ಪೀಡಿಯ ಗುಣ
ಆಶೆÀ ನೀನೆ ಪರಿಹಾರ ಮಾಡೊ ಘನ ಕರುಣ
ಕೋಪತಾಪವೆಂಬುದು ತದ್ದುದುರೀಯ ಗುಣ
ಕೃಪೆಯಿಂದಲಿ ಮಾಡುದು ನಿಮ್ಮ ಶ್ರಮ ನಿರ್ವಾಣ 2
ದುರಿತ ಸಂಹಾರ ಸುರಜನ ಸಹಕಾರ
ಕರುಣಾಕರ ಗುರುಮೂರ್ತಿ ಮುನಿಜನ ಮಂದಾರ
ತರಳ ಮಹಿಪತಿಸ್ವಾಮಿ ಘನ ಕೃಪಾಕರ
ಶರಣ ರಕ್ಷಕ ಪೂರ್ಣ ನೀ ಜಗದೋದ್ಧಾರ 3