ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವಚಿಂತನೆ ಮತವೆಂದರೆ ಮಧ್ವ ಮತವೇ ಮತವು ಶ್ರುತಿ ಸ್ಮøತಿ ತತಿಗೆ ಸಮ್ಮತವಾದುದರಿಂದ ಪ ಮಧುವೆಂದರಾನಂದ ಒದಗಿ ಬರುವುದು ಸತ್ಯ ಮಧುವೈರಿ ಒಲಿದು ಪಾದವ ತೋರುವ ಸದಮಲ ಭಾವದಲಿ ಮೇದಿನಿಯೊಳಗಿನ್ನು ಮದಮತ್ಸರಿಲ್ಲದೆಲೆ ಮುದದಿಯೋಚಿಸಲಾಗಿ 1 ವ ವರ್ಣವೆಂದರೆ ಶ್ರೀ ವರನ ಜ್ಞಾನವು ಪವನಪಿತ ತಾ ಒಲಿದು ಈವನದನು ಹೇವವಿಲ್ಲದೆ ಶುದ್ಧ ಭಾವದಿಂದಾಚರಿಸೆ ಭವ ದೂರಗೈಸಿ ಪಾವನಮಾಳ್ಪೊದದರಿಂದ 2 ಪತಿ ಪಿತಭಾವ ಸತತ ಸಮ್ಮತಿಯಿತ್ತು ಖತಿಯಳಿವದೈ ಕ್ಷಿತಿಯೊಳಗೆ ಪಿತ ಶ್ರೀ ನರಹರಿಯ ಪದಪದುಮ ಅತಿ ತೀವ್ರದಲಿ ತೋರಿ ಖ್ಯಾತಿ ತಂದೀವುದಕೆ 3
--------------
ಪ್ರದ್ಯುಮ್ನತೀರ್ಥರು