ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ
ನಿತ್ಯ ಕಲ್ಯಾಣಿ ಪ
ಹರಜಡಿಯಲಿ ಜನಿಸಿ ಹರಿಪಾದ ಜಲವೆನಿಸಿ
ಮುರಹರನ ವರ್ಣ ಪೆಸರವನೇ ಪೊತ್ತು
ಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿ
ಪೊರಿದೆ ಶರಣಾಗತರ ದುರಿತಗಳ ತರಿದೆ 1
ದೋಷರಹಿತಾಥೆರೆಯೊಳು ಸಾಸಿರ ಭಾಗದಲಿ
ಆ ಸಲಿಲ ಬಿಂದು ಪವಮಾನ ಬಂದೂ
ಬೀಸಿದಾ ಸಮಯದಲಿ ಜೀವರಾಸಿಯ ಮೇಲೆ
ಕ್ಲೇಶ ಶೋಕ ವಿನಾಶ 2
ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿ
ಕೃಷ್ಣವಾರ ವಿಷ್ಣು ತಾರೆಯಲ್ಲೀ
ಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನ
ಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ 3
ಕಪಟ ಸಂಗಮಛಾಯಾ
ಶ್ರೀ ಶೈಲ ವರ ಚತುಸ್ಥಾನಗಳಲಿ ವಾಸಮಾಡಿ ಇರಲು
ಕ್ತರನು ಮಾಡಿ ಪೊರದೇ 4
ಕಲಿಯುಗದಿ ಕೃಷ್ಣಾ ಸ್ನಾನ ಕೃಷ್ಣ ಸ್ಮರಣಿ ವೆ
ಸತಿ ಪೊಗಳಲು
ಸಿರಿ ವಿಜಯವಿಠ್ಠಲ ಕಾಣಿಸಿದಿಯಾ5