ಕರುಣಿಸಬಾರದೇನು ಶರಣೆಂಬೆ ನಾನು
ಕರುಣಿಸ ಬಾರದೆ ಮೊರೆಯ ಹೊಕ್ಕವನ
ಶರಣಾಗತ ಪಂಜರನೆಂಬೊ ಬಿರುದಿರೆ ಪ
ಸ್ತಂಭದಿ ನೀ ಬಂದು ದೈತ್ಯನ ಬೇಗ
ಶೀಳಿಕೋಪದಿಂದ ಇರಲು ಆಗ
ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ
ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ
ಆನಂದದಿ ಕಾಯ್ದತಿ ಸುಂದರಮೂರ್ತಿ
ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1
ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ
ಪಶುಪತಿ ಧನು ಭಂಜಿಸಿ
ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ
ಕುಶನಿಧಿಯನು ಬಂಧಿಸಿ ರಾವಣನ
ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ
ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2
ನಕ್ರ ಭಂಗಬಡಿಸೆ ಗಜಗಳರಸ ರಂಗ
ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ
ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ
ವಿಹಂಗ ಸಿರಿ ನರಸಿಂಹ ಬಂದು
ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ
'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3