ಒಟ್ಟು 14 ಕಡೆಗಳಲ್ಲಿ , 9 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಭಾವದ ನಿಗೂಢ ಮುಂಡಿಗೆಗಳು ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1 ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2 ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3 ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4 ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5 ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6 ಸುಳಿ ಕಮಲ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
--------------
ಕನಕದಾಸ
ಆತನೇ ಪರಮಾತ್ಮ ಪರತತ್ತ್ವ ಪ್ರಣವನೆಂ-ದರಿತು ಪೂಜಿಸಬಾರದೆಆತನಾ ಪದತೋಯ ಶಿರಸಾ ವಹಿಸಿ ಪಾನ-ದಿಂದಧಿಕರಾದರು - ಜೀವಿಗಳು ಮನುಜ ಪ ದಾನಮುಖದಲಿ ಬಲಿಯ ಬೇಡಿ ಭುವನವನೊಂದುಪದದಿ ಅಳೆದವನಾವನುಮಾನದಾನವನ ನಾಲ್ಮೈಯ ಮುಡಿಗಟ್ಟಿವನಮಾನ ಉಳುಹಿದನಾವನುಮಾನ ಮರುಳಾದವನ ಮರ್ದಿಸಿದ ಬ್ರಹ್ಮಹತ್ಯೆಮಹಿಗೆ ಇಳುಹಿದನಾವನುಭಾನು ಮೊದಲಾದಖಿಳ ಬ್ರಹ್ಮಾಂಡಗಳಿಗೊಂದುಪಾದ ಹೊದಿಸಿದನಾವನು ? 1 ಕೊಟ್ಟ ವರಗಳನೆಲ್ಲ ಕೊಡಹಿ ಬಹು ದನುಜರನುಕುಟ್ಟಿ ಹಾಕಿದನಾವನುದಿಟ್ಟವರ ಕಾಲಾಂಣ(?) ಕಟ್ಟಿ ಮುನಿ ದೈವಗಳ ಪಟ್ಟದರಸು ಅದಾವನುಬೆಟ್ಟದಾತ್ಮಜೆ ಬೆನಕ ಪೆಸರ್ಗೊಂಡು ತನ ನಾಮಗುಟ್ಟಿನಲಿ ನೆನೆಸಿದುದಾವನುಗಟ್ಟಿಯಾಗಿ ಮುನಿಪೆಣ್ಗೆ ಕೊಟ್ಟಿದ್ದ ಶಾಪವನುಬಿಟ್ಟೋಡಿಸಿದನಾವನು ? 2 ಅಖಿಳ ಮಹಿ ನಟಿಸುವ ಮಹಾತ್ಮಕನಾದ ಸಾತ್ತ್ವಿಕನಾವನುಆದಿಯಲಿ ಜಗಂಗಳಿರದಂದು ವಟಪತ್ರಶಯನನಾದ ಮೂಲವದಾವನುಆದಿಕೇಶವ ದೈವವಲ್ಲದಿನ್ನಿಲ್ಲವೆಂದುಆಗಮವು ನುಡಿವುದಾವನನು ? 3
--------------
ಕನಕದಾಸ
ಪಾದ ಮಾನಸಾನಂದಿಸೋ ಶತ ಭಾನುತೇಜನೇ ಪ ಹನ ಚಿತ್ರಭಾನು ದನುಜಾರಿ ಹರಿ ಅ.ಪ ಮಾಡುವೆನಯ್ಯ ಇಂದುವದನಾ ಶ್ರೀ ಪುಲಿಗಿರಿ ಮಂದಿರ ಮಂದರಧರ 1 ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟಫಲ ದಾಯಕ ತ್ರಿವಿಷ್ಟಪಾಧಿಪಾನುಭವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಉರಿಹಸ್ತ ಬೇಡಲು ಲೋಕಮೋಹಿನಿಯ ರೂಪು ಸ್ವೀಕರಿಸಿ ಶಿವನಕಾಯ್ದೆ 3 ಕೀರ್ತಿ ನೋಡಿಸೋ ನಿನ್ನಯಮೂರ್ತಿ ಬೇಡಿಸದಿರು ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ಶುಭ ವೇಷವಿಪುಲ ದುರಿತಗಣ ಶೋಷಣ ಶ್ರೀವರದವಿಠಲ 5
--------------
ಸರಗೂರು ವೆಂಕಟವರದಾರ್ಯರು
ಪೊರೆಯೊ ಶ್ರೀಶನೆ ಸರುವ ಲೋಕ ಪೊರೆವನೆ ಪ ಅರಿತು ಅರಿಯದಂತೆ ನಾನು ಗರುವದಿಂದ ಮೆರೆದನಯ್ಯ ಅ.ಪ ಅರುಣ ಉದಯದಲ್ಲಿ ಎದ್ದು ಹರಿಯೆ ನಿನ್ನ ಸ್ಮರಣೆ ಬಿಟ್ಟು ಗೊರಿಕೆ ಹೊಡಿದು ನಿದೆÀ್ರಮಾಡಿ ದುರಿತದಲ್ಲಿ ಪೊರಳುವವನ 1 ಕುತುಬ ಕಾಲದಲ್ಲಿ ಬಂದ ಅತಿಥಿಗಳನು ಜರೆದು ನೂಕಿ ಮಿತಿಯ ಮೀರಿ ಸವಿಯುತ ಪರ- ಗತಿಯ ದಾರಿ ಕಾಣದವನ 2 ದಾನಧರ್ಮ ಕೇಳಬಂದ ಮಾನವಂತ ಜನರ ಬಹಳ ಹೀನ ಮಾತಿನಿಂದ ಬೈದ ಜ್ಞಾನರಹಿತನಾದ ನರನ 3 ರೊಕ್ಕವಿರುವದೆಂದು ಬಹಳ ಸೊಕ್ಕಿನಿಂದ ಬಡವರನ್ನು ಲೆಕ್ಕಿಸದೆ ಮಾತನಾಡಿ ಧಿಕ್ಕರಿಸಿದ ಅಧಮ ನರನ 4 ಪಟ್ಟದರಸಿಯಿರಲು ಅವಳ ಬಿಟ್ಟು ಪರರ ಸತಿಯ ಬಯಸಿ ಅಟ್ಟಹಾಸದಿಂದ ನಗುತ ಕೆಟ್ಟು ಹೋದ ಭ್ರಷ್ಟ ನರನ 5 ಎಷ್ಟು ಮಾಡಲೇನು ಎಳ್ಳಿ ನಷ್ಟು ಸುಖವ ಕಾಣಲಿಲ್ಲ ಇಷ್ಟ ಮಿತ್ರ ನೀನೆಯೆಂದು ಗಟ್ಟಿಯಾಗಿ ತಿಳಿದುಕೊಂಡೆ 6 ಶ್ರಿಷ್ಟಿಗೊಡೆಯನು ರಂಗೇಶ- ವಿಠಲನೆಂಬ ಮತಿಯ ಎನಗೆ ಎಷ್ಟು ಮಾತ್ರ ಕೊಟ್ಟು ಸಲಹೊ ಕೆಟ್ಟ ಮೇಲೆ ಬುದ್ಧಿ ಬಂತು 7
--------------
ರಂಗೇಶವಿಠಲದಾಸರು
ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ
ವೃಂದಾವನ ಪ್ರವೇಶಿಸಿದಂದವ ಚಂದದಿ ಪೇಳುವೆ ಪಾಲಿಪುದು ಪ ಇಂದಿರೆಯರಸನ ಪ್ರೇರಣೆಯಿಂದ ಯತಿ ವೃಂದ ತಿಲಕ ರಾಘವೇಂದ್ರರಾನಂದದಿ ಅ.ಪ ಒಂದು ದಿನವು ಶ್ರೀ ರಾಯರು ಶಿಷ್ಯರ ವೃಂದಕೆ ಪಾಠವ ಹೇಳುತಿರೆ ಅಂದು ವಿಮಾನದಿ ಕೃಷ್ಣದ್ವೈಪಾಯನ ಪ ರಂಧಾಮಕೈದಲು ನೋಡಿ ಕೈ ಮುಗಿದು 1 ಎಷ್ಟು ದಿನವು ನಾವಿಲ್ಲಿರಬೇಕೆಂದು ಶಿಷ್ಟ ಗುರುವರರು ಕೇಳಿದೊಡೆ ಕೃಷ್ಣದ್ವೈಪಾಯನರೆರಡು ಬೆಳಗುಳ ಗಟ್ಟಿಯಾಗಿ ಬೀಸಿ ತೋರಿಸಿ ಪೊರಟರು 2 ನೆರೆದ ಶಿಷ್ಯರದರರ್ಥವೇನೆನುತ ಗುರುಗಳನ್ನು ತಾವ್ ಕೇಳಿದೊಡೆ ಎರೆಡು ವರ್ಷ ತಿಂಗಳು ದಿನವೆರಡೆರಡು ಇರುವುದು ಧರೆಯೊಳಗೆಂದರು ರಾಯರು 3 ಆದವಾನಿಗೆ ಗುರು ಸಂಚಾರ ಪೋಗಿರೆ ಆ ದಿವಾನ ವೆಂಕಣ್ಣ ಬಲು ಆದರಿಸಿದ ಬಳಿ ತಾ ನವಾಬನಿಂದ ಮೋದದಿ ಕೊಡಿಸಿದ ಮಂಚಾಲೆಯನು 4 ಹಿಂದೆ ಪ್ರಹ್ಲಾದರು ಯಾಗವ ರಚಿಸಿದ ಸುಂದರ ಕ್ಷೇತ್ರವಿದೆಂಬುದನು ತಂದು ಮನಕೆ ಗುರುರಾಯರೀ ಕ್ಷೇತ್ರವ ನಂದು ಪಡೆದು ತಾವಿಲ್ಲಿಯೇ ನಿಂತರು 5 ಉತ್ತಮ ನೀಲವರ್ಣದ ಶಿಲೆಯಪಳಿರಿಸಿ ಕೆತ್ತಿಸಿ ವೃಂದಾವನತರಿಸಿ ಕ್ಷೇತ್ರರಕ್ಷಣೆಯಗಷ್ಟ ದಿಕ್ಕುಗಳಲಿ ದೇವ ಮೂರ್ತಿಗಳನು ಸ್ಥಾಪಿಸಿ ನಿಲಿಸಿದರು 6 ವೃಂದಾವನದಲಿ ಸ್ಥಾಪಿಸಲೇಳ್ನೂರು ಚಂದದ ಸಾಲಿಗಾಮಗಳ ತಂದಿಟ್ಟರೆ ಸಿದ್ಧತೆಗಳು ಸಕಲವು ಕುಂದಿಲ್ಲದಂದೆ ನಡೆದಿರಲಾಗಲೆ 7 ಮುಂದಕೆ ತಮ್ಮ ಸಂಸ್ಥಾನವ ವಹಿಸಿ ಯೋ ಗೀಂದ್ರರೆಂಬ ಪ್ರಿಯ ಶಿಷ್ಯರಿಗೆ ಸಂದಿಪ ವಿರಹದಿ ನೊಂದಿದ ಶಿಷ್ಯರ ವೃಂದವ ಬಲು ಸಂತೈಸಿದರಾಗಲೇ8 ನಲವತ್ತೇಳು ಸಂವತ್ಸರ ನಾಲ್ಕು ತಿಂ ಗಳು ಇಪ್ಪತ್ತೊಂಭತ್ತು ದಿನಕಾಲ ನಲವಿನಿಂದ ವೇದಾಂತ ಸಾಮ್ರಾಜ್ಯವ ಸಲಹಿ ಸುಕೀರ್ತಿಯ ಗಳಿಸಿದ ಬಳಿಕ 9 ಸಾವಿರದೈನೂರು ತೊಂಭತ್ಮೂರನೆ ಕ್ರತು ಸಂವತ್ಸರದ ಶ್ರಾವಣ ಕೃಷ್ಣ ದ್ವಿತೀಯದ ಗುರುವಾರ ವಾಸರ ಮುಹೂರ್ತದಿ ಗುರುವರ 10 ಹಸ್ತದಿ ಜಪಮಾಲೆ ಪಿಡಿದು ಯೋಗೀಂದ್ರರ ಹಸ್ತಲಾಘವವ ಸ್ವೀಕರಿಸಿ ಸ್ವಸ್ತಿವಾಚನಗಳ್ ವಿಪ್ರರು ಪೇಳುತಿರೆ ಅರ್ಥಿಯಲಿ ವೃಂದಾವನವ ಪ್ರವೇಶಿಸಿ 11 ಪದ್ಮಾಸನದಲಿ ಮಂಡಿಸಿ ಎದುರಲಿ ಮುದ್ದುಪ್ರಾಣೇಶನ ನೋಡುತಲಿ ಪದ್ಮನಾಭನ ಧ್ಯಾನದೊಳಿರೆ ಜಪಸರ ಬಿದ್ದು ಬಿಡಲು ಮುಚ್ಚಳಿಕೆಯನಿಡಲು 12 ನೆರೆದಿಹ ವಿಪ್ರರು ಜಯ ಜಯವೆನ್ನುತ ಪರಿಪರಿ ರಾಯರ ಪೊಗಳಿದರು ಕರಿಗಿರೀಶನ ಕರುಣ ಪಡೆದ ನಮ್ಮ ಗುರುಸಾರ್ವಭೌಮನ ಸರಿಯಾರಿಹರು 13
--------------
ವರಾವಾಣಿರಾಮರಾಯದಾಸರು
ಶ್ರೀನಿವಾಸ ನಿನ್ನ ಪಾದಧ್ಯಾನವ ಪಾಲಿಸಿ ಎನ್ನ ಮಾನಸಾನಂದಿಸೋ ಶತಭಾನುತೇಜನೆ ಪ ಸಾನುರಾಗದಿಂದ ನಿನ್ನ ಧ್ಯಾನಿಪಜನರ ಭವ ಕಾನನಾದಹನ ಚಿತ್ರಭಾನು ದನುಜಾರಿಹರಿ ಅ.ಪ ಇಂದಿರಾರಮಣ ನಿನ್ನ ಸುಂದರ ಚರಣಕೆ ನಾಂ ವಂದನೆಯ ಮಾಡುವೆನಯ್ಯಾ ಇಂದುವದನಾ ಇಂದುಧರ ನುತ ಮುಚುಕುಂದವರದನೆ ಗುಣ ಬಂಧುರಾ ಶ್ರೀ ಪುಲಿಗಿರಿ ಮಂದಿರ ಮಂದರಧರ1 ಇಷ್ಟುದಿನ ನಿನ್ನ ಮನಮುಟ್ಟಿ ಭಜಿಸದೆ ಬಲು ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟ ಫಲದಾಯಕ ತ್ರಿವಿಷ್ಣಪಾದಿಪಾನುಬವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಲೋಕಪತಿ ಪಿನಾಕೆಯನ್ನು ವೃಕನೆಂಬ ಭೀಕರಾಸುರನು ಉರಿಹಸ್ತ ಬೇಡಲು ಆಕಪಾಲಿಯಿತ್ತು ಅವಿವೇಕದಿಂದ ಲೋಡುತಿರೆ ಲೋಕ ಮೋಹಿನಿಯ ರೂಪ ಸ್ವೀಕರಿಸಿ ಶಿವನಕಾಯ್ದೆ3 ಆಡಿಸೋ ನಿನ್ನವರೊಳು ಪಾಡಿಸೋ ನಿನ್ನಯ ಕೀರ್ತಿ ಮೂರ್ತಿ ಬೇಡಿಸದಿರು ಆಡಿಸದೆ ಭವವೆಂಬ ಕಾಡಿನೋಳ್ಕಟಾಕ್ಷದಿಂದ ನೋಡಿ ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ವಾಸುಕಿಶಯನ ಪೀತವಸನ ದಿವ್ಯಭೂಷಣ ವಿ ಭೂಷಿತ ಲಲಿತಶುಭ ವೇಷವಿಪುಲ ಭಾಸಮಾನ ವ್ಯಾಘ್ರಶೈಲಾವಾಸ ಶ್ರೀನಿವಾಸ ಭಕ್ತ ಪೋಷಣ ದುರಿತಗಣ ಶೋಷಣ ಶ್ರೀ ವರದವಿಠಲ5
--------------
ವೆಂಕಟವರದಾರ್ಯರು
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಇರಬೇಕು ಇರದಿರಬೇಕು ಶ್ರೀ - |ಹರಿದಾಸರು ಸಂಸಾರದೊಳು ಪ.ಕುಲಸತಿಯಾದರೆ ಕೂಡಿರಬೇಕು |ಸುಲಭದಿಂದ ಸ್ವರ್ಗ ಸೂರಾಡಬೇಕು ||ಕಲಹ ಗಂಟಿಸತಿ ಕರ್ಕಶೆಯಾದರೆ |ಹಲವು ಪರಿಯಿಂದಲಿ ಹೊರಗಾಗಬೇಕು 1ಮಕ್ಕಳು ತಾವು - ಮತಿವಂತರಾದರೆ |ಅಕ್ಕರೆಯಿಂದಲಿ ಕೂಡಿರಬೇಕು ||ಚಿಕ್ಕತನದಿ ಬುಧ್ಧಿ ತೇರುಂಡರಾದರೆ |ಗಕ್ಕನೆ ಅಲ್ಲಿಂದ ಹೊರಗಾಗಬೇಕು 2ದುಷ್ಟರ ಕಂಡರೆ ದೂರವಿರಬೇಕು |ಶಿಷ್ಟರ ಕಂಡರೆ ಕೈಮುಗಿಯಬೇಕು ||ದಿಟ್ಟ ಶ್ರೀ ಪುರಂದರವಿಠಲರಾಯನ |ಗಟ್ಟಿಯಾಗಿ ಆತನ ನೆರೆನಂಬಬೇಕು 3
--------------
ಪುರಂದರದಾಸರು
ಎಂದು ಹರಿಭಟರು ಕೆಡರು ಇವರಿಗೆ ಮತ್ತೆಂದಿಗಿಲ್ಲೆಡರುತೊಡರುಪ.ಘಟಜನುಕ್ತಿಯಲಿಕರಿಗಟ್ಟಿಯಾಗಿ ಪ್ರಾಣ ಸಂಕಟಬಡಲು ನಕ್ರನ ತುಟಿ ಹರಿದುಹರಿಪೊರೆದ1ಎಣಿಕೆಯಿಲ್ಲದ ಪಾಪ ಎಣಿಸಿ ಬಂದ್ಯಮನವರಹಣಿದು ವಿಪ್ರಜಾಮಿಳನ ವನಜಾಕ್ಷ ಪುರಕೊಯ್ದ 2ಮುನಿ ಕನಲಿ ಅಂಬರೀಷನ ದಣಿಸುತಿರೆ ಚಕ್ರವನು ಕಳುಹಿ ವೈಷ್ಣವಾಗ್ರಣಿಯ ಛಲ ಗೆಲಿಸಿದನು 3ಕಪಟಿ ಕೌರವ ಪಾಂಡುನೃಪಜರನು ಬೆಂಕೊಳಲುಕುಪಿತನಾಗಲೆ ಬಂದು ಕೃಪೆಯಿಂದ ಕಾಯ್ದ ಗಡ 4ಶ್ರೀಪ್ರಸನ್ವೆಂಕಟನ ಶ್ರೀಪದವ ನಂಬಿದರೆಶಾಪ ಪಾಪೋಗ್ರಸಂತಾಪವೇನು ಮಾಡುವುವು 5
--------------
ಪ್ರಸನ್ನವೆಂಕಟದಾಸರು
ಏನ ಮಾಡಲಿ ಶ್ರೀಹರಿ- ಇಂಥ |ಮಾನವಜನ್ಮ ನಚ್ಚಿಸಬಹುದೆ? ಪಮಾತನಾಡದೆ ಮೌನದೊಳಿದ್ದರೆ-ಮೂಕ-|ನೀತನೆಂದು ಧಿಕ್ಕರಿಸುವರು ||ಚಾತುರ್ಯದಿಂದಲಿ ಮಾತುಗಳಾಡಲು |ಈತನು ಬಲು ಬಾಯ್ಬಡಿಕನೆಂಬುವರಯ್ಯ 1ಮಡಿ ನೇಮ ಜಪ-ತಪಂಗಳ ಮಾಡುತಿದ್ದರೆ |ಬಡಿವಾರದವನೆಂದಾಡುವರು ||ಮಡಿ ನೇಮ ಜಪ-ತಪಂಗಳ ಮಾಡದಿದ್ದರೆ |ನಡತೆ ಹೀನನೆಂದು ಬಲು ನಿಂದಿಸುವರಯ್ಯ 2ಗಟ್ಟಿಯಾಗಿ ಒಪ್ಪತ್ತಿನೂಟದೊಳಿದ್ದರೆ |ನಿಷ್ಟೆಯೇನು ಸುಟ್ಟಿತೆಂಬರು |ಗಟ್ಟಿಯಾಗಿ ಎರಡು ಮೂರು ಬಾರಿಯುಂಡರೆ |ಹೊಟ್ಟೆ ಬಾಕನೆಂದು ತೆಗಳಾಡುವರಯ್ಯ 3ಒಲಪಿನೊಳ್ಚೆನ್ನಿಗತನವನು ಮಾಡಲು |ಬಲು ಹೆಮ್ಮೆಗಾರನೆಂದಾಡುವರು ||ಸುಲಭತನದಿ ತಾ ನಿಗರ್ವಿಯಾಗಿದ್ದರೆ |ಕಲಿಯುಗದಲಿ ಮಂದಮತಿಯೆಂಬುವರಯ್ಯ 4ನರಜನ್ಮದೊಳಗಿನ್ನು ಮುಂದೆ ಪುಟ್ಟಿಸಬೇಡ |ಮೊರೆ ಹೊಕ್ಕೆ ಮತ್ಸ್ಯಾವತಾರ ನಿನ್ನ ||ಧರೆಯೊಳಗಿಹ ಪರಿಯಂತರ ಸಲಹೆನ್ನ |ಕರುಣವಾರಿಧಿ ಶ್ರೀಪುರಂದರವಿಠಲ5
--------------
ಪುರಂದರದಾಸರು
ವೈದ್ಯ ಬಂದ ನೋಡಿ - ವೆಂಕಟನೆಂಬ |ವೈದ್ಯ ಬಂದ ನೋಡಿ ಪ.ವೈದ್ಯ ಬಂದನು ವೇದವೇದ್ಯ ನೋಡೀಗಲೇಶ್ರೀದೇವಿರಮಣನು ಶ್ರೀನಿವಾಸನೆಂಬ ಅಪಎಷ್ಟು ದಿನದ ರೋಗಗಳೆಂಬುದ ಬಲ್ಲ |ಗಟ್ಟಿಯಾಗಿ ಧಾತುರಸಗಳನು ಬಲ್ಲ ||ಕಷ್ಟ ಬಡಿಸದಲೆನ್ನ ಭವರೋಗ ಬಿಡಿಸುವ |ಶಿಷ್ಟವಾದ ದೇಹ ಕೊಟ್ಟು ಕಾಯುವನಿವ 1ಹೊನ್ನು - ಹಣಂಗಳ ಅನ್ನವ ಅನುಸರಿಸಿ |ತನ್ನ ದಾಸನೆಂಬ ನಿಜವ ನೋಡಿ ||ಚೆನ್ನಾಗಿ ಜಿಹ್ವೆಗೆ ಸ್ವಾದವಾಗಿರುವಂಥ |ತನ್ನ ನಾಮಾಮೃತ ದಿವ್ಯ ಔಷಧವೀವ 2ಈತ ದಿಟ್ಟಿಸಿ ನೋಡೆ ಎಳ್ಳಷ್ಟು ರೋಗವಿಲ್ಲ |ಈ ತನುವಿಗೆಂದೆಂದು ರೋಗಬರಲರಿಯದು ||ಈತ ಅನಂತರೂಪದಿ ಜೀವರಿಗೆ ಮುನ್ನ |ಪ್ರೀತಿಯಿಂದಲಿ ಭವರೋಗ ಬಿಡಿಸುವ 3ಧರ್ಮವೈದ್ಯನಿವ ಜಗಕ್ಕೆಲ್ಲ ಒಬ್ಬನೆ |ಮರ್ಮಬಲ್ಲ ರೋಗಜೀವಂಗಳ ||ನಿರ್ಮಲವಾಗಿಹ ತನ್ನ ನಾಮಸ್ಮರಣೆ |ಒಮ್ಮೆ ಮಾಡಲು ಭವರೋಗ ಬಿಡಿಸುವ 4ಅನ್ಯ ವೈದ್ಯನೇಕೆ ಅನ್ಯ ಔಷಧವೇಕೆ ? |ಅನ್ನ ಮಂತ್ರ - ತಂತ್ರ - ಜಪವೇತಕೆ ? ||ಚೆನ್ನ ಪುರಂದರವಿಠಲನ್ನ ನೆನೆದರೆ |ಮನ್ನಿಸಿ ಸಲಹುವ ವೈದ್ಯ ಶಿರೋಮಣಿ 5
--------------
ಪುರಂದರದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು