ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರಿ ಹೇಳಿದೆ ಮೂರು ಬಾರಿ ಮನ ಬಾರದಿದ್ದವರು ದೂರಿದರೆನ್ನ ದೂರಿಪ ನರದೇಹವಿದು ನಂಬಬೇಡಿ ಭವ ಶರಧಿಯ ದಾಟಲುಪಾಯವ ಮಾಡಿ ಎರವಿನ ತನುವನು ನೋಡಿ ಶ್ರೀ ಗುರುವಿನ ಚರಣಕ್ಕೆ ಶೆರಗೊಡ್ಡಿ ಬೇಡಿ 1 ಗುರುವಿನಿಂದಧಿಕ ದೈವವಿಲ್ಲಾ ಇದ ನರಿಯದೆ ಕೆಡುವರು ಪ್ರಾಣಿಗಳೆಲ್ಲಾ ಅರಿತ ಸುಜ್ಞಾನಿಯೆ ಬಲ್ಲಾ ಉಪ ಕರಿಸಿ ಪೇಳುವೆನು ಕೇಳಿರೋ ಎನ್ನ ಸೊಲ್ಲಾ 2 ಸರಸಿಜೋದ್ಭವನ ಕೈಮಾಟಾ ಚೆಲ್ವ ಗಿರಿಜಾರಮಣನ ಸೂತ್ರದ ಗೊಂಬೆಯಾಟಾ ಬರಿದೆ ವಿಷ್ಣು ಮಾಯಾಕಾಟಾ ಶ್ರೀ ಗುರುವಿಮಲಾನಂದ ಹೇಳಿದ ಪಾಠಾ 3
--------------
ಭಟಕಳ ಅಪ್ಪಯ್ಯ
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು