ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮತೇ ಶ್ರೀ ಭಾಷ್ಯಕರಾಯನೇ [ಮಾಮವ] ದೇವಾ ಕರುಣಿಸು ಮಹರಾಯನೇ ಪ ಮಂತ್ರ ರಹಸ್ಯದಿ ಜ್ಞಾನ ತ್ರಯಂಗಳ ನಿಂತು ನೀ ಕೃಪೆ ಮಾಡಿದೇ ಅ.ಪ [ವರ]ತತ್ವದುಯ್ಯಾಲನಾಡಿದೆ ಭರಗೈದು ಬಂದಿಲ್ಲಿ ಪರತತ್ವವನು ಗೂಡಿದೇ 1 ಸಿರಿಮಾತೇ [ಮೂಲಕ] ಹರಿಯಾಜ್ಞೆಯನುಗೊಂಡು ಪರಮಭಕ್ತರಿಗೆಲ್ಲಾ ಪ್ರತ್ಯಕ್ಷವಾದಂಥಾ ಪರಮಪದವಿ ಮಾಡಿದೇ 2 ಯದುಶೈಲವಾಸದೊಳಧಮರಾದವರಿಗೆ ಸುಧೆಯ ಸುರಿದು ತೋರಿದೆ ಸದುಪಾಯದಿಂ ಬಂದು ಸರ್ವಸ್ವತಂತ್ರದೊ ಳಿದು ನೋಡೆನುತ ಸಾರಿದೆ 3 ಪರಕಾಲಗುರು ಸರ್ವತಿರುಮಳಿಶಯ್ಯಾಳ್ವಾರೆಂ ಬೆರುಮಾನರಡಿಯಾದೆನೈ ಗುರುಕುಲದೊಳಗೆನ್ನ ಕರೆದಿತ್ತ ಹರಿನಾಮ ನುಡಿಯದೆ ನಾ ಹೋದೆನೈ 4 ಅದ್ವೈತ ಕುಲವನ್ನು ಪರಿಶೋಧಿಸಿ ಬಿಟ್ಟು ಶ್ರೀ ಮದ್ರಾಮಾನುಜಾಚಾರ್ಯನೇ ಮದ್ಗುರುವಾದ ಶ್ರೀತುಲಶೀರಾಮದಾಸ [ರೈ ದಾಸಕುಲತೂರ್ಯರೈ] 4
--------------
ಚನ್ನಪಟ್ಟಣದ ಅಹೋಬಲದಾಸರು
ಗೋಪಾಲ ಶ್ರೀಕೃಷ್ಣ ಮೂರುತಿ ನೀನೇಕಾಪಾಡೆನ್ನನುಜಿಷ್ಣುಸಾರಥಿ ಪತಾಪತ್ರಯದೊಳ್ ನೊಂದೆ ತಪಗೈಯ್ಯಲರಿಯೆನು ನೀಕೃಪೆಯೊಳನುದಿನರೂಪತೋರಿಸು ದೇವಾ ಅ.ಪದೇವಕಿಯುದರದಿ ಜನಿಸಿಗೋಪಿದೇವಿಗೆ ತನಯನೆಂದೆನಿಸಿಜೀವ ಘಾತಕೆ ಬಂದ ಪೂತನಿಯಸು ಹೀರಿಗೋವುಗಳನು ಮೇಸಿದೆ 1ದೈತ್ಯರ ಕೊಂದು ಗೋವರ್ಧನವೆತ್ತಿದೇಕಾಮದಿ ಬಂದ ಬಾಲಕಿಯರನು ಕೂಡಿದೇಹಾವಿನ ಹೆಡೆಯ ಮೇಲೆ ನಲಿದು ಬಿಲ್ ಹಬ್ಬದಿಮಾವ ಕಂಸನ ಮುರಿದು ಕರುಣದಿತಾಯಿ ತಂದೆಯ ಸೆರೆಯ ಬಿಡಿಸಿದೆ 2ಶರಧಿಮಧ್ಯದಿ ಮನೆಮಾಡಿದೇಅಲ್ಲಿಭರದಿಂದಷ್ಟಮ ಸ್ತ್ರೀಯರಲಿ ಕೂಡಿದೇನರಮುರಶಾದ್ಯರ ಮುರಿದು ಷೋಡಶ ಸಹಸ್ರತರುಣಿಯರೊಡಗೂಡಿದೇ ಪಾರಿಜಾತತರುವ ನೀನೊಲಿದು ತಂದೆ ಪಾಂಡವರೊಳುಭರಿತ ಕೃಪೆಯ ತೋರಿದೆಧುರದಿಮಾಗಧಚೈದ್ಯ ಧರಣಿಪಾಲರ ಗೆಲ್ದುತರುಣಿ ದ್ರೌಪದಿಗ್ವರವ ಪಾಲಿಸಿನರಗೆ ಸಾರಥಿಯಾದೆ ಶ್ರೀಹರೀ 3ಸಂಧಾನವೆಸಗಿ ಪಾಂಡವರಕರ-ದಿಂದ ಕೊಲ್ಲಿಸಿದೆ ಕೌರವರಚಂದ ಧರ್ಮರಾಯಗೆ ಪಟ್ಟ ಕಟ್ಟಿಸೀನಿಂದಶ್ವಮೇಧಗೈಸಿ ನೀ ಸುರಗಣವೃಂದ ಸಂತಸ ಬಡಿಸಿ ಯಾದವಕುಲ ಮುಗಿಲದಿಂದಲಿಸುಂದರಾಂಗವ ಬಿಟ್ಟು ಕ್ಷೀರಸಿಂಧುವಿಗೈದೆಚಂದದಲಿ ಗೋವಿಂದದಾಸನೆಬಂದು ಮಂಗಲ ಮುಖವ ತೋರಿಸೋ 4
--------------
ಗೋವಿಂದದಾಸ